ಐದು ದಿನಗಳ ಹೋರಾಟ ಅಂತ್ಯ: ನಾಲ್ಕು ತಿಂಗಳ ಅವಧಿಯಲ್ಲಿ ಉತಾರೆ ನೀಡಲು ಕ್ರಮ

ಐದು ದಿನಗಳ ಹೋರಾಟ ಅಂತ್ಯ: ನಾಲ್ಕು ತಿಂಗಳ ಅವಧಿಯಲ್ಲಿ ಉತಾರೆ ನೀಡಲು ಕ್ರಮ

ಮುದ್ದೇಬಿಹಾಳ : ಇಂದಿರಾ ನಗರ ನಿವಾಸಿಗಳಿಗೆ ಕಂಪ್ಯೂಟರ್ ಉತಾರೆ ಪೂರೈಸಬೇಕು ಎಂದು ಆಗ್ರಹಿಸಿ ಅಲ್ಲಿನ ನಿವಾಸಿಗಳು ತಹಶೀಲ್ದಾರ್ ಕಚೇರಿ ಆವರಣದಲ್ಲಿ ಕಳೆದ ಐದು ದಿನಗಳಿಂದ ನಡೆಸುತ್ತಿದ್ದ ಧರಣಿ ಸತ್ಯಾಗ್ರಹವನ್ನು ಬುಧವಾರ ಸಂಜೆ ಪುರಸಭೆ ಮುಖ್ಯಾಧಿಕಾರಿ ನೀಡಿದ ಲಿಖಿತ ಭರವಸೆಗೆ ಅಂತ್ಯಗೊಳಿಸಿದರು.

ಐದು ದಿನಗಳಿಂದ ಎರಡ್ಮೂರು ಹಂತದ ಹೋರಾಟ ನಡೆಸುತ್ತಿದ್ದ ನಿವಾಸಿಗಳು ಕಂಪ್ಯೂಟರ್ ಉತಾರೆ ಕೊಡಬೇಕು ಎಂದು ಆಗ್ರಹಿಸಿ ಧರಣಿ ನಡೆಸುತ್ತಿದ್ದರು.ಬುಧವಾರ ಸ್ಲಂ ಬೋರ್ಡ್ ಅಧಿಕಾರಿ ಪ್ರಹ್ಲಾದ ಪಾಟೀಲ, ತಹಶೀಲ್ದಾರ್ ಕೀರ್ತಿ ಚಾಲಕ್, ಪುರಸಭೆ ಮುಖ್ಯಾಧಿಕಾರಿ ಮಲ್ಲಿಕಾರ್ಜುನ ಬಿರಾದಾರ ಮತ್ತಿತರರು ಸಂಧಾನಕ್ಕೆ ಆಗಮಿಸಿದ್ದರು. ಆಗ ಮಾತನಾಡಿದ ನಿವಾಸಿಗಳು, ಪುರಸಭೆ ಮುಖ್ಯಾಧಿಕಾರಿಗಳಿಗೆ,ಸ್ಲಂ ಬೋರ್ಡ್ ಅಧಿಕಾರಿಗಳಿಗೆ ನಿಮ್ಮ ಸಮಸ್ಯೆಗಳನ್ನು ಶೀಘ್ರ ಸರಿಪಡಿಸಿಕೊಂಡು ನಮಗೆ ತ್ವರಿತವಾಗಿ ಉತಾರೆ ನೀಡುವ ಕಾರ್ಯ ಮಾಡಬೇಕು ಎಂದು ಪ್ರಸ್ತಾಪಿಸಿದರು.

ಆಗ ಮುಖ್ಯಾಧಿಕಾರಿ ಮಲ್ಲಿಕಾರ್ಜುನ ಬಿರಾದಾರ ಮಾತನಾಡಿ, ಇಂದಿರಾನಗರದ ನಿವಾಸಿಗಳಿಗೆ ಉತಾರೆ ನೀಡುವ ಕುರಿತು ಕೊಳಚೆ ಅಭಿವೃದ್ಧಿ ಮಂಡಳಿ ಅಧಿಕಾರಿಗಳಿಂದ ಸರ್ವೆ ಮಾಡಿರುಯವ ಮಾಹಿತಿಯನ್ನು ತರಿಸಿಕೊಂಡು ಹಾಗೂ ಪುರಸಭೆ ಅಧಿಕಾರಿಗಳು ಜಂಟಿಯಾಗಿ ಅಂದಾಜು 3-4 ತಿಂಗಳ ಒಳಗಾಗಿ ಪುರಸಭೆ ಸಾಮಾನ್ಯ ಸಭೆಯಲ್ಲಿ ಮಂಡಿಸಿ ಇಂದಿರಾ ನಗರದ ನಿವಾಸಿಗಳಿಗೆ ಉತಾರೆ ನೀಡಲು ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಲಿಖಿತವಾಗಿ ನೀಡಿದ ಭರವಸೆ ಮೇರೆಗೆ ಹೋರಾಟಗಾರರು ಧರಣಿ ಅಂತ್ಯಗೊಳಿಸಿದರು.

ಧರಣಿಯಲ್ಲಿ ಬಸವರಾಜ ಕೋಳೂರ, ರಿಯಾಜ ಉಣ್ಣಿಬಾವಿ, ವಿಷ್ಣು ಗಂಗಾಪೂರ, ಬಾಬು ಬಳಗಾನೂರ, ಮುಖಂಡರಾದ ಕಾಮರಾಜ ಬಿರಾದಾರ,ವಾಯ್.ಎಚ್.ವಿಜಯಕರ್,ಹುಸೇನ್ ಮುಲ್ಲಾ, ಬುಡ್ಡಾ ನಿಡಗುಂದಿ, ಮಹೆಬೂಬ ಮುಲ್ಲಾ, ನಾಗೇಶ ಜಾಧವ, ಮಂಜು ಚಲವಾದಿ, ಸುಜಾತಾ ಸಿಂಧೆ ಮತ್ತಿರರು ಇದ್ದರು.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ