ರೈತರ ಪಂಪಸೆಟ್‌ಗೆ ವಿದ್ಯುತ್ ಕಡಿತಗೊಳಿಸಬೇಡಿ

ರೈತರ ಪಂಪಸೆಟ್‌ಗೆ ವಿದ್ಯುತ್ ಕಡಿತಗೊಳಿಸಬೇಡಿ

ಮುದ್ದೇಬಿಹಾಳ : ಪಂಪಸೆಟ್ ಹೊಂದಿರುವ ರೈತರು 2018ರಲ್ಲಿ 50 ರೂ.ತುಂಬಿಸಿಕೊoಡು ಆರ್.ಆರ್ ನಂಬರ್ ಸಹಿತ ವಿದ್ಯುತ್‌ನ್ನು ಪಂಪಸೆಟ್‌ಗಳಿಗೆ ಒದಗಿಸಲಾಗಿತ್ತು.ಈಗ ಏಕಾಏಕಿ ಡೆಪಾಸಿಟ್ ಹಣ ತುಂಬದಿದ್ದರೆ ಪಂಪಸೆಟ್‌ಗಳಿಗೆ ವಿದ್ಯುತ್ ಕಡಿತಗೊಳಿಸುವ ಕಾರ್ಯತಂತ್ರ ಹೆಸ್ಕಾಂನಿoದ ನಡೆದಿದ್ದು ಇದು ಮುಂದುವರೆದರೆ ರೈತ ಸಂಘಟನೆಗಳಿoದ ಉಗ್ರ ಹೋರಾಟ ನಡೆಸುವ ಎಚ್ಚರಿಕೆಯನ್ನು ರೈತ ಮುಖಂಡರು ನೀಡಿದ್ದಾರೆ.

ಪಟ್ಟಣದ ಹೆಸ್ಕಾಂ ಕಚೇರಿಗೆ ಆಗಮಿಸಿದ್ದ ಹಂಡರಗಲ್,ಯರಝರಿ,ಹಿರೇಮುರಾಳ ಮೊದಲಾದ ಗ್ರಾಮಗಳ ರೈತರು ಹೆಸ್ಕಾಂ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದರು. ಪಂಪಸೆಟ್‌ಗೆ 18,000 ರೂ. ಡಿಪಾಸೆಟ್ ತುಂಬಲು ಹಾಗೂ ಆರ್.ಆರ್.ನಂಬರ್ ಇಲ್ಲದವರಿಗೆ ಪ್ರತಿ ಪಂಪಸೆಟ್‌ಗೆ 36,000 ರೂ.ಡಿಪಾಸಿಟ್ ತುಂಬಲು ರೈತರಿಗೆ ಆದೇಶ ಮಾಡಿದ್ದಾರೆ.ಅಲ್ಲದೇ ಅವಧಿ ಎರಡು ದಿನಗಳ ಕಾಲಾವಕಾಶ ನೀಡಿದ್ದಾರೆ.ಒಂದು ಕಡೆ ಜನರು ಕೇಳದೇ ಇದ್ದರೂ ವಿದ್ಯುತ್ ಉಚಿತವಾಗಿ ಕೊಡುತ್ತಿರುವ ಸರ್ಕಾರ ಇನ್ನೊಂದೆಡೆ ರೈತರು ಬೆಳೆಯುತ್ತಿರುವ ಬೆಳೆಗಳಿಗೆ ವಿದ್ಯುತ್ ಸ್ಥಗಿತಗೊಳಿಸುವ ಕಾರ್ಯಕ್ಕೆ ಮುಂದಾಗುತ್ತಿದೆ ಎಂದು ರೈತ ಮುಖಂಡ ಸಂಗಣ್ಣ ಬಾಗೇವಾಡಿ ಹೇಳಿದರು.

2018ರಲ್ಲಿ 50 ರೂ.ಗಳಲ್ಲಿ ಆರ್.ಆರ್ ನಂಬರ್ ಪಡೆದುಕೊಳ್ಳಬಹುದು ಎಂದು ತಿಳಿಸಲಾಗಿತ್ತು.ಆದರೆ ಈಗ ಆದೇಶ ಮಾರ್ಪಡಿಸಿ ಡಿಪಾಸಿಟ್ ಹಣವನ್ನು ತುಂಬುವoತೆ ಅಧಿಕಾರಿಗಳ ಮೂಲಕ ಸರ್ಕಾರ ಒತ್ತಡ ಹೇರುತ್ತಿದೆ ಎಂದು ಆರೋಪಿಸಿದರು.
ಈಗ ಹೊಲದಲ್ಲಿ ಬೆಳೆಗಳ ಕಟಾವಿನ ಸಮಯವಾಗಿದ್ದು ವಿದ್ಯುತ್ ಕಡಿತಗೊಳಿಸಿದರೆ ರೈತರಿಗೆ ತೊಂದರೆಯಾಗುತ್ತದೆ.ಮೊದಲಿನ 2018ರಲ್ಲಿ ಮಾಡಿರುವ ಆದೇಶವನ್ನೆ ಮುಂದುವರೆಸಬೇಕು.ಇಲ್ಲದಿದ್ದರೆ ರೈತರು ರಾಜ್ಯಾದ್ಯಂತ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಹೆಸ್ಕಾಂ ಎಇಇ ಆರ್.ಎನ್.ಹಾದಿಮನಿ ಮಾತನಾಡಿ, ಸದ್ಯಕ್ಕೆ ಯಾವುದೇ ರೈತರ ಟಿಸಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಆದೇಶ ಮಾಡಿಲ್ಲ.ಒಂದು ವಾರ ಕಾಲಾವಕಾಶ ಇದ್ದು ಪಂಪಸೆಟ್ ಸಾಮರ್ಥ್ಯದ ಆಧಾರದ ಮೇಲೆ ಡೆಪಾಸಿಟ್ ಕಟ್ಟಬೇಕಿರುವುದು ಕಡ್ಡಾಯವಾಗಿರುತ್ತದೆ ಎಂದು ತಿಳಿಸಿದರು.
ಮನವಿ ಸಲ್ಲಿಸುವ ಸಮಯದಲ್ಲಿ ರೈತ ಮುಖಂಡರಾದ ವಾಯ್.ಎಲ್.ಬಿರಾದಾರ, ಸಂಗಪ್ಪ ಹಂಡರಗಲ್, ಅಯ್ಯಪ್ಪ ಬಿದರಕುಂದಿ, ಬಸನಗೌಡ ಪಾಟೀಲ ಮೊದಲಾದವರು ಇದ್ದರು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು