ಜಾತಿಯ ಮೇಲಿನ ಅಭಿಮಾನ ಧರ್ಮದ ಮೇಲೂ ಇರಲಿ-ಸಿದ್ಧಲಿಂಗ ದೇವರು

ಜಾತಿಯ ಮೇಲಿನ ಅಭಿಮಾನ ಧರ್ಮದ ಮೇಲೂ ಇರಲಿ-ಸಿದ್ಧಲಿಂಗ ದೇವರು

ಮುದ್ದೇಬಿಹಾಳ : ನನ್ನ ಜಾತಿಯ ಮೇಲಿನ ಅಭಿಮಾನ ಧರ್ಮದ ಮೇಲೂ ಇರಬೇಕು.ಇಂದು ಅರ್ಧ ಮರ್ಧ ಕಲಿತವರಿಂದಲೇ ಸಮಾಜ ಹಾಳಾಗುತ್ತಿದೆ.ಯುವಕರು ಭಾರತ ಮಾತೆಯನ್ನು ಎದೆಯಲ್ಲಿಟ್ಟು ಪ್ರೀತಿಸಬೇಕೆ ಹೊರತು ಯಾರನ್ನೋ ಪ್ರೀತಿಸುವುದಕ್ಕೆ ಅಲ್ಲ ಎಂದು ತಾಳಿಕೋಟಿ ಖಾಸ್ಗತೇಶ್ವರ ಮಠದ ಸಿದ್ಧಲಿಂಗ ದೇವರು ಹೇಳಿದರು.

ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಭಾನುವಾರ ಹಿಂದೂ ಸಮ್ಮೇಳನ ಸಂಚಲನಾ ಸಮೀತಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಹಿಂದು ಸಮ್ಮೇಳನದಲ್ಲಿ ಅವರು ಮಾತನಾಡಿದರು.
ನಿಜವಾದ ಸಿರಿವಂತಿಕೆ, ನಾಗರಿಕತೆಯನ್ನು ಕಲಿಸಿದ ದೇಶ ಭಾರತ.ಯಾರಿಗೂ ಟೀಕಿಸಬಾರದು, ಒಳ್ಳೆಯರಾಗಬೇಕು ಎಂದರು.

ಸಾಮಾಜಿಕ ಕಾರ್ಯಕರ್ತ ಹಣಮಂತ ಮಳಲಿ, ವಿದೇಶಿ ವಸ್ತುಗಳನ್ನು ಬಹಿಷ್ಕರಿಸಿದರೆ ಭಾರತದ ದೇಶಕ್ಕೆ ಟ್ರಂಪ್ ಬಂದು ಕಾಲಿಗೆ ಬೀಳುತ್ತಾನೆ.ನಮ್ಮಲ್ಲಿ ಒಡಕು. ನಿಶ್ಚಲವಾದ ಒಗ್ಗಟ್ಟು ದೇಶವಾಸಿಗಳು ಪ್ರದರ್ಶನ ಮಾಡಿದಾಗ ಮಾತ್ರ ಇನ್ನೊಂದು ದೇಶ ನಮ್ಮತ್ತ ತಿರುಗಿ ನೋಡುವುದಿಲ್ಲ. ಜನಸಂಖ್ಯೆ ನಿಯಂತ್ರಣ ಕಾನೂನು ಜಾರಿಗೆ ಮಾಡುವವರೆಗೂ ಜನಸಂಖ್ಯೆ ನಿಯಂತ್ರಣ ಮಾಡಬಾರದು. ಕನಿಷ್ಠ ಮೂರು ನಾಲ್ಕು ಮಕ್ಕಳಾದರೂ ಇರಲಿ. ದೇಶದ ಬಗ್ಗೆ ಹೆಮ್ಮೆ ಇರಬೇಕು. ಸೊನ್ನೆ,ಸಂಸ್ಕೃತ,ಯೋಗ, ಕೃಷಿ,ಸಂಗೀತ,ಬಟ್ಟೆ,ನೌಕಾಯನ,ಶಿಲ್ಪಿ ಕಲೆ, ಅಡುಗೆ ಕೊಟ್ಟಿದ್ದು ಭಾರತೀಯರು.ಆತ್ಮಸಾಕ್ಷಾತ್ಕಾರಕ್ಕೆ ಆಧ್ಯಾತ್ಮ ಕೊಟ್ಟಿದ್ದು ಭಾರತ. ಭಾರತದಲ್ಲಿ ಮಠಗಳಿರಲಿಲ್ಲವೆಂದರೆ ದೇಶ ಸ್ಮಶಾನವಾಗಬೇಕಾಗುತ್ತದೆ ಎಂದರು.
ಪಾಶ್ಚಿಮಾತ್ಯರ ಅನುಕರಣೆ ಮಾಡುವುದು ಬೇಡ. ವಿದೇಶಿ ವಸ್ತುಗಳನ್ನು ಖರೀದಿ ಮಾಡಬೇಡಿ. ಸಂಸ್ಕಾರ ಆಧಾರಿತ ಶಿಕ್ಷಣ ಕೊಡಬೇಕು.ಹಿಂದೂ ಧರ್ಮವನ್ನು ಯಾರಿಂದಲೂ ನಾಶ ಮಾಡಲು ಸಾಧ್ಯವಿಲ್ಲ. ಆರ್ಥಿಕ ಸ್ಥಿತಿ ಉನ್ನತಿ ಇದೆ.ಆದರೆ ಆರೋಗ್ಯಕರ ಸ್ಥಿತಿ ಅವನತಿಯತ್ತ ಸಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ಉದ್ಯಮಿ ಬಸವರಾಜ ನಾವದಗಿ, ವಕೀಲೆ ಜಯಶ್ರೀ ಸಾಲಿಮಠ ಮಾತನಾಡಿದರು.ಗುಂಡಕನಾಳದ ಗುರುಲಿಂಗ ಶ್ರೀ,ಯಂಕAಚಿಯ ಅಭಿನವ ರುದ್ರಮುನಿ ಸ್ವಾಮೀಜಿ, ತುಂಬಗಿಯ ಮಹಾಂತಲಿAಗ ಶ್ರೀ, ಪಡೇಕನೂರದ ಮಲ್ಲಿಕಾರ್ಜುನ ಸ್ವಾಮೀಜಿ, ಢವಳಗಿಯ ಘನಮಠೇಶ್ವರ ಸ್ವಾಮೀಜಿ, ಮುದ್ದೇಬಿಹಾಳ ಹೊಸಮಠದ ಅಮರೇಶ್ವರ ದೇವರು, ಶರಣ ಸೋಮನಾಳದ ಮಹದೇವಯ್ಯ ಶಾಸ್ತಿçÃ, ಲೊಟಗೇರಿಯ ಗುರುಮೂರ್ತಿ ಕಣಕಾಲಮಠ, ಕವಡಿಮಟ್ಟಿ ಬಸವಪ್ರಭು ಹಿರೇಮಠ, ಜಮ್ಮಲದಿನ್ನಿಯ ಸಿದ್ದಾರೂಢ ಸ್ವಾಮೀಜಿ, ನಾಲತವಾಡ ಪಂಪಾಪತಿ ಸ್ವಾಮೀಜಿ, ಕುಂಚಗನೂರದ ರಂಗನಾಥ ಸ್ವಾಮೀಜಿ, ವೇ.ಈರಯ್ಯ ಹಿರೇಮಠ, ಮಿಣಜಗಿಯ ಸೋಮಶೇಖರಯ್ಯ ಶ್ರೀ, ವಿವಿಧ ಸಮಾಜಗಳ ಅಧ್ಯಕ್ಷರುಗಳು ಇದ್ದರು.ವೆಂಕನಗೌಡ ಪಾಟೀಲ ಸ್ವಾಗತಿಸಿದರು.ಟಿ.ಡಿ.ಲಮಾಣಿ ನಿರೂಪಿಸಿದರು.

Latest News

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ ಸಹಕಾರದಿಂದ ಗಣತಿ ನಮೂನೆಗಳ ವಿತರಣೆ ಕಾರ್ಯದಲ್ಲಿ ಮುದ್ದೇಬಿಹಾಳ ಮತಕ್ಷೇತ್ರ ಶೇ.98.38ರಷ್ಟು ಸಾಧನೆ ಮಾಡಿ ವಿಜಯಪುರ ಜಿಲ್ಲೆಗೆ ಎರಡನೇ ಸ್ಥಾನ ಪಡೆದುಕೊಂಡಿದೆ ಎಂದು ಮತದಾರರ ನೋಂದಣಾಧಿಕಾರಿ,ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯ ಕುರಿತು ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.2,28,285 ಮತದಾರರಲ್ಲಿ 2,24,589 ಮತದಾರರಿಗೆ ಗಣತಿ ನಮೂನೆ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ