ILAKAL: ಪತ್ರಕರ್ತರಿಗೆ ಸರ್ಕಾರದಿಂದ ಸೌಲಭ್ಯ ಸಿಗಲೇಬೇಕು: ಕಾನಿಪ ಧ್ವನಿ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ್

ILAKAL: ಪತ್ರಕರ್ತರಿಗೆ ಸರ್ಕಾರದಿಂದ ಸೌಲಭ್ಯ ಸಿಗಲೇಬೇಕು: ಕಾನಿಪ ಧ್ವನಿ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ್


ಇಳಕಲ್: ಪತ್ರಕರ್ತರಗೆ ಸರ್ಕಾರದಿಂದ ಸಿಗಬೇಕಾದ ಎಲ್ಲ ಸೌಲಭ್ಯಗಳನ್ನು ಸರ್ಕಾರ ಒದಗಿಸಬೇಕು. ಪತ್ರಕರ್ತರು ಮತ್ತು ಅವರ ಕುಟುಂಬ ಸಾಮಾಜಿಕವಾಗಿ ಗುರುತಿಸಲ್ಪಟ್ಟರೂ ಕುಟುಂಬ ಬೆಳೆದಂತೆ ಪತ್ರಕರ್ತರ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕುತ್ತಿವೆ. ಇದರಿಂದ ಪಾರಾಗಲು ಸರ್ಕಾರದ ಸೌಲಭ್ಯ ಅಗತ್ಯ ಎಂದು ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ್ ಅಭಿಪ್ರಾಯಪಟ್ಟರು.

ನಗರದ ವಿಜಯ ಮಹಾಂತೇಶ್ವರ ದಾಸೋಹ ಭವನದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯಿಂದ ಆಯೋಜಿಸಿದ್ದ ಪತ್ರಕರ್ತರ ದಿನಾಚರಣೆ ಹಾಗೂ ಸತ್ಕಾರ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಈಗಾಗಲೇ ಸರ್ಕಾರವು ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಕಲ್ಪಿಸಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸೌಲಭ್ಯಗಳನ್ನು ಪಡೆಯಲು ಒಗ್ಗಟ್ಟಾಗಿ ಶ್ರಮಿಸೋಣ ಎಂದು ಸಂಘದ ಸದಸ್ಯರಿಗೆ ಕಿವಿ ಮಾತು ಹೇಳಿದರು.

ಅಚ್ಚುಕಟ್ಟಾಗಿ ಕಾರ್ಯಕ್ರಮ ಆಯೋಜಿಸಿದ್ದಕ್ಕೆ ಪೂಜ್ಯ ಗುರುಮಹಾಂತಶ್ರೀಗಳು ಶ್ಲಾಘಿಸಿ ಮಾತನಾಡಿ, ಪತ್ರಿಕೆಗಳು ಜನರ ಅಭಿಪ್ರಾಯ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿತ್ತವೆ ಎಂದರು.

ನಿತ್ಯ ಪತ್ರಿಕೆ ಓದುವುದರಿಂದ ಗತಕಾಲದ ಘಟನೆಗಳು ನೆನಪಿನ ಬಿಟ್ಟಿಯಲ್ಲಿ ಉಳಿದತ್ತವೆ. ಅವಶ್ಯಕತೆ ಇದ್ದಾಗ ನೆನಪಿಗೆ ಬರುತ್ತದೆ. ಈ ಮೂಲಕ ನಮ್ಮ ಜ್ಞಾನ ವೃದ್ಧಿಯಾಗುತ್ತದೆ ಎಂದರು.

ಸಾಮಾಜಿಕ ಜಾಲತಾಣದಿಂದ ಪತ್ರಿಕೆಗಳಿಗೆ ತೊಡಕಲ್ಲ. ಜಾಲತಾಣದಲ್ಲಿ ತಕ್ಷಣ ಮಾಹಿತಿ ದೊರೆದರೆ, ಪತ್ರಿಕೆಗಳಿಂದ ಸಮಗ್ರ ಮಾಹಿತಿ ಸಿಗುತ್ತದೆ. ಇಂತಹ ಉತ್ತಮ ಕೆಲಸ ಮಾಡುವ ಪತ್ರಕರ್ತರ ಬದುಕು ಸುಧಾರಣೆ ಕಾಣಬೇಕು. ಇದಕ್ಕೆ ಸರ್ಕಾರ ಅವರಿಗೆ ಅಗತ್ಯ ಸೌಲಭ್ಯ ಕಲ್ಪಿಸಬೇಕು ಎಂದು ಅಭಿಪ್ರಾಯ ಪಟ್ಟಿದರು.

ಸಂವಿಧಾನದ ನಾಲ್ಕನೇ ಅಂಗವಾಗಿ ಪತ್ರಿಕೋದ್ಯಮ ತನ್ನ ಕಾರ್ಯವನ್ನು ಮಾಡಬೇಕು. ಪತ್ರಕರ್ತರು ಆಗಾಗ ಛಾಟಿ ಬೀಸಿದಾಗ ಮಾತ್ರ ಕಾರ್ಯಾಂಗ‌ ಚುರುಕಿನಿಂದ ಕೆಲಸ ಮಾಡುತ್ತದೆ ಎಂದು ಉಪತಹಶೀಲ್ದಾರ್ ಈಶ್ವರ್ ಗಡ್ಡಿ ಹೇಳಿದರು.

ಹಿರಿಯ ವರದಿಗಾರರಾದ ಬಿ.ಬಾಬು, ಸಜ್ಜನರಾಜ ಮೆಹ್ತಾ, ಪತ್ರಿಕಾ ವಿತರಕರಾದ ಅಬ್ದುಲ್ ಸಾಬ್ ಮುಲ್ಲಾ, ಓದುಗರಾದ ಗಂಗಪ್ಪ ಮಾನಪ್ಪ ಬಡಿಗೇರ, ಪ್ರಕಾಶ ಲೊಖಂಡೆ ಅವರನ್ನು ಸತ್ಕರಿಸಲಾಯಿತು.

ಸುರಕ್ಷಾ ಸೇವಾ ಸಂಸ್ಥೆಯಲ್ಲಿ ಬಂಗ್ಲೆ ಮಲ್ಲಿಕಾರ್ಜುನ್ ರಿಂದ ಉಪಹಾರ ಅರ್ಪಣೆ: ಇಳಕಲ್ ನಗರದ ಸುರಕ್ಷಾ ಸೇವಾ ಸಂಸ್ಥೆಯಲ್ಲಿ ಕಾರ್ಯನಿರತ ಪತ್ರಕರ್ತರ ಧ್ವನಿಯ ಇಳಕಲ್ ತಾಲೂಕು ಘಟಕದ ವತಿಯಿಂದ ಪತ್ರಿಕಾ ದಿನಾಚರಣೆಯ ಅಂಗವಾಗಿ ಸಂಘದ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಸಮ್ಮುಖದಲ್ಲಿ ಉಪಹಾರ ವ್ಯವಸ್ಥೆ ಮಾಡಲಾಯಿತು.

ಈ ವೇಳೆ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ತಾಲೂಕು ಅಧ್ಯಕ್ಷ ಶರಣಪ್ಪ ಹೊದ್ನೂರ್, ಹಿರಿಯ ಪತ್ರಕರ್ತರಾದ ವಿಜಯ ಪಲ್ಲೆದ್(VP), ಗುಂಡಣ್ಣ ಲಾಟಿ, ಶರಣಗೌಡ ಕಂದಕೂರು, ದೊಡ್ಡನಗೌಡ ಗುಡಿಹಿಂದಿನ, ಸುರಕ್ಷಾ ಸೇವಾ ಸಂಸ್ಥೆಯ ಮುಖ್ಯಸ್ಥ ಪುರುಷೋತ್ತಮ ದರಕ ಇದ್ದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ