ಹಂಡೇಸಿರಿ ಸಹಕಾರ ಸಂಘ ಉದ್ಘಾಟನೆ: ಸಹಕಾರ ಸಂಘಗಳ ಬೆಳವಣಿಗೆಗೆ ವಿಶ್ವಾಸವೇ ಜೀವಾಳ-ಪಿ.ಬಿ.ಕಾಳಗಿ

ಹಂಡೇಸಿರಿ ಸಹಕಾರ ಸಂಘ ಉದ್ಘಾಟನೆ: ಸಹಕಾರ ಸಂಘಗಳ ಬೆಳವಣಿಗೆಗೆ ವಿಶ್ವಾಸವೇ ಜೀವಾಳ-ಪಿ.ಬಿ.ಕಾಳಗಿ

ಮುದ್ದೇಬಿಹಾಳ : ರಾಷ್ಟಿçÃಕೃತ ಬ್ಯಾಂಕುಗಳಲ್ಲಿ ಸಾಲ ಕೊಡಲು ನೂರೆಂಟು ಷರತ್ತುಗಳನ್ನು ವಿಧಿಸುವುದಲ್ಲೇ ತ್ವರಿತವಾಗಿ ಸಾಲದ ಸೌಲಭ್ಯ ದೊರೆಯುವುದಿಲ್ಲ.ಆದರೆ ಸಹಕಾರ ಸಂಘಗಳ ಬೆಳವಣಿಗೆಯಲ್ಲಿ ಗ್ರಾಹಕನ ವಿಶ್ವಾಸವೇ ಪ್ರಧಾನವಾಗಿದ್ದು ಸಾಲ ವಿತರಣೆ ತ್ವರಿತವಾಗಿಯೂ ಆಗುತ್ತದೆ ಎಂದು ಸಹಕಾರ ಇಲಾಖೆಯ ನಿವೃತ್ತ ಉಪ ನಿಬಂಧಕ ಪಿ.ಬಿ.ಕಾಳಗಿ ಹೇಳಿದರು.

ಪಟ್ಟಣದ ಹುಡ್ಕೋದಲ್ಲಿರುವ ಮದರಿ ಕಾಂಪ್ಲೆಕ್ಸ್ನಲ್ಲಿ ಭಾನುವಾರ ಹಂಡೇಸಿರಿ ಸಹಕಾರ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಪತ್ತಿನ ಲಭ್ಯತೆ ಎಲ್ಲಿಯವರೆಗೂ ಇರುತ್ತದೆಯೋ ಅಲ್ಲಿಯವರೆಗೆ ಪತ್ತಿನ ಸಹಕಾರ ಸಂಘಗಳ ಜೀವಂತಿಕೆ ಇರುತ್ತದೆ.ಜಾತ್ಯಾತೀತವಾಗಿ ಸದಸ್ಯರನ್ನು ಸೇರ್ಪಡೆಗೊಳಿಸಿದರೆ ಸಂಘ ಬೆಳವಣಿಗೆ ಸಾಧಿಸುತ್ತದೆ ಎಂದರು.

ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಎಂ.ಎನ್.ಮದರಿ, ಹಂಡೇಸಿರಿ ಸಹಕಾರ ಸಂಘದಿAದ ಜನರಿಗೆ ಸಾಲ ಸೌಲಭ್ಯಗಳು ದೊರೆತು ಬಡವರ ಅಭಿವೃದ್ಧಿಗೆ ಆದ್ಯತೆ ಸಿಗಲಿ ಎಂದರು.

ಹAಡೇಸಿರಿ ಸಹಕಾರ ಸಂಘದ ಅಧ್ಯಕ್ಷ ಎಸ್.ಬಿ.ಹಂಡರಗಲ್ಲ ಮಾತನಾಡಿ, ಸಮಾನ ಮನಸ್ಕ ನೌಕರರು ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಸೇರಿಸಿದ್ದ ಹಣವೇ ಇಂದು ಸಂಘ ಸ್ಥಾಪನೆಗೆ ಪ್ರೇರಣೆಯಾಗಿದೆ.ಗ್ರಾಹಕರ ವಿಶ್ವಾಸಗಳಿಸಿಕೊಂಡು ಸಂಘವನ್ನು ಮುನ್ನಡೆಸಲಾಗುವುದು ಎಂದರು. ಸೇರಿಕೊಂಡು ಆರಂಭಿಸಿದ ಕರಿಭಂಟನಾಳದ ಶಿವಕುಮಾರ ಸ್ವಾಮೀಜಿ, ಕೊಡೇಕಲ್‌ದ ವೃಷಭೇಂದ್ರ ಸ್ವಾಮೀಜಿ,ಆರ್.ಎಸ್.ಬಿರಾದಾರ ಮಾತನಾಡಿದರು. ಕಾರ್ಯಕ್ರಮದಲ್ಲಿ ಹಿರಿಯ ವಕೀಲರಾದ ಆರ್.ಬಿ.ಪಾಟೀಲ,ಹಂಡೇಸಿರಿ ಸಹಕಾರ ಸಂಘದ ಉಪಾಧ್ಯಕ್ಷ ಪಿ.ಆರ್.ಕೂಡಗಿ, ಸಂಗಮೇಶ್ವರ ಪತ್ತಿನ ಸಹಕಾರ ಸಂಘದ ಅಧ್ಯಕ್ಷೆ ಸಾವಿತ್ರಿ ತೊಂಡಿಹಾಳ,ಹAಡೇವಜೀರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಉಪಾಧ್ಯಕ್ಷ ಶಂಕರಗೌಡ ರಾಯಗೊಂಡ, ಮುಖಂಡರಾದ ಮಹ್ಮದರಫೀಕ ನಾಡಗೇರ,ಎಚ್.ಟಿ.ಬಿರಾದಾರ,ಮುದಕಪ್ಪಗೌಡ ತಂಗಡಗಿ,ಬಿ.ಆರ್.ರೂಡಗಿ , ನಿರ್ದೇಶಕರಾದ ಎಂ.ಬಿ.ಪಾಟೀಲ, ಎಂ.ಬಿ.ಬಿರಾದಾರ, ಬಿ.ಜಿ.ಬಿರಾದಾರ,ಎಸ್.ಟಿ.ಪಾಟೀಲ,ಆರ್.ಎಸ್.ಬಿರಾದಾರ,ಬಿ.ಎಚ್.ಭಗವತಿ,ಆರ್.ಬಿ.ಪಾಟೀಲ,ಬಿ.ಜಿ.ಬಿರಾದಾರ,ದ್ರಾಕ್ಷಾಯಣಿ ಗೌಡರ ಇದ್ದರು.ಸಂಗಮೇಶ ಶಿವಣಗಿ ಸಂಗಡಿಗರು ಪ್ರಾರ್ಥಿಸಿದರು.ಆರ್.ಎಸ್.ಬಿರಾದಾರ ಸ್ವಾಗತಿಸಿದರು.ಸಿದ್ದನಗೌಡ ಕಾಶಿನಕುಂಟಿ ನಿರೂಪಿಸಿದರು.ರವಿ ಗೌಡರ ವಂದಿಸಿದರು.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ