ಹಿಂದೂ ಸಮ್ಮೇಳನಕ್ಕೆ ಜನಸಾಗರ : ರಾಜ್ಯಕ್ಕೆ ಮಾದರಿಯಾಯ್ತು ಮುದ್ದೇಬಿಹಾಳದ ಶೋಭಾಯಾತ್ರೆ

ಹಿಂದೂ ಸಮ್ಮೇಳನಕ್ಕೆ ಜನಸಾಗರ : ರಾಜ್ಯಕ್ಕೆ ಮಾದರಿಯಾಯ್ತು ಮುದ್ದೇಬಿಹಾಳದ ಶೋಭಾಯಾತ್ರೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಭಾನುವಾರ ನಡೆದ ಹಿಂದೂ ಮಹಾ ಸಮ್ಮೇಳನದ ಭವ್ಯ ಶೋಭಾಯಾತ್ರೆ ರಾಜ್ಯಕ್ಕೆ ಮಾದರಿ ಸಂದೇಶವನ್ನು ರವಾನಿಸಿತು.

ಹಿಂದೂ ಧರ್ಮವನ್ನು ಒಪ್ಪಿಕೊಂಡಿರುವ ಎಲ್ಲ ಜಾತಿ,ಉಪ ಪಂಗಡಗಳ ಜನರು ಶೋಭಾಯಾತ್ರೆಯ ಮೆರವಣಿಗೆಯಲ್ಲಿ ಪಾಲ್ಗೊಂಡು ತಾವೆಲ್ಲ ಹಿಂದೂ ಧರ್ಮೀಯರು ಒಂದೇ ಎಂದು ಒಗ್ಗಟ್ಟು ಪ್ರದರ್ಶನ ಮಾಡಿದರು.

ಪಟ್ಟಣದ ಬನಶಂಕರಿ ದೇವಸ್ಥಾನದಿಂದ ಶರಣ ಸೋಮನಾಳದ ಮಹದೇವಯ್ಯ ಶಾಸ್ತಿಗಳು, ಲಾಲ್‌ಲಿಂಗೇಶ್ವರ ಸ್ವಾಮೀಜಿ ಹಾಗೂ ಗಣ್ಯರು ಮದ್ಯಾಹ್ನ ೩.೪೫ಕ್ಕೆ ಮೆರವಣಿಗೆಗೆ ಚಾಲನೆ ನೀಡಿದರು.ಅಲ್ಲಿಂದ ಆರಂಭಗೊOಡ ಶೋಭಾಯಾತ್ರೆ ಇಂದಿರಾ ವೃತ್ತ, ಮುಖ್ಯರಸ್ತೆ,ದ್ಯಾಮವ್ವನ ಕಟ್ಟೆ,ಬಸವೇಶ್ವರ ವೃತ್ತ,ಬಸ್ ನಿಲ್ದಾಣ,ಕಿತ್ತೂರು ರಾಣಿ ಚೆನ್ನಮ್ಮ ವೃತ್ತ,ಸಂಗೊಳ್ಳಿ ರಾಯಣ್ಣ ವೃತ್ತದ ಮೂಲಕ ವಿಬಿಸಿ ಹೈಸ್ಕೂಲ್ ಮೈದಾನವನ್ನು ತಲುಪಿತು.

ಮೆರವಣಿಗೆಯಲ್ಲಿ ಬೊಂಬೆಗಳ ಕುಣಿತ, ಜೋಗತಿ ನೃತ್ಯ, ಭಜನೆ,ಡೊಳ್ಳಿನ ಮೇಳ,ಹೆಜ್ಜೆ ಮೇಳ,ಗೋಕಾಕದ ಜಾಂಚ್ ಮೆರವಣಿಗೆಯಲ್ಲಿ ಗಮನ ಸೆಳೆದರು. ಮೆರವಣಿಗೆಯಲ್ಲಿ ವೀರಶೈವ ಲಿಂಗಾಯತ ಸಮಾಜದ ಉಪ ಪಂಗಡಗಳ ವೃತ್ತಿಗೆ ಸಂಬAಧಿಸಿದ ರೂಪಕಗಳು ಮೆರವಣಿಗೆಯಲ್ಲಿ ಸಾಗಿದವು.ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಮೆರವಣಿಗೆಯಲ್ಲಿ ಪಾಲ್ಗೊಂಡು ಶೋಭೆ ತಂದರು.

ಪ್ರಮುಖರಾದ ಜಿಪಂ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಕಾಂಗ್ರೆಸ್ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ,ಮಲಕೇಂದ್ರಗೌಡ ಪಾಟೀಲ,ಜಿಪಂ ಮಾಜಿ ಸದಸ್ಯ ಹೇಮರಡ್ಡಿ ಮೇಟಿ,ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ, ಯುವ ಮುಖಂಡ ಭರತಗೌಡ ಪಾಟೀಲ ನಡಹಳ್ಳಿ, ಉದ್ಯಮಿ ಎ.ಗಣೇಶ ನಾರಾಯಣಸ್ವಾಮಿ,ಕೆಯುಸಿ ಬ್ಯಾಂಕ್ ನಿರ್ದೇಶಕ ಸತೀಶ ಓಸ್ವಾಲ್, ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ರವಿ ಎನ್.ನಾಯಕ,ಪರಶುರಾಮ ನಾಲತವಾಡ,ಬಹಾದ್ದೂರ ರಾಠೋಡ, ಮೊದಲಾದವರು ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು.

ಪೊಲೀಸ್ ಭದ್ರತೆ :ಡಿವೈಎಸ್ಪಿ ಬಲ್ಲಪ್ಪ ನಂದಗಾವಿ ನೇತೃತ್ವದಲ್ಲಿ ಸಿಪಿಐ ಮೊಹ್ಮದ ಫಸಿವುದ್ದೀನ, ಮುದ್ದೇಬಿಹಾಳ ಪಿಎಸೈ ಸಂಜಯ ತಿಪರೆಡ್ಡಿ, ತಾಳಿಕೋಟಿ ಪಿಎಸೈ ಜ್ಯೋತಿ ಖೋತ ಸೇರಿದಂತೆ ನೂರಾರು ಪೊಲೀಸರು ಬಿಗಿ ಭದ್ರತೆ ವಹಿಸಿದ್ದರು.

Latest News

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ ಸಹಕಾರದಿಂದ ಗಣತಿ ನಮೂನೆಗಳ ವಿತರಣೆ ಕಾರ್ಯದಲ್ಲಿ ಮುದ್ದೇಬಿಹಾಳ ಮತಕ್ಷೇತ್ರ ಶೇ.98.38ರಷ್ಟು ಸಾಧನೆ ಮಾಡಿ ವಿಜಯಪುರ ಜಿಲ್ಲೆಗೆ ಎರಡನೇ ಸ್ಥಾನ ಪಡೆದುಕೊಂಡಿದೆ ಎಂದು ಮತದಾರರ ನೋಂದಣಾಧಿಕಾರಿ,ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯ ಕುರಿತು ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.2,28,285 ಮತದಾರರಲ್ಲಿ 2,24,589 ಮತದಾರರಿಗೆ ಗಣತಿ ನಮೂನೆ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ