ದಿ.ಡಿ.ಬಿ.ಮುದೂರಗೆ ನುಡಿನಮನ : ಅಸ್ಪೃಶ್ಯತೆಯ ವಿರುದ್ಧ ಡಿ.ಬಿ.ಮುದೂರ ದಿಟ್ಟ ಹೋರಾಟ -ನಾಡಗೌಡ

ದಿ.ಡಿ.ಬಿ.ಮುದೂರಗೆ ನುಡಿನಮನ : ಅಸ್ಪೃಶ್ಯತೆಯ ವಿರುದ್ಧ ಡಿ.ಬಿ.ಮುದೂರ ದಿಟ್ಟ ಹೋರಾಟ -ನಾಡಗೌಡ

ಮುದ್ದೇಬಿಹಾಳ : ಮತಕ್ಷೇತ್ರದಲ್ಲಿ ಬೇರೂರಿದ್ದ ಅಸ್ಪೃಶ್ಯತೆಯ ವಿರುದ್ಧ ದಿಟ್ಟತನದ ಹೋರಾಟ ಸಂಘಟಿಸಿ ಅದರಲ್ಲಿ ಯಶಸ್ವಿಯಾಗಿದ್ದವರು ದಲಿತ ನಾಯಕ ಡಿ.ಬಿ.ಮುದೂರ ಆಗಿದ್ದರು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.
ವಿವಿಧ ದಲಿತಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಬುಧವಾರ ಇಲ್ಲಿನ ಟಾಪ್ ಇನ್ ಟೌನ್ ಫಂಕ್ಷನ್ ಹಾಲ್‌ನಲ್ಲಿ ಹಮ್ಮಿಕೊಂಡಿದ್ದ ದಲಿತ ಸಂಘರ್ಷ ಸಮೀತಿ ರಾಜ್ಯ ಸಂಘಟನಾ ಸಂಚಾಲಕ ಡಿ.ಬಿ.ಮುದೂರ ನುಡಿನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಹೆಚ್ಚು ಓದದಿದ್ದರೂ ಅನುಭವದಿಂದ ವಿದ್ಯೆಯನ್ನು ಸಂಪಾದನೆ ಮಾಡಿದ್ದರು.ಅವರು ಮಾತುಗಳಿಂದ ಆಳವಾದ ವಿಚಾರಧಾರೆಗಳನ್ನು ಹೊಂದಿದ್ದರು ಎಂಬುದು ಅರ್ಥವಾಗುತ್ತದೆ.ಅವರು ಅಂಬೇಡ್ಕರ್ ವಿಚಾರಧಾರೆಗಳನ್ನು ಅಳವಡಿಸಿಕೊಂಡಿದ್ದರು.ಸಮಾನತೆಗೋಸ್ಕರ ಹೋರಾಟ ಮಾಡುವುದು ಜನ್ಮಸಿದ್ಧ ಹಕ್ಕು.ಸಮಾಜದಲ್ಲಿ ತಾರತಮ್ಯ ಹೋಗಲಾಡಿಸಲು ಆರ್ಥಿಕ,ಶೈಕ್ಷಣಿಕ ಸಾಮಾಜಿಕ ಬದಲಾವಣೆ ತರಬೇಕು ಎಂಬ ದಿಟ್ಟವಾದ ಹೋರಾಟವನ್ನು ಮುದೂರ ತಮ್ಮ ಸಂಗಡಿಗರೊAದಿಗೆ ಸಂಘಟಿಸಿದ್ದರು ಎಂದು ಹೇಳಿದರು.ಸ್ವಂತ ಬದುಕು ಬಿಟ್ಟು ಸಮಾಜಕ್ಕೆ ಹೋರಾಟ ಮಾಡಿದ್ದಾರೆ.ಮುದೂರ ಅವರಂಥವರ ಅಗತ್ಯತೆ ಸಮಾಜಕ್ಕೆ ಇದೆ ಎಂದರು.

ಮಾಜಿ ಶಾಸಕ ರಾಜು ಆಲಗೂರ ಮಾತನಾಡಿ, ಡಿ.ಬಿ.ಮುದೂರ ಕಠೋರ ಸ್ವಭಾವದ ವ್ಯಕ್ತಿ, ಆದರೆ ಒಳ್ಳೆಯ ಮನಸ್ಸುಳ್ಳವರು. ರಾಮಣ್ಣ ಚಲವಾದಿ, ಬಸವರಾಜ ನಾಗರಾಳ, ಡಿ.ಬಿ.ಮುದೂರ ಈ ಭಾಗದಲ್ಲಿ ದಲಿತ ಸಂಘಟನೆ ಕಟ್ಟಿದ್ದಾರೆ. ನೀಲಿ ಶಾಲು ಹಾಕಿಕೊಂಡು ಒಬ್ಬೊಬ್ಬರು ಎಂಎಲ್‌ಎ ಕರೆದು ವಯಕ್ತಿಕ ಪ್ರತಿಷ್ಠೆಯನ್ನಿಟ್ಟುಕೊಂಡು ಸಂಘಟನೆ ಕಟ್ಟಿದರೆ ಸಾಮಾಜಿಕ ಜವಾಬ್ದಾರಿ ಈಡೇರಿಸಲು ಆಗುವುದಿಲ್ಲ.ಒಂದೇ ಬ್ಯಾನರ್‌ದಲ್ಲಿ ತಾಲ್ಲೂಕಿನಲ್ಲಿ ಗಂಭೀರವಾಗಿ ಹೋರಾಟ ನಡೆಸಬೇಕು.ದಲಿತರು ಒಂದಾದರೆ ಮತ್ತೆ ಸಂಘಟನೆಗೆ ಬಲಿಷ್ಠತೆ ಬರುತ್ತದೆ ಎಂದರು.

ಹೋರಾಟಗಾರ ರಮೇಶ ಆಸಂಗಿ , ದಲಿತರ ಹಕ್ಕುಗಳಿಗೆ ಧಕ್ಕೆಯಾದಾಗ ಗಟ್ಟಿ ಧ್ವನಿ ಎತ್ತಿದ್ದು ಡಿ.ಬಿ.ಮುದೂರ,ಗೆಜ್ಜೆಪುಜೆ,ದೇವದಾಸಿ ಪದ್ಧತಿ,ಬೆತ್ತಲೆ ಸೇವೆಯ ವಿರುದ್ಧ ಹೋರಾಟ ಮಾಡಿ ಸಾಮಾಜಿಕ ನ್ಯಾಯ ಒದಗಿಸಿದ್ದಾರೆ.ಸಂವಿಧಾನದ ಮೂಲ ಆಶಯವನ್ನು ಎತ್ತಿ ಹಿಡಿಯುವ ಕೆಲಸ ಅವರು ಮಾಡಿದ್ದಾರೆ ಎಂದರು.

ಮುಖಂಡ ಅಭಿಷೇಕ ಚಕ್ರವರ್ತಿ ಮಾತನಾಡಿ, ಮೂಢನಂಬಿಕೆಗಳ ವಿರುದ್ದ ಡಿ.ಬಿ.ಮುದೂರ ಹೋರಾಟ ಮಾಡಿದರು.ದೇವಿಗೆ ಕೋಣಗಳ ಬಲಿ,ಬೆತ್ತಲೆ ಸೇವೆ,ಬಾವಿ ನೀರು ಮುಟ್ಟದಿರುವುದು ಇಂತಹ ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಟ ಮಾಡಿದವರು ಡಿ.ಬಿ.ಮುದೂರ ಅವರಾಗಿದ್ದಾರೆ ಎಂದರು. ಸಂಸದ ರಮೇಶ ಜಿಗಜಿಣಗಿ,ಬಾಗಲಕೋಟದ ಧಮ್ಮಪಾಲ ಬಂತೇಜಿ,ತಹಶೀಲ್ದಾರ್ ಕೀರ್ತಿ ಚಾಲಕ್, ಸಮಾಜ ಕಲ್ಯಾಣ ನಿರ್ದೇಶಕಿ ಬಿ.ಜಿ.ಮಠ, ಸೋಮನಗೌಡ ಪಾಟೀಲ ನಡಹಳ್ಳಿ, ವಕೀಲ ಎಂ.ಎಚ್.ಹಾಲಣ್ಣವರ,ಪ್ರಮುಖರಾದ ಮುತ್ತಪ್ಪ ಚಮಲಾಪೂರ,ಕೆ.ಬಿ.ದೊಡಮನಿ, ತಿಪ್ಪಣ್ಣ ದೊಡಮನಿ, ಆರ್.ಎನ್.ಹಾದಿಮನಿ, ಎಸ್.ಎಚ್.ಲೊಟಗೇರಿ,ದೇವೇಂದ್ರ ಹಾದಿಮನಿ, ಅರವಿಂದ ಸಾಲವಾಡಗಿ,ಶಾಂತಮ್ಮ ಡಿ. ಮುದೂರ, ರೇವಣೆಪ್ಪ ಹರಿಜನ,ಬಲಭೀಮ ನಾಯ್ಕಮಕ್ಕಳ,ಅಶೋಕ ಇರಕಲ್, ಯಮನಪ್ಪ ಹಂಗರಗಿ, ಮಲ್ಲಪ್ಪ ಬಸರಕೋಡ,ನಾಗೇಶ ಭಜಂತ್ರಿ, ಚನ್ನಪ್ಪ ವಿಜಯಕರ್,ಪರಶುರಾಮ ದಿಂಡವಾರ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ,ತಿಪ್ಪಣ್ಣ ಗೋನಾಳ, ಹರೀಶ ನಾಟೀಕಾರ, ಪ್ರಕಾಶ ಚಲವಾದಿ, ದೇವರಾಜ ಹಂಗರಗಿ ಸೇರಿದಂತೆ ಹಲವು ಮುಖಂಡರು ಇದ್ದರು.

ದಲಿತ ಹೋರಾಟಗಾರ ದಿ.ಡಿ.ಬಿ.ಮುದೂರ ಅವರು ನೇರ ನುಡಿ ನಿಷ್ಠುರ ನಾಯಕ.ತಮ್ಮ ಸ್ವಂತಕ್ಕಾಗಿ ಏನೂ ಮಾಡಿಕೊಂಡವರಲ್ಲ.ಅನ್ಯಾಯವಾದಾಗ ದಿಟ್ಟ ಧ್ವನಿ ಎತ್ತಿದವರು.ಸಮಾಜಕ್ಕೆ ಸರ್ವಸ್ವವನ್ನು ಅರ್ಪಿಸಿದ್ದಾರೆ.ಅವರ ಮಗಳ ನಿಶ್ಚಿತಾರ್ಥ ಆಗಿದ್ದು ಆಕೆಯ ವಿವಾಹಕ್ಕೆ ಕುಟುಂಬದವರು ಮಾಡಿರುವ ಯಾದಿಯನ್ನು ನಮ್ಮ ಶಿವಾಚಾರ್ಯ ಸಂಸ್ಥೆಯಿAದ ಭರಿಸುವ ಕಾರ್ಯ ಮಾಡುತ್ತೇವೆ.
—ರವಿ ನಾಯಕ,ಆಡಳಿತಾಧಿಕಾರಿ,ಎಸ್.ಎಸ್.ಶಿವಾಚಾರ್ಯ ವಿದ್ಯಾಸಂಸ್ಥೆ,ಶಿರೋಳ-ಮುದ್ದೇಬಿಹಾಳ

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ