ನಾಡಗೌಡರೇ, ನನ್ನ ತಾಳ್ಮೆಗೂ ಮೀತಿ ಇದೆ-ನಡಹಳ್ಳಿ ಹೇಳಿಕೆ ಅನುದಾನ ತಂದಿದ್ದರೆ ದಾಖಲೆ ಬಿಡುಗಡೆ ಮಾಡಿ-ಸವಾಲು

ನಾಡಗೌಡರೇ, ನನ್ನ ತಾಳ್ಮೆಗೂ ಮೀತಿ ಇದೆ-ನಡಹಳ್ಳಿ ಹೇಳಿಕೆ ಅನುದಾನ ತಂದಿದ್ದರೆ ದಾಖಲೆ ಬಿಡುಗಡೆ ಮಾಡಿ-ಸವಾಲು

ಮುದ್ದೇಬಿಹಾಳ: ಕಾಂಗ್ರೆಸ್ ಸರ್ಕಾರದಲ್ಲಿ ಮೂರು ವರ್ಷಗಳ ಅವಧಿಯಲ್ಲಿ ಮತಕತ್ಷೇತ್ರದ ಅಭಿವೃದ್ಧಿಗೆ ಒಂದೇ ಒಂದು ಕೋಟಿ ರೂಪಾಯಿ ಅನುದಾನ ತಂದಿದ್ದರೆ ಅದಕ್ಕೆ ದಾಖಲೆಗಳನ್ನು ಬಿಡುಗಡೆ ಮಾಡಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಹಾಲಿ ಶಾಸಕ ಸಿ.ಎಸ್.ನಾಡಗೌಡರಿಗೆ ಸವಾಲು ಹಾಕಿದ್ದಾರೆ.

ಪಟ್ಟಣದ ದಾಸೋಹ ನಿಲಯದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಜನ ಆತ್ಮಾವಲೋಕ ಮಾಡಿಕೊಳ್ಳಬೇಕು.ಮುದ್ದೇಬಿಹಾಳ ಅತೀ ಹಿಂದುಳಿದ ತಾಲ್ಲೂಕು ಎಂದು ಗೋವಿಂದರಾವ್ ವರದಿಯಲ್ಲಿ ತಿಳಿಸಲಾಗಿದೆ.ಜಗತ್ತೆಲ್ಲಾ ಅಭಿವೃದ್ದಿ ಹೊಂದಿದರೂ ಮುದ್ದೇಬಿಹಾಳ ಎಲ್ಲಿ ಇರಬೇಕೋ ಅಲ್ಲಿಯೇ ಇರಬೇಕಾಗುತ್ತದೆ.ಇದಕ್ಕಾಗಿ ಜನತೆ ಜಾಗೃತಿಯಾಗದಿದ್ದರೆ ಎಚ್ಚೆತ್ತುಕೊಳ್ಳದಿದ್ದರೆ ನಿಮ್ಮ ಮಕ್ಕಳ ಶಾಪ ನಿಮಗೆ ತಟ್ಟುತ್ತದೆ.ನಿಷ್ಕಿçಯ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಿಕೊಳ್ಳುತ್ತಾ ಹೋದರೆ ಭವಿಷ್ಯದಲ್ಲಿ ನಿಮ್ಮ ಮಕ್ಕಳು ಅನುಭವಿಸುತ್ತಾರೆ ಎಂದು ಹೇಳಿದರು.

ಒಳಚರಂಡಿಯಲ್ಲಿ ನೀವು ಕೂಡುವ ಶೌಚವೇ ನಿಮ್ಮ ಮನೆ ಮುಂದೆ ಚೇಂಬರ್ ಮೂಲಕ ಬುಗ್ಗೆಯಾಗಿ ಉಕ್ಕುತ್ತದೆ.ಅದರ ಸುವಾಸನೆ ತಗೆದುಕೊಳ್ಳುವ ಸ್ಥಿತಿ ನಿಮಗೆ ಬೇಕಾ ಎಂದು ಪ್ರಶ್ನಿಸಿದ ನಡಹಳ್ಳಿ, ನಮ್ಮ ಸರ್ಕಾರದ ಅವಧಿಯಲ್ಲಿ ಟೆಂಡರ್ ಮೂಲಕ ಕೆಲಸ ಕೊಟ್ಟಿದ್ದೇವೆ.ಆದರೆ ಇವರು ಮಾತ್ರ ಎಲ್ಲವೂ ಲ್ಯಾಂಡ್ ಆರ್ಮಿಗೆ ಕೆಲಸ ಕೊಡುತ್ತಿದ್ದಾರೆ.ಸುರೇಶ ನಾಡಗೌಡ ಒಬ್ಬರೇ ಈ ತಾಲ್ಲೂಕು ಆಳುತ್ತಿದ್ದಾರೆ ಎಂದು ಹೇಳಿದರು.

ಕ್ಷೇತ್ರದಲ್ಲಿ ಕಷ್ಟ,ತೊಂದರೆ ಎಂದಾಗ ಸಹಾಯ,ಸಹಕಾರ ಮಾಡಿದ್ದೇನೆ.ಅದನ್ನೇ ಬೇರೊಂದು ಕ್ಷೇತ್ರದಲ್ಲಿ ಅಭಿವೃದ್ಧಿಗೆ ಖರ್ಚು ಮಾಡಿದ್ದರೆ ಸಾಯೋತನಕ ನನ್ನನ್ನು ಎಂ.ಎಲ್.ಎ ಮಾಡುತ್ತಿದ್ದರು.ಆದರೆ ನೀವು ಆಯ್ಕೆ ಮಾಡಿ ಕಳಿಸುವ ಜನಪ್ರತಿನಿಧಿ ಜನಪರ,ಬುದ್ಧಿವಂತನಾಗಿದ್ದರೆ ಮಾತ್ರ ಕ್ಷೇತ್ರದ ಅಭಿವೃದ್ಧಿ ಆಗುತ್ತದೆ.ಆದರೆ ನಿದ್ದೆ ಮಾಡುವ ಜನಪ್ರತಿನಿಧಿಯನ್ನು ಆಯ್ಕೆ ಮಾಡಿ ಕಳಿಸಿದ್ದೀರಿ ಎಂದು ಹೇಳಿದರು.

ಮುದ್ದೇಬಿಹಾಳದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ 2.86 ಕೋಟಿ ರೂ.ಕೈಕಾಲು ಬಿದ್ದು ಅನುದಾನ ಬಿಡುಗಡೆ ಮಾಡಿಸಿದ್ದೆ.ಆದರೆ ಅದು ಏನಾಯಿತು ಎಂದು ಗೊತ್ತಿಲ್ಲ.ಅದನ್ನು ಪೂರ್ತಿ ಲೂಟಿ ಹೊಡೆದಿದ್ದಾರೆ ಎನ್ನಿಸುತ್ತದೆ.ಶಾಲೆಗಳ ದುರಸ್ತಿಗೆ ಅನುದಾನ ಬಿಡುಗಡೆ ಮಾಡಿಸಿದ್ದೆ.ಉರ್ದು ಶಾಲೆಯ ಅಭಿವೃದ್ಧಿಗೆ 60 ಲಕ್ಷ ಹಣಕಾಸು ಮಂಜೂರಾತಿ ದೊರೆತಿತ್ತು. ಮುಸಲ್ಮಾನ ಬಂಧುಗಳ ಒಂದೇ ಒಂದು ಓಟು ಹಾಕಲಿಲ್ಲ. ಆದರೆ ಅಭಿವೃದ್ಧಿ ವಿಷಯ ಬಂದಾಗ ಜಾತಿ,ಮತ ಧರ್ಮ ನೋಡದೇ ಸಹಾಯ ಮಾಡಿದ್ದೇನೆ.ಉರ್ದು ಶಾಲೆಯ ಅಭಿವೃದ್ಧಿಗೆ ಕೊಟ್ಟ ಅನುದಾನ ಏನಾಯಿತು ಎಂದು ಮೌನವಾಗಿರುವ ಮುಸ್ಲಿಂ ಸಮಾಜದ ಕಾಂಗ್ರೆಸ್ ಮುಖಂಡರು ನಿದ್ದೆ ಮಾಡುತ್ತಿದ್ದೀರಾ. ನಿಮ್ಮ ನಾಯಕನನ್ನು ಕೊರಳುಪಟ್ಟಿ ಹಿಡಿದು ಕೇಳಿ ಎಂದು ಹೇಳಿದರು.

ಇದು ನನ್ನ ಕೊನೆಯ ಚುನಾವಣೆ ಎಂದಿದ್ದರು.ಆದರೆ ಈಗ ಉಲ್ಟಾ ಹೊಡೆಯುತ್ತಿದ್ದಾರೆ. ಜೀವನ ಪರ್ಯಂತ ರಾಜಕಾರಣ ಬಿಡುವುದಿಲ್ಲ ಎಂಬುದು ನನಗೆ ಗೊತ್ತಿದೆ.ಅಣ್ಣ,ಕಾಕಾ,ತಮ್ಮ ಎಂದರೆ ಸಾಕು ಕೆಲಸ ಮಾಡಿ ,ಬಿಡಿ ಬೆಂಗಳೂರಲ್ಲಿ ನಿದ್ದೆ ಮಾಡಿದರೂ ಯಾರೂ ಕೇಳುವವರಿಲ್ಲ.ತಾಲ್ಲೂಕಿನ ಜನತೆ ಎಚ್ಚೆತ್ತುಕೊಳ್ಳಬೇಕು.ಜಾತಿ ಧರ್ಮದ ಆಧಾರದ ಮೇಲೆ ಓಟು ಹಾಕುವುದನ್ನು ಬಿಡಿ.ಪುರಸಭೆ,ಜಿಪಂ, ತಾಪಂ ಚುನಾವಣೆಗಳಲ್ಲಿ ನನ್ನ ಜೊತೆಗೆ ಕೈ ಜೋಡಿಸಬೇಕು.ಜನರು ಎಚ್ಚೆತ್ತುಕೊಳ್ಳಿ ಎಂದು ಕೈ ಮುಗಿದು ಜನರಲ್ಲಿ ವಿನಂತಿಸುತ್ತೇನೆ.ನಿಮ್ಮ ಮಕ್ಕಳ ಭವಿಷ್ಯ ಹಾಳು ಮಾಡಬೇಡಿ ಎಂದು ನಡಹಳ್ಳಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಪ್ರಭು ಕಡಿ, ಸಂಜೀವ ಬಾಗೇವಾಡಿ, ಗಿರೀಶಗೌಡ ಪಾಟೀಲ,ಮದನಸ್ವಾಮಿ ಹಿರೇಮಠ, ಪರಶುರಾಮ ನಾಲತವಾಡ, ಬಸಯ್ಯ ನಂದಿಕೇಶ್ವರಮಠ,ಅಶೋಕ ಚಿನಿವಾರ, ಹುಲಗಪ್ಪ ಕಿಲಾರಟ್ಟಿ, ನಾಗೇಶ ಕವಡಿಮಟ್ಟಿ, ಪುನೀತ ಹಿಪ್ಪರಗಿ, ನಿಖಿಲ ಮಲಗಲದಿನ್ನಿ, ಶಿವು ಬಿರಾದಾರ,ಅನಿಲ ರಾಠೋಡ, ಶಿವು ಲದ್ದಿಮಠ, ಗೌರಮ್ಮ ಹುನಗುಂದ, ಕಾವೇರಿ ಕುಂಬಾರ, ಪ್ರೀತಿ ಕುಂಬಾರ ಮೊದಲಾದವರು ಇದ್ದರು.

ಅವನ್ಯಾವನೋ ಪಟ್ಟಿ ಕೊಡುತ್ತಾ ತಿರುಗಾಡುತ್ತಿದ್ದಾನೆ ; ನಡಹಳ್ಳಿ ಲೇವಡಿ
ಮುದ್ದೇಬಿಹಾಳ ಬಜಾರ್‌ದ ವ್ಯಾಪಾರಸ್ಥರು ರಸ್ತೆ ಧೂಳುಮಯವಾಗಿತ್ತು.ಈಗ ರಸ್ತೆ ಧೂಳುಮುಕ್ತವಾಗಿದೆ. ಅಂಬೇಡ್ಕರ್ ಮೂರ್ತಿ ಸ್ಥಾಪನೆ ಮಾಡಿದ್ದು ಅಲ್ಲಿ ಕೆಲಸ ಮಾಡಿದವರಿಗೆ ಬಿಲ್ ಕೊಟ್ಟಿಲ್ಲ.ನನ್ನ ತಾಳ್ಮೆಗೂ ಮಿತಿ ಇದೆ ನಾಡಗೌಡರೆ ? ಕಾಲ ಹೀಗೆ ಇರಲ್ಲ.ಇಡೀ ಊರು ಹಾಳಾಗಿದೆ.ಪುರಸಭೆ,ಪೊಲೀಸ್ ಠಾಣೆಯಂತೂ ಏನು ಉಳಿದಿಲ್ಲ.ಕಳಪೆ ಕಾಮಗಾರಿ ನಿಲ್ಲಿಸಬೇಕು. ನಾಲತವಾಡ ಭಾಗದಲ್ಲಿ 90 ಸಾವಿರ ರೂ.ಕಂಬದ ಎಸ್ಟಿಮೇಟ್ ಇತ್ತು,ಆದರೆ 10 ಸಾವಿರ ರೂ.ಕಂಬ ಹಾಕಿಸಿದ್ದೀರಿ.ಅವನ್ಯಾವನೋ ಪಟ್ಟಿ ಕೊಡುತ್ತಾ ತಿರುಗಾಡುತ್ತಿದ್ದಾನೆ.ನಾಲತವಾಡ ಕೆಇಬಿಯಿಂದ ಊರೊಳಕ್ಕೆ ಹಾಕಿರುವ ಕಂಬಗಳ ಗುಣಮಟ್ಟ ನೋಡಿ ಎಂದು ನಡಹಳ್ಳಿ ಹೇಳಿದರು.

Latest News

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಮುದ್ದೇಬಿಹಾಳ : ಇಲ್ಲಿನ ಯುವ ಉದ್ಯಮಿ,ಕಾಂಗ್ರೆಸ್ ಪಕ್ಷದ ಮುಖಂಡ ಆನಂದ ಪೂಜಾರಿ ಅವರನ್ನು ಕಾಂಗ್ರೆಸ್

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಮುದ್ದೇಬಿಹಾಳ : ದೇವಾಂಗ(ನೇಕಾರ)ಸಮುದಾಯದ ಸಂಘಟನೆ,ಜಾಗೃತಿಗಾಗಿ ಅಖಿಲ ಭಾರತ ದೇವಾಂಗ ಬೃಹತ್ ಜನಜಾಗೃತಿ ಸಮಾವೇಶ ಹಾಗೂ

ಶೋಷಿತರ ಧ್ವನಿ ಡಾ. ಬಿ.ಆರ್.ಅಂಬೇಡ್ಕರ್ – ಇಂದಿರಾ ಕುಂಬಾರ

ಶೋಷಿತರ ಧ್ವನಿ ಡಾ. ಬಿ.ಆರ್.ಅಂಬೇಡ್ಕರ್ – ಇಂದಿರಾ ಕುಂಬಾರ

​ಮುದ್ದೇಬಿಹಾಳ : ತಾಲ್ಲೂಕಿನ ಚವನಭಾವಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಮಂಗಳವಾರ ಸಂವಿಧಾನ ಶಿಲ್ಪಿ ಡಾ.

ಡಾ.ಬಿ.ಆರ್.ಅಂಬೇಡ್ಕರ್ ಭಾರತ ದೇಶದ ಆತ್ಮ-ಶಾಸಕ ಸಿ.ಎಸ್.ನಾಡಗೌಡ

ಡಾ.ಬಿ.ಆರ್.ಅಂಬೇಡ್ಕರ್ ಭಾರತ ದೇಶದ ಆತ್ಮ-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಭಾರತದ ರಾಷ್ಟçಪಿತ ಮಹಾತ್ಮಾ ಗಾಂಧೀಜಿ ಆಗಿದ್ದರೆ,ಡಾ.ಅಂಬೇಡ್ಕರ್ ಅವರು ಈ ದೇಶದ ಆತ್ಮವಾಗಿದ್ದಾರೆ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ;                                                                                 ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ; ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಮುದ್ದೇಬಿಹಾಳ : ಪಟ್ಟಣದ ಅಭ್ಯುದಯ ಪಿಯು ಸೈನ್ಸ್ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಶೇ.100ರಷ್ಟಾಗಿದೆ.ಪರೀಕ್ಷೆಗೆ ಕೂತಿದ್ದ 229 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅದರಲ್ಲಿ ಆಸೀಫಾ ಕಾಶೀಮ್ ಖತೀಬ ಶೇ.98ರಷ್ಟು ಅಂಕ ಪಡೆದು ಮುದ್ದೇಬಿಹಾಳ ನಗರಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ.ಇನ್ನುಳಿದAತೆ ಶೇ.97.83 ಅಂಕ ಪಡೆದ ಲಕ್ಷಿö್ಮÃ ಉಂಡಿ ದ್ವಿತೀಯ,ಶೇ.97.33 ಅಂಕ ಪಡೆದ ಸುಷ್ಮಿತಾ ದನ್ನೂರ ತೃತೀಯ ಸ್ಥಾನ ಪಡೆದುಕೊಂಡಿದ್ದಾಳೆ.ಉತ್ತೀರ್ಣರಾದ 229ರಲ್ಲಿ ಅದರಲ್ಲಿ 142 ಡಿಸ್ಟಿಂಕ್ಷನ್,76 ಪ್ರಥಮ,11 ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಗಣಿತದಲ್ಲಿ 54,ಬಯೋಲಜಿ

ಯೂರಿಯಾ,ಡಿಎಪಿ ರಸಗೊಬ್ಬರ ವಿತರಣೆಗೆ ಎಫ್.ಐ.ಡಿ ಕಡ್ಡಾಯ

ಯೂರಿಯಾ,ಡಿಎಪಿ ರಸಗೊಬ್ಬರ ವಿತರಣೆಗೆ ಎಫ್.ಐ.ಡಿ ಕಡ್ಡಾಯ

ಮುದ್ದೇಬಿಹಾಳ : ಮುಂಗಾರು ಹಂಗಾಮಿನಲ್ಲಿ ಯೂರಿಯಾ ವಿತರಣೆಗೆ ಆಪ್ ಅಭಿವೃದ್ಧಿಪಡಿಸಲಾಗಿದ್ದು ಎಲ್ಲ ಕೃಷಿ ಪರಿಕರ ಮಾರಾಟಗಾರರು ಅದನ್ನು ಬಳಸಿಕೊಂಡು ಯೂರಿಯಾ ಮಾರಾಟ ಮಾಡಬೇಕು.ಯೂರಿಯಾ ,ಡಿಎಪಿ ಗೊಬ್ಬರ ಖರೀದಿಸಲು ರೈತರ ಖಾತೆಗಳು ಎಫ್.ಐ.ಡಿ ನೋಂದಣಿಯಾಗಿರುವುದು ಕಡ್ಡಾಯವಾಗಿದೆ ಎಂದು ವಿಜಯಪುರದ ಉಪ ಕೃಷಿ ನಿರ್ದೇಶಕ ಶರಣಗೌಡ ಆರ್, ಎಂದು ಹೇಳಿದರು. ಪಟ್ಟಣದ ಹುಡ್ಕೋದಲ್ಲಿರುವ ಬಿ.ಜಿ.ಮಠ್ ಸಭಾಭವನದಲ್ಲಿ ಮಂಗಳವಾರ ಕೃಷಿಪರಿಕರ ಮಾರಾಟಗಾರರಿಗೆ ಏರ್ಪಡಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು. ಸನ್ 2026-27ನೇ ಸಾಲಿನಲ್ಲಿ ರೈತರಿಗೆ ಯೂರಿಯಾ