ಮೀನುಗಾರರ ಮೇಲೆ ದೌರ್ಜನ್ಯ ಆರೋಪ: ಮೀನುಗಾರಿಕೆ ಸಹಾಯಕ ನಿರ್ದೇಶಕರ ವಿರುದ್ಧ ಕ್ರಮಕ್ಕೆ ಒತ್ತಾಯ

ಮೀನುಗಾರರ ಮೇಲೆ ದೌರ್ಜನ್ಯ ಆರೋಪ: ಮೀನುಗಾರಿಕೆ ಸಹಾಯಕ ನಿರ್ದೇಶಕರ ವಿರುದ್ಧ ಕ್ರಮಕ್ಕೆ ಒತ್ತಾಯ

ಮುದ್ದೇಬಿಹಾಳ : ಅನುಮತಿ ಪಡೆದುಕೊಂಡು ಕಳೆದ ನಲವತ್ತು ವರ್ಷಗಳಿಂದ ಮೀನುಗಾರಿಕೆ ನಡೆಸುತ್ತಿದ್ದರೂ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಶರಣಗೌಡ ಬಿರಾದಾರ ತಮಗೆ ತೊಂದರೆ ಕೊಡುತ್ತಿದ್ದು ಅವರ ವಿರುದ್ದ ಮೇಲಧಿಕಾರಿಗಳು ಸೂಕ್ತ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ತಾಲ್ಲೂಕಿನ ಬಲದಿನ್ನಿ ಮೀನುಗಾರರ ಸಂಘದ ಪದಾಧಿಕಾರಿಗಳು ತಹಶೀಲ್ದಾರ್ ಕೀರ್ತಿ ಚಾಲಕ್ ಅವರಿಗೆ ಈಚೇಗೆ ಮನವಿ ಪತ್ರ ಸಲ್ಲಿಸಿದರು.

ಪಟ್ಟಣದ ತಹಶೀಲ್ದಾರ್ ಕಚೇರಿಗೆ ಆಗಮಿಸಿದ್ದ ಮೀನುಗಾರರು, ಮೀನುಗಾರಿಕೆ ಇಲಾಖೆ ಅಧಿಕಾರಿ ಮೇಲೆ ಕ್ರಮ ಜರುಗಿಸುವಂತೆ ಆಗ್ರಹಿಸಿದರು.

ಬಲದಿನ್ನಿ ಗ್ರಾಮಕ್ಕೆ ಬಂದು ಕಳೆದ 40 ವರ್ಷಗಳಿಂದ ಇಲ್ಲಿಯೇ ನೆಲೆಸಿದ್ದು ಇರುತ್ತದೆ.ಅದಕ್ಕೆ ಸಂಬAಧಿಸಿದ 50 ಮನೆಗಳು ಮೀನುಗಾರಿಕೆ ಇಲಾಖೆಯಿಂದ ಆಶ್ರಯ ಮನೆಗಳನ್ನು ಪಡೆದಿದ್ದು ಹಕ್ಕುಪತ್ರ ಸಹಿತ ಇರುತ್ತವೆ.100 ಜನ ಮೀನು ಹಿಡಿಯುವವರು ಆಧಾರ್ ಕಾರ್ಡ ಅಧಿಕೃತವಾಗಿ ಪಡೆದುಕೊಂಡಿದ್ದು ಇರುತ್ತದೆ.150 ಜನರು ಭಾರತದ ಚುನಾವಣಾ ಗುರುತಿನ ಚೀಟಿ ಹೊಂದಿದ್ದೇವೆ.ಸರ್ಕಾರದಿAದ 60 ಜನರು ಮೀನು ಹಿಡಿಯುವ ಲೈಸೆನ್ಸ್ ಪಡೆದುಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.

ಅಧಿಕಾರಿ ಶರಣಗೌಡ ಬಿರಾದಾರ ಎಲ್ಲ ಮೀನುಗಾರರಿಗೆ ತೊಂದರೆ ಕೊಡುತ್ತಿದ್ದು ಬಡ ಮೀನುಗಾರರ ಸಂಘದ ಅಧ್ಯಕ್ಷರ ಮೇಲೆ ಖೊಟ್ಟಿ ಕೇಸು ದಾಖಲಿಸಿ ಪೊಲೀಸರಿಂದ ಹೊಡೆಸಿ ಜೈಲಿಗೆ ಕಳುಹಿಸಿದ್ದು ಇರುತ್ತದೆ.ಮೀನು ಹಿಡಿಯಲು ಸರ್ಕಾರದಿಂದ ಅನುಮತಿ ಪತ್ರ ಇದ್ದರೂ ಒಂದು ಪುಟ್ಟಿ ಇಂಜನ್‌ಗೆ 5000 ರೂ.ಲಂಚ ಪಡೆದುಕೊಳ್ಳುತ್ತಿದ್ದಾರೆ ಎಂದು ದೂರಲಾಗಿದೆ.

ಲಂಚ ಕೊಡದೇ ಹೋದರೆ ನಿಮ್ಮ ಅನುಮತಿ ಪತ್ರ ರದ್ದು ಮಾಡುತ್ತೇನೆ ಮತ್ತು ನೀವು ನಮ್ಮ ರಾಜ್ಯ ಬಿಟ್ಟು ಹೋಗಬೇಕು ಎಂದು ರಾಜಕೀಯ ವ್ಯಕ್ತಿಗಳ ಸಹಾಯದಿಂದ ಒತ್ತಡ ಹೇರುತ್ತಿದ್ದಾರೆ. ಸರ್ಕಾರದಿಂದ ಮೀನುಗಾರರಿಗೆ ಬರುತ್ತಿರುವ ಸೌಲಭ್ಯಗಳನ್ನು ಬೇರೊಬ್ಬರಿಗೆ ಹಣ ಪಡೆದುಕೊಂಡು ಮಾರಾಟ ಮಾಡಿದ್ದು ಸಾಕಷ್ಟು ಉದಾಹರಣೆಗಳು ಇದ್ದು ಈ ಅಧಿಕಾರಿ ವಿರುದ್ದ ಕ್ರಮ ಜರುಗಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಮನವಿಗೆ ಬಲದಿನ್ನಿ ಮೀನುಗಾರರ ಸಹಕಾರ ಸಂಘದ ಅಧ್ಯಕ್ಷ ಅಬ್ರಾಹಮು, ಗ್ರಾಪಂ ಸದಸ್ಯ ಅಕ್ಷಯ ನಾಡಗೌಡ,ಮಂಜುನಾಥ ಮುಂದಿನಮನಿ, ರಾಹುಲ ಜಾಗಿರದಾರ,ಗಂಗಾಧರ ಮುಂದಿನಮನಿ, ಯಲ್ಲಪ್ಪ ಮಾದರ, ರಾಜು, ಕೆ.ಎಂ.ಮಾಸೆನು, ಸಿ.ಎಚ್.ಬಂಗಾರಿ, ರಾಜಣ್ಣ ಮೊದಲಾದವರು ಸಹಿ ಮಾಡಿದ್ದಾರೆ.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ