ಪ್ರಜಾನಾಡು ಡಿಜಿಟಲ್ ದಿನದರ್ಶಿಕೆ ಬಿಡುಗಡೆ: ಸತ್ಯನಿಷ್ಠೆ,ಮೌಲ್ಯಾಧಾರಿತ ಪತ್ರಿಕೋದ್ಯಮ ಇಂದಿನ ಅಗತ್ಯ-ಹಿರೇಮಠ

ಪ್ರಜಾನಾಡು ಡಿಜಿಟಲ್ ದಿನದರ್ಶಿಕೆ ಬಿಡುಗಡೆ: ಸತ್ಯನಿಷ್ಠೆ,ಮೌಲ್ಯಾಧಾರಿತ ಪತ್ರಿಕೋದ್ಯಮ ಇಂದಿನ ಅಗತ್ಯ-ಹಿರೇಮಠ

ಮುದ್ದೇಬಿಹಾಳ : ಸಮಾಜದಲ್ಲಿ ಪತ್ರಕರ್ತರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಾ ಸಮಾಜದ ಮುಂದೆ ಸತ್ಯವನ್ನು ತಲುಪಿಸುವ ಜವಾಬ್ದಾರಿಯುತ ಕಾರ್ಯನಿರ್ವಹಿಸುತ್ತಾರೆ.ಸಮಾಜದ ಒಳಿತಿಗಾಗಿ ಮಾಧ್ಯಮಗಳ ಜವಾಬ್ದಾರಿ ಹೆಚ್ಚಿದ್ದು, ಸತ್ಯನಿಷ್ಠೆ ಮತ್ತು ಮೌಲ್ಯಾಧಾರಿತ ಪತ್ರಿಕೋದ್ಯಮ ಇಂದಿನ ಅಗತ್ಯ ಎಂದು ಜಂಗಮ ಸಮಾಜದ ತಾಲ್ಲೂಕು ಅಧ್ಯಕ್ಷ ದಾನಯ್ಯಸ್ವಾಮಿ ಹಿರೇಮಠ ಹೇಳಿದರು.

ಪಟ್ಟಣದ ಶ್ರೀ ಖಾಸ್ಘತೇಶ್ವರ ಮಠದಲ್ಲಿ ಸೋಮವಾರ ಸಂಜೆ ಇಂಗಳೇಶ್ವರದ ಲಿ, ಮುನಿ ಪ್ರ, ಚನ್ನಬಸವ ಮಾಹಾಸ್ವಾಮಿಗಳ ನುಡಿಮನ ಹಾಗೂ ಪ್ರಜಾನಾಡು ಡಿಜಿಟಲ್ ಸುದ್ದಿ ವಾಹಿನಿಯ ದಿನದರ್ಶಿಕೆ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು.

ಸಾಹಿತಿ ಎಚ್.ಆರ್. ಬಾಗವಾನ ಮಾತನಾಡಿ, ಇಂಗಳೇಶ್ವರ ಶ್ರೀಗಳ ನುಡಿಮನ ಚಿಂತನೆಗಳು ಸಮಾಜಕ್ಕೆ ದಾರಿದೀಪವಾಗಿದ್ದು, ದಿನದರ್ಶಿಕೆಯಂತಹ ಪ್ರಕಟಣೆಗಳು ಸಾಂಸ್ಕೃತಿಕ ಮತ್ತು ಸಾಮಾಜಿಕ ಮೌಲ್ಯಗಳನ್ನು ಮುಂದಿನ ತಲೆಮಾರಿಗೆ ತಲುಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಹೇಳಿದರು.

ಸರ್ಕಾರಿ ಪಪೂ ಕಾಲೇಜಿನ ಉಪನ್ಯಾಸಕ ಐ.ಬಿ. ಹಿರೇಮಠ ಮಾತನಾಡಿ, ಡಿಜಿಟಲ್ ಪತ್ರಿಕೋದ್ಯಮ ವೇಗದ ಜೊತೆಗೆ ಜವಾಬ್ದಾರಿಯನ್ನೂ ಹೊತ್ತುಕೊಳ್ಳಬೇಕಿದೆ ಎಂದರು. ಸಾಹಿತಿ ಶಿವಪುತ್ರ ಅಜಮನಿ ಮಾತನಾಡಿ, ಸಾಹಿತ್ಯ, ಸಂಸ್ಕೃತಿ ಮತ್ತು ಮಾಧ್ಯಮಗಳ ಸಮನ್ವಯದಿಂದ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ಸಾಧ್ಯ ಎಂದು ಅಭಿಪ್ರಾಯಪಟ್ಟರು.

ದಿವ್ಯ ಸಾನಿಧ್ಯವನ್ನು ಖಾಸ್ಗತೇಶ್ವರ ಮಠದ ನೀಲಮ್ಮ ಎಸ್. ವಿರಕ್ತಮಠ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪುರಸಭೆ ಮಾಜಿ ಉಪಾಧ್ಯಕ್ಷೆ ಪ್ರೀತಿ ಎಸ್. ದೇಗಿನಾಳ,ಅಪ್ಪು ದೇಗಿನಾಳ, ಸಮಾಜ ಸೇವಕ ಅಶೋಕ ನಾಡಗೌಡ ಇದ್ದರು.

ಮುಖಂಡ ಮಹಾಂತೇಶ ಬೂದಿಹಾಳಮಠ, ಪ್ರಜಾನಾಡು ಡಿಜಿಟಲ್ ವಾಹಿನಿಯ ವರದಿಗಾರ ಸಚಿನ್ ಚಲವಾದಿ , ಎಸ್.ಬಿ. ಹುಗ್ಗಿ, ಪರಶುರಾಮ ನಾಲತವಾಡ, ರಫೀಕ್ ಶಿರೋಳ, ಶ್ರೀಕಾಂತ್ ಹಿರೇಮಠ, ಕಾಶಿನಾಥ್ ಹುಗ್ಗಿ, ರಾಜುಗೌಡ ತುಂಬಗಿ, ಶರಣು ಚಲವಾದಿ, ಆನಂದ ಮುದೊರ, ದೇವರಾಜ ಹಂಗರಗಿ, ಸಂಗಮೇಶ ಚಲವಾದಿ, ಸಿದ್ದು ಪಾಟೀಲ್ ಇದ್ದರು.

Latest News

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ:                     ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ: ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಮುದ್ದೇಬಿಹಾಳ : ಸರ್ಕಾರ ಕಾಲುವೆಗಳ ದುರಸ್ತಿಗೆ ಹಣ ಕೊಡುತ್ತಿಲ್ಲ.ನೀವೇ ಪಟ್ಟಿ ಹಾಕಿಕೊಂಡು ಕಾಲುವೆ ರಿಪೇರಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಮುದ್ದೇಬಿಹಾಳ : ಆರೋಗ್ಯ ಇಲಾಖೆಯಲ್ಲಿ ಪದವೀಧರ ಆರೋಗ್ಯ ನಿರೀಕ್ಷಣಾಧಿಕಾರಿಗಳು (ಬಿಎಚ್‌ಇಓ) ಹಾಗೂ ಪದವೀಧರ ಪ್ರಾಥಮಿಕ

ಸೆ.15 ರಂದು ಜಗದ್ಗುರು ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವ ಆಚರಿಸಲು ಕಾಶೀಬಾಯಿ ರಾಂಪೂರ ಕರೆ

ಸೆ.15 ರಂದು ಜಗದ್ಗುರು ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವ ಆಚರಿಸಲು ಕಾಶೀಬಾಯಿ ರಾಂಪೂರ ಕರೆ

ಮುದ್ದೇಬಿಹಾಳ : ದೇಶ-ವಿದೇಶಗಳಲ್ಲಿ ಕೋಟ್ಯಂತರ ಭಕ್ತರನ್ನು ಹೊಂದಿರುವ ಶಕ್ತಿವಂತ ದೇವರೆಂದೇ ಪ್ರಸಿದ್ಧಿಯಾದ ಶ್ರೀ ವೀರಭದ್ರೇಶ್ವರ

ನಾಡಗೌಡರ ವಿರುದ್ಧ ನಡಹಳ್ಳಿ ವಾಗ್ದಾಳಿ:                                 ಶಾಸಕ ನಾಡಗೌಡರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ-ನಡಹಳ್ಳಿ

ನಾಡಗೌಡರ ವಿರುದ್ಧ ನಡಹಳ್ಳಿ ವಾಗ್ದಾಳಿ: ಶಾಸಕ ನಾಡಗೌಡರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ-ನಡಹಳ್ಳಿ

ಮುದ್ದೇಬಿಹಾಳ : ಸಂಪೂರ್ಣ ಬಂದ್ ಮಾಡಿ ಜನರು ಸಹಕರಿಸಿದ್ದಾರೆ.ಶಾಸಕ ನಾಡಗೌಡರ ಮಾತಿಗೆ ಜನರು ಬೆಲೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ ದಿನಗಳಲ್ಲಿಯೂ ಗುರುವಿಗೆ ಮಹತ್ವವಿದೆ. ಇದನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕಿದೆ ಎಂದು ಬಿ.ಎ.ಎಸ್ ಇಂಟರನ್ಯಾಶನ್ ಶಾಲೆಯ ಕಾರ್ಯದರ್ಶಿ ಎಸ್.ಎಸ್.ಬಿರಾದಾರ ಹೇಳಿದರು. ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿ.ಎ.ಎಸ್. ಇಂಟನ್ಯಾಷನಲ್ ಸ್ಕೂಲ್‌ನಲ್ಲಿ ಬುಧವಾರ ಶಿಕ್ಷಕರ ದಿನಾಚರಣೆ ಹಾಗೂ ಇತ್ತಿಚಿಗೆ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸ್ಕೇಟಿಂಗ್ ಪಂದ್ಯಾವಳಿಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರ ಮಾತನಾಡಿದರು. ವಿದ್ಯಾರ್ಥಿಗಳಿಗೆ ಪಠ್ಯಯೊಂದೆ ಅಗತ್ಯವಲ್ಲ. ಪಠ್ಯತರ

ಮಾಜಿ ಶಾಸಕ ನಡಹಳ್ಳಿ ಆಗ್ರಹ:                                                           ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮಾಜಿ ಶಾಸಕ ನಡಹಳ್ಳಿ ಆಗ್ರಹ: ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮುದ್ದೇಬಿಹಾಳ : ರಾಜ್ಯದಲ್ಲಿ 199 ತಾಲ್ಲೂಕುಗಳು ಬರಪೀಡಿತ ಪ್ರದೇಶಗಳಾಗಿದ್ದು ಕಾಂಗ್ರೆಸ್ ಸರ್ಕಾರ ರೈತರ ಐದು ಲಕ್ಷಗಳವರೆಗಿನ ಸಾಲ ಮನ್ನಾ ಮಾಡಿ ರೈತರ ನೆರವಿಗೆ ಧಾವಿಸಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಆಗ್ರಹಿಸಿದರು. ಪಟ್ಟಣದಲ್ಲಿ ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ನಡೆದಿರುವ ಧರಣಿ ಸತ್ಯಾಗ್ರಹದ ನಾಲ್ಕನೇ ದಿನದ ಹೋರಾಟದಲ್ಲಿ ಭಾಗಿಯಾಗಿ ಅವರು ಮಾತನಾಡಿದರು. ಮುದ್ದೇಬಿಹಾಳ ತಾಲ್ಲೂಕು ಮಾತ್ರ ಬರಪಟ್ಟಿಗೆ ಸೇರ್ಪಡೆಯಾದರೆ ಸುಮ್ಮನಾಗುವುದಿಲ್ಲ.ಕ್ಷೇತ್ರದ ತಾಳಿಕೋಟಿ ತಾಲ್ಲೂಕು, ಜಿಲ್ಲೆಯ