ಯುವಕರಿಗೆ ಉದ್ಯೋಗ ನೀಡಿಕೆ ಹೆಚ್ಚಳ : ಕರ್ನಾಟಕಕ್ಕೆ 63,049.58 ಕೋಟಿ ರೂ.ತೆರಿಗೆ ಪಾಲು-ನಡಹಳ್ಳಿ

ಯುವಕರಿಗೆ ಉದ್ಯೋಗ ನೀಡಿಕೆ ಹೆಚ್ಚಳ : ಕರ್ನಾಟಕಕ್ಕೆ 63,049.58 ಕೋಟಿ ರೂ.ತೆರಿಗೆ ಪಾಲು-ನಡಹಳ್ಳಿ

ಮುದ್ದೇಬಿಹಾಳ : 2047ರ ಹೊತ್ತಿಗೆ ‘ವಿಕಸಿತ ಭಾರತ’ವನ್ನು ನಿರ್ಮಿಸುವ ಬಿಜೆಪಿಯ ಸಂಕಲ್ಪಕ್ಕೆ ಈ ಬಜೆಟ್ ಭದ್ರ ಬುನಾದಿಯಾಗಿದ್ದು ಕರ್ನಾಟಕದ ಪಾಲಿನ ತೆರಿಗೆ ಹಂಚಿಕೆ ಗಣನೀಯವಾಗಿ ಏರಿಕೆಯಾಗಿದೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಅದ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸರ್ಕಾರದ ಬಜೆಟ್ ವಿಷಯವಾಗಿ ಮಾತನಾಡಿದ ಅವರು, 16ನೇ ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯಗಳಿಗೆ ಕೇಂದ್ರ ತೆರಿಗೆಗಳ ಹಂಚಿಕೆಯಲ್ಲಿ ಕರ್ನಾಟಕದ ಪಾಲು ಶೇ.3.64% ರಿಂದ 4.13% ಕ್ಕೆ ಏರಿಕೆಯಾಗಿದೆ.ಇದರಿಂದಾಗಿ ಪ್ರಸ್ತುತ ಹಣಕಾಸು ವರ್ಷದಲ್ಲಿ ರಾಜ್ಯಕ್ಕೆ ಕೇಂದ್ರ ತೆರಿಗೆಗಳ ಪಾಲಿನ ರೂಪದಲ್ಲಿ ₹63,049.58
ಕೋಟಿ ಹಂಚಿಕೆಯಾಗಲಿದೆ. ಕರ್ನಾಟಕದ ಹೈ-ಸ್ಪೀಡ್ ರೈಲು ಕಾರಿಡಾರ್ಗಳ ಸಂಪರ್ಕ
ದೇಶದಲ್ಲಿ ಪ್ರಸ್ತಾಪಿಸಲಾದ ಏಳು ಹೈ-ಸ್ಪೀಡ್ ರೈಲು ಕಾರಿಡಾರ್ಗಳಲ್ಲಿ ಕರ್ನಾಟಕಕ್ಕೆ ನೇರ ಪ್ರಯೋಜನ ನೀಡುವ ಎರಡು ಪ್ರಮುಖ ಮಾರ್ಗಗಳು ಹೈದರಾಬಾದ್ – ಬೆಂಗಳೂರು ಮತ್ತು ಚೆನ್ನೆöÊ – ಬೆಂಗಳೂರು ಘೋಷಿಸಲಾಗಿದೆ. ಬೆಂಗಳೂರು ಉಪನಗರ ರೈಲು ಯೋಜನೆಗೆ ಬಜೆಟ್ ಬೆಂಬಲವಾಗಿ ₹500 ಕೋಟಿ ಮಂಜೂರು ಮಾಡಲಾಗಿದೆ ಎಂದು ಹೇಳಿದರು.

2025–26 ಹಣಕಾಸು ವರ್ಷದಲ್ಲಿ ₹350 ಕೋಟಿ ಅನುದಾನ ನೀಡಲಾಗಿತ್ತು. ಈ ಹೆಚ್ಚುವರಿ ಅನುದಾನದಿಂದ ಬೆಂಗಳೂರಿನ ಮಧ್ಯಮವರ್ಗದ ಜನತೆಗೆ ಹೆಚ್ಚಿನ ಸೌಲಭ್ಯಗಳು ಹಾಗೂ ಸುಗಮ ಸಾರಿಗೆ ವ್ಯವಸ್ಥೆ ಲಭಿಸಲಿದೆ. ಉನ್ನತ ಮೌಲ್ಯದ ಕೃಷಿಗೆ ಉತ್ತೇಜನ ಕರ್ನಾಟಕದ ಹೆಮ್ಮೆಯಾದ ಶ್ರೀಗಂಧದ ಕೃಷಿಯನ್ನು ಉತ್ತೇಜಿಸಲು ಮತ್ತು ಅದರ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು ಕೇಂದ್ರ ಸರ್ಕಾರವು ರಾಜ್ಯದೊಂದಿಗೆ ಪಾಲುದಾರಿಕೆ ಮಾಡಿಕೊಳ್ಳಲಿದೆ. ‘ತೆಂಗು ಪ್ರಚಾರ ಯೋಜನೆ’ಯನ್ನು ಘೋಷಿಸಲಾಗಿದೆ.ಭಾರತೀಯ ಗೋಡಂಬಿಯನ್ನು 2030ರ ವೇಳೆಗೆ ಜಾಗತಿಕ ಬ್ರಾಂಡ್ ಆಗಿ ಪರಿವರ್ತಿಸಲು ಮತ್ತು ಸಂಸ್ಕರಣಾ ಸಾಮರ್ಥ್ಯ ಹೆಚ್ಚಿಸಲು ವಿಶೇಷ ಬೆಂಬಲ ನೀಡಲಾಗುವುದು ಎಂದು ತಿಳಿಸಿದರು.

ಬೆಂಗಳೂರಿನ ಸೆಮಿಕಂಡಕ್ಟರ್ ಹಬ್‌ಗೆ ಬಲ ನೀಡಲು ‘ಇಂಡಿಯಾ ಸೆಮಿಕಂಡಕ್ಟರ್ ಮಿಷನ್ 2.0’ಘೋಷಿಸಲಾಗಿದೆ. ಎಲೆಕ್ಟ್ರಾನಿಕ್ಸ್ ಬಿಡಿಭಾಗಗಳ ಉತ್ಪಾದನಾ ಯೋಜನೆಗೆ 40,000 ಕೋಟಿ ರೂ.ಅನುದಾನ ಮೀಸಲಿಡಲಾಗಿದೆ. ಜಾಗತಿಕ ಕ್ಲೌಡ್ ಸೇವೆ ನೀಡುವ ಕಂಪನಿಗಳಿಗೆ 2047ರವರೆಗೆ ತೆರಿಗೆ ರಜೆ ನೀಡಿರುವುದು, ಬೆಂಗಳೂರಿನ ಐಟಿ ಉದ್ಯಮ ಮತ್ತು ಡಿಜಿಟಲ್ ಆರ್ಥಿಕತೆಗೆ ಭಾರಿ ಬೂಸ್ಟ್ ನೀಡಲಿದೆ.ಜೈವಿಕ ಔಷಧಿಗಳ ದೇಶೀಯ ಉತ್ಪಾದನೆಯನ್ನು ಉತ್ತೇಜಿಸಲು 10,000 ಕೋಟಿ ರೂ.ಮೊತ್ತದ ಬಯೋ ಫಾರ್ಮಾಶಕ್ತಿ ಯೋಜನೆಯನ್ನು ಘೋಷಿಸಲಾಗಿದೆ. ಇದು ದೇಶದ ಬಯೋಟೆಕ್ ಹಬ್ ಆಗಿರುವ ಕರ್ನಾಟಕದ ಬಯೋಫಾರ್ಮಾ ಉದ್ಯಮಕ್ಕೆ ಭಾರಿ ಶಕ್ತಿ ನೀಡಲಿದೆ.ಏರೋಸ್ಪೇಸ್ ಮತ್ತು ರಕ್ಷಣಾ ಉತ್ಪಾದನೆ ವಿಮಾನದ ಬಿಡಿಭಾಗಗಳು, ಎಂಜಿನ್ ಮತ್ತು ಕಚ್ಚಾವಸ್ತುಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಸಂಪೂರ್ಣವಾಗಿ ಮನ್ನಾ ಮಾಡಿರುವುದರಿಂದ ಏರೋಸ್ಪೇಸ್ ಕೇಂದ್ರವಾಗಿರುವ ಕರ್ನಾಟಕದ ಬೆಂಗಳೂರಿಗೆ ಲಾಭವಾಗಲಿದೆ ಎಂದು ತಿಳಿಸಿದರು.

‘ಸಿಟಿ ಎಕನಾಮಿಕ್ ರೀಜನ್’ ಯೋಜನೆಯನ್ನು ತರಲಾಗಿದ್ದು , ಪ್ರತಿ ಪ್ರದೇಶಕ್ಕೆ ಐದು ವರ್ಷ ಗಳ ಅವಧಿಗೆ 5,000 ಕೋಟಿ ರೂ.ಹÀಂಚಿಕೆ ಮಾಡಲಾಗಿದೆ.10 ಲಕ್ಷಕ್ಕೂ ಹೆಚ್ಚು ಮತ್ತು 5 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ನಗರಗಳಿಗೆ ವಿಶೇಷ ಮೂಲಸೌಕರ್ಯ ಬೆಂಬಲ ನೀಡಲಾಗುತ್ತಿದ್ದು , ಕರ್ನಾಟಕದ ಪ್ರಮುಖ ನಗರಗಳು ಈ ಯೋಜನೆಗಳಡಿ ಆಧುನಿಕ ಸೌಲಭ್ಯಗಳನ್ನು ಪಡೆಯಲಿವೆ ಎಂದು ಮಾಹಿತಿ ನೀಡಿದರು.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ