ಪ್ರಜಾನಾಡು ಡಿಜಿಟಲ್ ದಿನದರ್ಶಿಕೆ ಬಿಡುಗಡೆ: ಸತ್ಯನಿಷ್ಠೆ,ಮೌಲ್ಯಾಧಾರಿತ ಪತ್ರಿಕೋದ್ಯಮ ಇಂದಿನ ಅಗತ್ಯ-ಹಿರೇಮಠ

ಪ್ರಜಾನಾಡು ಡಿಜಿಟಲ್ ದಿನದರ್ಶಿಕೆ ಬಿಡುಗಡೆ: ಸತ್ಯನಿಷ್ಠೆ,ಮೌಲ್ಯಾಧಾರಿತ ಪತ್ರಿಕೋದ್ಯಮ ಇಂದಿನ ಅಗತ್ಯ-ಹಿರೇಮಠ

ಮುದ್ದೇಬಿಹಾಳ : ಸಮಾಜದಲ್ಲಿ ಪತ್ರಕರ್ತರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಾ ಸಮಾಜದ ಮುಂದೆ ಸತ್ಯವನ್ನು ತಲುಪಿಸುವ ಜವಾಬ್ದಾರಿಯುತ ಕಾರ್ಯನಿರ್ವಹಿಸುತ್ತಾರೆ.ಸಮಾಜದ ಒಳಿತಿಗಾಗಿ ಮಾಧ್ಯಮಗಳ ಜವಾಬ್ದಾರಿ ಹೆಚ್ಚಿದ್ದು, ಸತ್ಯನಿಷ್ಠೆ ಮತ್ತು ಮೌಲ್ಯಾಧಾರಿತ ಪತ್ರಿಕೋದ್ಯಮ ಇಂದಿನ ಅಗತ್ಯ ಎಂದು ಜಂಗಮ ಸಮಾಜದ ತಾಲ್ಲೂಕು ಅಧ್ಯಕ್ಷ ದಾನಯ್ಯಸ್ವಾಮಿ ಹಿರೇಮಠ ಹೇಳಿದರು.

ಪಟ್ಟಣದ ಶ್ರೀ ಖಾಸ್ಘತೇಶ್ವರ ಮಠದಲ್ಲಿ ಸೋಮವಾರ ಸಂಜೆ ಇಂಗಳೇಶ್ವರದ ಲಿ, ಮುನಿ ಪ್ರ, ಚನ್ನಬಸವ ಮಾಹಾಸ್ವಾಮಿಗಳ ನುಡಿಮನ ಹಾಗೂ ಪ್ರಜಾನಾಡು ಡಿಜಿಟಲ್ ಸುದ್ದಿ ವಾಹಿನಿಯ ದಿನದರ್ಶಿಕೆ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು.

ಸಾಹಿತಿ ಎಚ್.ಆರ್. ಬಾಗವಾನ ಮಾತನಾಡಿ, ಇಂಗಳೇಶ್ವರ ಶ್ರೀಗಳ ನುಡಿಮನ ಚಿಂತನೆಗಳು ಸಮಾಜಕ್ಕೆ ದಾರಿದೀಪವಾಗಿದ್ದು, ದಿನದರ್ಶಿಕೆಯಂತಹ ಪ್ರಕಟಣೆಗಳು ಸಾಂಸ್ಕೃತಿಕ ಮತ್ತು ಸಾಮಾಜಿಕ ಮೌಲ್ಯಗಳನ್ನು ಮುಂದಿನ ತಲೆಮಾರಿಗೆ ತಲುಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಹೇಳಿದರು.

ಸರ್ಕಾರಿ ಪಪೂ ಕಾಲೇಜಿನ ಉಪನ್ಯಾಸಕ ಐ.ಬಿ. ಹಿರೇಮಠ ಮಾತನಾಡಿ, ಡಿಜಿಟಲ್ ಪತ್ರಿಕೋದ್ಯಮ ವೇಗದ ಜೊತೆಗೆ ಜವಾಬ್ದಾರಿಯನ್ನೂ ಹೊತ್ತುಕೊಳ್ಳಬೇಕಿದೆ ಎಂದರು. ಸಾಹಿತಿ ಶಿವಪುತ್ರ ಅಜಮನಿ ಮಾತನಾಡಿ, ಸಾಹಿತ್ಯ, ಸಂಸ್ಕೃತಿ ಮತ್ತು ಮಾಧ್ಯಮಗಳ ಸಮನ್ವಯದಿಂದ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ಸಾಧ್ಯ ಎಂದು ಅಭಿಪ್ರಾಯಪಟ್ಟರು.

ದಿವ್ಯ ಸಾನಿಧ್ಯವನ್ನು ಖಾಸ್ಗತೇಶ್ವರ ಮಠದ ನೀಲಮ್ಮ ಎಸ್. ವಿರಕ್ತಮಠ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪುರಸಭೆ ಮಾಜಿ ಉಪಾಧ್ಯಕ್ಷೆ ಪ್ರೀತಿ ಎಸ್. ದೇಗಿನಾಳ,ಅಪ್ಪು ದೇಗಿನಾಳ, ಸಮಾಜ ಸೇವಕ ಅಶೋಕ ನಾಡಗೌಡ ಇದ್ದರು.

ಮುಖಂಡ ಮಹಾಂತೇಶ ಬೂದಿಹಾಳಮಠ, ಪ್ರಜಾನಾಡು ಡಿಜಿಟಲ್ ವಾಹಿನಿಯ ವರದಿಗಾರ ಸಚಿನ್ ಚಲವಾದಿ , ಎಸ್.ಬಿ. ಹುಗ್ಗಿ, ಪರಶುರಾಮ ನಾಲತವಾಡ, ರಫೀಕ್ ಶಿರೋಳ, ಶ್ರೀಕಾಂತ್ ಹಿರೇಮಠ, ಕಾಶಿನಾಥ್ ಹುಗ್ಗಿ, ರಾಜುಗೌಡ ತುಂಬಗಿ, ಶರಣು ಚಲವಾದಿ, ಆನಂದ ಮುದೊರ, ದೇವರಾಜ ಹಂಗರಗಿ, ಸಂಗಮೇಶ ಚಲವಾದಿ, ಸಿದ್ದು ಪಾಟೀಲ್ ಇದ್ದರು.

Latest News

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಯಾವುದೇ ರಾಜಕೀಯ ಪ್ರತಿಫಲಾಪೇಕ್ಷೆಯಿಲ್ಲದೇ ಅಸ್ಕಿ ಫೌಂಡೇಶನ್ ಕಳೆದ 15 ವರ್ಷಗಳಿಂದ ಜನಸೇವೆಯಲ್ಲಿ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ಮುದ್ದೇಬಿಹಾಳ : ರಂಜಾನ್ ಹಬ್ಬ ಎಲ್ಲ ಹಬ್ಬಗಳ ಜೊತೆಗೆ ಆಚರಣೆಗೆ ಬರುತ್ತದೆ.ನಾವೆಲ್ಲ ಯುದ್ಧವನ್ನು ಖಂಡಿಸಬೇಕು.ವಿಶೇಷವಾಗಿ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮುದ್ದೇಬಿಹಾಳ : ಪಟ್ಟಣದ ಮಹಾಂತೇಶ ನಗರದಲ್ಲಿರುವ ವಿಶ್ವಭಾರತಿ ಪಬ್ಲಿಕ್ ಸ್ಕೂಲ್‌ನ ಎಂಟನೇ ವಾರ್ಷಿಕೋತ್ಸವ ಕಾರ್ಯಕ್ರಮ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮುದ್ದೇಬಿಹಾಳ : ಕರಾವಳಿ ಮತ್ತು ಒಳನಾಡು ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ ತಾಲ್ಲೂಕಿನ ಬೆಳಗಲ್ ಗ್ರಾಮದಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪಿಸಲು ಉದ್ದೇಶಿಸಿದ್ದೇವೆ ಎಂದು ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಗುರುವಾರ ಹುನಗುಂದದ ಶ್ರೀ ಎಸ್.ಆರ್.ಕೆ. ಸೌಹಾರ್ದ ಪತ್ತಿನ ಸಹಕಾರಿ ಸಂಘ ಇದರ 15ನೇ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಹುನಗುಂದ ಭಾಗದಲ್ಲಿ ಸಕ್ಕರೆ ಕಾರ್ಖಾನೆ ಆರಂಭಿಸಿದರೆ ಉದ್ಯೋಗ ಸೃಷ್ಟಿಯಾಗುತ್ತವೆ.ಅದರಲ್ಲಿಯೂ ಈ ಭಾಗದ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಮುದ್ದೇಬಿಹಾಳ : ಬಣ್ಣದ ಹಬ್ಬ ಪ್ರೀತಿ ಮತ್ತು ವಸಂತಗಳ ಸಂಕೇತವಾಗಿ ಆಚರಿಸಲಾಗುವ ಪ್ರಮುಖ ಹಿಂದೂ ಹಬ್ಬವಾಗಿದೆ.ದೇವತೆಗಳ ಶಾಶ್ವತ ಮತ್ತು ದೈವಿಕ ಪ್ರೀತಿಯನ್ನು ಇದು ಸೂಚಿಸುತ್ತದೆ.ಈ ದಿನವು ದುಷ್ಟರ ಮೇಲೆ ಒಳ್ಳೆಯದರ ವಿಜಯವನ್ನು ಸೂಚಿಸುತ್ತದೆ ಎಂದು ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ರೇಣುಕಾ ಅಕ್ಕನವರು ಹೇಳಿದರು. ಪಟ್ಟಣದ ಹುಡ್ಕೋ ಗವಿಸಿದ್ಧೇಶ್ವರ ವೇದಿಕೆಯ ಆವರಣದಲ್ಲಿ ಸಮಾನ ಮನಸ್ಕ ಯುವ ಬಳಗದ ಆಶ್ರಯದಲ್ಲಿ ಬುಧವಾರ ಚಿಣ್ಣರ ಬಣ್ಣದ ಓಕುಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.