ಅಸ್ಕಿ ಫೌಂಡೇಶನ್ ಜನಸೇವೆ ಶ್ಲಾಘನೀಯ: ಪವನಸುತನ ನಾಡಲ್ಲಿ ಅಸ್ಕಿ ಫೌಂಡೇಶನ್ ದಿನದರ್ಶಿಕೆ ಬಿಡುಗಡೆ

ಅಸ್ಕಿ ಫೌಂಡೇಶನ್ ಜನಸೇವೆ ಶ್ಲಾಘನೀಯ: ಪವನಸುತನ ನಾಡಲ್ಲಿ ಅಸ್ಕಿ ಫೌಂಡೇಶನ್ ದಿನದರ್ಶಿಕೆ ಬಿಡುಗಡೆ

ಆಲಮಟ್ಟಿ : ಇಲ್ಲಿಗೆ ಸಮೀಪದ ಯಲಗೂರು ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಾಂಗ್ರೆಸ್ ಮುಖಂಡ, ಪ್ರಥಮ ದರ್ಜೆ ಗುತ್ತಿಗೆದಾರರಾದ ಸಿ.ಬಿ.ಅಸ್ಕಿ ಅವರ ನೇತೃತ್ವದಲ್ಲಿ ಹೊರ ತಂದಿರುವ 2026ನೇ ಸಾಲಿನ ಅಸ್ಕಿ ಫೌಂಡೇಶನ್‌ದ ನೂತನ ವರ್ಷದ ಕ್ಯಾಲೆಂಡರನ್ನು ಶನಿವಾರ ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಮುದ್ದೇಬಿಹಾಳ ತಾಲ್ಲೂಕು ಪಂಚ ಗ್ಯಾರಂಟಿ ಸಮಿತಿ ಸದಸ್ಯ ಬುಡ್ಡೇಸಾಬ ಚಪ್ಪರಬಂದ, ಅಸ್ಕಿ ಫೌಂಡೇಶನ್ ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಒಳ್ಳೆಯ ಕೆಲಸಗಳನ್ನು ಮಾಡುತ್ತಿದೆ.ಫೌಂಡೇಶನ್ ಸಂಸ್ಥಾಪಕ ಸಿ.ಬಿ.ಅಸ್ಕಿ ಅವರು ಮಾನವೀಯ,ಅಂತಃಕರಣ ಹೃದಯವುಳ್ಳವರಾಗಿದ್ದಾರೆ.ಫೌಂಡೇಶನ್ ಕಾರ್ಯಗಳು ಹೀಗೆ ಮುಂದುವರೆಯಲಿ ಎಂದರು.

ರೈತ ಸಂಘದ ಮುಖಂಡ ಬಸವರಾಜ ಬಾಗೇವಾಡಿ ಮಾತನಾಡಿ, ಅಸ್ಕಿ ಫೌಂಡೇಶನ್ ಜನಸೇವೆ ಮಾದರಿಯಾಗಿದೆ.ಉಳ್ಳವರು ಹಲವಾರು ಜನ ಇದ್ದರೂ ಕೊಡುವವರ ಕೈ ಮಾತ್ರ ವಿರಳವಾಗಿರುತ್ತವೆ.ಅಂತಹ ವಿರಳ ಕೈಗಳಲ್ಲಿ ಅಸ್ಕಿ ಫೌಂಡೇಶನ್‌ವರು ಸೇರಿಕೊಂಡಿರುವುದು ಮೆಚ್ಚುಗೆಗೆ ಪಾತ್ರವಾದದ್ದು.ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಮುಖಂಡರಾದ ಅಸ್ಕಿ ಅವರಿಗೆ ಜನಸೇವೆ ಮಾಡುವ ಅವಕಾಶ ಒದಗಿ ಬರಲಿ ಎಂದು ಹೇಳಿದರು.
ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ ಮಾತನಾಡಿ, ಸಾಮಾಜಿಕ ಕಾರ್ಯಗಳಲ್ಲಿ ನಮ್ಮ ಫೌಂಡೇಶನ್ ಸದಾ ಮುಂದೆ ಇರಲಿದೆ ಎಂದರು.

ಪ್ರಥಮ ದರ್ಜೆ ಗುತ್ತಿಗೆದಾರರು, ಕಾಂಗ್ರೆಸ್ ಹಿರಿಯ ಮುಖಂಡ ಶ್ಯಾಮ ಪಾತ್ರದ, ಟಿಎಪಿಸಿಎಂಎಸ್ ನಿರ್ದೇಶಕರಾದ ಮುತ್ತಣ್ಣ ಮುತ್ತಣ್ಣವರ, ಪ್ರಥಮ ದರ್ಜೆ ಗುತ್ತಿಗೆದಾರರಾದ ಎಚ್.ಬಿ.ಸಂಗಮ, ವಾಯ್.ವಾಯ್.ಬಿರಾದಾರ,ಹಣಮಂತ ಪೂಜಾರಿ (ಕಾಶಿನಕುಂಟಿ),ಬಿ.ಎಸ್.ಪಾಟೀಲ, ಬಸವರಾಜ ದಂಡಿನ, ಶಿವು ಗದಿಗೆಪ್ಪಗೌಡರ, ಯುವ ಕಾಂಗ್ರೆಸ್ ಮುಖಂಡ ಆಸಿಫ್ ಬಿಲಕೇರಿ, ಅಸ್ಕಿ ಫೌಂಡೇಶನ್ ಸಾಮಾಜಿಕ ಜಾಲತಾಣ ಮುಖ್ಯಸ್ಥ ಶ್ರೀಧರ ಬಿರಾದಾರ, ಸಚಿನ ನಾಡಗೌಡ, ರಾಮನಗೌಡ ಹೊಸಮನಿ, ಮಲ್ಲು ಢವಳಗಿ ಸೇರಿದಂತೆ ಯಲಗೂರ, ಕಾಶಿನಕುಂಟಿ,ಬೂದಿಹಾಳ, ಗ್ರಾಮದ ಗಣ್ಯರು ಹಿರಿಯ ಮುಖಂಡರು, ಯುವಕರು ಉಪಸ್ತಿತರಿದ್ದರು.

Latest News

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ ಸಹಕಾರದಿಂದ ಗಣತಿ ನಮೂನೆಗಳ ವಿತರಣೆ ಕಾರ್ಯದಲ್ಲಿ ಮುದ್ದೇಬಿಹಾಳ ಮತಕ್ಷೇತ್ರ ಶೇ.98.38ರಷ್ಟು ಸಾಧನೆ ಮಾಡಿ ವಿಜಯಪುರ ಜಿಲ್ಲೆಗೆ ಎರಡನೇ ಸ್ಥಾನ ಪಡೆದುಕೊಂಡಿದೆ ಎಂದು ಮತದಾರರ ನೋಂದಣಾಧಿಕಾರಿ,ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯ ಕುರಿತು ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.2,28,285 ಮತದಾರರಲ್ಲಿ 2,24,589 ಮತದಾರರಿಗೆ ಗಣತಿ ನಮೂನೆ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ