500-1000 ರೂ.ಗೆ ಓಟು ಮಾರಿಕೊಳ್ಳಬೇಡಿ- ತಹಶೀಲ್ದಾರ್ ಚಾಲಕ್

500-1000 ರೂ.ಗೆ ಓಟು ಮಾರಿಕೊಳ್ಳಬೇಡಿ- ತಹಶೀಲ್ದಾರ್ ಚಾಲಕ್

ಮುದ್ದೇಬಿಹಾಳ : 500-1000 ರೂ.ಗಳಿಗೆ ನಿಮ್ಮ ಓಟು ಮಾರಿಕೊಂಡರೆ ಐದು ವರ್ಷಗಳ ಕಾಲ ಅವರು ನಿಮ್ಮನ್ನು ಆಳುತ್ತಾರೆ ಎಂಬುದನ್ನು ಮರೆಯಬೇಡಿ.ಒಳ್ಳೆಯವರನ್ನು ಚುನಾಯಿಸುವ ಅಧಿಕಾರ ಸಂವಿಧಾನ ನಿಮಗೆ ನೀಡಿದ್ದು ಅದನ್ನು ಸಮರ್ಥ ವ್ಯಕ್ತಿಯ ಆಯ್ಕೆಗೆ ಬಳಸಿಕೊಳ್ಳಿ ಎಂದು ತಹಶೀಲ್ದಾರ್ ಕೀರ್ತಿ ಚಾಲಕ್ ಹೇಳಿದರು.

ಪಟ್ಟಣದ ಸರ್ಕಾರಿ ಪಪೂ ಕಾಲೇಜಿನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ರಾಷ್ಟಿçÃಯ ಮತದಾರರ ದಿನಾಚರಣೆಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮುದ್ದೇಬಿಹಾಳ ಮತಕ್ಷೇತ್ರದಲ್ಲಿ 246 ಮತಗಟ್ಟೆಗಳಿದ್ದು ಒಟ್ಟು 2,30,196 ಲಕ್ಷ ಮತದಾರರು ಅರ್ಹರಿದ್ದು 1,15,094 ಪುರುಷರು, 1,15,020, ಮಂಗಳಮುಖಿಯರು 32 ಜನ ಇದ್ದಾರೆ ಎಂದು ಮಾಹಿತಿ ನೀಡಿದರು.
ಹಿರಿಯ ಸಿವ್ಹಿಲ್ ನ್ಯಾಯಾಧೀಶ ರವೀಂದ್ರಕುಮಾರ ಕಟ್ಟಿಮನಿ ಮಾತನಾಡಿ, ಚುನಾವಣೆಗಳಲ್ಲಿ ಪ್ರಭಾವವನ್ನು ಬೀರುವ ಕೆಲಸವನ್ನು ರಾಜಕಾರಣಿಗಳು ಮತದಾರರಿಗೆ ಮಾಡುತ್ತಾರೆ.ಆದರೆ ಪ್ರಭಾವಕ್ಕೆ ಒಳಗಾಗದೇ ಪ್ರಾಮಾಣಿಕವಾಗಿ ಉತ್ತಮ ವ್ಯಕ್ತಿಗಳನ್ನು ಚುನಾಯಿಸುವ ಕೆಲಸ ಮತದಾರರು ಮಾಡಬೇಕು.ಚುನಾವಣೆಯಲ್ಲಿ ಲಂಚ ನೀಡುವುದು, ಪ್ರಭಾವ ಬೀರುವ ಅಪರಾಧಗಳಿಗೆ ಬಿಎನ್‌ಎಸ್ ಕಾಯ್ದೆಯಲ್ಲಿ ಶಿಕ್ಷೆ ವಿಧಿಸಬಹುದಾಗಿದೆ ಎಂದರು.

ಹಿರಿಯ ವಕೀಲರಾದ ಎನ್.ಬಿ.ಮುದ್ನಾಳ ಮತದಾನ ಮಹತ್ವದ ಕುರಿತು ಉಪನ್ಯಾಸ ನೀಡಿದರು.ತಾಪಂ ಇಒ ವೆಂಕಟೇಶ ವಂದಾಲ, ವಕೀಲರ ಸಂಘದ ಅಧ್ಯಕ್ಷ ಎಸ್.ಎಸ್.ಮಾಲಗತ್ತಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಣ ಪರಿವೀಕ್ಷಕ ಎ.ಜೆ.ದಖನಿ,ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪಿ.ಬಿ.ಗೌಡರ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ಡಿ.ಭಾವಿಕಟ್ಟಿ, ಅರಣ್ಯ ಇಲಾಖೆಯ ಅಧಿಕಾರಿ ಬಸನಗೌಡ ಬಿರಾದಾರ, ನ್ಯಾಯಾಲಯದ ಸಿಬ್ಬಂದಿ ಅರವಿಂದ ಕುಂಬಾರ ಇದ್ದರು.ಎಸ್.ಜಿ.ಲೊಟಗೇರಿ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಉತ್ತಮ ಬಿಎಲ್‌ಒಗಳಾಗಿ ಸೇವೆ ಸಲ್ಲಿಸಿದ ಬಿ.ಎಂ.ಲಮಾಣಿ, ಸಿ.ಕೆ.ಪತ್ತಾರ, ಪರಶುರಾಮ ಮೇಟಿ,ಬಿ.ಆಯ್.ಗಣಿಹಾರ ಅವರನ್ನು ಸನ್ಮಾನಿಸಲಾಯಿತು.ಇದೇ ವೇಳೆ ಮತದಾರರ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ್ದ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಮತದಾನದ ಕುರಿತು ಅರಿವು ಮೂಡಿಸಿದ ಹಡಲಗೇರಿ ವಸತಿಯುಕ್ತ ಪದವಿ ಕಾಲೇಜಿನ ಉಪನ್ಯಾಸಕ ರವಿ ಕಟ್ಟಿಮನಿ ಅವರನ್ನು ಸನ್ಮಾನಿಸಲಾಯಿತು.

Latest News

ಶಿಕ್ಷಕ,ಶಿಕ್ಷಕಿಯರಿಗೆ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ;                                                ಮಕ್ಕಳ ಬಾಲ್ಯವನ್ನು ಕಸಿದುಕೊಳ್ಳುವುದು ಬೇಡ-ನಾಗರಳ್ಳಿ

ಶಿಕ್ಷಕ,ಶಿಕ್ಷಕಿಯರಿಗೆ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ; ಮಕ್ಕಳ ಬಾಲ್ಯವನ್ನು ಕಸಿದುಕೊಳ್ಳುವುದು ಬೇಡ-ನಾಗರಳ್ಳಿ

ಮುದ್ದೇಬಿಹಾಳ : ನಾವು ಶಿಕ್ಷಣ ಕೊಡುವ ನೆಪದಲ್ಲಿ ನಮ್ಮ ಮಕ್ಕಳ ಬಾಲ್ಯವನ್ನು ಕಸಿದುಕೊಳ್ಳುತ್ತಿದ್ದೇವೆ.ಅವರು ಆಟಗಳಲ್ಲಿ

ವಿಜಯಪುರ ಡಿಡಿಪಿಐ ಕಚೇರಿ 14 ಸಿಬ್ಬಂದಿ ಎತ್ತಂಗಡಿ..!

ವಿಜಯಪುರ ಡಿಡಿಪಿಐ ಕಚೇರಿ 14 ಸಿಬ್ಬಂದಿ ಎತ್ತಂಗಡಿ..!

ವಿಜಯಪುರ : ಧಾರವಾಡದ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರ ಕಚೇರಿಯಿಂದ ಅ.3 ,

ಗುರು,ಹಿರಿಯರಿಗೆ ಕೊಡುವ ಗೌರವವೇ ದೇವರ ಪೂಜೆ-ನವಲಿ

ಗುರು,ಹಿರಿಯರಿಗೆ ಕೊಡುವ ಗೌರವವೇ ದೇವರ ಪೂಜೆ-ನವಲಿ

ಮುದ್ದೇಬಿಹಾಳ : ಗುರು ಹಿರಿಯರಿಗೆ ಕೊಡುವ ಗೌರವವೇ ನಿಜವಾದ ದೇವರ ಪೂಜೆ ಎಂದು ಗುಡಿಹಾಳದ

ಜ.24 ರಂದು ಸಾವಿತ್ರಿ ಬಾಯಿ ಫುಲೆ ಜಯಂತಿ: ಉತ್ತಮ ಶಿಕ್ಷಕ,ಶಿಕ್ಷಕಿಯರಿಗೆ ಪ್ರಶಸ್ತಿ

ಜ.24 ರಂದು ಸಾವಿತ್ರಿ ಬಾಯಿ ಫುಲೆ ಜಯಂತಿ: ಉತ್ತಮ ಶಿಕ್ಷಕ,ಶಿಕ್ಷಕಿಯರಿಗೆ ಪ್ರಶಸ್ತಿ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದಿAದ ಸಾವಿತ್ರಿಬಾಯಿ ಫುಲೆ ಜಯಂತಿ

ಡಿಜಿಟಲ್ ಇ-ಸ್ಟ್ಯಾಂಪ್ ತರಬೇತಿ;                                           ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಮಾಹಿತಿ

ಡಿಜಿಟಲ್ ಇ-ಸ್ಟ್ಯಾಂಪ್ ತರಬೇತಿ; ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಮಾಹಿತಿ

ಮುದ್ದೇಬಿಹಾಳ : ಉಪ ನೋಂದಣಿ ಕಛೇರಿಯಲ್ಲಿ ನೋಂದಾಯಿತವಲ್ಲದ ಡಿಜಿಟಲ್ ಈ ಸ್ಟ್ಯಾಂಪಿoಗ್ ಆನ್‌ಲೈನ್‌ನಲ್ಲಿ ಸೇವೆ ಸಲ್ಲಿಸುವ ಕುರಿತು ತರಬೇತಿ ಕಾರ್ಯಕ್ರಮ ಈಚೇಗೆ ಜರುಗಿತು. ಜಿಲ್ಲಾ ನೋಂದಣಿ ಇಲಾಖೆಯ ಅಭಿಯಂತರ ಚಂದ್ರಶೇಖರ ಕೊಣ್ಣೂರ,ತಹಶೀಲ್ದಾರ್ ಕೀರ್ತಿ ಚಾಲಕ್, ಉಪ ನೋಂದಣಾಧಿಕಾರಿ ಸಚಿನ ಖೈನೂರ ಅವರು ತಿಳಿವಳಿಕೆ ನೀಡಿದರು. ದಸ್ತು ಬರಹಗಾರ ಸಂಘದ ಅಧ್ಯಕ್ಷ ಎಚ್.ಆರ್.ಬಾಗವಾನ ಮಾತನಾಡಿ, ಡಿಜಿಟಲ್ ಈ ಸ್ಟ್ಯಾಂಪ ಯಾವ ರೀತಿ ಪಡೆದುಕೊಳ್ಳಬೇಕು ಎಂಬುದರ ಕುರಿತು ಮಾಹಿತಿ ನೀಡಿದರು.ವಿಜಯಪುರ ಜಿಲ್ಲಾ ನೋಂದಣಾಧಿಕಾರಿ

ನಕ್ಕು ನಗೆಗಡಲಲ್ಲಿ ತೇಲಿಸಿ ವೈಚಾರಿಕತೆಯತ್ತ ಸೆಳೆದೊಯ್ದ ‘ಕಳ್ಳರ ಸಂತೆ’

ನಕ್ಕು ನಗೆಗಡಲಲ್ಲಿ ತೇಲಿಸಿ ವೈಚಾರಿಕತೆಯತ್ತ ಸೆಳೆದೊಯ್ದ ‘ಕಳ್ಳರ ಸಂತೆ’

ಶoಕರ ಈ.ಹೆಬ್ಬಾಳಮುದ್ದೇಬಿಹಾಳ : ಹೌದು.ಅಕ್ಷರಶಃ ಈ ಸಾಮಾಜಿಕ ವ್ಯವಸ್ಥೆಯಲ್ಲಿ ಪ್ರಮುಖ ಸ್ತರದಲ್ಲಿರುವ ಹುದ್ದೆಗಳಲ್ಲಿರುವವರು ಪ್ರಾಮಾಣಿಕರೇ,ದಕ್ಷರೋ ಎಂದು ಒರೆಗಲ್ಲಿಗೆ ಹಚ್ಚಿ ನವೀರಾದ ಹಾಸ್ಯದ ಮೂಲಕ ಪ್ರೇಕ್ಷಕರನ್ನು ನಕ್ಕು ನಗಿಸಿದ ಕಳ್ಳರ ಸಂತೆ ನಾಟಕ ವೈಚಾರಿಕ ಚಿಂತನೆಗೆ ಹಚ್ಚಿತು. ರಾಜ್ಯದಲ್ಲಿ ತೀವ್ರ ಬರಗಾಲ ಬಿದ್ದ ಸಮಯದಲ್ಲಿ ಅರಮನೆಯಲ್ಲಿನ ಖಜಾನೆ ಲೂಟಿಗೆ ಬರುವ ಕಳ್ಳರಿಬ್ಬರಲ್ಲಿ ಓರ್ವ ಕಳ್ಳ ತಾನು ನಂಬಿದ ವಿದ್ಯೆಯನ್ನು ತನ್ನ ಜೀವ ಉಳಿಸಿಕೊಳ್ಳುವುದರೊಂದಿಗೆ ಸಮಾಜದಲ್ಲಿ ವ್ಯವಸ್ಥೆ ಎಷ್ಟೊಂದು ಹದಗೆಟ್ಟಿದೆ ಎಂಬುದನ್ನು ನಾಟಕ