ಅರಣ್ಯ ಇಲಾಖೆ ಅಧಿಕಾರಿಗಳ ಸ್ಪಷ್ಟನೆ; ಮದರಿಯಲ್ಲಿ ಚಿರತೆ ಪ್ರತ್ಯಕ್ಷ ಫೋಟೋ ಅಸಲಿ ಅಲ್ಲ..!!

ಅರಣ್ಯ ಇಲಾಖೆ ಅಧಿಕಾರಿಗಳ ಸ್ಪಷ್ಟನೆ; ಮದರಿಯಲ್ಲಿ ಚಿರತೆ ಪ್ರತ್ಯಕ್ಷ ಫೋಟೋ ಅಸಲಿ ಅಲ್ಲ..!!

ಮುದ್ದೇಬಿಹಾಳ : ಸಾಮಾಜಿಕ ಜಾಲತಾಣಗಳ ಮೂಲಕ ಮದರಿ ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿದೆ ಎನ್ನಲಾದ ಫೋಟೋ ಕೃತಕವಾಗಿ ಚಿತ್ರಿಸಿದ್ದು ಆ ಸ್ಥಳದಲ್ಲಿ ಚಿರತೆ ಕಾಣಿಸಿಕೊಂಡಿಲ್ಲ ಎಂದು ಪ್ರಾದೇಶಿಕ ಅರಣ್ಯ ಇಲಾಖೆಯ ಅಧಿಕಾರಿ ಬಸನಗೌಡ ಬಿರಾದಾರ ಸ್ಪಷ್ಟಪಡಿಸಿದ್ದಾರೆ.

ಚಿರತೆ ಕಾಣಿಸಿಕೊಂಡಿದ ಎಂದು ಗ್ರಾಮದ ಯುವಕ ಶಿವು ಕನ್ನೊಳ್ಳಿ ಎಂಬುವರು ತಮ್ಮ ಸ್ನೇಹಿತರ ಮೂಲಕ ಮಾಹಿತಿ ಪಡೆದುಕೊಂಡು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊoಡಿದ್ದ ಫೋಟೋ ಅಸಲಿ ಅಲ್ಲ.ಸದರಿ ಸ್ಥಳಕ್ಕೆ ನಮ್ಮ ಇಲಾಖೆಯ ಗಸ್ತು ಪಾಲಕ ವಿಠಲ ಬೋರಟಗಿ ಅವರನ್ನು ಕಳಿಸಿ ಪರಿಶೀಲನೆ ನಡೆಸಿದ್ದು ಅಲ್ಲಿ ಚಿರತೆ ಓಡಾಡಿದ ಯಾವುದೇ ಕುರುಹುಗಳಿಲ್ಲ.ಅಲ್ಲದೇ ಸದರಿ ಸ್ಥಳದ ಕಿರುಸೇತುವೆ ಹಿಂದೆ ಆಳವಾದ ಗುಂಡಿ ಇದ್ದು ಏಳೆಂಟು ಫೂಟ ಎತ್ತರ ಇರುವ ವ್ಯಕ್ತಿ ನಿಂತರೂ ಕಾಣುವುದಿಲ್ಲ.ಚಿರತೆ ಕಾಣಿಸಿಕೊಂಡಿರುವ ಕುರಿತು ಸ್ಪಷ್ಟವಾಗಿ ಯಾರೂ ಹೇಳುತ್ತಿಲ್ಲ.ಹೀಗಾಗಿ ಗ್ರಾಮಸ್ಥರು ಚಿರತೆ ಕಂಡಿದೆ ಎಂಬ ಸುದ್ದಿ ಬಗ್ಗೆ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದ್ದಾರೆ.

ಸುಳ್ಳು ವದಂತಿ ಹರಡಿಸಿದವರ ಮೇಲೆ ಕ್ರಮ: ಚಿರತೆ ಬಂದಿದೆ ಎಂದು ಸುಳ್ಳು ವದಂತಿ ಹಬ್ಬಿಸಿ ಅರಣ್ಯ ಇಲಾಖೆಯವರಿಗೆ ಹಾಗೂ ಗ್ರಾಮಸ್ಥರಿಗೆ ಆತಂಕವನ್ನುoಟು ಮಾಡುವ ವ್ಯಕ್ತಿಗಳ ಮೇಲೆ ಅರಣ್ಯ ಇಲಾಖೆಯ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆಯ ಅಧಿಕಾರಿ ಬಸನಗೌಡ ಬಿರಾದಾರ ತಿಳಿಸಿದ್ದಾರೆ.ಮಾಹಿತಿ ಹಂಚಿಕೊoಡವರಿಗೆ ಮೊದಲು ನೋಟಿಸ್ ನೀಡಿ ಲಿಖಿತ ಹೇಳಿಕೆ ಪಡೆದುಕೊಳ್ಳುತ್ತೇವೆ.ಹೇಳಿಕೆ ಅಸ್ಪಷ್ಟವಾಗಿದ್ದರೆ ಅವರ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡುತ್ತೇವೆ ಎಂದು ಹೇಳಿದರು.


ಗ್ರಾಮಸ್ಥರ ಸ್ಪಷ್ಟನೆ: ಚಿರತೆ ಕಂಡಿದೆ ಎಂದು ಹಂಚಿಕೊಳ್ಳಲಾದ ಫೋಟೋ ಅಸಲಿ ಅಲ್ಲ ಎಂಬುದು ನಮಗೆ ತಡವಾಗಿ ಗೊತ್ತಾಯಿತು.ಕೆಲವು ಕಿಡಿಗೇಡಿಗಳು ಚಿರತೆ ಕಂಡಿದೆ ಎಂದು ಮಾತನಾಡಿದ್ದನ್ನೆ ಫೋಟೋ ಎಡಿಟ್ ಮಾಡಿ ಗ್ರಾಮಸ್ಥರಲ್ಲಿ ವಿನಾಕಾರಣ ಆತಂಕ ಹರಡುವಂತೆ ಮಾಡಿದ್ದಾರೆ.ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊAಡಿರುವ ಫೋಟೋ ಅಸಲಿ ಅಲ್ಲ.ಆದರೆ ಈ ಭಾಗದಲ್ಲಿ ಚಿರತೆ ಓಡಾಡಿರುವುದನ್ನು ಹಲವರು ಕಂಡಿದ್ದಾರೆ.ಹಳ್ಳದ ಬಳಿ ನೀರುನಾಯಿಗಳಿದ್ದು ಅವುಗಳ ಬೇಟೆಗೆ ಚಿರತೆ ಬಂದು ಹೋಗಿರುವ ಉದಾಹರಣೆಗಳು ಇವೆ ಎಂದು ಮದರಿ ಗ್ರಾಮದ ಮುಖಂಡ ಶಿವು ಕನ್ನೊಳ್ಳಿ ಸ್ಪಷ್ಟಪಡಿಸಿದ್ದಾರೆ.

Latest News

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ "ಪರಿಸರ ರಕ್ಷಕ" ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು,

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಮೇ.24 ರಂದು ಜರುಗಲಿದೆ ಎಂದು ಆಯೋಜಕರ ಬಳಗ ತಿಳಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫೈನಲ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಸಂಘಟಕರಲ್ಲೊಬ್ಬರಾದ ಕಾಮರಾಜ ಬಿರಾದಾರ, ಈಗಾಗಲೇ ನಿಡಗುಂದಿ ತಂಡವನ್ನು ಸೋಲಿಸಿ ಆಲಮಟ್ಟಿ ತಂಡ ಫೈನಲ್ ತಲುಪಿದ್ದು ಮೇ.24 ರಂದು ಜರುಗಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುದ್ದೇಬಿಹಾಳ ಹಾಗೂ