ಅರಣ್ಯ ಇಲಾಖೆ ಅಧಿಕಾರಿಗಳ ಸ್ಪಷ್ಟನೆ; ಮದರಿಯಲ್ಲಿ ಚಿರತೆ ಪ್ರತ್ಯಕ್ಷ ಫೋಟೋ ಅಸಲಿ ಅಲ್ಲ..!!

ಅರಣ್ಯ ಇಲಾಖೆ ಅಧಿಕಾರಿಗಳ ಸ್ಪಷ್ಟನೆ; ಮದರಿಯಲ್ಲಿ ಚಿರತೆ ಪ್ರತ್ಯಕ್ಷ ಫೋಟೋ ಅಸಲಿ ಅಲ್ಲ..!!

ಮುದ್ದೇಬಿಹಾಳ : ಸಾಮಾಜಿಕ ಜಾಲತಾಣಗಳ ಮೂಲಕ ಮದರಿ ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿದೆ ಎನ್ನಲಾದ ಫೋಟೋ ಕೃತಕವಾಗಿ ಚಿತ್ರಿಸಿದ್ದು ಆ ಸ್ಥಳದಲ್ಲಿ ಚಿರತೆ ಕಾಣಿಸಿಕೊಂಡಿಲ್ಲ ಎಂದು ಪ್ರಾದೇಶಿಕ ಅರಣ್ಯ ಇಲಾಖೆಯ ಅಧಿಕಾರಿ ಬಸನಗೌಡ ಬಿರಾದಾರ ಸ್ಪಷ್ಟಪಡಿಸಿದ್ದಾರೆ.

ಚಿರತೆ ಕಾಣಿಸಿಕೊಂಡಿದ ಎಂದು ಗ್ರಾಮದ ಯುವಕ ಶಿವು ಕನ್ನೊಳ್ಳಿ ಎಂಬುವರು ತಮ್ಮ ಸ್ನೇಹಿತರ ಮೂಲಕ ಮಾಹಿತಿ ಪಡೆದುಕೊಂಡು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊoಡಿದ್ದ ಫೋಟೋ ಅಸಲಿ ಅಲ್ಲ.ಸದರಿ ಸ್ಥಳಕ್ಕೆ ನಮ್ಮ ಇಲಾಖೆಯ ಗಸ್ತು ಪಾಲಕ ವಿಠಲ ಬೋರಟಗಿ ಅವರನ್ನು ಕಳಿಸಿ ಪರಿಶೀಲನೆ ನಡೆಸಿದ್ದು ಅಲ್ಲಿ ಚಿರತೆ ಓಡಾಡಿದ ಯಾವುದೇ ಕುರುಹುಗಳಿಲ್ಲ.ಅಲ್ಲದೇ ಸದರಿ ಸ್ಥಳದ ಕಿರುಸೇತುವೆ ಹಿಂದೆ ಆಳವಾದ ಗುಂಡಿ ಇದ್ದು ಏಳೆಂಟು ಫೂಟ ಎತ್ತರ ಇರುವ ವ್ಯಕ್ತಿ ನಿಂತರೂ ಕಾಣುವುದಿಲ್ಲ.ಚಿರತೆ ಕಾಣಿಸಿಕೊಂಡಿರುವ ಕುರಿತು ಸ್ಪಷ್ಟವಾಗಿ ಯಾರೂ ಹೇಳುತ್ತಿಲ್ಲ.ಹೀಗಾಗಿ ಗ್ರಾಮಸ್ಥರು ಚಿರತೆ ಕಂಡಿದೆ ಎಂಬ ಸುದ್ದಿ ಬಗ್ಗೆ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದ್ದಾರೆ.

ಸುಳ್ಳು ವದಂತಿ ಹರಡಿಸಿದವರ ಮೇಲೆ ಕ್ರಮ: ಚಿರತೆ ಬಂದಿದೆ ಎಂದು ಸುಳ್ಳು ವದಂತಿ ಹಬ್ಬಿಸಿ ಅರಣ್ಯ ಇಲಾಖೆಯವರಿಗೆ ಹಾಗೂ ಗ್ರಾಮಸ್ಥರಿಗೆ ಆತಂಕವನ್ನುoಟು ಮಾಡುವ ವ್ಯಕ್ತಿಗಳ ಮೇಲೆ ಅರಣ್ಯ ಇಲಾಖೆಯ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆಯ ಅಧಿಕಾರಿ ಬಸನಗೌಡ ಬಿರಾದಾರ ತಿಳಿಸಿದ್ದಾರೆ.ಮಾಹಿತಿ ಹಂಚಿಕೊoಡವರಿಗೆ ಮೊದಲು ನೋಟಿಸ್ ನೀಡಿ ಲಿಖಿತ ಹೇಳಿಕೆ ಪಡೆದುಕೊಳ್ಳುತ್ತೇವೆ.ಹೇಳಿಕೆ ಅಸ್ಪಷ್ಟವಾಗಿದ್ದರೆ ಅವರ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡುತ್ತೇವೆ ಎಂದು ಹೇಳಿದರು.


ಗ್ರಾಮಸ್ಥರ ಸ್ಪಷ್ಟನೆ: ಚಿರತೆ ಕಂಡಿದೆ ಎಂದು ಹಂಚಿಕೊಳ್ಳಲಾದ ಫೋಟೋ ಅಸಲಿ ಅಲ್ಲ ಎಂಬುದು ನಮಗೆ ತಡವಾಗಿ ಗೊತ್ತಾಯಿತು.ಕೆಲವು ಕಿಡಿಗೇಡಿಗಳು ಚಿರತೆ ಕಂಡಿದೆ ಎಂದು ಮಾತನಾಡಿದ್ದನ್ನೆ ಫೋಟೋ ಎಡಿಟ್ ಮಾಡಿ ಗ್ರಾಮಸ್ಥರಲ್ಲಿ ವಿನಾಕಾರಣ ಆತಂಕ ಹರಡುವಂತೆ ಮಾಡಿದ್ದಾರೆ.ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊAಡಿರುವ ಫೋಟೋ ಅಸಲಿ ಅಲ್ಲ.ಆದರೆ ಈ ಭಾಗದಲ್ಲಿ ಚಿರತೆ ಓಡಾಡಿರುವುದನ್ನು ಹಲವರು ಕಂಡಿದ್ದಾರೆ.ಹಳ್ಳದ ಬಳಿ ನೀರುನಾಯಿಗಳಿದ್ದು ಅವುಗಳ ಬೇಟೆಗೆ ಚಿರತೆ ಬಂದು ಹೋಗಿರುವ ಉದಾಹರಣೆಗಳು ಇವೆ ಎಂದು ಮದರಿ ಗ್ರಾಮದ ಮುಖಂಡ ಶಿವು ಕನ್ನೊಳ್ಳಿ ಸ್ಪಷ್ಟಪಡಿಸಿದ್ದಾರೆ.

Latest News

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ ಸಹಕಾರದಿಂದ ಗಣತಿ ನಮೂನೆಗಳ ವಿತರಣೆ ಕಾರ್ಯದಲ್ಲಿ ಮುದ್ದೇಬಿಹಾಳ ಮತಕ್ಷೇತ್ರ ಶೇ.98.38ರಷ್ಟು ಸಾಧನೆ ಮಾಡಿ ವಿಜಯಪುರ ಜಿಲ್ಲೆಗೆ ಎರಡನೇ ಸ್ಥಾನ ಪಡೆದುಕೊಂಡಿದೆ ಎಂದು ಮತದಾರರ ನೋಂದಣಾಧಿಕಾರಿ,ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯ ಕುರಿತು ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.2,28,285 ಮತದಾರರಲ್ಲಿ 2,24,589 ಮತದಾರರಿಗೆ ಗಣತಿ ನಮೂನೆ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ