ಅಸ್ಕಿ ಫೌಂಡೇಶನ್ ಜನಸೇವೆ ಶ್ಲಾಘನೀಯ: ಪವನಸುತನ ನಾಡಲ್ಲಿ ಅಸ್ಕಿ ಫೌಂಡೇಶನ್ ದಿನದರ್ಶಿಕೆ ಬಿಡುಗಡೆ

ಅಸ್ಕಿ ಫೌಂಡೇಶನ್ ಜನಸೇವೆ ಶ್ಲಾಘನೀಯ: ಪವನಸುತನ ನಾಡಲ್ಲಿ ಅಸ್ಕಿ ಫೌಂಡೇಶನ್ ದಿನದರ್ಶಿಕೆ ಬಿಡುಗಡೆ

ಆಲಮಟ್ಟಿ : ಇಲ್ಲಿಗೆ ಸಮೀಪದ ಯಲಗೂರು ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಾಂಗ್ರೆಸ್ ಮುಖಂಡ, ಪ್ರಥಮ ದರ್ಜೆ ಗುತ್ತಿಗೆದಾರರಾದ ಸಿ.ಬಿ.ಅಸ್ಕಿ ಅವರ ನೇತೃತ್ವದಲ್ಲಿ ಹೊರ ತಂದಿರುವ 2026ನೇ ಸಾಲಿನ ಅಸ್ಕಿ ಫೌಂಡೇಶನ್‌ದ ನೂತನ ವರ್ಷದ ಕ್ಯಾಲೆಂಡರನ್ನು ಶನಿವಾರ ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಮುದ್ದೇಬಿಹಾಳ ತಾಲ್ಲೂಕು ಪಂಚ ಗ್ಯಾರಂಟಿ ಸಮಿತಿ ಸದಸ್ಯ ಬುಡ್ಡೇಸಾಬ ಚಪ್ಪರಬಂದ, ಅಸ್ಕಿ ಫೌಂಡೇಶನ್ ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಒಳ್ಳೆಯ ಕೆಲಸಗಳನ್ನು ಮಾಡುತ್ತಿದೆ.ಫೌಂಡೇಶನ್ ಸಂಸ್ಥಾಪಕ ಸಿ.ಬಿ.ಅಸ್ಕಿ ಅವರು ಮಾನವೀಯ,ಅಂತಃಕರಣ ಹೃದಯವುಳ್ಳವರಾಗಿದ್ದಾರೆ.ಫೌಂಡೇಶನ್ ಕಾರ್ಯಗಳು ಹೀಗೆ ಮುಂದುವರೆಯಲಿ ಎಂದರು.

ರೈತ ಸಂಘದ ಮುಖಂಡ ಬಸವರಾಜ ಬಾಗೇವಾಡಿ ಮಾತನಾಡಿ, ಅಸ್ಕಿ ಫೌಂಡೇಶನ್ ಜನಸೇವೆ ಮಾದರಿಯಾಗಿದೆ.ಉಳ್ಳವರು ಹಲವಾರು ಜನ ಇದ್ದರೂ ಕೊಡುವವರ ಕೈ ಮಾತ್ರ ವಿರಳವಾಗಿರುತ್ತವೆ.ಅಂತಹ ವಿರಳ ಕೈಗಳಲ್ಲಿ ಅಸ್ಕಿ ಫೌಂಡೇಶನ್‌ವರು ಸೇರಿಕೊಂಡಿರುವುದು ಮೆಚ್ಚುಗೆಗೆ ಪಾತ್ರವಾದದ್ದು.ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಮುಖಂಡರಾದ ಅಸ್ಕಿ ಅವರಿಗೆ ಜನಸೇವೆ ಮಾಡುವ ಅವಕಾಶ ಒದಗಿ ಬರಲಿ ಎಂದು ಹೇಳಿದರು.
ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ ಮಾತನಾಡಿ, ಸಾಮಾಜಿಕ ಕಾರ್ಯಗಳಲ್ಲಿ ನಮ್ಮ ಫೌಂಡೇಶನ್ ಸದಾ ಮುಂದೆ ಇರಲಿದೆ ಎಂದರು.

ಪ್ರಥಮ ದರ್ಜೆ ಗುತ್ತಿಗೆದಾರರು, ಕಾಂಗ್ರೆಸ್ ಹಿರಿಯ ಮುಖಂಡ ಶ್ಯಾಮ ಪಾತ್ರದ, ಟಿಎಪಿಸಿಎಂಎಸ್ ನಿರ್ದೇಶಕರಾದ ಮುತ್ತಣ್ಣ ಮುತ್ತಣ್ಣವರ, ಪ್ರಥಮ ದರ್ಜೆ ಗುತ್ತಿಗೆದಾರರಾದ ಎಚ್.ಬಿ.ಸಂಗಮ, ವಾಯ್.ವಾಯ್.ಬಿರಾದಾರ,ಹಣಮಂತ ಪೂಜಾರಿ (ಕಾಶಿನಕುಂಟಿ),ಬಿ.ಎಸ್.ಪಾಟೀಲ, ಬಸವರಾಜ ದಂಡಿನ, ಶಿವು ಗದಿಗೆಪ್ಪಗೌಡರ, ಯುವ ಕಾಂಗ್ರೆಸ್ ಮುಖಂಡ ಆಸಿಫ್ ಬಿಲಕೇರಿ, ಅಸ್ಕಿ ಫೌಂಡೇಶನ್ ಸಾಮಾಜಿಕ ಜಾಲತಾಣ ಮುಖ್ಯಸ್ಥ ಶ್ರೀಧರ ಬಿರಾದಾರ, ಸಚಿನ ನಾಡಗೌಡ, ರಾಮನಗೌಡ ಹೊಸಮನಿ, ಮಲ್ಲು ಢವಳಗಿ ಸೇರಿದಂತೆ ಯಲಗೂರ, ಕಾಶಿನಕುಂಟಿ,ಬೂದಿಹಾಳ, ಗ್ರಾಮದ ಗಣ್ಯರು ಹಿರಿಯ ಮುಖಂಡರು, ಯುವಕರು ಉಪಸ್ತಿತರಿದ್ದರು.

Latest News

ಮುಳುಗಡೆ ಸಂತ್ರಸ್ತ ರೈತರಿಗೆ ಎಕರೆಗೆ 35-40 ಲಕ್ಷ ಪರಿಹಾರ:                                                                           ಕೃಷ್ಣಾ ಮೇಲ್ದಂಡೆ ಯೋಜನೆಗೆ ಕೇಂದ್ರದ ಅಸಹಕಾರ : ಡಿಸಿಎಂ ಡಿ.ಕೆ.ಶಿ ಅಸಮಾಧಾನ

ಮುಳುಗಡೆ ಸಂತ್ರಸ್ತ ರೈತರಿಗೆ ಎಕರೆಗೆ 35-40 ಲಕ್ಷ ಪರಿಹಾರ: ಕೃಷ್ಣಾ ಮೇಲ್ದಂಡೆ ಯೋಜನೆಗೆ ಕೇಂದ್ರದ ಅಸಹಕಾರ : ಡಿಸಿಎಂ ಡಿ.ಕೆ.ಶಿ ಅಸಮಾಧಾನ

ವಿಜಯಪುರ : “ಕೃಷ್ಣಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಸಹಕಾರ ನೀಡುತ್ತಿಲ್ಲ. ಈ ಯೋಜನೆಗೆ

ನಾನು ಸಿದ್ಧರಾಮಯ್ಯ ಏಜೆಂಟ್ ಅಲ್ಲ-ಯತ್ನಾಳ ಖಡಕ್ ಮಾತು

ನಾನು ಸಿದ್ಧರಾಮಯ್ಯ ಏಜೆಂಟ್ ಅಲ್ಲ-ಯತ್ನಾಳ ಖಡಕ್ ಮಾತು

ವಿಜಯಪುರ : ನಾನು ಯೋಗ್ಯರಿಗೆ ಅಭಿನಂದನೆ ಸಲ್ಲಿಸುತ್ತೇನೆ.ಹಾಗೆಂದು ನಾನು ಸಿದ್ಧರಾಮಯ್ಯ ಏಜೆಂಟ್ ಅಲ್ಲ,ಹಿಂದೆ ಸಿದ್ಧರಾಮಯ್ಯ

ವಿಜಯಪುರ ಬಸ್ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹೆಸರು ನಾಮಕರಣ ಮಾಡಿದ ಸಿಎಂ ಸಿದ್ದರಾಮಯ್ಯ

ವಿಜಯಪುರ ಬಸ್ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹೆಸರು ನಾಮಕರಣ ಮಾಡಿದ ಸಿಎಂ ಸಿದ್ದರಾಮಯ್ಯ

82 ಕೋಟಿ ರೂ.ವೆಚ್ಚದ ಕಾಮಗಾರಿ ಉದ್ಘಾಟನೆ,731 ಕೋಟಿ ಕೆಲಸಗಳಿಗೆ ಶಂಕುಸ್ಥಾಪನೆ ವಿಜಯಪುರ : ಜಿಲ್ಲೆಯ

ಮುನ್ನೆಚ್ಚರಿಕೆ ಕ್ರಮ ಅನುಸರಿಸಲು ವೈದ್ಯರ ಸೂಚನೆ : ಉಲ್ಬಣಗೊಂಡ ನೆಗಡಿ,ಕೆಮ್ಮು,ಜ್ವರ : ದಿನಕ್ಕೆ 600 ಜನರ ತಪಾಸಣೆ

ಮುನ್ನೆಚ್ಚರಿಕೆ ಕ್ರಮ ಅನುಸರಿಸಲು ವೈದ್ಯರ ಸೂಚನೆ : ಉಲ್ಬಣಗೊಂಡ ನೆಗಡಿ,ಕೆಮ್ಮು,ಜ್ವರ : ದಿನಕ್ಕೆ 600 ಜನರ ತಪಾಸಣೆ

ಮುದ್ದೇಬಿಹಾಳ : ಹೆಚ್ಚುತ್ತಿರುವ ಶೀತಗಾಳಿ,ಜ್ವರದಿಂದ ಮಕ್ಕಳು,ವೃದ್ಧರು,ಮಹಿಳೆಯರಲ್ಲಿ ನೆಗಡಿ,ಕೆಮ್ಮು,ಜ್ವರ ಉಲ್ಬಣಗೊಂಡಿದ್ದು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆ ಪಡೆದುಕೊಳ್ಳಲು

ಅಣ್ಣ-ತಂಗಿ ಲವ್ವಿಡವ್ವಿ.. ಸಾ*ವಿನಲ್ಲಿ ಅಂತ್ಯ

ಕಾಮದ ಮುಂದೆ ಈ ಕಾಲದಲ್ಲಿ ಸಂಬಂಧಕ್ಕೆ ಬೆಲೆನೆ ಇಲ್ಲವಾಗಿದೆ.. ಇಲ್ಲೊಂದು ಪ್ರೇಮದ ಕತೆಯೂ ಇದೆ ರೀತಿ ಇದೆ.. ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರದಲ್ಲಿ ನಡೆದಿರುವ ಘಟನೆ ಇದು.. ಆತನಿಗೆ 30 ವರ್ಷ, ಆಕೆಗೆ 21 ವರ್ಷ.. ಇಬ್ಬರು ಚಿಕ್ಕಪ್ಪ ದೊಡ್ಡಪ್ಪನ ಮಕ್ಕಳು. ಬಾಗೇಪಲ್ಲಿ ತಾಲೂಕಿನ ರಾಮಕೃಷ್ಣಪುರದ ನಿವಾಸಿಗಳು.. ಸಂಬಂಧದಲ್ಲಿ ಅಣ್ಣ-ತಂಗಿ. ಈ ಪವಿತ್ರ ಬಂಧಕ್ಕೆ ವಿರುದ್ದವಾಗಿ ಅಕ್ರಮ ಸಂಬಂಧ ಹೊಂದಿದ್ರು.. ದುಡಿಮೆಗೆ ಅಂತ ಊರು ಬಿಟ್ಟು ಬಂದಿದ್ದ ರಾಮಲಕ್ಷ್ಮಿ ಹಾಗೂ ಕೃಷ್ಣ

ಸಾರ್ವಜನಿಕರು,ವ್ಯಾಪಾರಿಗಳಿಗೆ ನಿತ್ಯ ಕಿರಿಕಿರಿ; ಮಂಗಗಳ ಹಾವಳಿಗೆ ಜನ ಹೈರಾಣು..!

ನಾಲತವಾಡ : ಪಟ್ಟಣದ ಹೃದಯಭಾಗವಾಗಿರುವ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಆಲದ ಮರದಲ್ಲಿ ಬಿಡಾರ ಹೂಡಿರುವ ಮಂಗಗಳಿOದ ನಿತ್ಯವೂ ಸಾರ್ವಜನಿಕರು,ವ್ಯಾಪಾರಿಗಳು ಹೈರಾಣಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರತಿ ಸೋಮವಾರ ಪಟ್ಟಣದಲ್ಲಿ ಸಂತೆ ನಡೆಯುತ್ತಿದ್ದು ಆಲದ ಮರದ ಸುತ್ತಮುತ್ತಲೂ ವೃದ್ಧರು,ಮಹಿಳೆಯರು ವ್ಯಾಪಾರಕ್ಕೆಂದು ಕಾಯಿಪಲ್ಯೆ,ಮಸಾಲೆ ಪದಾರ್ಥಗಳನ್ನು ಮಾರಾಟಕ್ಕೆ ಬರುವವರ ಮೇಲೆ ಈ ಮಂಗಗಳು ದಾಳಿ ಮಾಡುತ್ತಿವೆ. ಕಳೆದ ಹದಿನೈದು ದಿನಗಳ ಅವಧಿಯಲ್ಲಿ ಐದಾರು ಜನರ ಮೇಲೆ ದಾಳಿ ಮಾಡಿ ಕಚ್ಚಿಗಾಯಗೊಳಿಸಿದ ಘಟನೆಗಳು ನಡೆದಿವೆ.ಸ್ವೀಟ್ ಮಾರ್ಟ್ ಅಂಗಡಿಯವರOತೂ