ಸವಿತಾ ಮಹರ್ಷಿಗಳ ಆದರ್ಶ ಪಾಲನೆ ಮಾಡಿ-ತಹಶೀಲ್ದಾರ್ ಕೀರ್ತಿ ಚಾಲಕ್

ಸವಿತಾ ಮಹರ್ಷಿಗಳ ಆದರ್ಶ ಪಾಲನೆ ಮಾಡಿ-ತಹಶೀಲ್ದಾರ್ ಕೀರ್ತಿ ಚಾಲಕ್

ಮುದ್ದೇಬಿಹಾಳ : ಸವಿತ ಮಹರ್ಷಿಗಳ ಆದರ್ಶಗಳನ್ನು ಸಮಾಜದ ಬಾಂಧವರು ಅಳವಡಿಸಿಕೊಂಡು ಸಮಾಜದ ಮುಖ್ಯವಾಹಿನಿಯಲ್ಲಿ ಬರಬೇಕು ಎಂದು ತಹಶೀಲ್ದಾರ್ ಕೀರ್ತಿ ಚಾಲಕ್ ಹೇಳಿದರು.

ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಭಾನುವಾರ ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಂಡಿದ್ದ ಶ್ರೀ ಸವಿತ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ದಿಕ್ಸೂಚಿ ಭಾಷಣ ಮಾಡಿದ ಸಂಶೋಧಕ ಮಹೇಶ ತೇಲಂಗಿ , “ಇಡೀ ಜಗತ್ತಿಗೆ ಅಜ್ಞಾನದ ಕತ್ತಲೆ ಕಳೆದು ಸುಜ್ಞಾನದ ದಾರಿ ತೋರಿಸಿದ ಉಪನಯನ ಸಂಸ್ಕಾರದ ಜನಕರು ಶ್ರೀ ಸವಿತ ಮಹರ್ಷಿಗಳು. ಸವಿತ ಸಮಾಜವು ಕೇವಲ ಒಂದು ಸಮುದಾಯವಲ್ಲ, ಅದು ವಿಶ್ವದ ಪ್ರಥಮ ವೈದ್ಯಕೀಯ ಪರಂಪರೆಯ ತಾಯಿಬೇರು.”ಸಾಮವೇದವನ್ನು ಗಾಯನ ರೂಪದಲ್ಲಿ ನೀಡಿದ ಕೀರ್ತಿ ಈ ಮಹರ್ಷಿಗಳಿಗೆ ಸಲ್ಲುತ್ತದೆ. ಋಗ್ವೇದ ಪಠಣ ಪುರೋಹಿತರಿಗೆ ಸೀಮಿತವಾದರೆ, ನಾದಸ್ವರದ ಮೂಲಕ ಸಾಮವೇದ ಮೊಳಗಿಸುವ ಸವಿತ ಸಮಾಜದ ಕಲೆ ಸರ್ವರಿಗೂ ತಲುಪಿದೆ. ನಂದವAಶದ ಸ್ಥಾಪಕ ಮಹಾಪದ್ಮನಂದರು, ಪ್ಲಾಸ್ಟಿಕ್ ಸರ್ಜರಿ ಪರಿಚಯಿಸಿದ ಆದಿ ವೈದ್ಯರು ಇದೇ ಸಮಾಜದವರು ಎಂಬುದು ಹೆಮ್ಮೆಯ ಸಂಗತಿ ಎಂದರು.

ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಂ.ಎA. ಬೆಳಗಲ್ ಮಾತನಾಡಿ, ಶಿವನ ಬಲಗಣ್ಣಿನಿಂದ ಉದ್ಭವಿಸಿದ ಸವಿತ ಮಹರ್ಷಿಗಳು 1875 ಶ್ಲೋಕಗಳ ಮೂಲಕ ಜ್ಞಾನದೀಪ್ತಿ ಬೆಳಗಿದ್ದಾರೆ ಎಂದರು.
ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ, ಸವಿತಾ ಸಮಾಜವು ನಾಟಿ ವೈದ್ಯಪದ್ಧತಿಯ ಮೂಲಕ ಜನಸಾಮಾನ್ಯರ ಜೊತೆ ಬೆರೆತ ‘ಸ್ನೇಹ ಸಮಾಜ’ ಎಂದು ಶ್ಲಾಘಿಸಿದರು.

ಶಿರಸ್ತೇದಾರ ಎಂ.ಎ.ಬಾಗೇವಾಡಿ, ಮುಖ್ಯ ಪಶುವೈದ್ಯಾಧಿಕಾರಿ ಶಿವಾನಂದ ಮೇಟಿ, ಎಎಸೈ ಅಮರಪ್ಪ ಸಾಲಿ, ಕಂದಾಯ ನಿರೀಕ್ಷಕ ಪವನ ತಳವಾರ, ಸಮಾಜದ ಅಧ್ಯಕ್ಷ ರವಿ ತೇಲಂಗಿ ಹಾಗೂ ಗೌರವ ಅಧ್ಯಕ್ಷ ಮಲ್ಲಣ್ಣ ತೇಲಂಗಿ,ಸಮಾಜದ ಪ್ರಮುಖರಾದ ದೇವೇಂದ್ರ ಶಹಾಪೂರ, ಈರಣ್ಣ ಇಡ್ಲೂರ, ಅಪ್ಪು ಶಹಾಪೂರ, ಶರಣಪ್ಪ ಮಸಾಲಜಿ, ಶ್ರೀನಿವಾಸ ಶಹಾಪೂರ, ಪ್ರವೀಣ ಮಸಾಲಜಿ, ಶ್ರೀಕಾಂತ ತೇಲಂಗಿ, ಕುಮಾರ್ ತೇಲಂಗಿ, ಸುರೇಶ್ ಮಸಾಲಜಿ, ಶಂಕ್ರಪ್ಪ ಹಡಪದ, ಭೀಮಣ್ಣ ಬಳವಾಟ, ಶಂಕರಪ್ಪ ಅಮರಗೋಳ, ತಿಪ್ಪಣ್ಣ ಶಹಾಪೂರ, ರಾಘವ್ ತೇಲಂಗಿ, ಗೌತಮ್ ಚಿಗನೂರ ಮತ್ತು ಕಾರ್ಮಿಕ ಇಲಾಖೆಯ ಸಿದ್ದು ನಾವಿ ಸೇರಿದಂತೆ ಸವಿತ ಹಾಗೂ ಹಡಪದ ಸಮಾಜದ ಬಂಧುಗಳು ಭಾಗವಹಿಸಿದ್ದರು.

ಶಿಕ್ಷಕ ಎಂ.ಬಿ. ಗುಡಗುಂಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದ ಸವಿತ ಮಹರ್ಷಿ ವೃತ್ತದಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.

Latest News

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ ಸಹಕಾರದಿಂದ ಗಣತಿ ನಮೂನೆಗಳ ವಿತರಣೆ ಕಾರ್ಯದಲ್ಲಿ ಮುದ್ದೇಬಿಹಾಳ ಮತಕ್ಷೇತ್ರ ಶೇ.98.38ರಷ್ಟು ಸಾಧನೆ ಮಾಡಿ ವಿಜಯಪುರ ಜಿಲ್ಲೆಗೆ ಎರಡನೇ ಸ್ಥಾನ ಪಡೆದುಕೊಂಡಿದೆ ಎಂದು ಮತದಾರರ ನೋಂದಣಾಧಿಕಾರಿ,ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯ ಕುರಿತು ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.2,28,285 ಮತದಾರರಲ್ಲಿ 2,24,589 ಮತದಾರರಿಗೆ ಗಣತಿ ನಮೂನೆ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ