ದಿ.ಡಿ.ಬಿ.ಮುದೂರಗೆ ನುಡಿನಮನ : ಅಸ್ಪೃಶ್ಯತೆಯ ವಿರುದ್ಧ ಡಿ.ಬಿ.ಮುದೂರ ದಿಟ್ಟ ಹೋರಾಟ -ನಾಡಗೌಡ

ದಿ.ಡಿ.ಬಿ.ಮುದೂರಗೆ ನುಡಿನಮನ : ಅಸ್ಪೃಶ್ಯತೆಯ ವಿರುದ್ಧ ಡಿ.ಬಿ.ಮುದೂರ ದಿಟ್ಟ ಹೋರಾಟ -ನಾಡಗೌಡ

ಮುದ್ದೇಬಿಹಾಳ : ಮತಕ್ಷೇತ್ರದಲ್ಲಿ ಬೇರೂರಿದ್ದ ಅಸ್ಪೃಶ್ಯತೆಯ ವಿರುದ್ಧ ದಿಟ್ಟತನದ ಹೋರಾಟ ಸಂಘಟಿಸಿ ಅದರಲ್ಲಿ ಯಶಸ್ವಿಯಾಗಿದ್ದವರು ದಲಿತ ನಾಯಕ ಡಿ.ಬಿ.ಮುದೂರ ಆಗಿದ್ದರು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.
ವಿವಿಧ ದಲಿತಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಬುಧವಾರ ಇಲ್ಲಿನ ಟಾಪ್ ಇನ್ ಟೌನ್ ಫಂಕ್ಷನ್ ಹಾಲ್‌ನಲ್ಲಿ ಹಮ್ಮಿಕೊಂಡಿದ್ದ ದಲಿತ ಸಂಘರ್ಷ ಸಮೀತಿ ರಾಜ್ಯ ಸಂಘಟನಾ ಸಂಚಾಲಕ ಡಿ.ಬಿ.ಮುದೂರ ನುಡಿನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಹೆಚ್ಚು ಓದದಿದ್ದರೂ ಅನುಭವದಿಂದ ವಿದ್ಯೆಯನ್ನು ಸಂಪಾದನೆ ಮಾಡಿದ್ದರು.ಅವರು ಮಾತುಗಳಿಂದ ಆಳವಾದ ವಿಚಾರಧಾರೆಗಳನ್ನು ಹೊಂದಿದ್ದರು ಎಂಬುದು ಅರ್ಥವಾಗುತ್ತದೆ.ಅವರು ಅಂಬೇಡ್ಕರ್ ವಿಚಾರಧಾರೆಗಳನ್ನು ಅಳವಡಿಸಿಕೊಂಡಿದ್ದರು.ಸಮಾನತೆಗೋಸ್ಕರ ಹೋರಾಟ ಮಾಡುವುದು ಜನ್ಮಸಿದ್ಧ ಹಕ್ಕು.ಸಮಾಜದಲ್ಲಿ ತಾರತಮ್ಯ ಹೋಗಲಾಡಿಸಲು ಆರ್ಥಿಕ,ಶೈಕ್ಷಣಿಕ ಸಾಮಾಜಿಕ ಬದಲಾವಣೆ ತರಬೇಕು ಎಂಬ ದಿಟ್ಟವಾದ ಹೋರಾಟವನ್ನು ಮುದೂರ ತಮ್ಮ ಸಂಗಡಿಗರೊAದಿಗೆ ಸಂಘಟಿಸಿದ್ದರು ಎಂದು ಹೇಳಿದರು.ಸ್ವಂತ ಬದುಕು ಬಿಟ್ಟು ಸಮಾಜಕ್ಕೆ ಹೋರಾಟ ಮಾಡಿದ್ದಾರೆ.ಮುದೂರ ಅವರಂಥವರ ಅಗತ್ಯತೆ ಸಮಾಜಕ್ಕೆ ಇದೆ ಎಂದರು.

ಮಾಜಿ ಶಾಸಕ ರಾಜು ಆಲಗೂರ ಮಾತನಾಡಿ, ಡಿ.ಬಿ.ಮುದೂರ ಕಠೋರ ಸ್ವಭಾವದ ವ್ಯಕ್ತಿ, ಆದರೆ ಒಳ್ಳೆಯ ಮನಸ್ಸುಳ್ಳವರು. ರಾಮಣ್ಣ ಚಲವಾದಿ, ಬಸವರಾಜ ನಾಗರಾಳ, ಡಿ.ಬಿ.ಮುದೂರ ಈ ಭಾಗದಲ್ಲಿ ದಲಿತ ಸಂಘಟನೆ ಕಟ್ಟಿದ್ದಾರೆ. ನೀಲಿ ಶಾಲು ಹಾಕಿಕೊಂಡು ಒಬ್ಬೊಬ್ಬರು ಎಂಎಲ್‌ಎ ಕರೆದು ವಯಕ್ತಿಕ ಪ್ರತಿಷ್ಠೆಯನ್ನಿಟ್ಟುಕೊಂಡು ಸಂಘಟನೆ ಕಟ್ಟಿದರೆ ಸಾಮಾಜಿಕ ಜವಾಬ್ದಾರಿ ಈಡೇರಿಸಲು ಆಗುವುದಿಲ್ಲ.ಒಂದೇ ಬ್ಯಾನರ್‌ದಲ್ಲಿ ತಾಲ್ಲೂಕಿನಲ್ಲಿ ಗಂಭೀರವಾಗಿ ಹೋರಾಟ ನಡೆಸಬೇಕು.ದಲಿತರು ಒಂದಾದರೆ ಮತ್ತೆ ಸಂಘಟನೆಗೆ ಬಲಿಷ್ಠತೆ ಬರುತ್ತದೆ ಎಂದರು.

ಹೋರಾಟಗಾರ ರಮೇಶ ಆಸಂಗಿ , ದಲಿತರ ಹಕ್ಕುಗಳಿಗೆ ಧಕ್ಕೆಯಾದಾಗ ಗಟ್ಟಿ ಧ್ವನಿ ಎತ್ತಿದ್ದು ಡಿ.ಬಿ.ಮುದೂರ,ಗೆಜ್ಜೆಪುಜೆ,ದೇವದಾಸಿ ಪದ್ಧತಿ,ಬೆತ್ತಲೆ ಸೇವೆಯ ವಿರುದ್ಧ ಹೋರಾಟ ಮಾಡಿ ಸಾಮಾಜಿಕ ನ್ಯಾಯ ಒದಗಿಸಿದ್ದಾರೆ.ಸಂವಿಧಾನದ ಮೂಲ ಆಶಯವನ್ನು ಎತ್ತಿ ಹಿಡಿಯುವ ಕೆಲಸ ಅವರು ಮಾಡಿದ್ದಾರೆ ಎಂದರು.

ಮುಖಂಡ ಅಭಿಷೇಕ ಚಕ್ರವರ್ತಿ ಮಾತನಾಡಿ, ಮೂಢನಂಬಿಕೆಗಳ ವಿರುದ್ದ ಡಿ.ಬಿ.ಮುದೂರ ಹೋರಾಟ ಮಾಡಿದರು.ದೇವಿಗೆ ಕೋಣಗಳ ಬಲಿ,ಬೆತ್ತಲೆ ಸೇವೆ,ಬಾವಿ ನೀರು ಮುಟ್ಟದಿರುವುದು ಇಂತಹ ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಟ ಮಾಡಿದವರು ಡಿ.ಬಿ.ಮುದೂರ ಅವರಾಗಿದ್ದಾರೆ ಎಂದರು. ಸಂಸದ ರಮೇಶ ಜಿಗಜಿಣಗಿ,ಬಾಗಲಕೋಟದ ಧಮ್ಮಪಾಲ ಬಂತೇಜಿ,ತಹಶೀಲ್ದಾರ್ ಕೀರ್ತಿ ಚಾಲಕ್, ಸಮಾಜ ಕಲ್ಯಾಣ ನಿರ್ದೇಶಕಿ ಬಿ.ಜಿ.ಮಠ, ಸೋಮನಗೌಡ ಪಾಟೀಲ ನಡಹಳ್ಳಿ, ವಕೀಲ ಎಂ.ಎಚ್.ಹಾಲಣ್ಣವರ,ಪ್ರಮುಖರಾದ ಮುತ್ತಪ್ಪ ಚಮಲಾಪೂರ,ಕೆ.ಬಿ.ದೊಡಮನಿ, ತಿಪ್ಪಣ್ಣ ದೊಡಮನಿ, ಆರ್.ಎನ್.ಹಾದಿಮನಿ, ಎಸ್.ಎಚ್.ಲೊಟಗೇರಿ,ದೇವೇಂದ್ರ ಹಾದಿಮನಿ, ಅರವಿಂದ ಸಾಲವಾಡಗಿ,ಶಾಂತಮ್ಮ ಡಿ. ಮುದೂರ, ರೇವಣೆಪ್ಪ ಹರಿಜನ,ಬಲಭೀಮ ನಾಯ್ಕಮಕ್ಕಳ,ಅಶೋಕ ಇರಕಲ್, ಯಮನಪ್ಪ ಹಂಗರಗಿ, ಮಲ್ಲಪ್ಪ ಬಸರಕೋಡ,ನಾಗೇಶ ಭಜಂತ್ರಿ, ಚನ್ನಪ್ಪ ವಿಜಯಕರ್,ಪರಶುರಾಮ ದಿಂಡವಾರ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ,ತಿಪ್ಪಣ್ಣ ಗೋನಾಳ, ಹರೀಶ ನಾಟೀಕಾರ, ಪ್ರಕಾಶ ಚಲವಾದಿ, ದೇವರಾಜ ಹಂಗರಗಿ ಸೇರಿದಂತೆ ಹಲವು ಮುಖಂಡರು ಇದ್ದರು.

ದಲಿತ ಹೋರಾಟಗಾರ ದಿ.ಡಿ.ಬಿ.ಮುದೂರ ಅವರು ನೇರ ನುಡಿ ನಿಷ್ಠುರ ನಾಯಕ.ತಮ್ಮ ಸ್ವಂತಕ್ಕಾಗಿ ಏನೂ ಮಾಡಿಕೊಂಡವರಲ್ಲ.ಅನ್ಯಾಯವಾದಾಗ ದಿಟ್ಟ ಧ್ವನಿ ಎತ್ತಿದವರು.ಸಮಾಜಕ್ಕೆ ಸರ್ವಸ್ವವನ್ನು ಅರ್ಪಿಸಿದ್ದಾರೆ.ಅವರ ಮಗಳ ನಿಶ್ಚಿತಾರ್ಥ ಆಗಿದ್ದು ಆಕೆಯ ವಿವಾಹಕ್ಕೆ ಕುಟುಂಬದವರು ಮಾಡಿರುವ ಯಾದಿಯನ್ನು ನಮ್ಮ ಶಿವಾಚಾರ್ಯ ಸಂಸ್ಥೆಯಿAದ ಭರಿಸುವ ಕಾರ್ಯ ಮಾಡುತ್ತೇವೆ.
—ರವಿ ನಾಯಕ,ಆಡಳಿತಾಧಿಕಾರಿ,ಎಸ್.ಎಸ್.ಶಿವಾಚಾರ್ಯ ವಿದ್ಯಾಸಂಸ್ಥೆ,ಶಿರೋಳ-ಮುದ್ದೇಬಿಹಾಳ

Latest News

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ:                     ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ: ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಮುದ್ದೇಬಿಹಾಳ : ಸರ್ಕಾರ ಕಾಲುವೆಗಳ ದುರಸ್ತಿಗೆ ಹಣ ಕೊಡುತ್ತಿಲ್ಲ.ನೀವೇ ಪಟ್ಟಿ ಹಾಕಿಕೊಂಡು ಕಾಲುವೆ ರಿಪೇರಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಮುದ್ದೇಬಿಹಾಳ : ಆರೋಗ್ಯ ಇಲಾಖೆಯಲ್ಲಿ ಪದವೀಧರ ಆರೋಗ್ಯ ನಿರೀಕ್ಷಣಾಧಿಕಾರಿಗಳು (ಬಿಎಚ್‌ಇಓ) ಹಾಗೂ ಪದವೀಧರ ಪ್ರಾಥಮಿಕ

ಸೆ.15 ರಂದು ಜಗದ್ಗುರು ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವ ಆಚರಿಸಲು ಕಾಶೀಬಾಯಿ ರಾಂಪೂರ ಕರೆ

ಸೆ.15 ರಂದು ಜಗದ್ಗುರು ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವ ಆಚರಿಸಲು ಕಾಶೀಬಾಯಿ ರಾಂಪೂರ ಕರೆ

ಮುದ್ದೇಬಿಹಾಳ : ದೇಶ-ವಿದೇಶಗಳಲ್ಲಿ ಕೋಟ್ಯಂತರ ಭಕ್ತರನ್ನು ಹೊಂದಿರುವ ಶಕ್ತಿವಂತ ದೇವರೆಂದೇ ಪ್ರಸಿದ್ಧಿಯಾದ ಶ್ರೀ ವೀರಭದ್ರೇಶ್ವರ

ನಾಡಗೌಡರ ವಿರುದ್ಧ ನಡಹಳ್ಳಿ ವಾಗ್ದಾಳಿ:                                 ಶಾಸಕ ನಾಡಗೌಡರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ-ನಡಹಳ್ಳಿ

ನಾಡಗೌಡರ ವಿರುದ್ಧ ನಡಹಳ್ಳಿ ವಾಗ್ದಾಳಿ: ಶಾಸಕ ನಾಡಗೌಡರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ-ನಡಹಳ್ಳಿ

ಮುದ್ದೇಬಿಹಾಳ : ಸಂಪೂರ್ಣ ಬಂದ್ ಮಾಡಿ ಜನರು ಸಹಕರಿಸಿದ್ದಾರೆ.ಶಾಸಕ ನಾಡಗೌಡರ ಮಾತಿಗೆ ಜನರು ಬೆಲೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ ದಿನಗಳಲ್ಲಿಯೂ ಗುರುವಿಗೆ ಮಹತ್ವವಿದೆ. ಇದನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕಿದೆ ಎಂದು ಬಿ.ಎ.ಎಸ್ ಇಂಟರನ್ಯಾಶನ್ ಶಾಲೆಯ ಕಾರ್ಯದರ್ಶಿ ಎಸ್.ಎಸ್.ಬಿರಾದಾರ ಹೇಳಿದರು. ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿ.ಎ.ಎಸ್. ಇಂಟನ್ಯಾಷನಲ್ ಸ್ಕೂಲ್‌ನಲ್ಲಿ ಬುಧವಾರ ಶಿಕ್ಷಕರ ದಿನಾಚರಣೆ ಹಾಗೂ ಇತ್ತಿಚಿಗೆ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸ್ಕೇಟಿಂಗ್ ಪಂದ್ಯಾವಳಿಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರ ಮಾತನಾಡಿದರು. ವಿದ್ಯಾರ್ಥಿಗಳಿಗೆ ಪಠ್ಯಯೊಂದೆ ಅಗತ್ಯವಲ್ಲ. ಪಠ್ಯತರ

ಮಾಜಿ ಶಾಸಕ ನಡಹಳ್ಳಿ ಆಗ್ರಹ:                                                           ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮಾಜಿ ಶಾಸಕ ನಡಹಳ್ಳಿ ಆಗ್ರಹ: ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮುದ್ದೇಬಿಹಾಳ : ರಾಜ್ಯದಲ್ಲಿ 199 ತಾಲ್ಲೂಕುಗಳು ಬರಪೀಡಿತ ಪ್ರದೇಶಗಳಾಗಿದ್ದು ಕಾಂಗ್ರೆಸ್ ಸರ್ಕಾರ ರೈತರ ಐದು ಲಕ್ಷಗಳವರೆಗಿನ ಸಾಲ ಮನ್ನಾ ಮಾಡಿ ರೈತರ ನೆರವಿಗೆ ಧಾವಿಸಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಆಗ್ರಹಿಸಿದರು. ಪಟ್ಟಣದಲ್ಲಿ ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ನಡೆದಿರುವ ಧರಣಿ ಸತ್ಯಾಗ್ರಹದ ನಾಲ್ಕನೇ ದಿನದ ಹೋರಾಟದಲ್ಲಿ ಭಾಗಿಯಾಗಿ ಅವರು ಮಾತನಾಡಿದರು. ಮುದ್ದೇಬಿಹಾಳ ತಾಲ್ಲೂಕು ಮಾತ್ರ ಬರಪಟ್ಟಿಗೆ ಸೇರ್ಪಡೆಯಾದರೆ ಸುಮ್ಮನಾಗುವುದಿಲ್ಲ.ಕ್ಷೇತ್ರದ ತಾಳಿಕೋಟಿ ತಾಲ್ಲೂಕು, ಜಿಲ್ಲೆಯ