ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಸರ್ಕಾರಿ ನೌಕರರ ಕ್ರಿಕೆಟ್‌ ಪಂದ್ಯಾವಳಿ

ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಸರ್ಕಾರಿ ನೌಕರರ ಕ್ರಿಕೆಟ್‌ ಪಂದ್ಯಾವಳಿ

ಲಕ್ಷ್ಮೇಶ್ವರ: ಇಲಾಖೆಗಳಲ್ಲಿ ವರ್ಷಪೂರ್ತಿ ಕೆಲಸದ ಒತ್ತಡದಿಂದ ಕುಗ್ಗಿ ಜರ್ಜರಿತರಾದ ಸಿಬ್ಬಂದಿಗೆ ಮಾನಸಿಕವಾಗಿ ನಿರಾಳತೆ, ಸಕ್ರಿಯವಾಗಿ ತಮ್ಮ ಕರ್ತವ್ಯದಲ್ಲಿ ಉತ್ಸಾಹ, ಹುಮ್ಮಸ್ಸಿನಿಂದ ಕರ್ತವ್ಯ ನಿರ್ವಹಿಸಲು ಮತ್ತು ದೈಹಿಕವಾಗಿ ಆರೋಗ್ಯವಂತರಾಗಿರಲು ಕ್ರಿಕೆಟ್ ಪಂದ್ಯಾವಳಿ ಏರ್ಪಡಿಸಲಾಗಿದೆ ಎಂದು
ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಾ ದಂಡಾಧಿಕಾರಿಗಳು ಮತ್ತು ತಹಶೀಲ್ದಾರ್ ವಿ ವಾಸುದೇವ ಹೇಳಿದರು.

ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಪಟ್ಟಣದಲ್ಲಿ ಸರಿಕಾರಿ ವಿವಿಧ ಇಲಾಖೆಗಳ ಸಿಬ್ಬಂದಿಗಳ ಕ್ರಿಕೆಟ್‌ ಪಂದ್ಯಾವಳಿಯನ್ನು ಅವರು ಉದ್ಘಾಟಿಸಿ ಮಾತನಾಡಿದರು.

ಎಲ್ಲ ಇಲಾಖೆಯ ಸಿಬ್ಬಂದಿ ಒಬ್ಬರಿಗೊಬ್ಬರು ಪರಿಚಿತರಾಗಲು ಒಳ್ಳೆಯ ಸ್ನೇಹ ಸಂಬಂಧದ ಸೇತುವೆಯಾಗಿ ಈ ಕ್ರಿಕೆಟ್ ಕ್ರಿಡೆ ಸಹಾಯವಾಗಲಿದೆ, ಜೊತೆಗೆ ಪ್ರೇರಣೆಯಾಗಿದೆ ಎಂದು ಹೇಳಿದರು.

ಸ್ವತಃ ಲಕ್ಷ್ಮೇಶ್ವರ ತಾಲ್ಲೂಕ ತಹಶೀಲ್ದಾರ್ ಕ್ರಿಕೆಟ್ ಆಟದಲ್ಲಿ ತಮ್ಮ ಕಂದಾಯ ಇಲಾಖೆಯ ಮುಖ್ಯ ನಾಯಕರಾಗಿ ಮೈದಾನದಲ್ಲಿ ಉತ್ತಮ ಆಟ ಪ್ರದರ್ಶಿಸುವವ ತಮ್ಮ ಸಿಬ್ಬಂದಿಗೆ ಮತ್ತು ಎದುರು ಆಟಗಾರರಿಗೂ ಚಪ್ಪಳೆ ತಟ್ಟುವುದರ ಮೂಲಕ ಹುರಿದುಂಬಿಸಿ ಉತ್ಸಹ ತುಂಬುತ್ತಿದ್ದರು. ತಾಲೂಕ ಪಂಚಾಯತ ಉಪ ನಿರ್ದೇಶಕರ ಧರ್ಮಣ್ಣ ಅವರ ವೀಕ್ಷಕರ ವಿವರಣೆ (ಕಾಮೆಂಟ್ರಿ) ಉತ್ತಮವಾಗಿತ್ತು. ಮತ್ತು ಎಲ್ಲಾ ತಂಡದವರಿಗೂ ಉತ್ಸಾಹ ತುಂಬುವಂತಿತ್ತು. ಕ್ರಿಡೆ ವೀಕ್ಷಿಸುವ ವೀಕ್ಷಕರ ಮೆಚ್ಚುಗೆಯ ಮಾತುಗಳೂ ಕೇಳಿ ಬಂದವು.

ಲಕ್ಷ್ಮೇಶ್ವರ ಸಬ್ ಇನ್ಸ್‌ಪೆಕ್ಟರ್ ಈರಣ್ಣ ರಿತ್ತಿ, ತಾಲೂಕ ಪಂಚಾಯತಿ ಉಪ ನಿರ್ದೇಕರು ಧರ್ಮಣ್ಣ, ತಾಲೂಕಾ ಗ್ರೇಡ್ ಟೂ ತಹಶಿಲ್ದಾರ ಮಂಜುನಾಥ ಅಮಾಸಿ, ಉಪ ತಹಶಿಲ್ದಾರ ಕಿಮ್ಮಾಯಿ, ತಾಲೂಕಾ ಕಂದಾಯ ಇಲಾಖೆ ರಾಜಸ್ವ ಅಧಿಕಾರಿ ನಧಾಪ ಇದ್ದರು.

Latest News

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

ಮುದ್ದೇಬಿಹಾಳದ ಶಕುಂತಲಾಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ ಮುದ್ದೇಬಿಹಾಳ : ಕೊಪ್ಪಳ ಜಿಲ್ಲಾ ಹನುಮಸಾಗರ

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ಧಾರವಾಡ, ಜೂ.30: ನಗರದ ಸ್ವಚ್ಛತೆ ಪಾಲಿಕೆ, ನಗರ ಸಭೆ ಕೆಲಸ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ

ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಆಯ್ಕೆ:ಪಿಂಜಾರ್ ಅಧ್ಯಕ್ಷ, ಕೊಣ್ಣೂರು ಉಪಾಧ್ಯಕ್ಷ

ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಆಯ್ಕೆ:ಪಿಂಜಾರ್ ಅಧ್ಯಕ್ಷ, ಕೊಣ್ಣೂರು ಉಪಾಧ್ಯಕ್ಷ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ನೂತನ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಶ್ವಾಸಯೋಗ ಸಂಸ್ಥೆ ಹಾಗೂ ಸಂತೋಷ್ ಲಾಡ್ ಫೌಂಡೇಶನ್ ಸಹಯೋಗದಲ್ಲಿ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಬೆಂಗಳೂರು, ಜೂನ್‌ 26: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ವಿವಿಧ ಕಾರ್ಖಾನೆಗಳು ಹಾಗೂ ಮನೆ ಕೆಲಸದ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಭೆ ನಡೆಸಿ ಚರ್ಚಿಸಿದರು. ನುವೋಕೋ ವಿನ್ವಾಸ್ ಕಾರ್ಪೊರೇಷನ್ ಕಾರ್ಮಿಕರ ಸಮಸ್ಯೆ ಚರ್ಚೆ:ಕರ್ನಾಟಕ ಜನರಲ್ ಲೇಬರ್ ಯೂನಿಯನ್ ಬೆಂಗಳೂರು ಇವರ ಮನವಿ ಮೇರೆಗೆ ಮೆ. ನುವೋಕೋ ವಿನ್ವಾಸ್ ಕಾರ್ಪೊರೇಷನ್ ಲಿಮಿಟೆಡ್.. ಕಾರ್ಮಿಕರ ಸಮಸ್ಯೆಗಳ ಕುರಿತು ಸಭೆ ನಡೆಸಿ ಚರ್ಚಿಸಿದರು.

ಶಾಂತಿಸಭೆ : ಪಿಎಸ್‌ಐ ತಿಪರೆಡ್ಡಿ ಸಲಹೆಶಾಂತಿಯುತವಾಗಿ ಮೊಹರಂ ಆಚರಿಸಿ

ಶಾಂತಿಸಭೆ : ಪಿಎಸ್‌ಐ ತಿಪರೆಡ್ಡಿ ಸಲಹೆಶಾಂತಿಯುತವಾಗಿ ಮೊಹರಂ ಆಚರಿಸಿ

ಮುದ್ದೇಬಿಹಾಳ : ಜೂ.27 ರಿಂದ ಮೊಹರಂ ಹಬ್ಬದ ಆಚರಣೆ ಆರಂಭಗೊಳ್ಳಲಿದ್ದು ಶಾಂತಿಯುತವಾಗಿ ಆಚರಿಸುವಂತೆ ಪಿಎಸ್‌ಐ ಸಂಜಯ ತಿಪರೆಡ್ಡಿ ಹೇಳಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮೊಹರಂ ಶಾಂತಿಸಭೆಯಲ್ಲಿ ಅವರು ಮಾತನಾಡಿದರು. ಜೂ.27 ರಂದು ಮೊಹರಂ ಹಬ್ಬದ ಆಚರಣೆ ಆರಂಭಗೊಂಡು 29 ರಂದು ದಫನ್ ಮಾಡಲಾಗುತ್ತದೆ. ಈ ಸಮಯದಲ್ಲಿ ಅಲಾಯ್ ದೇವರುಗಳನ್ನು ಪ್ರತಿಷ್ಠಾಪಿಸುವ ಸಮಿತಿಯವರು ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಹೇಳಿದರು. ಮೊಹರಂ ಹಬ್ಬ ಭಾವೈಕ್ಯತೆಯ ಸಂಕೇತವಾಗಿದ್ದು ಉಭಯ