ಹಿಂದಿನ ಆಡಳಿತ ಮಂಡಳಿ ವಿರುದ್ಧ ಗಂಭೀರ ಆರೋಪ: ಮುದ್ದೇಬಿಹಾಳ ಅಂಜುಮನ್ ಸಂಸ್ಥೆಯ ಅವ್ಯವಹಾರ ತನಿಖೆಗೆ ಆಗ್ರಹ

ಹಿಂದಿನ ಆಡಳಿತ ಮಂಡಳಿ ವಿರುದ್ಧ ಗಂಭೀರ ಆರೋಪ: ಮುದ್ದೇಬಿಹಾಳ ಅಂಜುಮನ್ ಸಂಸ್ಥೆಯ ಅವ್ಯವಹಾರ ತನಿಖೆಗೆ ಆಗ್ರಹ

ಮುದ್ದೇಬಿಹಾಳ : ಪಟ್ಟಣದ ಅಂಜುಮನ್ ಇಸ್ಲಾಂ ಕಮೀಟಿಯ 2018ರ ಆಡಳಿತ ಮಂಡಳಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಅವಧಿಯಲ್ಲಿ ನಡೆದಿದೆ ಎನ್ನಲಾದ ಕಮೀಟಿಯ ಆಸ್ತಿ ಹಾಗೂ ಹಣಕಾಸಿನ ಎಲ್ಲ ವ್ಯವಹಾರಗಳನ್ನು ತನಿಖೆಗೆ ಒಳಪಡಿಸಬೇಕು ಎಂದು ಹಿರಿಯ ವಕೀಲ ಎನ್.ಆರ್.ಮೊಕಾಶಿ ಆಗ್ರಹಿಸಿದರು.

ಪಟ್ಟಣದ ಹುಡ್ಕೋ ಹೇಮರಡ್ಡಿ ಸರ್ಕಲ್ ಬಳಿ ಇರುವ ಮದರಿ ಕಾಂಪ್ಲೆಕ್ಸ್ನಲ್ಲಿರುವ ಪಂಜುರ್ಲಿ ಹೊಟೇಲ್ ಸಭಾಂಗಣದಲ್ಲಿ ಬುಧವಾರ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.ಅಂಜುಮನ್ ಕಮೀಟಿಯ ಹೆಸರಿನ ಅಂಗಡಿಗಳನ್ನು ಒಬ್ಬೊಬ್ಬ ಸದಸ್ಯರು ಎರಡ್ಮೂರು ಅಂಗಡಿಗಳನ್ನು ಪಡೆದುಕೊಂಡು ಬೇರೆಯವರಿಗೆ ಹೆಚ್ಚಿನ ಬಾಡಿಗೆಗೆ ಕೊಟ್ಟಿದ್ದಾರೆ.ಆಡಳಿತಾಧಿಕಾರಿ ನೇಮಕವಾಗಿದ್ದರೂ ಅವರು ಸಂಸ್ಥೆಯ ವ್ಯವಹಾರಗಳನ್ನು ಪಾರದರ್ಶಕವಾಗಿ ನಿಭಾಯಿಸುವುದರಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.

ಅಂಜುಮನ್ ಇಸ್ಲಾಂ ಕಮೀಟಿಯ ಅಡಿಯಲ್ಲಿ ಅನುದಾನಿತ ಪ್ರೌಢಶಾಲೆ,ಐಟಿಐ ಕಾಲೇಜುಗಳಿದ್ದರೂ ಅಲ್ಲಿ ನಿರೀಕ್ಷಿತ ಸಂಖ್ಯೆಯಲ್ಲಿ ಸಮಾಜದ ಮಕ್ಕಳು ಇಲ್ಲ.ಗುಣಮಟ್ಟದ ಶಿಕ್ಷಣ ದೊರೆಯದ ಕಾರಣ ಬೇರೆ ಕಡೆ ಖಾಸಗಿಯವರ ಬಳಿ ಹೆಚ್ಚಿನ ಹಣ ಕೊಟ್ಟು ಮಕ್ಕಳು ಓದುವ ಪರಿಸ್ಥಿತಿ ಇದೆ ಎಂದು ಹೇಳಿದರಲ್ಲದೇ ನಮ್ಮ ಆರೋಪ ಯಾವುದೇ ವ್ಯಕ್ತಿ ಪರ,ವಿರುದ್ಧವಲ್ಲ ಎಂದು ಹೇಳಿದರು.

ಅಂಜುಮನ್ ಹಿತರಕ್ಷಣಾ ವೇದಿಕೆ ಮುಖಂಡ ಮಹೆಬೂಬ ಹಡಲಗೇರಿ ಮಾತನಾಡಿ, ಅಂಜುಮನ್ ಇಸ್ಲಾಂ ಕಮೀಟಿಯ ಹೆಸರಿನಲ್ಲಿ ಬಿದರಕುಂದಿಯ ಸರ್ವೆ ನಂ.180/6/2ರಲ್ಲಿ 1.15 ಎಕರೆ ಜಮೀನು ಖಾಸಗಿ ವ್ಯಕ್ತಿಗಳಿಗೆ ಮಾರಾಟಕ್ಕೆ ಮುಂದಾಗಿದ್ದು ಅದನ್ನು ತನಿಖೆಗೆ ಒಳಪಡಿಸುವಂತೆ ಪೊಲೀಸ್ ಠಾಣೆಯಲ್ಲಿ 2023ರಲ್ಲಿ ದೂರು ದಾಖಲಾಗಿದ್ದು ತನಿಖೆ ನಡೆಯುತ್ತಿದೆ.ಮುಸ್ಲಿಂ ಸಮಾಜದ ಖಬರಸ್ಥಾನದ ಅಭಿವೃದ್ಧಿಗೆ ಸಮಾಜದವರಿಂದ ಸಂಗ್ರಹಿಸಿದ್ದ ಅಂದಾಜು 30 ಲಕ್ಷ ರೂ.ಗಳನ್ನು ಹಿಂದಿನ ಅಧ್ಯಕ್ಷರು ತಮ್ಮ ಹೆಸರಿನಲ್ಲಿ ಖಾಸಗಿ ಬ್ಯಾಂಕ್‌ನಲ್ಲಿ ಜಮಾ ಮಾಡಿಕೊಂಡಿದ್ದಾರೆ ಎಂದು ದೂರಿದರು.

ವಕೀಲ ಶಬ್ಬೀರ ಬಾಗಲಕೋಟ ಮಾತನಾಡಿ, ಅಂಜುಮನ್ ಸಂಸ್ಥೆಯ ಲೆಕ್ಕಪತ್ರಗಳನ್ನು ಸರಿಯಾಗಿ ಇಡದ ಕಾರಣ ತೆರಿಗೆ ಇಲಾಖೆಯಿಂದ 42 ಲಕ್ಷ ರೂ.ದಂಡ ಹಾಕಲಾಗಿದೆ.ಜು.,2025ರಿಂದ ಸಂಸ್ಥೆಯ ಬ್ಯಾಂಕ್ ಖಾತೆಗಳು ನಿಷ್ಕಿçÃಯವಾಗಿವೆ.2019-20ರಲ್ಲಿ ಶಾದಿ ಮಹಲ್ ನಿರ್ಮಾಣಕ್ಕೆ ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ 50 ಲಕ್ಷ ರೂ.ಮಂಜೂರಾತಿ ದೊರೆತಿದ್ದು ಅದರಲ್ಲಿ ಒಂದನೇ ಕಂತಾಗಿ 25 ಲಕ್ಷ ರೂ.ಬಿಡುಗಡೆ ಆಗಿತ್ತು.ಅದರಲ್ಲಿ 12,33,880 ರೂ.ಬಳಕೆ ಮಾಡಿಕೊಂಡಿದ್ದು ಬಾಕಿ ಉಳಿದ 12,66,120 ಗಳ ಕುರಿತು ಆಡಳಿತ ಮಂಡಳಿ ದುರ್ಬಳಕೆ ಮಾಡಿಕೊಂಡಿರುತ್ತಾರೆ ಎಂದು ದೂರಿದರು.

ಮಹೆಬೂಬ ನಗರದ ನಿವಾಸಿ ಮಹ್ಮದ ನಾಗರಾಳ ಮಾತನಾಡಿ, ಅಂಜುಮನ್ ಕಮೀಟಿಯ ಅವ್ಯವಹಾರದ ಕುರಿತು ಧ್ವನಿ ಎತ್ತುವವರ ವಿರುದ್ದ ಹಿಂದಿನ ಆಡಳಿತ ಮಂಡಳಿಯವರು ಹೊಡೆಯಲು ಬರುತ್ತಾರೆ.ಅಂತವರ ಧ್ವನಿ ಅಡಗಿಸಲು ಗುಂಪುಗಳನ್ನು ಕಟ್ಟಿಕೊಂಡಿದ್ದಾರೆ ಎಂದು ಆರೋಪಿಸಿದರು.

ವಕೀಲ ಎಂ.ಎ.ಲಿAಗಸೂರು ಮಾತನಾಡಿ,ಅಂಜುಮನ್ ಕಮೀಟಿ ಆಡಳಿತಾಧಿಕಾರಿ ತಬಸ್ಸುಮ ಮಹೇಷವಾಡಗಿ ಸಂಸ್ಥೆಯ ಮೇಲಿನ ಎಲ್ಲ ಲೆಕ್ಕಪತ್ರಗಳ ಬಗ್ಗೆ ನಿಗಾವಹಿಸಿದ ಹಿಂದಿನ ಆಡಳಿತ ಮಂಡಳಿ ಅಣತಿಯಂತೆ ನಡೆದುಕೊಳ್ಳುತ್ತಿರುವುದು ಸಾಮಾನ್ಯ ಮುಸ್ಲಿಂ ಜನಾಂಗಕ್ಕೆ ಅನ್ಯಾಯವಾಗುತ್ತಿದೆ.ಮತದಾರರ ಪಟ್ಟಿಯಲ್ಲಿ ಅಕ್ರಮವಾಗಿದ್ದು ಅದರ ಕುರಿತು ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.ಸುದ್ದಿಗೋಷ್ಠಿಯಲ್ಲಿ ಅಂಜುಮನ್ ಹಿತರಕ್ಷಣಾ ವೇದಿಕೆ ಮುಖಂಡರಾದ ಯಾಸೀನ ಸೋಠೆ, ವಕೀಲ ಎಂ.ಸಿ.ಮ್ಯಾಗೇರಿ,ಹುಸೇನಭಾಷಾ ಹುಣಚಗಿ,ಅಲ್ಲಾಭಕ್ಷö್ಯ ಶಿರೋಳ,ಅಬ್ದುಲಮಜೀದ ಶಿರೋಳ ಮೊದಲಾದವರು ಇದ್ದರು.

ಸಚಿವರಿಗೂ ದೂರು ಕೊಟ್ಟರೂ ಕ್ರಮವಿಲ್ಲ:
ಅಲ್ಪಸಂಖ್ಯಾತ,ಹಜ್ ಹಾಗೂ ವಕ್ಭ್ ಸಚಿವ ಜಮೀರ್‌ಅಹ್ಮದ ಖಾನ್ ಅವರಿಗೆ ಸಂಸ್ಥೆಯ ಅವ್ಯವಹಾರಗಳು ಕುರಿತು ಸಮಗ್ರ ಮಾಹಿತಿ ಸಲ್ಲಿಸಿದ್ದರೂ ಯಾವುದೆ ಕ್ರಮ ಜರುಗಿಸಿಲ್ಲ ಎಂದು ಮುಖಂಡ ಮಹೆಬೂಬ ಹಡಲಗೇರಿ ಆರೋಪಿಸಿದರು.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ