ವಚನಗಳಿಂದ ಸಮಾಜ ಸುಧಾರಣೆ-ತಹಶೀಲ್ದಾರ್ ಚಾಲಕ್

ವಚನಗಳಿಂದ ಸಮಾಜ ಸುಧಾರಣೆ-ತಹಶೀಲ್ದಾರ್ ಚಾಲಕ್

ಮುದ್ದೇಬಿಹಾಳ : ಹನ್ನೆರಡನೇ ಶತಮಾನದಲ್ಲಿದ್ದ ವಚನಕಾರರು ರಚಿಸಿರುವ ವಚನಗಳಿಂದ ಸಮಾಜದ ಸುಧಾರಣೆ ಆಗಿದೆ.ನಂಬಿಕೆಗೆ ಮತ್ತೊಂದು ಹೆಸರು ನಿಜ ಶರಣ ಅಂಬಿಗರ ಚೌಡಯ್ಯನವರು ಎಂದು ತಹಶೀಲ್ದಾರ ಕೀರ್ತಿ ಚಾಲಕ್ ಹೇಳಿದರು.
ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಬುಧವಾರ ತಾಲ್ಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ನಿಜ ಶರಣ ಅಂಬಿಗರ ಚೌಡಯ್ಯನವರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಮಾಜದಲ್ಲಿದ್ದ ಅನಿಷ್ಟ ಪದ್ಧತಿಗಳಿಗೆ ವಚನಗಳ ಮೂಲಕ ಪರಿಹಾರ ಕಂಡುಕೊoಡವರು ಶರಣರು.ಅಂತಹ ವಚನಕಾರರಲ್ಲಿ ಅಂಬಿಗರ ಚೌಡಯ್ಯನವರು ಮುಂಚೂಣಿ ಸಾಲಿನಲ್ಲಿ ನಿಲ್ಲುತ್ತಾರೆ ಎಂದರು.

ಉಪನ್ಯಾಸಕರಾಗಿ ಚಿರ್ಚನಕಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಟಿ.ಡಿ ಲಮಾಣಿ ಮಾತನಾಡಿ, ಅಂಬಿಗರ ಚೌಡಯ್ಯನವರ ಕ್ರಾಂತಿಕಾರಿ ಮಾತುಗಳನ್ನು ಮತ್ತು ಅತ್ಯಂತ ಕಠಿಣವಾದ ವಚನಗಳನ್ನು ರಚಿಸಿ ಸಮಾಜದ ಸುಧಾರಣೆಗೆ ಯತ್ನಿಸಿದರು.ಅವರಿಗೆ ನಿಜ ಶರಣ ಎಂದು ಬಿರುದು ಕೊಟ್ಟವರು ಬಸವಣ್ಣನವರು.ಸ್ವಾಭಿಮಾನದ ಬದುಕು ಅಂಬಿಗರ ಚೌಡಯ್ಯನವರದಾಗಿತ್ತು.ಅಂಬಿಗ ಸಮಾಜದ ಬಾಂಧವರು ಮಕ್ಕಳಿಗೆ ಶಿಕ್ಷಣ ನೀಡಬೇಕು ಎಂದರು.

ಬಿಇಒ ಬಿ.ಎಸ್.ಸಾವಳಗಿ ಮಾತನಾಡಿ, ಚೌಡಯ್ಯನವರ ಜೀವನ ಮತ್ತು ಅವರು ಬೆಳೆದು ಬಂದ ಹಾದಿ ಅವರ ವಚನಗಳು ಮತ್ತು 12 ನೇ ಶತಮಾನದ ಶರಣರ ಕುರಿತು ಮಾತನಾಡಿದರು.

ಸಮಾಜದ ಮುಖಂಡ ವೆಂಕಟೇಶ ಅಂಬಿಗೇರ,ಶಿಕ್ಷಕ ನಾಟೀಕಾರ ಮಾತನಾಡಿದರು. ತಾಲ್ಲೂಕು ಆಡಳಿತದಿಂದ ತಂಗಡಗಿ ರಸ್ತೆಯಲ್ಲಿರುವ ಚೌಡಯ್ಯನವರ ಮೂರ್ತಿಗೆ ಪೂಜೆ ಸಲ್ಲಿಸಿ ವಾದ್ಯಮೇಳದ ಮೂಲಕ ಬಸವೇಶ್ವರ ವೃತ್ತ,ಚನ್ನಮ್ಮ ದ್ವಾರದ ಮೂಲಕ ತಹಶೀಲ್ದಾರ ಕಚೇರಿಗೆ ಆಗಮಿಸಿ ಚೌಡಯ್ಯನವರ ಭಾವಚಿತ್ರಕ್ಕೆ ಅಧಿಕಾರಿಗಳು ಪೂಜೆ ಸಲ್ಲಿಸಿದರು.


ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕ ಶಿವಾನಂದ ಮೇಟಿ,ಅಕ್ಷರ ದಾಸೋಹ ನಿರ್ದೇಶಕ ಎಂ.ಎo.ಬೆಳಗಲ್ಲ, ಪಿಡಬ್ಲೂಡಿ ಇಲಾಖೆಯ ಮುತ್ತು ಢವಳಗಿ, ಆರೋಗ್ಯ ಇಲಾಖೆಯ ಅನಸೂಯಾ ತೇರದಾಳ, ಸಮಾಜದ ಅಧ್ಯಕ್ಷ ಚಂದ್ರಶೇಖರ ಅಂಬಿಗೇರ,ನಿAಗಣ್ಣ ಕಟ್ಟಿಮನಿ,ಸಂದೀಪ ಬಿದರಕೋಟಿ,ಸಾಯಬಣ್ಣ ಕಟ್ಟಿಮನಿ,ನಾಗೇಶ ದನಗೊಂಡ,ಶಿವಪ್ಪ ಚಿಮ್ಮಲಗಿ,ಭಿಮಣ್ಣ ಹಿರೇಅಂಬಿಗೇರ,ಹಣಮoತರಾಯ ನಾಟೀಕಾರ,ಚಂದ್ರಕಾoತ ಮನಗೂಳಿ,ಸಾಗರ.ಎಂ.ಉಕ್ಕಲಿ, ರಾಜಶೇಖರ ಮನಗೂಳಿ, ಸುನೀಲ್ ಎಂ.ಉಕ್ಕಲಿ,ಮೋಹನ ತಳವಾರ, ಸಿದ್ದಪ್ಪ ತಳವಾರ, ಸಂದೀಪ್ ಮನಗೂಳಿ, ಯಲ್ಲಪ್ಪ ಅಂಬಿಗೇರ,ಸಿದ್ದಣ ಶಾಸ್ತ್ರಿ,ಆನಂದ,ಸೇರಿದoತೆ ಸಮಾಜದ ಅನೇಕರು ಉಪಸ್ಥಿತರಿದ್ದರು.

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ