ಜನಪರ ಸೇವೆಯಲ್ಲಿ ಅಸ್ಕಿ ಫೌಂಡೇಶನ್ ಸದಾ ಮುಂದೆ-ಸಿದ್ಧಲಿಂಗ ದೇವರು

ಜನಪರ ಸೇವೆಯಲ್ಲಿ ಅಸ್ಕಿ ಫೌಂಡೇಶನ್ ಸದಾ ಮುಂದೆ-ಸಿದ್ಧಲಿಂಗ ದೇವರು

ತಾಳಿಕೋಟಿ :  ಕೊಡುಗೈ ದಾನಿಗಳಲ್ಲಿ ಈ ಭಾಗದಲ್ಲಿ ಒಳ್ಳೆಯ ಹೆಸರು ಸಂಪಾದಿಸಿರುವ ಸಿ.ಬಿ.ಅಸ್ಕಿ ಅವರ ನೇತೃತ್ವದಲ್ಲಿ ಅಸ್ಕಿ ಫೌಂಡೇಶನ್ ಅತ್ಯುತ್ತಮ ಕೆಲಸ ಮಾಡುತ್ತಿದೆ ಎಂದು ತಾಳಿಕೋಟಿ ಖಾಸ್ಗತೇಶ್ವರ ಮಠದ ಪೀಠಾಧಿಕಾರಿ ಸಿದ್ಧಲಿಂಗ ದೇವರು ನುಡಿದರು.

       ತಾಳಿಕೋಟಿ ಪಟ್ಟಣದ ಖಾಸ್ಗತೇಶ್ವರ ಮಠದಲ್ಲಿ ಗುರುವಾರ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ನೂತನ ವರ್ಷದ ದಿನದರ್ಶಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

        ಮಠದ ಆಡಳಿತಾಧಿಕಾರಿ ವೇ.ಮರುಗೇಶ ವಿರಕ್ತಮಠ ಮಾತನಾಡಿ, ಹಣವುಳ್ಳವರು ಸಮಾಜದಲ್ಲಿ ಅಗಣಿತ ಸಂಖ್ಯೆಯಲ್ಲಿದ್ದಾರೆ. ಆದರೆ ಕೊಡುವ ಮನಸ್ಸು ಎಲ್ಲರಲ್ಲಿಯೂ ಬರುವುದಿಲ್ಲ.ಅಸ್ಕಿ ಅವರು ಸಮಾಜದ ಸೇವೆ ಶ್ಲಾಘನೀಯವಾಗಿದೆ.ಈ ಕಾರ್ಯದಿಂದ ಮತ್ತಷ್ಟು ಜನರಿಗೆ ಹತ್ತಿರ ಆಗುವ ಕೆಲಸ ಆಗಿದೆ.ಶ್ರೀ ಮಠದ ಆಶೀರ್ವಾದ ಅವರ ಮೇಲಿರಲಿದೆ ಎಂದರು.

        ಅಸ್ಕಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ,ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಮಾತನಾಡಿ,  ಅಸ್ಕಿ ಫೌಂಡೇಶನ್ ಜಾತ್ಯಾತೀತವಾಗಿ ಕೆಲಸ ಮಾಡಲಿದೆ.ಈ ವರ್ಷದಿಂದ ಮತಕ್ಷೇತ್ರದಲ್ಲಿ ಮನೆ ಮನೆಗಳಲ್ಲಿ ಹಾಕಲು ಎಲ್ಲ ಪ್ರಮುಖ, ಜಾತ್ರೆ,ಉತ್ಸವ,ಹಬ್ಬ,ಹರಿದಿನಗಳನ್ನು ಕ್ಯಾಲೆಂಡರ್ ಹೊಂದಿದೆ ಎಂದರು.

ಎಸ್.ಎಸ್.ವಿದ್ಯಾಸಂಸ್ಥೆಯ ಅಧ್ಯಕ್ಷ ಎಚ್.ಎಸ್.ಪಾಟೀಲ,ಹೋರಾಟಗಾರ ಜೈಭೀಮ ಮುತ್ತಗಿ, ಮಾತನಾಡಿದರು.

        ಮುಸ್ಲಿಂ ಸಮಾಜದ ಧರ್ಮಗುರು ಸಯ್ಯದ ಶಕೀಲ ಅಹ್ಮದ್ ಖಾಜಿ, ಮುಖಂಡರಾದ ಇಬ್ರಾಹಿಂ ಮನ್ಸೂರ,ವಿಜಯಸಿಂಗ ಹಜೇರಿ, ಶಿವರಾಜ ಗುಂಡಕನಾಳ,ವಿರೇಶ ಬಾಗೇವಾಡಿ, ಜಮಾದಾರ ಚಾಚಾ,ಮಹೆಬೂಬ ಕೆಂಭಾವಿ,ಪರಶುರಾಮ ತಂಗಡಗಿ,ಬಸವರಾಜ ಜೀರಲಭಾವಿ,ರಹಿಂಸಾಬ ಅವಟಿ,ಯಲ್ಲಪ್ಪ ಮಾದರ,ವೀರೇಶಗೌಡ ಅಸ್ಕಿ, ಆನಂದ ಅಸ್ಕಿ, ರಾಮನಗೌಡ ಹೊಸಮನಿ, ಆಸೀಫ ಕೆಂಭಾವಿ,ಶಮ್ಸುದ್ದೀನ ನಾಲಬಂದ, ಮಹಾಂತೇಶ ಬೊಮ್ಮನಳ್ಳಿ, ಮಲ್ಲಿಕಾರ್ಜುನ ಢವಳಗಿ ಇದ್ದರು.

Latest News

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದ ಬೆಳ್ಳಿ ಕವಚ ಕಳ್ಳತನ ಪ್ರಕರಣಕ್ಕೆ ಸಂಬoಧಿಸಿದoತೆ ಮಹತ್ವದ ಸುಳಿವು ದೊರಕಿದ್ದು ಶೀಘ್ರದಲ್ಲಿ ಪ್ರಕರಣವನ್ನು ಬೇಧಿಸಲಾಗುವುದು ಎಂದು ಬೆಳಗಾವಿ ಉತ್ತರ ವಲಯ ಐಜಿಪಿ ಸಂದೀಪ ಪಾಟೀಲ್ ಹೇಳಿದರು. ತಾಲ್ಲೂಕಿನ ಬಸರಕೋಡ ಗ್ರಾಮದ ಐತಿಹಾಸಿಕ ಶ್ರೀ ಪವಾಡ ಬಸವೇಶ್ವರ ದೇವಾಲಯಕ್ಕೆ ಮಂಗಳವಾರ ಭೇಟಿ ನೀಡಿದ್ದ ಅವರು ದೇವಸ್ಥಾನದ ಕರ್ತೃಗದ್ದುಗೆ ಮೇಲಿನ 32 ಕೆಜಿ ಬೆಳ್ಳಿಯ ಕವಚ ಕಳ್ಳತನ ಪ್ರಕರಣದ ಕುರಿತು ವಿಜಯಪುರ ಎಸ್ಪಿ

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ ಸಹಕಾರದಿಂದ ಗಣತಿ ನಮೂನೆಗಳ ವಿತರಣೆ ಕಾರ್ಯದಲ್ಲಿ ಮುದ್ದೇಬಿಹಾಳ ಮತಕ್ಷೇತ್ರ ಶೇ.98.38ರಷ್ಟು ಸಾಧನೆ ಮಾಡಿ ವಿಜಯಪುರ ಜಿಲ್ಲೆಗೆ ಎರಡನೇ ಸ್ಥಾನ ಪಡೆದುಕೊಂಡಿದೆ ಎಂದು ಮತದಾರರ ನೋಂದಣಾಧಿಕಾರಿ,ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯ ಕುರಿತು ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.2,28,285 ಮತದಾರರಲ್ಲಿ 2,24,589 ಮತದಾರರಿಗೆ ಗಣತಿ ನಮೂನೆ