ಸಾರ್ವಜನಿಕರು,ವ್ಯಾಪಾರಿಗಳಿಗೆ ನಿತ್ಯ ಕಿರಿಕಿರಿ; ಮಂಗಗಳ ಹಾವಳಿಗೆ ಜನ ಹೈರಾಣು..!

ಸಾರ್ವಜನಿಕರು,ವ್ಯಾಪಾರಿಗಳಿಗೆ ನಿತ್ಯ ಕಿರಿಕಿರಿ; ಮಂಗಗಳ ಹಾವಳಿಗೆ ಜನ ಹೈರಾಣು..!

ನಾಲತವಾಡ : ಪಟ್ಟಣದ ಹೃದಯಭಾಗವಾಗಿರುವ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಆಲದ ಮರದಲ್ಲಿ ಬಿಡಾರ ಹೂಡಿರುವ ಮಂಗಗಳಿOದ ನಿತ್ಯವೂ ಸಾರ್ವಜನಿಕರು,ವ್ಯಾಪಾರಿಗಳು ಹೈರಾಣಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ಪ್ರತಿ ಸೋಮವಾರ ಪಟ್ಟಣದಲ್ಲಿ ಸಂತೆ ನಡೆಯುತ್ತಿದ್ದು ಆಲದ ಮರದ ಸುತ್ತಮುತ್ತಲೂ ವೃದ್ಧರು,ಮಹಿಳೆಯರು ವ್ಯಾಪಾರಕ್ಕೆಂದು ಕಾಯಿಪಲ್ಯೆ,ಮಸಾಲೆ ಪದಾರ್ಥಗಳನ್ನು ಮಾರಾಟಕ್ಕೆ ಬರುವವರ ಮೇಲೆ ಈ ಮಂಗಗಳು ದಾಳಿ ಮಾಡುತ್ತಿವೆ.

ಕಳೆದ ಹದಿನೈದು ದಿನಗಳ ಅವಧಿಯಲ್ಲಿ ಐದಾರು ಜನರ ಮೇಲೆ ದಾಳಿ ಮಾಡಿ ಕಚ್ಚಿಗಾಯಗೊಳಿಸಿದ ಘಟನೆಗಳು ನಡೆದಿವೆ.ಸ್ವೀಟ್ ಮಾರ್ಟ್ ಅಂಗಡಿಯವರOತೂ ಈ ಮಂಗಗಳನ್ನು ಓಡಿಸಲು ಬಡಿಗೆಗಳನ್ನು ಇಟ್ಟುಕೊಂಡು ವ್ಯಾಪಾರಕ್ಕೆಂದು ಬರುವ ಜನರನ್ನು ಕಾಯ್ದುಕೊಂಡು ಮಂಗಗಳನ್ನು ಓಡಿಸುವುದೇ ನಿತ್ಯದ ಕಾಯಕವಾಗಿ ಪರಿಣಮಿಸಿದೆ.
ಸೋಮವಾರದಂದು ಜೈನಾಪೂರದಿಂದ ಸಂತೆಗೆ ಬಂದಿದ್ದ ವೃದ್ಧೆಯೊಬ್ಬರ ಮೇಲೆ ಮಂಗ ದಾಳಿ ಮಾಡಿದೆ.ಚಿಕ್ಕಮಕ್ಕಳು ಕೈಯ್ಯಲ್ಲಿ ತಿನಿಸುಗಳ ಪೊಟ್ಟಣ ಹಿಡಿದು ತೆರಳುವುದನ್ನು ಕಂಡರೆ ಅವರ ಮೇಲೆ ದಾಳಿ ಮಾಡುತ್ತಿವೆ. 3-4 ಮಂಗಗಳು ಇಲ್ಲಿ ಬಿಡಾರ ಹೂಡಿದ್ದರೂ ಅವುಗಳನ್ನು ಬೇರೆಡೆ ಸಾಗಿಸುವ ಕೆಲಸ ಸಂಬAಧಪಟ್ಟ ಇಲಾಖೆಯವರು ಮಾಡುತ್ತಿಲ್ಲ ಎಂಬ ದೂರುಗಳು ಕೇಳಿ ಬಂದಿವೆ.

ಮಂಗಗಳನ್ನು ಸೆರೆ ಹಿಡಿಯಲು ಪಟ್ಟಣ ಪಂಚಾಯಿತಿಯವರು ವೆಚ್ಚ ಭರಿಸಬೇಕು.ಅರಣ್ಯ ಇಲಾಖೆಯಿಂದ ಕಾರ್ಯಾಚರಣೆಗೆ ನುರಿತ ತಜ್ಞರನ್ನು ಕರೆಯಿಸಿ ಮಂಗಗಳನ್ನು ಸೆರೆ ಹಿಡಿದು ಬಾದಾಮಿ ಕಡೆಯ ಗುಹೆಗಳಲ್ಲಿ ಬಿಡಲಾಗುತ್ತದೆ.ಕಳೆದ ವರ್ಷವೂ ನಾಲತವಾಡದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಂಗಗಳ ಹಾವಳಿ ಮೀತಿ ಮೀರಿತ್ತು.ಅದನ್ನು ಪರಿಹರಿಸಲಾಗಿದೆ.ಪಟ್ಟಣ ಪಂಚಾಯಿತಿಯವರು ಅನುದಾನ ಕೊಟ್ಟರೆ ಮಂಗಗಳನ್ನು ಸೆರೆ ಹಿಡಿದು ಬೇರೆಡೆ ಸಾಗಿಸಲಾಗುವುದು. —ಬಸನಗೌಡ ಬಿರಾದಾರ, ಪ್ರಾದೇಶಿಕ ಅರಣ್ಯ ಇಲಾಖೆ,ಮುದ್ದೇಬಿಹಾಳ ವಲಯ

ಮಂಗಗಳನ್ನು ಒಂದು ಊರಲ್ಲಿ ಹಿಡಿಯುವುದು ಮತ್ತೊಂದು ಊರಲ್ಲಿ ಬಿಡುವುದು ಮಾಡುವುದನ್ನೇ ದಂಧೆ ಮಾಡಿಕೊಂಡಿದ್ದಾರೆ.ಕೆಲವು ಅಧಿಕಾರಿಗಳು ಇಂತಹ ಮಂಗಗಳನ್ನು ಹಿಡಿಯುವ ತಜ್ಞರೊಂದಿಗೆ ಷಾಮೀಲಾಗಿ ಹೆಚ್ಚಿನ ಹಣಕ್ಕೆ ಬೇಡಿಕೆ ಇಡುವುದು ಮಾಡುತ್ತಾರೆ.ನಮ್ಮಲ್ಲಿ ಮಂಗಗಳು ಇರುವ ಬಗ್ಗೆ ಪತ್ತೆ ಹಚ್ಚಿ ಸಂಬAಧಪಟ್ಟ ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಮಾತನಾಡಿ ಆದಷ್ಟು ಬೇಗ ಈ ಮಂಗಗಳನ್ನು ಬೇರೆಡೆ ಸಾಗಿಸಲು ಕ್ರಮ ಜರುಗಿಸಲಾಗುವುದು.
–ಈರಣ್ಣ ಕೊಣ್ಣೂರ, ಮುಖ್ಯಾಧಿಕಾರಿ ಪ.ಪಂ ನಾಲತವಾಡ

Latest News

ಅಣ್ಣ-ತಂಗಿ ಲವ್ವಿಡವ್ವಿ.. ಸಾ*ವಿನಲ್ಲಿ ಅಂತ್ಯ

ಕಾಮದ ಮುಂದೆ ಈ ಕಾಲದಲ್ಲಿ ಸಂಬಂಧಕ್ಕೆ ಬೆಲೆನೆ ಇಲ್ಲವಾಗಿದೆ.. ಇಲ್ಲೊಂದು ಪ್ರೇಮದ ಕತೆಯೂ ಇದೆ

ಸಾರ್ವಜನಿಕರು,ವ್ಯಾಪಾರಿಗಳಿಗೆ ನಿತ್ಯ ಕಿರಿಕಿರಿ; ಮಂಗಗಳ ಹಾವಳಿಗೆ ಜನ ಹೈರಾಣು..!

ನಾಲತವಾಡ : ಪಟ್ಟಣದ ಹೃದಯಭಾಗವಾಗಿರುವ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಆಲದ ಮರದಲ್ಲಿ ಬಿಡಾರ ಹೂಡಿರುವ

ಸಮಾಜ ಸೇವಕ ಪ್ರಭು ಭೈರಿ ಕಾರ್ಯ ಶ್ಲಾಘನೀಯ: ಮುಖಂಡ ಭೋವಿ.

ತಾಳಿಕೋಟಿ: ಸಮಾಜ ಸೇವೆಯ ಹೆಸರಿನಲ್ಲಿ ಕೇವಲ ತಮ್ಮ ಸ್ವಾರ್ಥವನ್ನೇ ಈಡೇರಿಸಿಕೊಳ್ಳುವ ಇಂದಿನ ದಿನಮಾನದಲ್ಲಿ ತಾನು

ಪ್ರಥಮ ಬಾರಿಗೆ ಲಿಂಗಸ್ಗೂರಿನಲ್ಲಿ ಆಯೋಜನೆ:                       ಜ.11 ರಂದು ಆಕ್ಸಫರ್ಡ್ ಪಾಟೀಲ್ಸ್ ಮಾಸ್ಟರ್ ಮೈಂಡ್ ಅವಾರ್ಡ್

ಪ್ರಥಮ ಬಾರಿಗೆ ಲಿಂಗಸ್ಗೂರಿನಲ್ಲಿ ಆಯೋಜನೆ: ಜ.11 ರಂದು ಆಕ್ಸಫರ್ಡ್ ಪಾಟೀಲ್ಸ್ ಮಾಸ್ಟರ್ ಮೈಂಡ್ ಅವಾರ್ಡ್

ಮುದ್ದೇಬಿಹಾಳ : ಇದೇ ಪ್ರಥಮ ಬಾರಿಗೆ ಲಿಂಗಸುಗೂರಿನಲ್ಲಿ ಜ.11 ರಂದು ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್

ಹೆಬ್ಬಾಳ ಪಬ್ಲಿಸಿಟಿ-ಜನರಕೂಗು ನ್ಯೂಸ್ ಕ್ಯಾಲೆಂಡರ್ ಬಿಡುಗಡೆ:                                                                               ಸತ್ಯ ಸಂಗತಿಗಳಿಗೆ ಮಾಧ್ಯಮ ಧ್ವನಿಯಾಲಿ-ಸಿದ್ಧಲಿಂಗ ದೇವರು

ಹೆಬ್ಬಾಳ ಪಬ್ಲಿಸಿಟಿ-ಜನರಕೂಗು ನ್ಯೂಸ್ ಕ್ಯಾಲೆಂಡರ್ ಬಿಡುಗಡೆ: ಸತ್ಯ ಸಂಗತಿಗಳಿಗೆ ಮಾಧ್ಯಮ ಧ್ವನಿಯಾಲಿ-ಸಿದ್ಧಲಿಂಗ ದೇವರು

ತಾಳಿಕೋಟಿ : ಮಾಧ್ಯಮಗಳು ಸಮಾಜದಲ್ಲಿ ನಡೆದಿರುವ ಸತ್ಯ ಸಂಗತಿಗಳ ಬಗ್ಗೆ ಬೆಳಕು ಚೆಲ್ಲಬೇಕು ಎಂದು ಇಲ್ಲಿನ ಖಾಸ್ಗತೇಶ್ವರ ಮಠದ ಪೀಠಾಧಿಪತಿ ಸಿದ್ಧಲಿಂಗ ದೇವರು ನುಡಿದರು. ಪಟ್ಟಣದ ತಾಳಿಕೋಟೆ ಖಾಸ್ಗತೇಶ್ವರ ಮಠದಲ್ಲಿ ಭಾನುವಾರ ಸಂಜೆ ಹೆಬ್ಬಾಳ ಪಬ್ಲಿಸಿಟಿ ಹಾಗೂ ಜನರಕೂಗು ಸುದ್ದಿ ವಾಹಿನಿ ಬಳಗದ 2026 ನೇ ವರ್ಷದ ದಿನದರ್ಶಿಕೆ ಬಿಡುಗಡೆ ಮಾಡಿ ಮಾತನಾಡಿದರು. ಮಠಗಳು ನಡೆಸುವ ಶೈಕ್ಷಣಿಕ,ಧಾರ್ಮಿಕ ಚಟುವಟಿಕೆಗಳ ಮೇಲೆ ಬೆಳಕು ಚೆಲ್ಲುವ ಕೆಲಸ ಮಾಧ್ಯಮ ಮಾಡಬೇಕಿದೆ.ಮಾಧ್ಯಮ ಕ್ಷೇತ್ರದಲ್ಲಿರುವವರಲ್ಲಿ ಅಸೂಯೆ

ಹರಿಹರ ತಾಲ್ಲೂಕು ಕಾರ್ಮಿಕ ಸಂಘಗಳ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟಸಭೆ : ಅಶ್ವತ ಟಿ ಮರೀಗೌಡ್ರು.

ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟ, ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕು ಕಾರ್ಮಿಕ ಸಂಘಗಳ ನೇತೃತ್ವದಲ್ಲಿ ಈ ಸಭೆಯನ್ನು ಹರಿಹರ ತಾಲ್ಲೂಕಿನ ಹೊಸಪೇಟೆ ಬೀದಿ ಶ್ರೀ ಮುರುಘಾರಾಜೇಂದ್ರ ಕಲ್ಯಾಣ ಮಂಟಪ ಎದುರು ಶ್ರೀ ಹರಿಹರೇಶ್ವರ ಕಟ್ಟಡ ಕಾರ್ಮಿಕರ ಸಂಘ ಕಛೇರಿ ಸಮುದಾಯ ಭವನದಲ್ಲಿ ಆಯೋಜಿಸಲಾಗಿತ್ತು. ಅಶ್ವತ ಟಿ ಮರೀಗೌಡ್ರು, ಶಿವಕುಮಾರ್ ಗೌಡ, ರಮೇಶ್, ಲೋಕೇಶ್ ನಾಯಕ, ಹಾಲೇಶ್, ಭೀಮಣ್ಣ, ಶಶಿನಾಯ್ಕ್ , ಶಿವಣ್ಣ, ಪರಶುರಾಮ, ನಾಗರಾಜು,