ಹೋರಾಟದ ಪರಿಣಾಮ ಮೀಸಲಾತಿ ಪರವಾಗಿ ತೀರ್ಪು: ಉಡಚಪ್ಪ ಮಳಗಿ

ಹೋರಾಟದ ಪರಿಣಾಮ ಮೀಸಲಾತಿ ಪರವಾಗಿ ತೀರ್ಪು: ಉಡಚಪ್ಪ ಮಳಗಿ

ಹಾವೇರಿ: ಡಾ.ಬಾಬಾಸಾಹೇಬ ಅಂಬೇಡ್ಕರ್ ಆಶಯದಂತೆ ಸಂವಿಧಾನ ಬದ್ಧವಾಗಿ, ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿರುವ ಜಾತಿಗಳ ಜನಸಂಖ್ಯೆಗೆ ಅನುಗುಣವಾಗಿ ಒಳ ಮೀಸಲಾತಿ ಹಂಚಿಕೆ ಮಾಡಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಳೆದ 30 ವರ್ಷಗಳಿಂದ ನಿರಂತರ, ಜಿಲ್ಲಾ, ರಾಜ್ಯ ಮಟ್ಟದ ಸಂವಾದ, ಚರ್ಚಾಕೂಟ, ಸಮಾವೇಶ, ಮುತ್ತಿಗೆ, ಹಲವಾರು ರೀತಿ ಜನಪರ ಹೋರಾಟ ಹಾಗೂ ನ್ಯಾಯಾಲಯದ ಹೋರಾಟಕ್ಕೆ ರಾಷ್ಟ್ರೀಯ ವಿಷಯವಾಗಿ ಚಳುವಳಿ ಮಾಡಿದ ಪರಿಣಾಮ ದೇಶದ ಸರ್ವೋಚ್ಚ ನ್ಯಾಯಾಲಯದ ಸಂವಿಧಾನ ಪೀಠದಲ್ಲಿ ಒಳಮೀಸಲಾತಿ ಪರವಾಗಿ ತೀರ್ಪು ಬಂದಿದೆ ಎಂದು ಉಡಚಪ್ಪ ಮಳಗಿ ಹರ್ಷ ವ್ಯಕ್ತಪಡಿದರು.

ಹಾವೇರಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಮತ್ತು ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ(ರಿ)ಯ ವತಿಯಿಂದ ದೇಶದ ಸರ್ವೋಚ್ಚ ನ್ಯಾಯಾಲಯದ ಸಂವಿಧಾನ ಪೀಠದಲ್ಲಿ ಒಳಮೀಸಲಾತಿ ಪರವಾಗಿ ತೀರ್ಪು ನೀಡಿದನ್ನು ಸ್ವಾಗತಿಸಿ ಸಿಹಿ ಹಂಚಿ ಡಿ ಎಸ್ ಎಸ್ ರಾಜ್ಯ ಸದಸ್ಯರು ಉಡಚಪ್ಪ ಮಾಳಗಿಮಾತನಾಡಿದರು.

ಇಂತಹ ಐತಿಹಾಸಿಕ ತೀರ್ಪು ನೀಡಿದ ಸಂವಿಧಾನ ಪೀಠದ 7ಜನ ನ್ಯಾಯಾಧೀಶರಿಗೆ, ನ್ಯಾಯಾಲಯದಲ್ಲಿ ಹೋರಾಟ ನಡೆಸಿದ ಸಂಘಟನೆಗಳಿಗೆ, ಜನಪರ ಚಳುವಳಿಯಲ್ಲಿ ಭಾಗವಹಿಸಿದ ದಲಿತ ಚಳುವಳಿ ಹಾಗೂ ಇನ್ನಿತರ ಸಾಮಾಜಿಕ ಪರಿವರ್ತನೆಯ ಸಂಘಟನೆಗಳ ಎಲ್ಲಾ ಪದಾಧಿಕಾರಿಗಳಿಗೆ ಹಾಗೂ ಕಾರ್ಯಕರ್ತರಿಗೆ ಅಭಿನಂದನೆಗಳನ್ನು ಸಲ್ಲಿಸಲಾಗುವುದು ಎಂದು ಹರ್ಷ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಗವಿಸಿದ್ದಪ್ಪ ದ್ಯಾಮಣ್ಣನವರ,ಎಂ ಆಂಜನೇಯ ಮಂಜಪ್ಪ ಮಾರೋಳ, ವೈ.ಎನ್.ಮಾಸೂರ, ಜಗದೀಶ್ ಹರಿಜನ, ಶಿವು ಮುದಿಮಲ್ಲಣ್ಣವರ, ರೇಣುಕಾ ಬಡಕಣ್ಣವರ, ಮಂಜುನಾಥ್ ದೊಡ್ಡಮರಿಯಮ್ಮನವರ, ಮಹೇಶಪ್ಪ ಶಾಕಾರ, ಬಸವಣ್ಣಪ್ಪ ಅರಳಿಹಳ್ಳಿ, ಶಂಭುಲಿಂಗಪ್ಪ ದಿವಟರ, ಕೃಷ್ಣಕಾಂತ ಹೊಳಿಯಪ್ಪನವರ, ಮಂಜುನಾಥ್ ಮಾಸೂರ, ಹನಮಂತಪ್ಪ ಹೌಶಿ, ಗೀತಾ ಹಳೆಶಿಡೆನೂರ, ರತ್ನವ್ವ ದೊಡ್ಡಮನಿ ಇತರರು ಇದ್ದರು.

Latest News

ಮಾಜಿ ಶಾಸಕ ನಡಹಳ್ಳಿ ಆಗ್ರಹ:                                                           ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮಾಜಿ ಶಾಸಕ ನಡಹಳ್ಳಿ ಆಗ್ರಹ: ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮುದ್ದೇಬಿಹಾಳ : ರಾಜ್ಯದಲ್ಲಿ 199 ತಾಲ್ಲೂಕುಗಳು ಬರಪೀಡಿತ ಪ್ರದೇಶಗಳಾಗಿದ್ದು ಕಾಂಗ್ರೆಸ್ ಸರ್ಕಾರ ರೈತರ ಐದು

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡ ಪವಾಡ ಬಸವೇಶ್ವರ ಸಂಸ್ಥೆಯ ವತಿಯಿಂದ ಸೆ.11 ರಂದು ಬೆಳಗ್ಗೆ

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಮುದ್ದೇಬಿಹಾಳ : ರೈತರ ಸಹಕಾರದಿಂದ ಸನ್ 2025-26ನೇ ಸಾಲಿನ ಮಾರ್ಚ ಅಂತ್ಯಕ್ಕೆ ನಮ್ಮ ಸಂಘವು

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ

ಸೆ.9 ರಂದು ಬರಪರಿಸ್ಥಿತಿ ಅವಲೋಕನಕ್ಕೆ ಟಾಸ್ಕಫೋರ್ಸ್ ಸಭೆ

ಸೆ.9 ರಂದು ಬರಪರಿಸ್ಥಿತಿ ಅವಲೋಕನಕ್ಕೆ ಟಾಸ್ಕಫೋರ್ಸ್ ಸಭೆ

ಮುದ್ದೇಬಿಹಾಳ : ಬರಪರಿಸ್ಥಿತಿ,ಕುಡಿವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಲಭ್ಯತೆ ಕುರಿತು ಚರ್ಚೆ ನಡೆಸಲು ಸೆ.9 ರಂದು ಬೆಳಗ್ಗೆ 9 ಕ್ಕೆ ಪಟ್ಟಣದ ಪ್ರವಾಸಿ ಮಂದಿರದ ಸಭಾಭವನದಲ್ಲಿ ಕೆಎಸ್‌ಡಿಎಲ್ ನಿಗಮದ ಅಧ್ಯಕ್ಷರು, ಶಾಸಕ ಸಿ.ಎಸ್.ನಾಡಗೌಡ ಅಧ್ಯಕ್ಷತೆಯಲ್ಲಿ ಟಾಸ್ಕಫೋರ್ಸ್ ಸಭೆ ನಿಗದಿಪಡಿಸಲಾಗಿದೆ. ಟಾಸ್ಕಫರ‍್ಸ್ ಸಭೆಗೆ ಎಲ್ಲ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಹಾಜರಾಗುವಂತೆ ತಹಶೀಲ್ದಾರ್‌ರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕ್ಷೇತ್ರದ ಅವಳಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳು ಎಂದು ಘೋಷಣೆ ಮಾಡುವಂತೆ ಮಾಜಿ ಶಾಸಕ ಎ.ಎಸ್.ಪಾಟೀಲ

ಶಾಸಕ ನಾಡಗೌಡರು ಹಸಿ ಸುಳ್ಳುಗಳ ಸರದಾರರು-ನಡಹಳ್ಳಿ

ಶಾಸಕ ನಾಡಗೌಡರು ಹಸಿ ಸುಳ್ಳುಗಳ ಸರದಾರರು-ನಡಹಳ್ಳಿ

ಮುದ್ದೇಬಿಹಾಳ : ಮತಕ್ಷೇತ್ರದ ರೈತರಿಂದ ಆಯ್ಕೆಯಾಗಿರುವ ನೀವು ಅವರ ಬದುಕಿಗೆ ಸಂಕಷ್ಟ ಎದುರಾದಾಗ ಸ್ಪಂದಿಸುವ ಕೆಲಸ ಮಾಡಬೇಕು.ಅದು ಬಿಟ್ಟು ಮೂವ್ವತ್ತು ವರ್ಷಗಳಿಂದ ಹಸಿ ಸುಳ್ಳುಗಳನ್ನೇ ಹೇಳುತ್ತಾ ರಾಜಕಾರಣ ಮಾಡಿಕೊಂಡು ಬಂದಿದ್ದೀರಿ.ಜನ ಇನ್ನು ಮುಂದೆ ನಿಮ್ಮನ್ನು ನಂಬುವುದಿಲ್ಲ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಮಂಗಳವಾರ ಬರ ಘೋಷಣೆಗೆ ಆಗ್ರಹಿಸಿ ನಡೆದಿರುವ ಬಿಜೆಪಿಯ ಎರಡನೇ ದಿನದ ಧರಣಿ ಸತ್ಯಾಗ್ರಹವನ್ನುದ್ದೇಶಿಸಿ ಅವರು