ವಕ್ಕಲೇರಿಯಲ್ಲಿ ಕಾರ್ಗಿಲ್ ವಿಜಯೋತ್ಸವ ಆಚರಣೆ

ವಕ್ಕಲೇರಿಯಲ್ಲಿ ಕಾರ್ಗಿಲ್ ವಿಜಯೋತ್ಸವ ಆಚರಣೆ

ಕೋಲಾರ: ತಾಲೂಕಿನ ವಕ್ಕಲೇರಿ ಗ್ರಾಮದಲ್ಲಿ ಶುಕ್ರವಾರ ಕಾರ್ಗಿಲ್ ಯುದ್ಧದ 25 ವರ್ಷಗಳ ನೆನಪಿನಲ್ಲಿ ಭಗತ್ ಸಿಂಗ್ ಸೇವಾ ಸಮಿತಿ ಹಾಗೂ ಶಾಲಾ ಮಕ್ಕಳಿಂದ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ವಕ್ಕಲೇರಿ ಗ್ರಾಪಂ ಅಧ್ಯಕ್ಷೆ ರಾಧಾ ಮಂಜುನಾಥ್ ಉದ್ಘಾಟಿಸಿ ಮಾತನಾಡಿ, ಭಾರತೀಯರಿಗೆ ಇದು ಎಂದು ಮರೆಯದ ದಿನವಾಗಿದೆ ದೇಶದ ಅವಿಸ್ಮರಣೀಯ ದಿನಗಳಲ್ಲಿ ಜುಲೈ 26 ಒಂದಾಗಿದೆ ಕಾರ್ಗಿಲ್‌ ಯುದ್ಧ ಭಾರತದ ಪ್ರತಿಯೊಬ್ಬ ಪ್ರಜೆಯ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದೆ. ಜಮ್ಮು ಕಾಶ್ಮೀರದ ಕಾರ್ಗಿಲ್‌ನಲ್ಲಿ ನಡೆದ ಈ ಯುದ್ಧದಲ್ಲಿ ಪಾಕಿಸ್ತಾನವನ್ನು ನಮ್ಮ ಭಾರತದ ವೀರ ಯೋಧರು ಸದೆ ಬಡೆದು ಅವರು ಆಕ್ರಮಿಸಿಕೊಂಡಿದ್ದ ಜಾಗವನ್ನು ವಶಕ್ಕೆ ಪಡೆದ ದಿನವಾಗಿದೆ ಎಂದು ಸ್ಮರಿಸಿದರು.

ಈ ಸಂದರ್ಭದಲ್ಲಿ ಗ್ರಾಪಂ ಮಾಜಿ ಅಧ್ಯಕ್ಷ ವಕ್ಕಲೇರಿ ರಾಜಪ್ಪ ಮಾತನಾಡಿ ದೇಶ ಸೇವೆ ಮಾಡುವ ಅವಕಾಶ ಎಲ್ಲರಿಗೂ ಸಿಗುವುದಿಲ್ಲ ನಮ್ಮ ದೇಶದ ಸೈನಿಕರು ನಮ್ಮ ಹೆಮ್ಮೆಯಾಗಿದ್ದಾರೆ. ಅವರು ಇಲ್ಲದೇ ಹೋದರೆ ನಮ್ಮ ರಕ್ಷಣೆ ಅಸಾಧ್ಯವಾಗುತ್ತದೆ ದೇಶ ಭಕ್ತಿ ಎಂಬುದು ನಮ್ಮಲ್ಲಿ ತಾನಾಗಿಯೇ ಬರಬೇಕು ನಿಮ್ಮಲ್ಲಿ ಇರುವವರು ಕೂಡ ನಾನು ದೇಶದ ಸೈನಿಕನಾಗಿ ಕಾರ್ಯನಿರ್ವಹಿಸುತ್ತೇನೆ ಎಂಬ ಛಲ ನಿಮ್ಮಲ್ಲಿ ಬರಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಸೈನಿಕರಾದ ಶೆಟ್ಟಿಗಾನಹಳ್ಳಿ ಮುನಿಯಪ್ಪ, ದೊಡ್ಡ ಅಯ್ಯೂರು ಕೃಷ್ಣೇಗೌಡ ಅವರನ್ನು ಸನ್ಮಾನಿಸಲಾಯಿತು, ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು, ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯ ಮುಖಂಡರಾದ ನಾರಾಯಣಪ್ಪ, ಗೌಡರ ವೆಂಕಟಪ್ಪ, ಗೋವಿಂದಪ್ಪ, ಕನ್ವೀನರ್ ರಾಜಣ್ಣ, ಪೂಜಾರಿ ರಘು, ಭಗತ್ ಸಿಂಗ್ ಸೇವಾ ಸಮಿತಿ ಅಧ್ಯಕ್ಷ ಮೋಹನ್ ಉಪಾಧ್ಯಕ್ಷ ಮಾರ್ಕೊಂಡಯ್ಯ, ಸಮಿತಿ ಸದಸ್ಯರಾದ ರವಿಕುಮಾರ್, ನವೀನ್, ನೃತ್ಯ ನಿರ್ದೇಶಕ ಶ್ರವಣ್ ಸೇರಿದಂತೆ ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು, ಶಿಕ್ಷಕರು, ವಿಧ್ಯಾರ್ಥಿಗಳು ಮತ್ತು ಗ್ರಾಮಸ್ಥರು ಇದ್ದರು ಕಾರ್ಯಕ್ರಮವನ್ನು ದೊಮ್ಮಸಂದ್ರ ನರಸಿಂಹ ನಿರೂಪಣೆ ಮಾಡಿದರು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು