ದಿ.ಡಿ.ಬಿ.ಮುದೂರಗೆ ನುಡಿನಮನ : ಅಸ್ಪೃಶ್ಯತೆಯ ವಿರುದ್ಧ ಡಿ.ಬಿ.ಮುದೂರ ದಿಟ್ಟ ಹೋರಾಟ -ನಾಡಗೌಡ

ದಿ.ಡಿ.ಬಿ.ಮುದೂರಗೆ ನುಡಿನಮನ : ಅಸ್ಪೃಶ್ಯತೆಯ ವಿರುದ್ಧ ಡಿ.ಬಿ.ಮುದೂರ ದಿಟ್ಟ ಹೋರಾಟ -ನಾಡಗೌಡ

ಮುದ್ದೇಬಿಹಾಳ : ಮತಕ್ಷೇತ್ರದಲ್ಲಿ ಬೇರೂರಿದ್ದ ಅಸ್ಪೃಶ್ಯತೆಯ ವಿರುದ್ಧ ದಿಟ್ಟತನದ ಹೋರಾಟ ಸಂಘಟಿಸಿ ಅದರಲ್ಲಿ ಯಶಸ್ವಿಯಾಗಿದ್ದವರು ದಲಿತ ನಾಯಕ ಡಿ.ಬಿ.ಮುದೂರ ಆಗಿದ್ದರು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.
ವಿವಿಧ ದಲಿತಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಬುಧವಾರ ಇಲ್ಲಿನ ಟಾಪ್ ಇನ್ ಟೌನ್ ಫಂಕ್ಷನ್ ಹಾಲ್‌ನಲ್ಲಿ ಹಮ್ಮಿಕೊಂಡಿದ್ದ ದಲಿತ ಸಂಘರ್ಷ ಸಮೀತಿ ರಾಜ್ಯ ಸಂಘಟನಾ ಸಂಚಾಲಕ ಡಿ.ಬಿ.ಮುದೂರ ನುಡಿನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಹೆಚ್ಚು ಓದದಿದ್ದರೂ ಅನುಭವದಿಂದ ವಿದ್ಯೆಯನ್ನು ಸಂಪಾದನೆ ಮಾಡಿದ್ದರು.ಅವರು ಮಾತುಗಳಿಂದ ಆಳವಾದ ವಿಚಾರಧಾರೆಗಳನ್ನು ಹೊಂದಿದ್ದರು ಎಂಬುದು ಅರ್ಥವಾಗುತ್ತದೆ.ಅವರು ಅಂಬೇಡ್ಕರ್ ವಿಚಾರಧಾರೆಗಳನ್ನು ಅಳವಡಿಸಿಕೊಂಡಿದ್ದರು.ಸಮಾನತೆಗೋಸ್ಕರ ಹೋರಾಟ ಮಾಡುವುದು ಜನ್ಮಸಿದ್ಧ ಹಕ್ಕು.ಸಮಾಜದಲ್ಲಿ ತಾರತಮ್ಯ ಹೋಗಲಾಡಿಸಲು ಆರ್ಥಿಕ,ಶೈಕ್ಷಣಿಕ ಸಾಮಾಜಿಕ ಬದಲಾವಣೆ ತರಬೇಕು ಎಂಬ ದಿಟ್ಟವಾದ ಹೋರಾಟವನ್ನು ಮುದೂರ ತಮ್ಮ ಸಂಗಡಿಗರೊAದಿಗೆ ಸಂಘಟಿಸಿದ್ದರು ಎಂದು ಹೇಳಿದರು.ಸ್ವಂತ ಬದುಕು ಬಿಟ್ಟು ಸಮಾಜಕ್ಕೆ ಹೋರಾಟ ಮಾಡಿದ್ದಾರೆ.ಮುದೂರ ಅವರಂಥವರ ಅಗತ್ಯತೆ ಸಮಾಜಕ್ಕೆ ಇದೆ ಎಂದರು.

ಮಾಜಿ ಶಾಸಕ ರಾಜು ಆಲಗೂರ ಮಾತನಾಡಿ, ಡಿ.ಬಿ.ಮುದೂರ ಕಠೋರ ಸ್ವಭಾವದ ವ್ಯಕ್ತಿ, ಆದರೆ ಒಳ್ಳೆಯ ಮನಸ್ಸುಳ್ಳವರು. ರಾಮಣ್ಣ ಚಲವಾದಿ, ಬಸವರಾಜ ನಾಗರಾಳ, ಡಿ.ಬಿ.ಮುದೂರ ಈ ಭಾಗದಲ್ಲಿ ದಲಿತ ಸಂಘಟನೆ ಕಟ್ಟಿದ್ದಾರೆ. ನೀಲಿ ಶಾಲು ಹಾಕಿಕೊಂಡು ಒಬ್ಬೊಬ್ಬರು ಎಂಎಲ್‌ಎ ಕರೆದು ವಯಕ್ತಿಕ ಪ್ರತಿಷ್ಠೆಯನ್ನಿಟ್ಟುಕೊಂಡು ಸಂಘಟನೆ ಕಟ್ಟಿದರೆ ಸಾಮಾಜಿಕ ಜವಾಬ್ದಾರಿ ಈಡೇರಿಸಲು ಆಗುವುದಿಲ್ಲ.ಒಂದೇ ಬ್ಯಾನರ್‌ದಲ್ಲಿ ತಾಲ್ಲೂಕಿನಲ್ಲಿ ಗಂಭೀರವಾಗಿ ಹೋರಾಟ ನಡೆಸಬೇಕು.ದಲಿತರು ಒಂದಾದರೆ ಮತ್ತೆ ಸಂಘಟನೆಗೆ ಬಲಿಷ್ಠತೆ ಬರುತ್ತದೆ ಎಂದರು.

ಹೋರಾಟಗಾರ ರಮೇಶ ಆಸಂಗಿ , ದಲಿತರ ಹಕ್ಕುಗಳಿಗೆ ಧಕ್ಕೆಯಾದಾಗ ಗಟ್ಟಿ ಧ್ವನಿ ಎತ್ತಿದ್ದು ಡಿ.ಬಿ.ಮುದೂರ,ಗೆಜ್ಜೆಪುಜೆ,ದೇವದಾಸಿ ಪದ್ಧತಿ,ಬೆತ್ತಲೆ ಸೇವೆಯ ವಿರುದ್ಧ ಹೋರಾಟ ಮಾಡಿ ಸಾಮಾಜಿಕ ನ್ಯಾಯ ಒದಗಿಸಿದ್ದಾರೆ.ಸಂವಿಧಾನದ ಮೂಲ ಆಶಯವನ್ನು ಎತ್ತಿ ಹಿಡಿಯುವ ಕೆಲಸ ಅವರು ಮಾಡಿದ್ದಾರೆ ಎಂದರು.

ಮುಖಂಡ ಅಭಿಷೇಕ ಚಕ್ರವರ್ತಿ ಮಾತನಾಡಿ, ಮೂಢನಂಬಿಕೆಗಳ ವಿರುದ್ದ ಡಿ.ಬಿ.ಮುದೂರ ಹೋರಾಟ ಮಾಡಿದರು.ದೇವಿಗೆ ಕೋಣಗಳ ಬಲಿ,ಬೆತ್ತಲೆ ಸೇವೆ,ಬಾವಿ ನೀರು ಮುಟ್ಟದಿರುವುದು ಇಂತಹ ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಟ ಮಾಡಿದವರು ಡಿ.ಬಿ.ಮುದೂರ ಅವರಾಗಿದ್ದಾರೆ ಎಂದರು. ಸಂಸದ ರಮೇಶ ಜಿಗಜಿಣಗಿ,ಬಾಗಲಕೋಟದ ಧಮ್ಮಪಾಲ ಬಂತೇಜಿ,ತಹಶೀಲ್ದಾರ್ ಕೀರ್ತಿ ಚಾಲಕ್, ಸಮಾಜ ಕಲ್ಯಾಣ ನಿರ್ದೇಶಕಿ ಬಿ.ಜಿ.ಮಠ, ಸೋಮನಗೌಡ ಪಾಟೀಲ ನಡಹಳ್ಳಿ, ವಕೀಲ ಎಂ.ಎಚ್.ಹಾಲಣ್ಣವರ,ಪ್ರಮುಖರಾದ ಮುತ್ತಪ್ಪ ಚಮಲಾಪೂರ,ಕೆ.ಬಿ.ದೊಡಮನಿ, ತಿಪ್ಪಣ್ಣ ದೊಡಮನಿ, ಆರ್.ಎನ್.ಹಾದಿಮನಿ, ಎಸ್.ಎಚ್.ಲೊಟಗೇರಿ,ದೇವೇಂದ್ರ ಹಾದಿಮನಿ, ಅರವಿಂದ ಸಾಲವಾಡಗಿ,ಶಾಂತಮ್ಮ ಡಿ. ಮುದೂರ, ರೇವಣೆಪ್ಪ ಹರಿಜನ,ಬಲಭೀಮ ನಾಯ್ಕಮಕ್ಕಳ,ಅಶೋಕ ಇರಕಲ್, ಯಮನಪ್ಪ ಹಂಗರಗಿ, ಮಲ್ಲಪ್ಪ ಬಸರಕೋಡ,ನಾಗೇಶ ಭಜಂತ್ರಿ, ಚನ್ನಪ್ಪ ವಿಜಯಕರ್,ಪರಶುರಾಮ ದಿಂಡವಾರ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ,ತಿಪ್ಪಣ್ಣ ಗೋನಾಳ, ಹರೀಶ ನಾಟೀಕಾರ, ಪ್ರಕಾಶ ಚಲವಾದಿ, ದೇವರಾಜ ಹಂಗರಗಿ ಸೇರಿದಂತೆ ಹಲವು ಮುಖಂಡರು ಇದ್ದರು.

ದಲಿತ ಹೋರಾಟಗಾರ ದಿ.ಡಿ.ಬಿ.ಮುದೂರ ಅವರು ನೇರ ನುಡಿ ನಿಷ್ಠುರ ನಾಯಕ.ತಮ್ಮ ಸ್ವಂತಕ್ಕಾಗಿ ಏನೂ ಮಾಡಿಕೊಂಡವರಲ್ಲ.ಅನ್ಯಾಯವಾದಾಗ ದಿಟ್ಟ ಧ್ವನಿ ಎತ್ತಿದವರು.ಸಮಾಜಕ್ಕೆ ಸರ್ವಸ್ವವನ್ನು ಅರ್ಪಿಸಿದ್ದಾರೆ.ಅವರ ಮಗಳ ನಿಶ್ಚಿತಾರ್ಥ ಆಗಿದ್ದು ಆಕೆಯ ವಿವಾಹಕ್ಕೆ ಕುಟುಂಬದವರು ಮಾಡಿರುವ ಯಾದಿಯನ್ನು ನಮ್ಮ ಶಿವಾಚಾರ್ಯ ಸಂಸ್ಥೆಯಿAದ ಭರಿಸುವ ಕಾರ್ಯ ಮಾಡುತ್ತೇವೆ.
—ರವಿ ನಾಯಕ,ಆಡಳಿತಾಧಿಕಾರಿ,ಎಸ್.ಎಸ್.ಶಿವಾಚಾರ್ಯ ವಿದ್ಯಾಸಂಸ್ಥೆ,ಶಿರೋಳ-ಮುದ್ದೇಬಿಹಾಳ

Latest News

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಯಾವುದೇ ರಾಜಕೀಯ ಪ್ರತಿಫಲಾಪೇಕ್ಷೆಯಿಲ್ಲದೇ ಅಸ್ಕಿ ಫೌಂಡೇಶನ್ ಕಳೆದ 15 ವರ್ಷಗಳಿಂದ ಜನಸೇವೆಯಲ್ಲಿ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ಮುದ್ದೇಬಿಹಾಳ : ರಂಜಾನ್ ಹಬ್ಬ ಎಲ್ಲ ಹಬ್ಬಗಳ ಜೊತೆಗೆ ಆಚರಣೆಗೆ ಬರುತ್ತದೆ.ನಾವೆಲ್ಲ ಯುದ್ಧವನ್ನು ಖಂಡಿಸಬೇಕು.ವಿಶೇಷವಾಗಿ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮುದ್ದೇಬಿಹಾಳ : ಪಟ್ಟಣದ ಮಹಾಂತೇಶ ನಗರದಲ್ಲಿರುವ ವಿಶ್ವಭಾರತಿ ಪಬ್ಲಿಕ್ ಸ್ಕೂಲ್‌ನ ಎಂಟನೇ ವಾರ್ಷಿಕೋತ್ಸವ ಕಾರ್ಯಕ್ರಮ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮುದ್ದೇಬಿಹಾಳ : ಕರಾವಳಿ ಮತ್ತು ಒಳನಾಡು ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ ತಾಲ್ಲೂಕಿನ ಬೆಳಗಲ್ ಗ್ರಾಮದಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪಿಸಲು ಉದ್ದೇಶಿಸಿದ್ದೇವೆ ಎಂದು ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಗುರುವಾರ ಹುನಗುಂದದ ಶ್ರೀ ಎಸ್.ಆರ್.ಕೆ. ಸೌಹಾರ್ದ ಪತ್ತಿನ ಸಹಕಾರಿ ಸಂಘ ಇದರ 15ನೇ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಹುನಗುಂದ ಭಾಗದಲ್ಲಿ ಸಕ್ಕರೆ ಕಾರ್ಖಾನೆ ಆರಂಭಿಸಿದರೆ ಉದ್ಯೋಗ ಸೃಷ್ಟಿಯಾಗುತ್ತವೆ.ಅದರಲ್ಲಿಯೂ ಈ ಭಾಗದ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಮುದ್ದೇಬಿಹಾಳ : ಬಣ್ಣದ ಹಬ್ಬ ಪ್ರೀತಿ ಮತ್ತು ವಸಂತಗಳ ಸಂಕೇತವಾಗಿ ಆಚರಿಸಲಾಗುವ ಪ್ರಮುಖ ಹಿಂದೂ ಹಬ್ಬವಾಗಿದೆ.ದೇವತೆಗಳ ಶಾಶ್ವತ ಮತ್ತು ದೈವಿಕ ಪ್ರೀತಿಯನ್ನು ಇದು ಸೂಚಿಸುತ್ತದೆ.ಈ ದಿನವು ದುಷ್ಟರ ಮೇಲೆ ಒಳ್ಳೆಯದರ ವಿಜಯವನ್ನು ಸೂಚಿಸುತ್ತದೆ ಎಂದು ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ರೇಣುಕಾ ಅಕ್ಕನವರು ಹೇಳಿದರು. ಪಟ್ಟಣದ ಹುಡ್ಕೋ ಗವಿಸಿದ್ಧೇಶ್ವರ ವೇದಿಕೆಯ ಆವರಣದಲ್ಲಿ ಸಮಾನ ಮನಸ್ಕ ಯುವ ಬಳಗದ ಆಶ್ರಯದಲ್ಲಿ ಬುಧವಾರ ಚಿಣ್ಣರ ಬಣ್ಣದ ಓಕುಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.