ನವಜೀವನೋತ್ಸವ ಕಾರ್ಯಕ್ರಮ: ಕುಡಿತ ಬಿಟ್ಟವರು ಮತ್ತೆ ಅದರತ್ತ ಹೊರಳಬೇಡಿ – ಮೋಹನ್‌ನಾಯ್ಕ

ನವಜೀವನೋತ್ಸವ ಕಾರ್ಯಕ್ರಮ: ಕುಡಿತ ಬಿಟ್ಟವರು ಮತ್ತೆ ಅದರತ್ತ ಹೊರಳಬೇಡಿ – ಮೋಹನ್‌ನಾಯ್ಕ

ಮುದ್ದೇಬಿಹಾಳ : ಯಾವುದೋ ಕಾರಣದಿಂದಾಗ ಕುಡಿತದ ದಾಸರಾಗಿದ್ದುಕೊಂಡು ಮನ,ಮನೆಯ ಸ್ಥಿತಿಯನ್ನು ಹಾಳುಮಾಡಿಕೊಂಡಿದ್ದವರು ಮದ್ಯವರ್ಜನ ಶಿಬಿರದ ಮೂಲಕ ಸುಧಾರಣೆ ಕಂಡಿದ್ದೀರಿ.ಇದೀಗ ನವಜೀವನ ಸಮೀತಿಯ ಸದಸ್ಯರಾಗಿದ್ದೀರಿ.ಪಾನಮುಕ್ತರು ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಮುಖ್ಯಸ್ಥರಾದ ಡಾ.ವೀರೇಂದ್ರ ಹೆಗ್ಗಡೆ ಅವರು ಪ್ರಮಾಣ ಪತ್ರಗಳನ್ನು ನಿಮಗೆ ನೀಡಿದ್ದಾರೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ಮೋಹನ್ ನಾಯ್ಕ ಹೇಳಿದರು.

ಪಟ್ಟಣದ ವಿದ್ಯಾನಗರದಲ್ಲಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ನವಜೀವನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮತ್ತೆ ಕುಡಿತಕ್ಕೆ ಬಲಿ ಆಗದೆ ಉತ್ತಮ ಜೀವನ ನಡೆಸಬೇಕು. ಸಮಾಜಮುಖಿ ಕೆಲಸ ಮಾಡಲು ಪೂಜ್ಯರಿಗೆ ಮತ್ತಷ್ಟು ಶಕ್ತಿ ಬರುತ್ತದೆ ಎಂದು ಹೇಳಿದರು.

ಜಿಲ್ಲಾ ಜನಜಾಗೃತಿ ಸಮಿತಿ ಸದಸ್ಯ ಶ್ರೀಶೈಲ್ ದೊಡಮನಿ ಮಾತನಾಡಿ, ನವಜೀವನ ಸಮಿತಿ ಸದಸ್ಯರು ಹೊಸ ಜೀವನ ಆರಂಭಿಸಿದ್ದು ಅವರ ಭವಿಷ್ಯದ ಜೀವನ ಉಜ್ವಲವಾಗಲಿ ಎಂದರು.

ಜನಜಾಗೃತಿ ವೇದಿಕೆ ಸದಸ್ಯ ಡಾ.ವೀರೇಶ ಪಾಟೀಲ ಮಾತನಾಡಿ, ಮುಂದಿನ ಜೀವನದಲ್ಲಿ ಕುಡಿತಕ್ಕೆ ಒಳಗಾಗದೆ ಒಳ್ಳೆಯ ದಾರಿಯಲ್ಲಿ ಸಮಾಜಕ್ಕೆ ಒಬ್ಬ ಒಳ್ಳೆಯ ವ್ಯಕ್ತಿಯಾಗಿ ಜೀವನ ಮಾಡಬೇಕೆಂದು ಹೇಳಿದರು.

ಕಲಬುರ್ಗಿ ಜನಜಾಗೃತಿ ವಿಭಾಗದ ಯೋಜನಾಧಿಕಾರಿ ರಾಜೇಶ ಕೆ ಮಾತನಾಡಿ, ಕುಡಿತ ಬಿಟ್ಟ ನಂತರ ಕ್ಷೇತ್ರ ಧರ್ಮಸ್ಥಳದಿಂದ ಬರುವಂತಹ ಹಲವು ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರಲ್ಲದೇ ಪಾನಮುಕ್ತರಾಗಿರುವ ಜೀವನದ ಕಥೆ ಇನ್ನೊಬ್ಬರಿಗೆ ಮಾರ್ಗದರ್ಶನ ಮಾಡುವಂತೆ ಸಾಧನೆ ಮಾಡಲು ಹೇಳಿದರು.

ತಾಲ್ಲೂಕು ಯೋಜನಾಧಿಕಾರಿ ಶಿವಾನಂದ ಪಿ.,ನಾಗೇಶ ಎಸ್.ಕೆ.,ನಿಂಗನಗೌಡ ಪಾಟೀಲ್ ಸೇವಾಪ್ರತಿನಿಧಿಗಳು, ನವಜೀವನ ಸಮಿತಿ ಸದಸ್ಯರು ಇದ್ದರು.ಮಲ್ಲೇಶ ಕೆ.,ಸ್ವಾಗತಿಸಿದರು.ನಿಂಗನಗೌಡ ಪಾಟೀಲ್ ನಿರೂಪಿಸಿದರು.ನಾಗೇಶ್ ಎಸ್.ಕೆ ವಂದಿಸಿದರು.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ