ಮುದ್ದೇಬಿಹಾಳ : ಡಿ.30 ರಿಂದ ಜ.5ರವರೆಗೆ ಬನಶಂಕರಿ ದೇವಿ ಜಾತ್ರೋತ್ಸವ

ಮುದ್ದೇಬಿಹಾಳ : ಡಿ.30 ರಿಂದ ಜ.5ರವರೆಗೆ ಬನಶಂಕರಿ ದೇವಿ ಜಾತ್ರೋತ್ಸವ

ಮುದ್ದೇಬಿಹಾಳ : ಪಟ್ಟಣದ ಬನಶಂಕರಿ ದೇವಿ ಜಾತ್ರೆ ಡಿ.30 ರಿಂದ ಜ.5ರವರೆಗೆ ನಡೆಯಲಿದೆ.ಡಿ.30ರಂದು ಬೆಳಗ್ಗೆ 8ಕ್ಕೆ ಗೋಮಾತಾ ಪೂಜೆ,ಸಂಜೆ 5.30ಕ್ಕೆ ಹುಚ್ಚಯ್ಯನ ಕಳಸವು ಲೇಶಪ್ಪ ಪ್ಯಾಟಿಗೌಡರ ಮನೆಯಿಂದ ಬನಶಂಕರಿ ದೇವಸ್ಥಾನಕ್ಕೆ ಕರೆತರಲಾಗುವುದು.

ರಾತ್ರಿ 7ಕ್ಕೆ ದೇವಿಯ ಹುಚ್ಚಯ್ಯನ ಉತ್ಸವ,7.30ಕ್ಕೆ ಸಾಧಕರಿಗೆ ದಾನಿಗಳಿಗೆ ಸನ್ಮಾನ ಹಾಗೂ ವೀಣಾವಾಣಿ ಸಂಗೀತ ವಿದ್ಯಾಲಯದ ಚೈತ್ರಾ ಡಂಬಳ ಅವರಿಂದ ಸಂಗೀತ ಕಾರ್ಯಕ್ರಮ ಜರುಗಲಿದೆ.

ಡಿ.31 ರಂದು ಬಳೆ ಉತ್ಸವ,ಮುಂಜಾನೆ 7ಕ್ಕೆ ಬಳೆಗಳ ಅಲಂಕಾರ,ಮದ್ಯಾಹ್ನ 12.30ಕ್ಕೆ ಎತ್ತು ಕುದುರೆ ಓಟದ ಸ್ಪರ್ಧೆ,ಮದ್ಯಾಹ್ನ 3ಕ್ಕೆ ಜೋಡು ಎತ್ತಿನ ಕೂಡುಗಾಡಿ ಓಟದ ಸ್ಪರ್ಧೆ,ಅಂದು ರಾತ್ರಿ ದಾನಿಗಳ ಸನ್ಮಾನ,ಸ್ಥಳೀಯ ಕಲಾವಿದರಿಂದ ಕಲಾ ಪ್ರದರ್ಶನ,ರಾತ್ರಿ 8ಕ್ಕೆ ಪ್ರಸಾದ ನಡೆಯಲಿದೆ.ಜ.1 ರಂದು ದೇವಿಗೆ ಅಲಂಕಾರ,ರಾತ್ರಿ 7ಕ್ಕೆ ದೇವಿಯ ಹುಚ್ಚಯ್ಯನ ಉತ್ಸವ,ದಾನಿಗಳಿಗೆ ಸಾಧಕರಿಗೆ ಸನ್ಮಾನ ನಡೆಯಲಿದೆ.
8ಕ್ಕೆ ಪಂಡಿತ ಪುಟ್ಟರಾಜ ಗವಾಯಿಗಳ ಕನ್ನಡ ಮತ್ತು ಸಾಂಸ್ಕೃತಿಕ ಕಲಾ ಬಳಗದಿಂದ ಸಂಗೀತ ಹಾಸ್ಯ ರಸಮಂಜರಿ ಕಾರ್ಯಕ್ರಮ ಜರುಗಲಿದೆ.

ಜ.2 ರಂದು ಬೆಳಗ್ಗೆ 4ಕ್ಕೆ ದೇವಿಗೆ ರುದ್ರಾಭಿಷೇಕ,5.30ಕ್ಕೆ ಚಂಡಿ ಹವನ ಸಂಕಲ್ಪ ಪೂಜಾ,ಚಂಡಿ ಹವನ ಪ್ರಾರಂಭ, 10ಕ್ಕೆ ಚಂಡಿ ಹವನ ಪೂರ್ಣಾಹುತಿ,ಮದ್ಯಾಹ್ನ 1ಕ್ಕೆ ಮಹಾಪ್ರಸಾದ,2.30ಕ್ಕೆ ಶ್ರೀದೇವಿಯ ಅಗ್ನಿಪುಟು ಪೂಜಾ ಮಹೋತ್ಸವ,ಸಂಜೆ 5ಕ್ಕೆ ಪುರವಂತರ ಮೆರವಣಿಗೆ ನಂತರ ಅಗ್ನಿಪ್ರವೇಶ ರಾತ್ರಿ 8.30ಕ್ಕೆ ಮಹಾಪ್ರಸಾದ ನಡೆಯಲಿದೆ.

ಆ.3 ರಂದು ದೇವಿಗೆ ಮಹಾರುದ್ರಾಭಿಷೇಕ,ಮದ್ಯಾಹ್ನ 1ಕ್ಕೆ ಅನ್ನಸಂತರ್ಪಣೆ, ಮದ್ಯಾಹ್ನ 3ಕ್ಕೆ ದೇವಿಯ ರಥದ ಕಳಸದ ಮೆರವಣಿಗೆ ನಡೆಯಲಿದೆ.ಸಂಜೆ 5ಕ್ಕೆ ಶಿರೋಳ ಗ್ರಾಮದಿಂದ ರಥೋತ್ಸವದ ಹಗ್ಗದ ಮೆರವಣಿಗೆ ಮೂಲಕ ದೇವಸ್ಥಾನಕ್ಕೆ ಬರುವುದು.ಸಂಜೆ 6ಕ್ಕೆ ದೇವಿಯ ರಥೋತ್ಸವ ಜರುಗಲಿದೆ.7ಕ್ಕೆ ಮಹಾದಾನಿಗಳಿಗೆ ಸಾಧಕರಿಗೆ ಸನ್ಮಾನ ನಡೆಯಲಿದೆ.ನಂತರ ಕಲಾ ಸಿಂಚನ ಮೆಲೋಡಿಯಸ್ ತಂಡದಿAದ ಹಾಸ್ಯ ರಸಮಂಜರಿ ಕಾರ್ಯಕ್ರಮ ಜರುಗಲಿದೆ ಎಂದು ಜಾತ್ರಾ ಕಮೀಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ