ಮುದ್ದೇಬಿಹಾಳ : ಸಾಯಿ ಇಂಡೆನ್ ಗ್ಯಾಸ್ ಎಜೆನ್ಸಿ ವಿರುದ್ದ ಕ್ರಮಕ್ಕೆ ಆಗ್ರಹ

ಮುದ್ದೇಬಿಹಾಳ : ಸಾಯಿ ಇಂಡೆನ್ ಗ್ಯಾಸ್ ಎಜೆನ್ಸಿ ವಿರುದ್ದ ಕ್ರಮಕ್ಕೆ ಆಗ್ರಹ

ಮುದ್ದೇಬಿಹಾಳ ತಾಲೂಕಿನ ಸಾಯಿ ಇಂಡೆನ್ ಗ್ಯಾಸ್ ಸರ್ವಿಸ್ ಎಜೆನ್ಸಿಯವರು ಗ್ಯಾಸ್ ವಿತರಣಾ ಸೇವೆಯಲ್ಲಿ ವಿಳಂಬ ಮಾಡುತ್ತಿರುವದು ಮತ್ತು ಗ್ರಾಹಕರಿಂದ ಮನೆಗೆ ಸಿಲಿಂಡರ್ ವಿತರಣೆ ಮಾಡಿದಾಗ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವದಲ್ಲದೆ ವಾಣಿಜ್ಯ ಬಳಕೆಯ ಸಿಲಿಂಡರ್‌ಗಳನ್ನು ಆಕ್ರಮ ಮಾರಾಟ ಮಾಡುತಿದ್ದು ಸದರಿ ವಿತರಕರ ಮೇಲೆ ಕ್ರಮ ಜರುಗಿಸುವಂತೆ ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಮಾರುತಿ ಹಿಪ್ಪರಗಿ ಆಗ್ರಹಿಸಿದ್ದಾರೆ.

ಈ ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಉಪನಿರ್ದೇಶಕರಿಗೆ ದೂರು ನೀಡಿರುವ ಅವರು,ಮುದ್ದೇಬಿಹಾಳ ತಾಲೂಕಿನಲ್ಲಿ ಸರ್ಕಾರದವತಿಯಿಂದ ನೇಮಕವಾಗಿರುವ ಅಧಿಕೃತ ಸಿಲಿಂಡರ್ ವಿತರಕರಾದ ಶ್ರೀ ಸಾಯಿ ಇಂಡೆನ್ ಗ್ಯಾಸ್ ಸರ್ವಿಸ್ ಎಜೆನ್ಸಿಯವರು ಸಿಲಿಂಡರ್ ವಿತರಣೆಯಲ್ಲಿ ಸರ್ಕಾರಿ ನಿಯಮಗಳನ್ನು ಉಲ್ಲಂಘಿಸಿ ಗ್ರಾಹಕರಿಗೆ ತೋಂದರೆ ಕೋಡುತ್ತಿದ್ದಾರೆ. ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಮನೆ,ಮನೆಗೆ ಗ್ಯಾಸ್ ವಿತರಿಸುವ ಸಂಧರ್ಭದಲ್ಲಿ ಗ್ರಾಹಕರಿಂದ ಹೆಚ್ಚಿನ ಹಣ ವಸೂಲಿ ಮಾಡುತ್ತಾರೆ. ಪ್ರತಿ ಸಿಲೆಂಡರ್‌ನಿAದ 20 ಹಾಗೂ ಕೆಲವು ಕಡೆ 50 ರೂಪಾಯಿ ಹೆಚ್ಚಿಗೆ ವಸೂಲಿ ಮಾಡುತ್ತಾರೆ ಎಂದು ಆರೋಪಿಸಿದ್ದಾರೆ.

ಸಿಲಿಂಡರ್ ಬುಕ್ ಮಾಡಿ ಸಮಯ ಮೀರಿದರು ಸರಿಯಾದ ಸಮಯಕ್ಕೆ ಸಿಲಿಂಡರ್ ತಲುಪಿಸುವದಿಲ್ಲ ಈ ಕುರಿತು ಗ್ಯಾಸ್ ವಿತರಕರಿಗೆ ದೂರವಾಣಿ ಕರೆ ಮಾಡಿದರೆ ಕರೆ ಸ್ವೀಕರಿಸುವದಿಲ್ಲ. ಈ ಕುರಿತು ಮೌಖಿಕವಾಗಿ ಗ್ಯಾಸ್ ವಿತರಕರಿಗೆ ತಿಳಿಸಿದರು ಯಾವುದೆ ಪ್ರಯೋಜನವಾಗಿರುವದಿಲ್ಲ. ಸಿಲಿಂಡರ್‌ಗಳನ್ನು ಹೋಟೆಲ್ ಹಾಗೂ ಇನ್ನಿತರರಿಗೆ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಾರೆ. ವಾಣಿಜ್ಯ ಬಳಕೆ ಸಿಲೆಂಡರಗಳನ್ನAತು ಯಾವುದೆ ದಾಖಲೆಗಳಿಲ್ಲದೆ ಬೆಕಾ ಬಿಟ್ಟಿ ಕಾಳಸಂತೆಯಲ್ಲಿ ಮಾರಾಟ ಮತ್ತು ವಿತರಣೆ ಮಾಡುತ್ತಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಮುದ್ದೇಬಿಹಾಳ ತಾಲೂಕಿನ ಶ್ರೀಸಾಯಿ ಇಂಡೆನ್ ಗ್ಯಾಸ್ ಸರ್ವಿಸ್ ಎಜೆನ್ಸಿಯವರು ವಿತರಣೆ, ಬಿಲ್ಲಿಂಗ್, ಸ್ಟಾಕ್ ನಿರ್ವಹಣೆ ಗ್ರಾಹಕರಿಗೆ ಸೇವೆ ನೀಡುವಲ್ಲಿ ಮತ್ತು ಗ್ಯಾಸ್ ಸುರಕ್ಷಿತವಾಗಿ ವಿತರಣೆಯಾಗುವಲ್ಲಿ ಸುರಕ್ಷತಾ ನಿಯಮಗಳನ್ನು ಸರಿಯಾಗಿ ಪಾಲಿಸುತ್ತಿಲ್ಲ ಕಾರಣ ಈ ಕೂಡಲೆ ಈ ಕುರಿತು ತನಿಖೆ ನಡೆಸಿ ಸದರಿ ಗ್ಯಾಸ್ ಎಜೆನ್ಸಿ ವಿರುದ್ದ ಶಿಸ್ತು ಕ್ರಮ ಜರುಗಿಸಬೇಕು, ಒಂದು ವಾರದವಳಗೆ ಶ್ರೀಸಾಯಿ ಇಂಡೆನ್ ಗ್ಯಾಸ್ ಎಜೆನ್ಸಿ ವಿರುದ್ದ ತನಿಖೆ ಕೈಗೋಂಡು ಕ್ರಮ ಜರುಗಿಸದೆ ಇದ್ದಲ್ಲಿ ಮುದ್ದೇಬಿಹಾಳ ತಹಶೀಲ್ದಾರ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವದು ಎಂದು ತಿಳಿಸಿದ್ದಾರೆ.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ