ಮುದ್ದೇಬಿಹಾಳ ಸಾರಿಗೆ ಘಟಕಕ್ಕೆ ಕೆಕೆಆರ್‌ಟಿಸಿ ಎಂ.ಡಿ ಭೇಟಿ: 40 ಲಕ್ಷ ರೂ.ವೆಚ್ಚದಲ್ಲಿ ನಿಲ್ದಾಣದ ಕಾಂಕ್ರಿಟ್,ಶೌಚಗೃಹ ನಿರ್ಮಾಣ

ಮುದ್ದೇಬಿಹಾಳ ಸಾರಿಗೆ ಘಟಕಕ್ಕೆ ಕೆಕೆಆರ್‌ಟಿಸಿ ಎಂ.ಡಿ ಭೇಟಿ: 40 ಲಕ್ಷ ರೂ.ವೆಚ್ಚದಲ್ಲಿ ನಿಲ್ದಾಣದ ಕಾಂಕ್ರಿಟ್,ಶೌಚಗೃಹ ನಿರ್ಮಾಣ

ಮುದ್ದೇಬಿಹಾಳ : ಪಟ್ಟಣದ ಸಾರಿಗೆ ಘಟಕದಲ್ಲಿ ಶೌಚಾಲಯ ನಿರ್ಮಾಣ ಹಾಗೂ ನಿಲ್ದಾಣದ ಆವರಣದಲ್ಲಿ ಕಾಂಕ್ರಿಟ್ ದುರಸ್ತಿಗೆ ೪೦ ಲಕ್ಷ ರೂ.ಅನುದಾನದಲ್ಲಿ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಕೆಕೆಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕಿ ಬಿ.ಸುಶೀಲಾ ಹೇಳಿದರು.

ಪಟ್ಟಣದ ಸಾರಿಗೆ ಘಟಕಕಕ್ಕೆ ಶುಕ್ರವಾರ ಭೇಟಿ ನೀಡಿದ್ದ ಅವರು ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದರು. ನಿಗಮದಲ್ಲಿ ಲಭ್ಯ ಅನುದಾನದಲ್ಲಿ ಘಟಕದ ಮೂಲಭೂತ ಸೌರ‍್ಯಗಳನ್ನು ಒದಗಿಸಲು ಕ್ರಮ ಜರುಗಿಸಲಾಗುತ್ತದೆ ಎಂದು ಹೇಳಿದರು.

ಮುದ್ದೇಬಿಹಾಳ ಸಾರಿಗೆ ಘಟಕಕ್ಕೆ ಅಷ್ಟೇ ಅಲ್ಲದೇ ಹೊಸ ಬಸ್‌ಗಳ ಬೇಡಿಕೆ ಇರುವ ಘಟಕಗಳಿಗೆ ಹೊಸದಾಗಿ ಬಸ್ ಒದಗಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.ಅನುದಾನದ ಲಭ್ಯತೆ ನೋಡಿಕೊಂಡು ಹೊಸ ಬಸ್‌ಗಳನ್ನು ನೀಡುತ್ತಾರೆ.ಈಚೇಗೆ ವಿಜಯಪುರ ಜಿಲ್ಲೆಯ ನಗರ ಸಾರಿಗೆಗೆ ೨೭ ಬಸ್‌ಗಳನ್ನು ನೀಡಲಾಗಿದೆ.ಮುಂಬರುವ ದಿನಗಳಲ್ಲಿ ಮುದ್ದೇಬಿಹಾಳ ಬಸ್ ನಿಲ್ದಾಣಕ್ಕೂ ಹೊಸ ಬಸ್‌ಗಳನ್ನು ನೀಡಲಾಗುತ್ತದೆ ಎಂದರು.
ಸೋಲಾಪೂರ,ಪುಣೆ,ವಾಸ್ಕೋ ಮಾರ್ಗದಲ್ಲಿ ರಾತ್ರಿ ಸಂಚರಿಸುತ್ತಿದ್ದ ಸೌಲಭ್ಯವನ್ನು ಸ್ಥಗಿತಗೊಳಿಸಲಾಗಿದೆ.ನಿಲ್ದಾಣದ ಡಿಪೋ ನಿರ್ಮಾಣ,ಶುಚಿತ್ವದ ಕುರಿತು ಎಂಡಿ ಅವರು ಘಟಕದ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದುಕೊಂಡರು.
ಗ್ಯಾರAಟಿ ಸಮಿತಿ ಉಪಾಧ್ಯಕ್ಷ ಲಕ್ಷö್ಮಣ ಲಮಾಣಿ, ಸದಸ್ಯರಾದ ಸಂಗಣ್ಣ ಮೇಲಿನಮನಿ, ಬುಡ್ಡೇಸಾಬ ಚಪ್ಪರಬಂದ ಮಾತನಾಡಿ, ಘಟಕದಲ್ಲಿ ಸ್ವಚ್ಛತೆ ಕಾಪಾಡಬೇಕು.ನಗರ ಸಾರಿಗೆ ಬಸ್‌ಗಳ ಸಂಖ್ಯೆ ಹೆಚ್ಚಿಸಬೇಕು.ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸಬೇಕು ಎಂದು ಒತ್ತಾಯಿಸಿದರು.
ಕೆಕೆಆರ್‌ಟಿಸಿ ಎಇಇ ಮಲ್ಲಿಕಾರ್ಜುನ ಬಿರಾದಾರ, ಪ್ರಭಾರಿ ಮುಖ್ಯ ಅಭಿಯಂತರ ಚೆನ್ನನಬೋರಯ್ಯ ,ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಹಿರೇಕುರುಬರ,ಘಟಕ ವ್ಯವಸ್ಥಾಪಕ ಅಶೋಕ ಭೋವಿ ಮೊದಲಾದವರು ಇದ್ದರು. ಅಧಿಕಾರಿಗಳಿಗೆ ತರಾಟೆ : ಸಾರಿಗೆ ಘಟಕದ ವೀಕ್ಷಣೆಗೆ ತೆರಳುತ್ತಿದ್ದ ವೇಳೆ ಮಹಿಳೆಯರ ವಿಶ್ರಾಂತಿ ಕೊಠಡಿಗೆ ತೆರಳಿದಾಗ ಶಿಶುಗಳಿಗೆ ಹಾಲುಣಿಸುವ ಕೊಠಡಿಯಲ್ಲಿ ಒಂದು ಖುರ್ಚಿಯೂ ಇಲ್ಲದ್ದನ್ನು ಕಂಡು ಸಾರಿಗೆ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಎಂ.ಡಿ ಅವರು, ಸೂಕ್ತ ಸೌಲಭ್ಯಗಳನ್ನು ನಾಗರಿಕರಿಗೆ ಒದಗಿಸುವಂತೆ ತಿಳಿಸಿದರು.ಸ್ವಚ್ಛತಾ ಏಜೆನ್ಸಿದಾರರಿಗೆ ನೋಟಿಸ್ ಜಾರಿ: ಬಸ್ ನಿಲ್ದಾಣದಲ್ಲಿ ದಿನಗೂಲಿ ಮೇಲೆ ಕೆಲಸ ಮಾಡುವವರು ತಮಗೆ ೨೫೦ ರೂ.ದಿನಗೂಲಿ ಪಾವತಿಸಲಾಗುತ್ತಿದೆ ಎಂದು ಎಂ.ಡಿ ಅವರ ಎದುರಿಗೆ ಅಳಲು ತೋಡಿಕೊಂಡಾಗ ಕನಿಷ್ಠ ಕೂಲಿ ಕಾಯ್ದೆ ಅನ್ವಯ ವೇತನ ಪಾವತಿಸದೇ ನಿರ್ಲಕ್ಷö್ಯ ವಹಿಸಿದ ಆರೋಪದ ಮೇಲೆ ಗುತ್ತಿಗೆ ಏಜೆನ್ಸಿಗೆ ನೋಟಿಸ್ ನೀಡಲಾಗುತ್ತದೆ ಎಂದು ಹೇಳಿದರು.

ಗ್ಯಾರಂಟಿ ಸಮಿತಿ ಸದಸ್ಯ,ಸಾರಿಗೆ ಘಟಕದ ಅಧಿಕಾರಿ ಮಧ್ಯೆ ವಾಗ್ವಾದ:
ಸಾರಿಗೆ ಘಟಕದ ಸಮಸ್ಯೆಗಳ ಕುರಿತು ಗ್ಯಾರಂಟಿ ಸಮಿತಿ ಸದಸ್ಯ ಬುಡ್ಡೇಸಾಬ ಚಪ್ಪರಬಂದ ಕೆಕೆಆರ್‌ಟಿಸಿ ಎಂ.ಡಿ ಬಿ.ಸುಶೀಲಾ ಅವರಿಗೆ ಮನವರಿಕೆ ಮಾಡಿಕೊಡಲು ಮುಂದಾಗುತ್ತಿದ್ದ ವೇಳೆ ಸಾರಿಗೆ ಘಟಕದ ವ್ಯವಸ್ಥಾಪಕ ಅಶೋಕ ಭೋವಿ ಚಪ್ಪರಬಂದ ಅವರನ್ನು ತಡೆಯಲು ಮುಂದಾಗಿದ್ದನ್ನು ಆಕ್ಷೇಪಿಸಿದ ಚಪ್ಪರಬಂದ ನಾನು ಸಮಸ್ಯೆ ಹೇಳಬೇಡಿ ಎಂದರೆ ಮನೆಗೆ ಹೋಗುತ್ತೇನೆ ಎಂದು ಘಟಕ ವ್ಯವಸ್ಥಾಪಕರೊಂದಿಗೆ ವಾಗ್ವಾದ ನಡೆಸಿದರು.ಬಳಿಕ ಇರ್ವರನ್ನೂ ಎಂ.ಡಿ ಅವರೇ ಸಮಾಧಾನ ಮಾಡಿದರು.

Latest News

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ ಸಹಕಾರದಿಂದ ಗಣತಿ ನಮೂನೆಗಳ ವಿತರಣೆ ಕಾರ್ಯದಲ್ಲಿ ಮುದ್ದೇಬಿಹಾಳ ಮತಕ್ಷೇತ್ರ ಶೇ.98.38ರಷ್ಟು ಸಾಧನೆ ಮಾಡಿ ವಿಜಯಪುರ ಜಿಲ್ಲೆಗೆ ಎರಡನೇ ಸ್ಥಾನ ಪಡೆದುಕೊಂಡಿದೆ ಎಂದು ಮತದಾರರ ನೋಂದಣಾಧಿಕಾರಿ,ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯ ಕುರಿತು ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.2,28,285 ಮತದಾರರಲ್ಲಿ 2,24,589 ಮತದಾರರಿಗೆ ಗಣತಿ ನಮೂನೆ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ