ವಚನಗಳಿಂದ ಸಮಾಜ ಸುಧಾರಣೆ-ತಹಶೀಲ್ದಾರ್ ಚಾಲಕ್

ವಚನಗಳಿಂದ ಸಮಾಜ ಸುಧಾರಣೆ-ತಹಶೀಲ್ದಾರ್ ಚಾಲಕ್

ಮುದ್ದೇಬಿಹಾಳ : ಹನ್ನೆರಡನೇ ಶತಮಾನದಲ್ಲಿದ್ದ ವಚನಕಾರರು ರಚಿಸಿರುವ ವಚನಗಳಿಂದ ಸಮಾಜದ ಸುಧಾರಣೆ ಆಗಿದೆ.ನಂಬಿಕೆಗೆ ಮತ್ತೊಂದು ಹೆಸರು ನಿಜ ಶರಣ ಅಂಬಿಗರ ಚೌಡಯ್ಯನವರು ಎಂದು ತಹಶೀಲ್ದಾರ ಕೀರ್ತಿ ಚಾಲಕ್ ಹೇಳಿದರು.
ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಬುಧವಾರ ತಾಲ್ಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ನಿಜ ಶರಣ ಅಂಬಿಗರ ಚೌಡಯ್ಯನವರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಮಾಜದಲ್ಲಿದ್ದ ಅನಿಷ್ಟ ಪದ್ಧತಿಗಳಿಗೆ ವಚನಗಳ ಮೂಲಕ ಪರಿಹಾರ ಕಂಡುಕೊoಡವರು ಶರಣರು.ಅಂತಹ ವಚನಕಾರರಲ್ಲಿ ಅಂಬಿಗರ ಚೌಡಯ್ಯನವರು ಮುಂಚೂಣಿ ಸಾಲಿನಲ್ಲಿ ನಿಲ್ಲುತ್ತಾರೆ ಎಂದರು.

ಉಪನ್ಯಾಸಕರಾಗಿ ಚಿರ್ಚನಕಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಟಿ.ಡಿ ಲಮಾಣಿ ಮಾತನಾಡಿ, ಅಂಬಿಗರ ಚೌಡಯ್ಯನವರ ಕ್ರಾಂತಿಕಾರಿ ಮಾತುಗಳನ್ನು ಮತ್ತು ಅತ್ಯಂತ ಕಠಿಣವಾದ ವಚನಗಳನ್ನು ರಚಿಸಿ ಸಮಾಜದ ಸುಧಾರಣೆಗೆ ಯತ್ನಿಸಿದರು.ಅವರಿಗೆ ನಿಜ ಶರಣ ಎಂದು ಬಿರುದು ಕೊಟ್ಟವರು ಬಸವಣ್ಣನವರು.ಸ್ವಾಭಿಮಾನದ ಬದುಕು ಅಂಬಿಗರ ಚೌಡಯ್ಯನವರದಾಗಿತ್ತು.ಅಂಬಿಗ ಸಮಾಜದ ಬಾಂಧವರು ಮಕ್ಕಳಿಗೆ ಶಿಕ್ಷಣ ನೀಡಬೇಕು ಎಂದರು.

ಬಿಇಒ ಬಿ.ಎಸ್.ಸಾವಳಗಿ ಮಾತನಾಡಿ, ಚೌಡಯ್ಯನವರ ಜೀವನ ಮತ್ತು ಅವರು ಬೆಳೆದು ಬಂದ ಹಾದಿ ಅವರ ವಚನಗಳು ಮತ್ತು 12 ನೇ ಶತಮಾನದ ಶರಣರ ಕುರಿತು ಮಾತನಾಡಿದರು.

ಸಮಾಜದ ಮುಖಂಡ ವೆಂಕಟೇಶ ಅಂಬಿಗೇರ,ಶಿಕ್ಷಕ ನಾಟೀಕಾರ ಮಾತನಾಡಿದರು. ತಾಲ್ಲೂಕು ಆಡಳಿತದಿಂದ ತಂಗಡಗಿ ರಸ್ತೆಯಲ್ಲಿರುವ ಚೌಡಯ್ಯನವರ ಮೂರ್ತಿಗೆ ಪೂಜೆ ಸಲ್ಲಿಸಿ ವಾದ್ಯಮೇಳದ ಮೂಲಕ ಬಸವೇಶ್ವರ ವೃತ್ತ,ಚನ್ನಮ್ಮ ದ್ವಾರದ ಮೂಲಕ ತಹಶೀಲ್ದಾರ ಕಚೇರಿಗೆ ಆಗಮಿಸಿ ಚೌಡಯ್ಯನವರ ಭಾವಚಿತ್ರಕ್ಕೆ ಅಧಿಕಾರಿಗಳು ಪೂಜೆ ಸಲ್ಲಿಸಿದರು.


ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕ ಶಿವಾನಂದ ಮೇಟಿ,ಅಕ್ಷರ ದಾಸೋಹ ನಿರ್ದೇಶಕ ಎಂ.ಎo.ಬೆಳಗಲ್ಲ, ಪಿಡಬ್ಲೂಡಿ ಇಲಾಖೆಯ ಮುತ್ತು ಢವಳಗಿ, ಆರೋಗ್ಯ ಇಲಾಖೆಯ ಅನಸೂಯಾ ತೇರದಾಳ, ಸಮಾಜದ ಅಧ್ಯಕ್ಷ ಚಂದ್ರಶೇಖರ ಅಂಬಿಗೇರ,ನಿAಗಣ್ಣ ಕಟ್ಟಿಮನಿ,ಸಂದೀಪ ಬಿದರಕೋಟಿ,ಸಾಯಬಣ್ಣ ಕಟ್ಟಿಮನಿ,ನಾಗೇಶ ದನಗೊಂಡ,ಶಿವಪ್ಪ ಚಿಮ್ಮಲಗಿ,ಭಿಮಣ್ಣ ಹಿರೇಅಂಬಿಗೇರ,ಹಣಮoತರಾಯ ನಾಟೀಕಾರ,ಚಂದ್ರಕಾoತ ಮನಗೂಳಿ,ಸಾಗರ.ಎಂ.ಉಕ್ಕಲಿ, ರಾಜಶೇಖರ ಮನಗೂಳಿ, ಸುನೀಲ್ ಎಂ.ಉಕ್ಕಲಿ,ಮೋಹನ ತಳವಾರ, ಸಿದ್ದಪ್ಪ ತಳವಾರ, ಸಂದೀಪ್ ಮನಗೂಳಿ, ಯಲ್ಲಪ್ಪ ಅಂಬಿಗೇರ,ಸಿದ್ದಣ ಶಾಸ್ತ್ರಿ,ಆನಂದ,ಸೇರಿದoತೆ ಸಮಾಜದ ಅನೇಕರು ಉಪಸ್ಥಿತರಿದ್ದರು.

Latest News

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ ಸಹಕಾರದಿಂದ ಗಣತಿ ನಮೂನೆಗಳ ವಿತರಣೆ ಕಾರ್ಯದಲ್ಲಿ ಮುದ್ದೇಬಿಹಾಳ ಮತಕ್ಷೇತ್ರ ಶೇ.98.38ರಷ್ಟು ಸಾಧನೆ ಮಾಡಿ ವಿಜಯಪುರ ಜಿಲ್ಲೆಗೆ ಎರಡನೇ ಸ್ಥಾನ ಪಡೆದುಕೊಂಡಿದೆ ಎಂದು ಮತದಾರರ ನೋಂದಣಾಧಿಕಾರಿ,ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯ ಕುರಿತು ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.2,28,285 ಮತದಾರರಲ್ಲಿ 2,24,589 ಮತದಾರರಿಗೆ ಗಣತಿ ನಮೂನೆ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ