ಸಾರ್ವಜನಿಕರು,ವ್ಯಾಪಾರಿಗಳಿಗೆ ನಿತ್ಯ ಕಿರಿಕಿರಿ; ಮಂಗಗಳ ಹಾವಳಿಗೆ ಜನ ಹೈರಾಣು..!

ಸಾರ್ವಜನಿಕರು,ವ್ಯಾಪಾರಿಗಳಿಗೆ ನಿತ್ಯ ಕಿರಿಕಿರಿ; ಮಂಗಗಳ ಹಾವಳಿಗೆ ಜನ ಹೈರಾಣು..!

ನಾಲತವಾಡ : ಪಟ್ಟಣದ ಹೃದಯಭಾಗವಾಗಿರುವ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಆಲದ ಮರದಲ್ಲಿ ಬಿಡಾರ ಹೂಡಿರುವ ಮಂಗಗಳಿOದ ನಿತ್ಯವೂ ಸಾರ್ವಜನಿಕರು,ವ್ಯಾಪಾರಿಗಳು ಹೈರಾಣಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ಪ್ರತಿ ಸೋಮವಾರ ಪಟ್ಟಣದಲ್ಲಿ ಸಂತೆ ನಡೆಯುತ್ತಿದ್ದು ಆಲದ ಮರದ ಸುತ್ತಮುತ್ತಲೂ ವೃದ್ಧರು,ಮಹಿಳೆಯರು ವ್ಯಾಪಾರಕ್ಕೆಂದು ಕಾಯಿಪಲ್ಯೆ,ಮಸಾಲೆ ಪದಾರ್ಥಗಳನ್ನು ಮಾರಾಟಕ್ಕೆ ಬರುವವರ ಮೇಲೆ ಈ ಮಂಗಗಳು ದಾಳಿ ಮಾಡುತ್ತಿವೆ.

ಕಳೆದ ಹದಿನೈದು ದಿನಗಳ ಅವಧಿಯಲ್ಲಿ ಐದಾರು ಜನರ ಮೇಲೆ ದಾಳಿ ಮಾಡಿ ಕಚ್ಚಿಗಾಯಗೊಳಿಸಿದ ಘಟನೆಗಳು ನಡೆದಿವೆ.ಸ್ವೀಟ್ ಮಾರ್ಟ್ ಅಂಗಡಿಯವರOತೂ ಈ ಮಂಗಗಳನ್ನು ಓಡಿಸಲು ಬಡಿಗೆಗಳನ್ನು ಇಟ್ಟುಕೊಂಡು ವ್ಯಾಪಾರಕ್ಕೆಂದು ಬರುವ ಜನರನ್ನು ಕಾಯ್ದುಕೊಂಡು ಮಂಗಗಳನ್ನು ಓಡಿಸುವುದೇ ನಿತ್ಯದ ಕಾಯಕವಾಗಿ ಪರಿಣಮಿಸಿದೆ.
ಸೋಮವಾರದಂದು ಜೈನಾಪೂರದಿಂದ ಸಂತೆಗೆ ಬಂದಿದ್ದ ವೃದ್ಧೆಯೊಬ್ಬರ ಮೇಲೆ ಮಂಗ ದಾಳಿ ಮಾಡಿದೆ.ಚಿಕ್ಕಮಕ್ಕಳು ಕೈಯ್ಯಲ್ಲಿ ತಿನಿಸುಗಳ ಪೊಟ್ಟಣ ಹಿಡಿದು ತೆರಳುವುದನ್ನು ಕಂಡರೆ ಅವರ ಮೇಲೆ ದಾಳಿ ಮಾಡುತ್ತಿವೆ. 3-4 ಮಂಗಗಳು ಇಲ್ಲಿ ಬಿಡಾರ ಹೂಡಿದ್ದರೂ ಅವುಗಳನ್ನು ಬೇರೆಡೆ ಸಾಗಿಸುವ ಕೆಲಸ ಸಂಬAಧಪಟ್ಟ ಇಲಾಖೆಯವರು ಮಾಡುತ್ತಿಲ್ಲ ಎಂಬ ದೂರುಗಳು ಕೇಳಿ ಬಂದಿವೆ.

ಮಂಗಗಳನ್ನು ಸೆರೆ ಹಿಡಿಯಲು ಪಟ್ಟಣ ಪಂಚಾಯಿತಿಯವರು ವೆಚ್ಚ ಭರಿಸಬೇಕು.ಅರಣ್ಯ ಇಲಾಖೆಯಿಂದ ಕಾರ್ಯಾಚರಣೆಗೆ ನುರಿತ ತಜ್ಞರನ್ನು ಕರೆಯಿಸಿ ಮಂಗಗಳನ್ನು ಸೆರೆ ಹಿಡಿದು ಬಾದಾಮಿ ಕಡೆಯ ಗುಹೆಗಳಲ್ಲಿ ಬಿಡಲಾಗುತ್ತದೆ.ಕಳೆದ ವರ್ಷವೂ ನಾಲತವಾಡದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಂಗಗಳ ಹಾವಳಿ ಮೀತಿ ಮೀರಿತ್ತು.ಅದನ್ನು ಪರಿಹರಿಸಲಾಗಿದೆ.ಪಟ್ಟಣ ಪಂಚಾಯಿತಿಯವರು ಅನುದಾನ ಕೊಟ್ಟರೆ ಮಂಗಗಳನ್ನು ಸೆರೆ ಹಿಡಿದು ಬೇರೆಡೆ ಸಾಗಿಸಲಾಗುವುದು. —ಬಸನಗೌಡ ಬಿರಾದಾರ, ಪ್ರಾದೇಶಿಕ ಅರಣ್ಯ ಇಲಾಖೆ,ಮುದ್ದೇಬಿಹಾಳ ವಲಯ

ಮಂಗಗಳನ್ನು ಒಂದು ಊರಲ್ಲಿ ಹಿಡಿಯುವುದು ಮತ್ತೊಂದು ಊರಲ್ಲಿ ಬಿಡುವುದು ಮಾಡುವುದನ್ನೇ ದಂಧೆ ಮಾಡಿಕೊಂಡಿದ್ದಾರೆ.ಕೆಲವು ಅಧಿಕಾರಿಗಳು ಇಂತಹ ಮಂಗಗಳನ್ನು ಹಿಡಿಯುವ ತಜ್ಞರೊಂದಿಗೆ ಷಾಮೀಲಾಗಿ ಹೆಚ್ಚಿನ ಹಣಕ್ಕೆ ಬೇಡಿಕೆ ಇಡುವುದು ಮಾಡುತ್ತಾರೆ.ನಮ್ಮಲ್ಲಿ ಮಂಗಗಳು ಇರುವ ಬಗ್ಗೆ ಪತ್ತೆ ಹಚ್ಚಿ ಸಂಬAಧಪಟ್ಟ ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಮಾತನಾಡಿ ಆದಷ್ಟು ಬೇಗ ಈ ಮಂಗಗಳನ್ನು ಬೇರೆಡೆ ಸಾಗಿಸಲು ಕ್ರಮ ಜರುಗಿಸಲಾಗುವುದು.
–ಈರಣ್ಣ ಕೊಣ್ಣೂರ, ಮುಖ್ಯಾಧಿಕಾರಿ ಪ.ಪಂ ನಾಲತವಾಡ

Latest News

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಅವೈಜ್ಞಾನಿಕ ಆದಾಯ ಮಿತಿ ರದ್ದುಗೊಳಿಸಲು ವಿಕಲಚೇತನರ ಆಗ್ರಹ

ಅವೈಜ್ಞಾನಿಕ ಆದಾಯ ಮಿತಿ ರದ್ದುಗೊಳಿಸಲು ವಿಕಲಚೇತನರ ಆಗ್ರಹ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಸರಕಾರ ಸಾಮಾಜಿಕ ಭದ್ರತೆ ಯೋಜನೆಗಳ ಅಡಿ ನೀಡಲಾಗುವ ಮಾಶಾಸನಕ್ಕೆ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ ವಿದ್ಯಾಕಣ್ವವಿರಾಜ್ ತೀರ್ಥ ಶ್ರೀಗಳು ತಮ್ಮ ಏಳನೇ ಚಾತುರ್ಮಾಸ್ಯವನ್ನು ಶನಿವಾರದಿಂದ ಕೈಗೊಂಡಿದ್ದು ಸಂಕಲ್ಪಪೂರ್ವ ಚಾತುರ್ಮಾಸ್ಯ ದೀಕ್ಷೆ ತನ್ನಿಮಿತ್ಯ ಶ್ರೀಗಳನ್ನು ಚಾತುರ್ಮಾಸ್ಯ ಮಹೋತ್ಸವ ಸಮೀತಿ ಹಾಗೂ ಸಮಸ್ತ ವಿಪ್ರ ಸಮಾಜದ ಬಾಂಧವರು ಭವ್ಯ ಮೆರವಣಿಗೆ ಮೂಲಕ ಶಿವ ಚಿದಂಬರ ದೇವಸ್ಥಾನಕ್ಕೆ ಕರೆದೊಯ್ಯರು. ಪಟ್ಟಣದ ರಾಘವೇಂದ್ರ ಮಠದಿಂದ ಪೂಜ್ಯರನ್ನು ಅಲಂಕೃತ ಸಾರೋಟಿನಲ್ಲಿ ಕೂರಿಸಿ ಸಕಲ ವಾದ್ಯವೈಭವಗಳೊಂದಿಗೆ ಮೆರವಣಿಗೆ ನಡೆಸಲಾಯಿತು.ಮೆರವಣಿಗೆಯಲ್ಲಿ