ದಿ.ಡಿ.ಬಿ.ಮುದೂರಗೆ ನುಡಿನಮನ : ಅಸ್ಪೃಶ್ಯತೆಯ ವಿರುದ್ಧ ಡಿ.ಬಿ.ಮುದೂರ ದಿಟ್ಟ ಹೋರಾಟ -ನಾಡಗೌಡ

ದಿ.ಡಿ.ಬಿ.ಮುದೂರಗೆ ನುಡಿನಮನ : ಅಸ್ಪೃಶ್ಯತೆಯ ವಿರುದ್ಧ ಡಿ.ಬಿ.ಮುದೂರ ದಿಟ್ಟ ಹೋರಾಟ -ನಾಡಗೌಡ

ಮುದ್ದೇಬಿಹಾಳ : ಮತಕ್ಷೇತ್ರದಲ್ಲಿ ಬೇರೂರಿದ್ದ ಅಸ್ಪೃಶ್ಯತೆಯ ವಿರುದ್ಧ ದಿಟ್ಟತನದ ಹೋರಾಟ ಸಂಘಟಿಸಿ ಅದರಲ್ಲಿ ಯಶಸ್ವಿಯಾಗಿದ್ದವರು ದಲಿತ ನಾಯಕ ಡಿ.ಬಿ.ಮುದೂರ ಆಗಿದ್ದರು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.
ವಿವಿಧ ದಲಿತಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಬುಧವಾರ ಇಲ್ಲಿನ ಟಾಪ್ ಇನ್ ಟೌನ್ ಫಂಕ್ಷನ್ ಹಾಲ್‌ನಲ್ಲಿ ಹಮ್ಮಿಕೊಂಡಿದ್ದ ದಲಿತ ಸಂಘರ್ಷ ಸಮೀತಿ ರಾಜ್ಯ ಸಂಘಟನಾ ಸಂಚಾಲಕ ಡಿ.ಬಿ.ಮುದೂರ ನುಡಿನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಹೆಚ್ಚು ಓದದಿದ್ದರೂ ಅನುಭವದಿಂದ ವಿದ್ಯೆಯನ್ನು ಸಂಪಾದನೆ ಮಾಡಿದ್ದರು.ಅವರು ಮಾತುಗಳಿಂದ ಆಳವಾದ ವಿಚಾರಧಾರೆಗಳನ್ನು ಹೊಂದಿದ್ದರು ಎಂಬುದು ಅರ್ಥವಾಗುತ್ತದೆ.ಅವರು ಅಂಬೇಡ್ಕರ್ ವಿಚಾರಧಾರೆಗಳನ್ನು ಅಳವಡಿಸಿಕೊಂಡಿದ್ದರು.ಸಮಾನತೆಗೋಸ್ಕರ ಹೋರಾಟ ಮಾಡುವುದು ಜನ್ಮಸಿದ್ಧ ಹಕ್ಕು.ಸಮಾಜದಲ್ಲಿ ತಾರತಮ್ಯ ಹೋಗಲಾಡಿಸಲು ಆರ್ಥಿಕ,ಶೈಕ್ಷಣಿಕ ಸಾಮಾಜಿಕ ಬದಲಾವಣೆ ತರಬೇಕು ಎಂಬ ದಿಟ್ಟವಾದ ಹೋರಾಟವನ್ನು ಮುದೂರ ತಮ್ಮ ಸಂಗಡಿಗರೊAದಿಗೆ ಸಂಘಟಿಸಿದ್ದರು ಎಂದು ಹೇಳಿದರು.ಸ್ವಂತ ಬದುಕು ಬಿಟ್ಟು ಸಮಾಜಕ್ಕೆ ಹೋರಾಟ ಮಾಡಿದ್ದಾರೆ.ಮುದೂರ ಅವರಂಥವರ ಅಗತ್ಯತೆ ಸಮಾಜಕ್ಕೆ ಇದೆ ಎಂದರು.

ಮಾಜಿ ಶಾಸಕ ರಾಜು ಆಲಗೂರ ಮಾತನಾಡಿ, ಡಿ.ಬಿ.ಮುದೂರ ಕಠೋರ ಸ್ವಭಾವದ ವ್ಯಕ್ತಿ, ಆದರೆ ಒಳ್ಳೆಯ ಮನಸ್ಸುಳ್ಳವರು. ರಾಮಣ್ಣ ಚಲವಾದಿ, ಬಸವರಾಜ ನಾಗರಾಳ, ಡಿ.ಬಿ.ಮುದೂರ ಈ ಭಾಗದಲ್ಲಿ ದಲಿತ ಸಂಘಟನೆ ಕಟ್ಟಿದ್ದಾರೆ. ನೀಲಿ ಶಾಲು ಹಾಕಿಕೊಂಡು ಒಬ್ಬೊಬ್ಬರು ಎಂಎಲ್‌ಎ ಕರೆದು ವಯಕ್ತಿಕ ಪ್ರತಿಷ್ಠೆಯನ್ನಿಟ್ಟುಕೊಂಡು ಸಂಘಟನೆ ಕಟ್ಟಿದರೆ ಸಾಮಾಜಿಕ ಜವಾಬ್ದಾರಿ ಈಡೇರಿಸಲು ಆಗುವುದಿಲ್ಲ.ಒಂದೇ ಬ್ಯಾನರ್‌ದಲ್ಲಿ ತಾಲ್ಲೂಕಿನಲ್ಲಿ ಗಂಭೀರವಾಗಿ ಹೋರಾಟ ನಡೆಸಬೇಕು.ದಲಿತರು ಒಂದಾದರೆ ಮತ್ತೆ ಸಂಘಟನೆಗೆ ಬಲಿಷ್ಠತೆ ಬರುತ್ತದೆ ಎಂದರು.

ಹೋರಾಟಗಾರ ರಮೇಶ ಆಸಂಗಿ , ದಲಿತರ ಹಕ್ಕುಗಳಿಗೆ ಧಕ್ಕೆಯಾದಾಗ ಗಟ್ಟಿ ಧ್ವನಿ ಎತ್ತಿದ್ದು ಡಿ.ಬಿ.ಮುದೂರ,ಗೆಜ್ಜೆಪುಜೆ,ದೇವದಾಸಿ ಪದ್ಧತಿ,ಬೆತ್ತಲೆ ಸೇವೆಯ ವಿರುದ್ಧ ಹೋರಾಟ ಮಾಡಿ ಸಾಮಾಜಿಕ ನ್ಯಾಯ ಒದಗಿಸಿದ್ದಾರೆ.ಸಂವಿಧಾನದ ಮೂಲ ಆಶಯವನ್ನು ಎತ್ತಿ ಹಿಡಿಯುವ ಕೆಲಸ ಅವರು ಮಾಡಿದ್ದಾರೆ ಎಂದರು.

ಮುಖಂಡ ಅಭಿಷೇಕ ಚಕ್ರವರ್ತಿ ಮಾತನಾಡಿ, ಮೂಢನಂಬಿಕೆಗಳ ವಿರುದ್ದ ಡಿ.ಬಿ.ಮುದೂರ ಹೋರಾಟ ಮಾಡಿದರು.ದೇವಿಗೆ ಕೋಣಗಳ ಬಲಿ,ಬೆತ್ತಲೆ ಸೇವೆ,ಬಾವಿ ನೀರು ಮುಟ್ಟದಿರುವುದು ಇಂತಹ ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಟ ಮಾಡಿದವರು ಡಿ.ಬಿ.ಮುದೂರ ಅವರಾಗಿದ್ದಾರೆ ಎಂದರು. ಸಂಸದ ರಮೇಶ ಜಿಗಜಿಣಗಿ,ಬಾಗಲಕೋಟದ ಧಮ್ಮಪಾಲ ಬಂತೇಜಿ,ತಹಶೀಲ್ದಾರ್ ಕೀರ್ತಿ ಚಾಲಕ್, ಸಮಾಜ ಕಲ್ಯಾಣ ನಿರ್ದೇಶಕಿ ಬಿ.ಜಿ.ಮಠ, ಸೋಮನಗೌಡ ಪಾಟೀಲ ನಡಹಳ್ಳಿ, ವಕೀಲ ಎಂ.ಎಚ್.ಹಾಲಣ್ಣವರ,ಪ್ರಮುಖರಾದ ಮುತ್ತಪ್ಪ ಚಮಲಾಪೂರ,ಕೆ.ಬಿ.ದೊಡಮನಿ, ತಿಪ್ಪಣ್ಣ ದೊಡಮನಿ, ಆರ್.ಎನ್.ಹಾದಿಮನಿ, ಎಸ್.ಎಚ್.ಲೊಟಗೇರಿ,ದೇವೇಂದ್ರ ಹಾದಿಮನಿ, ಅರವಿಂದ ಸಾಲವಾಡಗಿ,ಶಾಂತಮ್ಮ ಡಿ. ಮುದೂರ, ರೇವಣೆಪ್ಪ ಹರಿಜನ,ಬಲಭೀಮ ನಾಯ್ಕಮಕ್ಕಳ,ಅಶೋಕ ಇರಕಲ್, ಯಮನಪ್ಪ ಹಂಗರಗಿ, ಮಲ್ಲಪ್ಪ ಬಸರಕೋಡ,ನಾಗೇಶ ಭಜಂತ್ರಿ, ಚನ್ನಪ್ಪ ವಿಜಯಕರ್,ಪರಶುರಾಮ ದಿಂಡವಾರ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ,ತಿಪ್ಪಣ್ಣ ಗೋನಾಳ, ಹರೀಶ ನಾಟೀಕಾರ, ಪ್ರಕಾಶ ಚಲವಾದಿ, ದೇವರಾಜ ಹಂಗರಗಿ ಸೇರಿದಂತೆ ಹಲವು ಮುಖಂಡರು ಇದ್ದರು.

ದಲಿತ ಹೋರಾಟಗಾರ ದಿ.ಡಿ.ಬಿ.ಮುದೂರ ಅವರು ನೇರ ನುಡಿ ನಿಷ್ಠುರ ನಾಯಕ.ತಮ್ಮ ಸ್ವಂತಕ್ಕಾಗಿ ಏನೂ ಮಾಡಿಕೊಂಡವರಲ್ಲ.ಅನ್ಯಾಯವಾದಾಗ ದಿಟ್ಟ ಧ್ವನಿ ಎತ್ತಿದವರು.ಸಮಾಜಕ್ಕೆ ಸರ್ವಸ್ವವನ್ನು ಅರ್ಪಿಸಿದ್ದಾರೆ.ಅವರ ಮಗಳ ನಿಶ್ಚಿತಾರ್ಥ ಆಗಿದ್ದು ಆಕೆಯ ವಿವಾಹಕ್ಕೆ ಕುಟುಂಬದವರು ಮಾಡಿರುವ ಯಾದಿಯನ್ನು ನಮ್ಮ ಶಿವಾಚಾರ್ಯ ಸಂಸ್ಥೆಯಿAದ ಭರಿಸುವ ಕಾರ್ಯ ಮಾಡುತ್ತೇವೆ.
—ರವಿ ನಾಯಕ,ಆಡಳಿತಾಧಿಕಾರಿ,ಎಸ್.ಎಸ್.ಶಿವಾಚಾರ್ಯ ವಿದ್ಯಾಸಂಸ್ಥೆ,ಶಿರೋಳ-ಮುದ್ದೇಬಿಹಾಳ

Latest News

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಮುದ್ದೇಬಿಹಾಳ : ಇಲ್ಲಿನ ಯುವ ಉದ್ಯಮಿ,ಕಾಂಗ್ರೆಸ್ ಪಕ್ಷದ ಮುಖಂಡ ಆನಂದ ಪೂಜಾರಿ ಅವರನ್ನು ಕಾಂಗ್ರೆಸ್

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಮುದ್ದೇಬಿಹಾಳ : ದೇವಾಂಗ(ನೇಕಾರ)ಸಮುದಾಯದ ಸಂಘಟನೆ,ಜಾಗೃತಿಗಾಗಿ ಅಖಿಲ ಭಾರತ ದೇವಾಂಗ ಬೃಹತ್ ಜನಜಾಗೃತಿ ಸಮಾವೇಶ ಹಾಗೂ

ಶೋಷಿತರ ಧ್ವನಿ ಡಾ. ಬಿ.ಆರ್.ಅಂಬೇಡ್ಕರ್ – ಇಂದಿರಾ ಕುಂಬಾರ

ಶೋಷಿತರ ಧ್ವನಿ ಡಾ. ಬಿ.ಆರ್.ಅಂಬೇಡ್ಕರ್ – ಇಂದಿರಾ ಕುಂಬಾರ

​ಮುದ್ದೇಬಿಹಾಳ : ತಾಲ್ಲೂಕಿನ ಚವನಭಾವಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಮಂಗಳವಾರ ಸಂವಿಧಾನ ಶಿಲ್ಪಿ ಡಾ.

ಡಾ.ಬಿ.ಆರ್.ಅಂಬೇಡ್ಕರ್ ಭಾರತ ದೇಶದ ಆತ್ಮ-ಶಾಸಕ ಸಿ.ಎಸ್.ನಾಡಗೌಡ

ಡಾ.ಬಿ.ಆರ್.ಅಂಬೇಡ್ಕರ್ ಭಾರತ ದೇಶದ ಆತ್ಮ-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಭಾರತದ ರಾಷ್ಟçಪಿತ ಮಹಾತ್ಮಾ ಗಾಂಧೀಜಿ ಆಗಿದ್ದರೆ,ಡಾ.ಅಂಬೇಡ್ಕರ್ ಅವರು ಈ ದೇಶದ ಆತ್ಮವಾಗಿದ್ದಾರೆ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ;                                                                                 ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ; ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಮುದ್ದೇಬಿಹಾಳ : ಪಟ್ಟಣದ ಅಭ್ಯುದಯ ಪಿಯು ಸೈನ್ಸ್ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಶೇ.100ರಷ್ಟಾಗಿದೆ.ಪರೀಕ್ಷೆಗೆ ಕೂತಿದ್ದ 229 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅದರಲ್ಲಿ ಆಸೀಫಾ ಕಾಶೀಮ್ ಖತೀಬ ಶೇ.98ರಷ್ಟು ಅಂಕ ಪಡೆದು ಮುದ್ದೇಬಿಹಾಳ ನಗರಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ.ಇನ್ನುಳಿದAತೆ ಶೇ.97.83 ಅಂಕ ಪಡೆದ ಲಕ್ಷಿö್ಮÃ ಉಂಡಿ ದ್ವಿತೀಯ,ಶೇ.97.33 ಅಂಕ ಪಡೆದ ಸುಷ್ಮಿತಾ ದನ್ನೂರ ತೃತೀಯ ಸ್ಥಾನ ಪಡೆದುಕೊಂಡಿದ್ದಾಳೆ.ಉತ್ತೀರ್ಣರಾದ 229ರಲ್ಲಿ ಅದರಲ್ಲಿ 142 ಡಿಸ್ಟಿಂಕ್ಷನ್,76 ಪ್ರಥಮ,11 ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಗಣಿತದಲ್ಲಿ 54,ಬಯೋಲಜಿ

ಯೂರಿಯಾ,ಡಿಎಪಿ ರಸಗೊಬ್ಬರ ವಿತರಣೆಗೆ ಎಫ್.ಐ.ಡಿ ಕಡ್ಡಾಯ

ಯೂರಿಯಾ,ಡಿಎಪಿ ರಸಗೊಬ್ಬರ ವಿತರಣೆಗೆ ಎಫ್.ಐ.ಡಿ ಕಡ್ಡಾಯ

ಮುದ್ದೇಬಿಹಾಳ : ಮುಂಗಾರು ಹಂಗಾಮಿನಲ್ಲಿ ಯೂರಿಯಾ ವಿತರಣೆಗೆ ಆಪ್ ಅಭಿವೃದ್ಧಿಪಡಿಸಲಾಗಿದ್ದು ಎಲ್ಲ ಕೃಷಿ ಪರಿಕರ ಮಾರಾಟಗಾರರು ಅದನ್ನು ಬಳಸಿಕೊಂಡು ಯೂರಿಯಾ ಮಾರಾಟ ಮಾಡಬೇಕು.ಯೂರಿಯಾ ,ಡಿಎಪಿ ಗೊಬ್ಬರ ಖರೀದಿಸಲು ರೈತರ ಖಾತೆಗಳು ಎಫ್.ಐ.ಡಿ ನೋಂದಣಿಯಾಗಿರುವುದು ಕಡ್ಡಾಯವಾಗಿದೆ ಎಂದು ವಿಜಯಪುರದ ಉಪ ಕೃಷಿ ನಿರ್ದೇಶಕ ಶರಣಗೌಡ ಆರ್, ಎಂದು ಹೇಳಿದರು. ಪಟ್ಟಣದ ಹುಡ್ಕೋದಲ್ಲಿರುವ ಬಿ.ಜಿ.ಮಠ್ ಸಭಾಭವನದಲ್ಲಿ ಮಂಗಳವಾರ ಕೃಷಿಪರಿಕರ ಮಾರಾಟಗಾರರಿಗೆ ಏರ್ಪಡಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು. ಸನ್ 2026-27ನೇ ಸಾಲಿನಲ್ಲಿ ರೈತರಿಗೆ ಯೂರಿಯಾ