ಅಸ್ಕಿ ಫೌಂಡೇಶನ್‌ದಿoದ ಸಾಧಕರ ಸನ್ಮಾನ: ಸಹಜ ಸನ್ಮಾನಗಳಿಗೆ ಸಮಾಜದಲ್ಲಿ ಗೌರವ-ಹಿರೇಮಠ

ಅಸ್ಕಿ ಫೌಂಡೇಶನ್‌ದಿoದ ಸಾಧಕರ ಸನ್ಮಾನ: ಸಹಜ ಸನ್ಮಾನಗಳಿಗೆ ಸಮಾಜದಲ್ಲಿ ಗೌರವ-ಹಿರೇಮಠ

ಮುದ್ದೇಬಿಹಾಳ : ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು ಅಂತಹ ಸನ್ಮಾನಗಳು ಸಮಾಜದಲ್ಲಿ ಗೌರವ ಹೆಚ್ಚಿಸುತ್ತವೆ ಎಂದು ಹಿರಿಯ ಸಾಹಿತಿ ಪ್ರೊ.ಬಿ.ಎಂ.ಹಿರೇಮಠ ಹೇಳಿದರು.

ಪಟ್ಟಣದ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸಾಧಕರ ಸನ್ಮಾನ,ಕ್ಯಾಲೆಂಡರ್ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ.ಇನ್ನು ಕೆಲವರು ಸನ್ಮಾನಕ್ಕೆ ಇಂತಹದ್ದೇ ವಸ್ತು,ಸಾಮಗ್ರಿ ಬೇಕೆಂದು ಬೇಡಿಕೆ ಇರಿಸಿಕೊಂಡು ಸನ್ಮಾನ ಮಾಡಿಸಿಕೊಳ್ಳುತ್ತಾರೆ.ಆದರೆ ಸಮಾಜದಲ್ಲಿ ಎಲ್ಲರ ಮಧ್ಯೆ ನಡೆಯುವ ಸಾಧನೆಗಳ ಪುರಸ್ಕಾರದ ಸನ್ಮಾನಗಳಿಗೆ ಗೌರವ ಜಾಸ್ತಿ.ಅಸ್ಕಿ ಫೌಂಡೇಶನ್ ಸಹಜ ಸನ್ಮಾನದ ಮೂಲಕ ಸಾಧಕರ ಗೌರವವನ್ನು ಹೆಚ್ಚಿಸಿದೆ ಎಂದರು.

ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ನಿರ್ದೇಶಕ ಸತೀಶ ಓಸ್ವಾಲ ಮಾತನಾಡಿ, ಸಿ.ಬಿ.ಅಸ್ಕಿಯವರದ್ದು ಮತ್ತೊಬ್ಬರ ಖುಷಿಯಲ್ಲಿ ಸಂತಸ ಕಾಣುವ ವ್ಯಕ್ತಿತ್ವ.ಎಲ್ಲರನ್ನು ಕರೆದು ಗೌರವಿಸುವ ಗುಣ ನಿಗರ್ವಿ ವ್ಯಕ್ತಿಯಾಗಿದ್ದಾರೆ ಎಂದರು.

ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ ಮಾತನಾಡಿ, ಜನರ ಪ್ರೀತಿ, ಅಭಿಮಾನವೇ ಫೌಂಡೇಶನ್ ಬೆಳವಣಿಗೆಗೆ ಕಾರಣವಾಗಿದೆ.ಗಳಿಸಿದ್ದರಲ್ಲಿ ಅಲ್ಪವನ್ನು ಸಮಾಜ ಸೇವೆಗಾಗಿ ಮುಡಿಪಾಗಿಟ್ಟರೆ ಭವಿಷ್ಯದಲ್ಲಿ ಒಳ್ಳೆಯ ಕಾರ್ಯಗಳಿಗೆ ಸ್ಫೂರ್ತಿಯಾಗಲಿದೆ. ಕಷ್ಟದ ಸಮಯದಲ್ಲಿ ಅಸ್ಕಿ ಫೌಂಡೇಶನ್ ನೆರವಿಗೆ ಸದಾ ಸಿದ್ಧವಾಗಿದೆ ಎಂದರು.

ಹಸಿರು ತೋರಣ ಗೆಳೆಯರ ಬಳಗದ ಸಂಚಾಲಕ ಮಹಾಬಳೇಶ ಗಡೇದ ಮಾತನಾಡಿ, ಅಸ್ಕಿಯವರು ಸುಕನ್ಯಾ ಸಮೃದ್ಧಿ ಯೋಜನೆಯ ಆರಂಭಿಕ ಕಂತುಗಳನ್ನು ಕಟ್ಟುವುದಕ್ಕಾಗಿ ಹಲವು ವರ್ಷಗಳ ಹಿಂದೆ ಬಡ ಹೆಣ್ಣು ಮಕ್ಕಳಿಗೆ ಅನುಕೂಲ ಕಲ್ಪಿಸಿದ್ದಾರೆ.ಅಸ್ಕಿಯವರು ಸಹೃದಯವಂತರು ಎಂದರು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳದ ನಿರ್ದೇಶಕ ಆನಂದಗೌಡ ಬಿರಾದಾರ,ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ,ಹಸಿರು ತೋರಣ ಗೆಳೆಯರ ಬಳಗದ ಅಧ್ಯಕ್ಷ ಅಮರೇಶ ಗೂಳಿ, ಮುಖಂಡ ಉದಯ ರಾಯಚೂರ ಮಾತನಾಡಿದರು.ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ಕಾರ್ಯಕ್ರಮದಲ್ಲಿದ್ದರು. ದೀಪರತ್ನಶ್ರೀ ಪ್ರಾರ್ಥಿಸಿದರು.ಶ್ರೀಶೈಲ ಹೂಗಾರ ನಿರೂಪಿಸಿದರು.
ಕರ್ನಾಟಕ ರಾಜ್ಯ ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳದ ನಿರ್ದೇಶಕ ಆನಂದಗೌಡ ಬಿರಾದಾರ,ಹಸಿರು ತೋರಣ ಗೆಳೆಯರ ಬಳಗದ ಅಧ್ಯಕ್ಷ ಅಮರೇಶ ಗೂಳಿ ಅವರನ್ನು ಫೌಂಡೇಶನ್‌ದಿAದ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಅಸ್ಕಿ ಫೌಂಡೇಶನ್ ಪದಾಧಿಕಾರಿಗಳು, ಹಸಿರು ತೋರಣ ಗೆಳೆಯರ ಬಳಗದ ಸದಸ್ಯರು,ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಆಡಳಿತ ಮಂಡಳಿ ಪದಾಧಿಕಾರಿಗಳು,ಮನೆಯಲ್ಲಿ ಮಹಾಮನೆ, ಶರಣ ಸಾಹಿತ್ಯ ಪರಿಷತ್,ಕನ್ನಡ ಸಾಹಿತ್ಯ ಪರಿಷತ್, ಆನಂದಗೌಡ ಗೆಳೆಯರ ಬಳಗದ ಸದಸ್ಯರು ಪಾಲ್ಗೊಂಡಿದ್ದರು.

Latest News

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ ಸಹಕಾರದಿಂದ ಗಣತಿ ನಮೂನೆಗಳ ವಿತರಣೆ ಕಾರ್ಯದಲ್ಲಿ ಮುದ್ದೇಬಿಹಾಳ ಮತಕ್ಷೇತ್ರ ಶೇ.98.38ರಷ್ಟು ಸಾಧನೆ ಮಾಡಿ ವಿಜಯಪುರ ಜಿಲ್ಲೆಗೆ ಎರಡನೇ ಸ್ಥಾನ ಪಡೆದುಕೊಂಡಿದೆ ಎಂದು ಮತದಾರರ ನೋಂದಣಾಧಿಕಾರಿ,ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯ ಕುರಿತು ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.2,28,285 ಮತದಾರರಲ್ಲಿ 2,24,589 ಮತದಾರರಿಗೆ ಗಣತಿ ನಮೂನೆ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ