ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ ಬಂದಿರುವ ಕೆಲವರು ಅನಧಿಕೃತವಾಗಿ ರಾತ್ರಿ ಸಮಯದಲ್ಲಿ ನದಿಗೆ ಇಳಿದು ಅಕ್ರಮ ಮೀನುಗಾರಿಕೆಯಲ್ಲಿ ತೊಡಗಿದ್ದು ಕಳೆದ ಭಾನುವಾರ ದಿಢೀರ್ ದಾಳಿ ನಡೆಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಶರಣಗೌಡ ಬಿರಾದಾರ ತಿಳಿಸಿದರು.

ಪಟ್ಟಣದ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ನಡೆದ ಕೆಡಿಪಿ ಸಭೆಯಲ್ಲಿ ಇಲಾಖೆಯ ಪ್ರಗತಿ ವರದಿ ನೀಡುವ ಸಮಯದಲ್ಲಿ ಈ ವಿಷಯವನ್ನು ಬಹಿರಂಗಪಡಿಸಿದರು.ಆAಧ್ರದ ಮೀನುಗಾರರು ಸಣ್ಣ ಮೀನುಗಳನ್ನು ಬಲೆ ಬೀಸಿ ಹಿಡಿದುಕೊಂಡು ಹೋಗುತ್ತಿದ್ದಾರೆ.ಇದರಿಂದ ಈ ಭಾಗದಲ್ಲಿ ಮೀನುಗಳ ಸಂತತಿ ಗಣನೀಯವಾಗಿ ಕುಸಿತವಾಗುವ ಭೀತಿ ಎದುರಾಗಿತ್ತು.ವಿಷಯ ತಿಳಿದು ಮೀನುಗಾರಿಕೆ ಇಲಾಖೆಯ ಬೆಳಗಾವಿಯ ಜಂಟಿ ನಿರ್ದೇಶಕರ ಜೊತೆಗೂಡಿ ಅಕ್ರಮ ಅಡ್ಡೆಗಳ ಮೇಲೆ ದಾಳಿ ಮಾಡಲಾಗಿದೆ.ಈ ಸಮಯದಲ್ಲಿ ಹಲವರ ಮೇಲೆ ದೂರು ದಾಖಲಿಸಲಾಗಿದೆ ಎಂದು ಹೇಳಿದರು.

ಅಕ್ರಮವಾಗಿ ನದಿ ತೀರದಲ್ಲಿ ಶೆಡ್, ಟೆಂಟ್ ಹಾಕುವುದಕ್ಕೆ ಕಡಿವಾಣ ಹಾಕಲು ಸ್ಥಳೀಯ ಗ್ರಾಮ ಪಂಚಾಯಿತಿ ಪಿಡಿಒಗಳಿಗೆ ಮೇಲಧಿಕಾರಿಗಳು ಸೂಚನೆ ನೀಡಬೇಕು ಎಂದು ವಿನಂತಿಸಿದರು.ಇದಕ್ಕೆ ಉತ್ತರಿಸಿದ ತಾಪಂ ಇಒ ವೆಂಕಟೇಶ ವಂದಾಲ , ಸಂಬAಧಿಸಿದ ಗ್ರಾಮ ಪಂಚಾಯಿತಿ ಪಿಡಿಒಗಳಿಗೆ ತಕ್ಷಣ ಈ ಕುರಿತು ಸೂಚನೆ ನೀಡಲಾಗುತ್ತದೆ ಎಂದು ತಿಳಿಸಿದರು.

ಶಿಕ್ಷಣ ಇಲಾಖೆಯ ಮೇಲಿನ ಚರ್ಚೆಗೆ ಸಂಬAಧಿಸಿದAತೆ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿಯೂ ಆಗಿರುವ ಜಂಟಿ ಕೃಷಿ ನಿರ್ದೇಶಕರಾದ ಶಿವನಗೌಡ ಪಾಟೀಲ ಬಿಇಒಗೆ ಸೂಚನೆ ನೀಡಿದರು. ಖಾಸಗಿ ಶಾಲೆಗಳಲ್ಲಿ ನುರಿತ ಶಿಕ್ಷಕರು ಇರುವುದಿಲ್ಲ.ಆದರೂ ಅಲ್ಲಿ ಫಲಿತಾಂಶ ಗುಣಮಟ್ಟದಿಂದ ಕೂಡಿರುತ್ತದೆ.ಆದರೆ ಸರ್ಕಾರಿ ಶಾಲೆಗಳಿಗೆ ನೇಮಕವಾಗುವ ಶಿಕ್ಷಕರ ವಿದ್ಯಾರ್ಹತೆ ಗುಣಮಟ್ಟದಿಂದ ಕೂಡಿದ್ದರೂ ವಿದ್ಯಾರ್ಥಿಗಳ ಫಲಿತಾಂಶ ಮಾತ್ರ ಕಳಪೆಯಾಗುವುದಕ್ಕೆ ಏತಕ್ಕೆ ಎಂದು ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಬಿಇಒ ಬಿ.ಎಸ್.ಸಾವಳಗಿ , ಜಿಲ್ಲೆಯ ಫಲಿತಾಂಶದಲ್ಲಿ ತಾಲ್ಲೂಕು ಎರಡನೇ ಸ್ಥಾನದಲ್ಲಿದೆ.ಫಲಿತಾಂಶದ ಸುಧಾರಣೆಗಾಗಿ ಹಲವು ಕ್ರಮಗಳನ್ನು ಇಲಾಖೆಯಿಂದ ಕೈಗೊಳ್ಳಲಾಗಿದೆ.ಫೋನ್ ಇನ್, ಪಾಸಿಂಗ್ ಪ್ಯಾಕೇಜ್, ಮನೆ ಸಂದರ್ಶನ ಸೇರಿದಂತೆ ಹಲವು ಕ್ರಮಗಳನ್ನು ಅನುಸರಿಸಲಾಗುತ್ತದೆ ಎಂದು ಹೇಳಿದರು.
ಎಸ್.ಎಸ್.ಎಲ್.ಸಿಯಲ್ಲಿ ಇಂಟರ್ನಲ್ ಅಂಕಗಳನ್ನು ಪಡೆದುಕೊಳ್ಳಬೇಕಾದರೆ ವಿದ್ಯಾರ್ಥಿಗಳಿಂದ ವಿದ್ಯಾಭ್ಯಾಸ ಮಾಡಿಸಿ ಅಂಕಗಳನ್ನು ಕಡಿತಗೊಳಿಸದೇ ಪೂರ್ಣರೂಪದಲ್ಲಿ ನೀಡಲು ತಿಳಿಸಲಾಗಿದ್ದು ಥಿಯರಿ ಅಂಕಗಳಲ್ಲಿ 80ಕ್ಕೆ 13 ಅಂಕ ಪಡೆದರೆ ಆ ವಿದ್ಯಾರ್ಥಿ ಉತ್ತೀರ್ಣರಾಗುವ ಅವಕಾಶಗಳಿವೆ.ವಿದ್ಯಾರ್ಥಿಯೊಬ್ಬರು 33 ಅಂಕಗಳನ್ನು ಉತ್ತೀರ್ಣತೆಗೆ ನಿಗದಿಪಡಿಸಲಾಗಿದೆ ಎಂದು ತಿಳಿಸಿದರು.ಅನುದಾನಿತ ಶಾಲೆಗಳಲ್ಲಿ ಫಲಿತಾಂಶ ಇಳಿಮುಖವಾಗಿದ್ದು ಶಿಕ್ಷಕರ ಭರ್ತಿ ಇಲ್ಲದ್ದಕ್ಕೆ ಶಿಕ್ಷಣ ಕುಂಠಿತಗೊಳ್ಳುತ್ತಿದೆ ಎಂದು ಮಾಹಿತಿ ನೀಡಿದರು.

ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ದೇಶಪಾಂಡೆ ಮಾತನಾಡಿ, ದ್ರಾಕ್ಷಿ,ನಿಂಬೆ ಹೆಚ್ಚಿನ ಕ್ಷೇತ್ರದಲ್ಲಿ ಬಿತ್ತನೆ ಮಾಡಲಾಗಿದೆ.ಮೆಣಸಿಣಕಾಯಿ ದರ ಏರಿಕೆಯಾಗಿದ್ದು ಬಿತ್ತನೆ ಕ್ಷೇತ್ರ ಅತ್ಯಂತ ಕಡಿಮೆ ಪ್ರಮಾಣದಲ್ಲಿ ಆಗಿದೆ.ಕ್ವಿಂಟಾಲ್‌ಗೆ 50-60 ಸಾವಿರ ರೂ.ದರ ಮೆಣಸಿಣಕಾಯಿ ಮಾರಾಟವಾಗುತ್ತಿದೆ ಎಂದು ತಿಳಿಸಿದರು.

ನಮ್ಮ ಭಾಗದ ರೈತರು 250 ಹೆಕ್ಟೇರ್ ಪ್ರದೇಶದಲ್ಲಿ ಅಜವಾನ ಬೆಳೆ ಬಿತ್ತನೆ ಮಾಡಿದ್ದು ಅದಕ್ಕೆ ಮಾರುಕಟ್ಟೆ ದೊರೆಯದ ಕಾರಣ ಆಸಕ್ತಿ ತೋರಿಸುತ್ತಿಲ್ಲ.ಕರ್ನೂಲ್‌ಗೆ ಅಜವಾನ ಮಾರಾಟಕ್ಕೆ ರೈತರೇ ತೆಗೆದುಕೊಂಡು ಹೋಗಬೇಕಾಗಿದೆ ಎಂದು ಮಾಹಿತಿ ನೀಡಿದರು.

ಜಂಟಿ ಕೃಷಿ ನಿರ್ದೇಶಕ,ತಾಪಂ ಆಡಳಿತಾಧಿಕಾರಿಯೂ ಆಗಿರುವ ಶಿವನಗೌಡ ಪಾಟೀಲ ಮಾತನಾಡಿ, ಕೆಡಿಪಿ ಸಭೆಯಲ್ಲಿ ಅಧಿಕಾರಿಗಳು ಸಮರ್ಪಕ ಮಾಹಿತಿ ಒದಗಿಸಬೇಕು.ಭೌತಿಕ ಪ್ರಗತಿಯನ್ನು ಇಲಾಖಾವಾರು ಕಾಮಗಾರಿಗಳನ್ನು ಮಾರ್ಚ್ ಅಂತ್ಯದೊಳಗಾಗಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗೆ ಆದ್ಯತೆ ನೀಡಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಶಿವಲೀಲಾ ಕೊಣ್ಣೂರ ಅವರಿಗೆ ಅಧಿಕಾರಿಗಳು ಸೂಚಿಸಿದರು.ಕೃಷಿ,ಆರೋಗ್ಯ,ಶಿಶು ಅಭಿವೃದ್ಧಿ,ಪಿಆರ್‌ಇಡಿ,ಸಹಕಾರ,ಸಮಾಜ ಕಲ್ಯಾಣ,ಅಬಕಾರಿ ಸೇರಿದಂತೆ ಹಲವು ಇಲಾಖೆಯ ಅಧಿಕಾರಿಗಳು ಇಲಾಖೆಯ ಪ್ರಗತಿ ಮಾಹಿತಿ ಸಭೆಗೆ ಒದಗಿಸಿದರು.ಇಒ ವೆಂಕಟೇಶ ವಂದಾಲ ವಂದಿಸಿದರು.

ಸಭೆಯಲ್ಲಿ ತಾಳಿಕೋಟಿ ತಾಪಂ ಇಒ ಅನಸೂಯಾ ಚಲವಾದಿ, ಯೋಜನಾಧಿಕಾರಿ ಪಿ.ಎಸ್.ಕಸನಕ್ಕಿ, ವೀರೇಶ ಹೂಗಾರ , ವಿವಿಧ ಇಲಾಖೆಯ ಅಧಿಕಾರಿಗಳಾದ ವಿ.ಎಸ್.ಉತ್ನಾಳ, ಬಸಂತಿ ಮಠ, ಎಸ್.ಡಿ.ಭಾವಿಕಟ್ಟಿ, ಉಮೇಶ ಕೆಲೂರ,ಡಾ.ಸತೀಶ ತಿವಾರಿ ಮೊದಲಾದವರು ಇದ್ದರು.

ಪ್ರತಿನಿಧಿಗಳನ್ನು ಕಳಿಸಬೇಡಿ:
ತಾಪಂ ಸಾಮಾನ್ಯ ಸಭೆಗೆ ಇಲಾಖೆಯ ಅಧಿಕಾರಿಗಳು ಪ್ರತಿನಿಧಿಗಳನ್ನು ಕಳುಹಿಸದೇ ಅಧಿಕಾರಿಗಳೇ ಹಾಜರಾಗಬೇಕು.ಕಡ್ಡಾಯವಾಗಿ ಮಾಹಿತಿಯನ್ನು ಮುಂಚಿತವಾಗಿ ತಾಪಂಗೆ ಒದಗಿಸಬೇಕು.ಮುಂದಿನ ಸಭೆಗಳಲ್ಲಿ ಇಲಾಖೆಯ ಪ್ರತಿನಿಧಿಗಳಿಗೆ ಅವಕಾಶ ಕಲ್ಪಿಸುವುದಿಲ್ಲ ಎಂದು ತಾಪಂ ಇಒ ವೆಂಕಟೇಶ ವಂದಾಲ ತಿಳಿಸಿದರು.

Latest News

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ ಸಹಕಾರದಿಂದ ಗಣತಿ ನಮೂನೆಗಳ ವಿತರಣೆ ಕಾರ್ಯದಲ್ಲಿ ಮುದ್ದೇಬಿಹಾಳ ಮತಕ್ಷೇತ್ರ ಶೇ.98.38ರಷ್ಟು ಸಾಧನೆ ಮಾಡಿ ವಿಜಯಪುರ ಜಿಲ್ಲೆಗೆ ಎರಡನೇ ಸ್ಥಾನ ಪಡೆದುಕೊಂಡಿದೆ ಎಂದು ಮತದಾರರ ನೋಂದಣಾಧಿಕಾರಿ,ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯ ಕುರಿತು ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.2,28,285 ಮತದಾರರಲ್ಲಿ 2,24,589 ಮತದಾರರಿಗೆ ಗಣತಿ ನಮೂನೆ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ