ಮದ್ಯವರ್ಜನಾ ಶಿಬಿರ ಸಮಾರೋಪ: ಸುಂದರ ಬದುಕು ಸಾಗಿಸಿ-ಎಂ.ಎಸ್.ಬಿರಾದಾರ

ಮದ್ಯವರ್ಜನಾ ಶಿಬಿರ ಸಮಾರೋಪ: ಸುಂದರ ಬದುಕು ಸಾಗಿಸಿ-ಎಂ.ಎಸ್.ಬಿರಾದಾರ

ಮುದ್ದೇಬಿಹಾಳ : ವ್ಯಸನಮುಕ್ತ ಸಮಾಜದ ಆಶಯ ಹೊಂದಿರುವ ಮದ್ಯವರ್ಜನ ಶಿಬಿರದಲ್ಲಿ ಪಾಲ್ಗೊಂಡಿರುವ ಶಿಬಿರಾರ್ಥಿಗಳು ಒಳ್ಳೆಯ ಬದುಕು ಸಾಗಿಸಬೇಕು ಎಂದು ಢವಳಗಿಯ ಯುವ ಉದ್ಯಮಿ ಮಹಾಂತಗೌಡ ಬಿರಾದಾರ ಹೇಳಿದರು.

ತಾಲ್ಲೂಕಿನ ಬಿದರಕುಂದಿ ಗ್ರಾಮದ ಶಾದಿ ಮಹಲ್‌ನಲ್ಲಿ 2027ನೇ ಮದ್ಯ ವರ್ಜನ ಶಿಬಿರದ ಸಮಾರೋಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜನರ ಬದಲಾವಣೆ ಆಗುತ್ತಿರುವುದನ್ನು ನೋಡಿ ತುಂಬಾ ಸಂತೋಷವಾಗಿದ್ದು ಇಂದಿನಿAದ ಆರಂಭವಾಗಿರುವ ನಿಮ್ಮ ನವಜೀವನ ಉತ್ತಮವಾಗಿರಲೆಂದು ಹಾರೈಸಿದರು.

ಕಲಬುರಗಿ ಪ್ರಾದೇಶಿಕ ನಿರ್ದೇಶಕ ದಿನೇಶ್ ಪೂಜಾರಿ ಮಾತನಾಡಿ, ವೀರೇಂದ್ರ ಹೆಗ್ಗಡೆ ಹಮ್ಮಿಕೊಂಡು ಬಂದಿರುವAತಹ ವ್ಯಸನ ಮುಕ್ತ ಸಮಾಜ ನಿರ್ಮಾಣದ ಈ ಕಾರ್ಯಕ್ರಮ ಬೆಳ್ತಂಗಡಿ ತಾಲೂಕಿನಲ್ಲಿ ಆರಂಭಗೊAಡು ಇಡೀ ರಾಜ್ಯ ವ್ಯಾಪ್ತಿ ಅನುಷ್ಠಾನಗೊಂಡು ಇಂತಹ ಶಿಬಿರ ಸೇರಿ ಸುಮಾರು ರೂ. 1,40,000 ಜನ ಮದ್ಯ ವ್ಯಸನಿಗಳು ಸಾರಾಯಿ ಮುಕ್ತ ಜೀವನ ನಡೆಸುತ್ತಿದ್ದಾರೆ ಎಂದರು.

ಹೊಸ ಜೀವನ ಪ್ರಾರಂಭ ಮಾಡಿ ನೀವು ಹಿಂದೆ ಸಮಾಜದಲ್ಲಿ ಸರಿಯಾದ ಗೌರವ ಸಿಗುತ್ತಿರಲಿಲ್ಲ. ಇವತ್ತು ನೀವು ಬದಲಾವಣೆ ಆಗಿ ಒಳ್ಳೆ ಜೀವನ ಕಟ್ಟಿಕೊಂಡರೆ ಮತ್ತೆ ನಿಮ್ಮನ್ನು ಸಮಾಜ ಒಬ್ಬ ಗಣ್ಯ ವ್ಯಕ್ತಿ ತರಾ ನೋಡತಾರೆ ಗೌರವ ಕೊಡುತ್ತಾರೆ ಎಂದರು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ರಾಜ್ಯ ಸಂಘಟನಾ ಅಧ್ಯಕ್ಷ ನಟರಾಜ ಬಾದಾಮಿ ಮಾತನಾಡಿ, ಎಂಟು ದಿನ ಶಿಬಿರಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ದೊರೆತಿದ್ದು ಅದರ ಸದುಪಯೋಗಪಡೆದುಕೊಳ್ಳುವ ಬಗ್ಗೆ ತಿಳಿಸಿ ಎಂಟು ದಿನದ ಈ ಕಾರ್ಯಕ್ರಮಕ್ಕೆ ಸಹಕಾರ ನೀಡಿದ ಎಲ್ಲ ದಾನಿಗಳನ್ನು ಗಣ್ಯರನ್ನು ಒಕ್ಕೂಟದವರನ್ನು ವ್ಯವಸ್ಥಾಪನ ಸಮಿತಿಯ ಸರ್ವ ಸದಸ್ಯರನ್ನು ಕಾರ್ಯಕ್ರಮ ನಡೆಸಲು ಅನುವು ಮಾಡಿಕೊಟ್ಟ ಶಾದಿ ಮಹಲ್ ಕಮಿಟಿಯವರನ್ನು ಸಹಕಾರ ನೀಡಿದ ಎಲ್ಲರನ್ನು ಗೌರವದಿಂದ ಸ್ಮರಿಸಿ ಅಭಿನಂದನೆ ಸಲ್ಲಿಸಿದರು.
ಅಖಿಲ ಕರ್ನಾಟಕ ಜಿಲ್ಲಾ ಜನಜಾಗ್ರತಿ ವೇದಿಕೆ ಅಧ್ಯಕ್ಷ ಸೋಮನಗೌಡ (ಅಪ್ಪುಗೌಡ)ಪಾಟೀಲ್ ,ಚನ್ನಬಸಪ್ಪಗೌಡ ಪಾಟೀಲ್, ಬಸರಕೋಡ ಬಸವೇಶ್ವರ ದೇವಸ್ಥಾನ ಸಮೀತಿ ಅಧ್ಯಕ್ಷ ಕೆ.ವಾಯ್.ಬಿರಾದಾರ,ಪತ್ರಕರ್ತರಾದ ಶಂಕರ ಈ.ಹೆಬ್ಬಾಳ,ಹಣಮಂತ ನಲವಡೆ,ಗಣ್ಯರಾದ ಶ್ರೀಶೈಲ ಮೇಟಿ, ಶಂಕ್ರಪ್ಪ ಸಜ್ಜನ, ಗುಂಡಪ್ಪ ಕೊಟಗಿ,ಮಾಂತೇಶ ದಿಂಡವಾರ,
ಜಿಲ್ಲಾ ಜನಜಾಗ್ರತಿ ವೇದಿಕೆ ಸದಸ್ಯರಾದ ಶ್ರೀಶೈಲ ದೊಡ್ಡಮನಿ,ವಿರೇಶ್ ಪಾಟೀಲ್, ಕಲ್ಬುರ್ಗಿ ಜನಜಾಗೃತಿ ಯೋಜನಾಧಿಕಾರಿ ರಾಜೇಶ, ಮುದ್ದೇಬಿಹಾಳ ತಾಲೂಕಿನ ಯೋಜನಾಧಿಕಾರಿ ಶಿವಾನಂದ ಪಿ, ಶಿಬಿರಾಧಿಕಾರಿ ದಿನೇಶ್ ಮರಾಠೆ,
ಮದ್ಯವರ್ಜನಾ ಶಿಬಿರದ ವ್ಯವಸ್ಥಾಪನ ಸಮಿತಿಯ ಸರ್ವ ಸದಸ್ಯರು, ಒಕ್ಕೂಟದ ಅಧ್ಯಕ್ಷರು ಪದಾಧಿಕಾರಿಗಳು ಸ್ವಸಹಾಯ ಸಂಘದ ಸದಸ್ಯರು ವಲಯದ ಮೇಲ್ವಿಚಾರಕ ನಾಗೇಶ್ ಎಸ್ ಕೆ ,ನಿಂಗನಗೌಡ ಪಾಟೀಲ್, ತಾಲೂಕಿನ ಮೇಲ್ವಿಚಾರಕ ಶ್ರೇಣಿ ಸಿಬ್ಬಂದಿ,ಸೇವಾ ಪ್ರತಿನಿಧಿ ಇದ್ದರು.

Latest News

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ ಸಹಕಾರದಿಂದ ಗಣತಿ ನಮೂನೆಗಳ ವಿತರಣೆ ಕಾರ್ಯದಲ್ಲಿ ಮುದ್ದೇಬಿಹಾಳ ಮತಕ್ಷೇತ್ರ ಶೇ.98.38ರಷ್ಟು ಸಾಧನೆ ಮಾಡಿ ವಿಜಯಪುರ ಜಿಲ್ಲೆಗೆ ಎರಡನೇ ಸ್ಥಾನ ಪಡೆದುಕೊಂಡಿದೆ ಎಂದು ಮತದಾರರ ನೋಂದಣಾಧಿಕಾರಿ,ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯ ಕುರಿತು ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.2,28,285 ಮತದಾರರಲ್ಲಿ 2,24,589 ಮತದಾರರಿಗೆ ಗಣತಿ ನಮೂನೆ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ