ಕಾರ್ಮಿಕರು ಸರ್ಕಾರಿ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಿ: ಅಶ್ವಥ ಟಿ. ಮರಿಗೌಡ

ಕಾರ್ಮಿಕರು ಸರ್ಕಾರಿ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಿ: ಅಶ್ವಥ ಟಿ. ಮರಿಗೌಡ

ರಾಯಚೂರು: ಬಹುತೇಕ ಕಾರ್ಮಿಕರು ಸರಕಾರ ಸೌಲಭ್ಯದಿಂದ ವಂಚಿತರಾಗಿದ್ದು ಸರಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಕಾರ್ಮಿಕರು ಸದ್ಬಳಕೆ ಮಾಡಿಕೊಳ್ಳಬೇಕೆಂದು ನೆರವು ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಅಶ್ವಥ. ಟಿ ಮರಿಗೌಡ ಹೇಳಿದರು.

ರಾಯಚೂರು ಜಿಲ್ಲೆಯಲ್ಲಿ ಸುಕೋ ಬ್ಯಾಂಕ್ ಎದುರುಗಡೆ ಎಲ್. ವಿ. ಡಿ. ಕಾಲೇಜ್ ರಸ್ತೆ ವಾಸವಿ ನಗರದಲ್ಲಿ ನೆರವು ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಘಟನೆ ನೂತನ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ಸೌಲಭ್ಯದಿಂದ ವಂಚಿತ ಕಾರ್ಮಿಕರನ್ನು ಗುರುತಿಸುವ ಕೆಲಸ ಸಂಘಟನೆ ಮಾಡುತ್ತದೆ. ಕಾರ್ಮಿಕರು ಸಂಘಟನೆ ಜೊತೆಗೆ ಕೈ ಜೋಡಿಸುವ ಮೂಲಕ ಕಾರ್ಮಿಕ ಕಾರ್ಡನಿಂದ

ದೊರೆಯುವ ಮದುವೆ ಸಹಾಯಧನ, ಹೆರಿಗೆ ಸಹಾಯಧನ, ಶಿಷ್ಯವೇತನ, ಅಪಘಾತ ಪರಿಹಾರ ಸಹಾಯಧನ, ಶಸ್ತ್ರ ಚಿಕಿತ್ಸೆ ವೈದ್ಯಕೀಯ ಸಹಾಯ ಆರೋಗ್ಯ ಸೌಲಭ್ಯ, ಪಿಂಚಣಿ ಭಾಗ್ಯ ಇತ್ಯಾದಿ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು.

ಕಟ್ಟಡ ಕಾರ್ಮಿಕರಿಗೆ ಕಿಟ್ ವಿತರಣೆಯಲ್ಲಿ ಭ್ರಷ್ಟಾಚಾರ ಆಗುತ್ತಿದ್ದೂ ಇದನ್ನು ನಿಲ್ಲಿಸುವಂತೆ ಕಾರ್ಮಿಕ ಸಚಿವರಿಗೆ ಎಚ್ಚರಿಸಿದರು.

ತಾಲೂಕ ಅಧ್ಯಕ್ಷರನ್ನಾಗಿ ತಿಮಪ್ಪ, ಉಪಾಧ್ಯಕ್ಷರು ಈರಣ್ಣ, ಪ್ರಧಾನ ಕಾರ್ಯದರ್ಶಿಯನ್ನಾಗಿ ಸುನಿಲ್ ಕುಮಾರ ಅವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸಂಘಟನೆ ರಾಜ್ಯ ಸಂಚಾಲಕರು ಪ್ರದೀಪ ಕೆ. ಆರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಾನಂದ ಬಿಡಿಕಿ, ವೆಂಕಟೇಶ, ಈರಪ್ಪ ವಲ್ಕಂದಿನ್ನಿ, ಸಚಿನ ಪವಾರ, ರವಿರಾಜ್, ಗೋಪಾಲ ದೊರೆ, ಚಂದ್ರಶೇಖರ, ಡಾ. ಶಿವು ರಾಠೋಡ ಮುಂತಾದ ಪದಾಧಿಕಾರಿಗಳು ಇದ್ದರು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು