ಮುಸ್ಲಿಂ ಸಮಾಜದವರಿಂದ ಮನವಿ: ಶವ ಸಂಸ್ಕಾರಕ್ಕೆ ಸ್ಮಶಾನ ಭೂಮಿ ಒದಗಿಸಲು ಆಗ್ರಹ

ಮುಸ್ಲಿಂ ಸಮಾಜದವರಿಂದ ಮನವಿ: ಶವ ಸಂಸ್ಕಾರಕ್ಕೆ ಸ್ಮಶಾನ ಭೂಮಿ ಒದಗಿಸಲು ಆಗ್ರಹ

ಮುದ್ದೇಬಿಹಾಳ : ಪೂರ್ವದ ಕಾಲದಿಂದಲೂ ಹಿರಿಯರು ನಮ್ಮ ಸಮಾಜದವರು ಯಾರೇ ನಿಧನ ಹೊಂದಿದರೂ ಅವರ ಶವ ಸಂಸ್ಕಾರವನ್ನು ಗ್ರಾಮದ ಬಿರಾದಾರ ಎಂಬುವರ ಜಮೀನಿನಲ್ಲಿ ಮಾಡುತ್ತ ಬಂದಿದ್ದರು.ಆದರೆ ಈಗ ಆ ಜಮೀನಿನ ಮಾಲೀಕರು ಶವಸಂಸ್ಕಾರಕ್ಕೆ ಅಡ್ಡಿಪಡಿಸುತ್ತಿದ್ದು ಸರ್ಕಾರದಿಂದ ಮುಸ್ಲಿಂ ಸಮಾಜಕ್ಕೆ ಸ್ಮಶಾನ ಭೂಮಿ ಒದಗಿಸಬೇಕು ಎಂದು ತಾಲ್ಲೂಕಿನ ಶಿರೋಳ ಗ್ರಾಮದ ಅಂಜುಮನ್ ಇಸ್ಲಾಂ ಕಮೀಟಿ ಪದಾಧಿಕಾರಿಗಳು ಈಚೇಗೆ ತಹಶೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಪಟ್ಟಣದ ತಹಶೀಲ್ದಾರ್ ಕಚೇರಿಗೆ ಆಗಮಿಸಿದ್ದ ಗ್ರಾಮದ ಮುಸ್ಲಿಂ ಸಮಾಜದ ಬಾಂಧವರು ತಹಶೀಲ್ದಾರ್ ಕೀರ್ತಿ ಚಾಲಕ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.ಗ್ರಾಮದ ಅಂಜುಮನ್ ಇಸ್ಲಾಂ ಕಮೀಟಿ ಅಧ್ಯಕ್ಷ ರಹಿಮಾನಸಾ ಮುದ್ನಾಳ , ಮುಖಂಡ ಅಬ್ದುಲರಜಾಕ ತಮದಡ್ಡಿ ಮಾತನಾಡಿ, ಗ್ರಾಮದಲ್ಲಿರುವ ಸವಳು ಜವಳು ಜಮೀನಿನಲ್ಲಿ ಸ್ಮಶಾನ ಭೂಮಿ ಹಂಚಿಕೆ ಮಾಡಬೇಕು.ಅಲ್ಲಿ ಬೆಳೆಯೂ ಬರುವುದಿಲ್ಲ.ಸರ್ಕಾರ ಭೂಮಿ ಖರೀದಿ ಮಾಡಿಕೊಡಬೇಕು ಎಂದು ಮನವಿ ಮಾಡಿಕೊಂಡಿದ್ದೇವೆ ಎಂದು ತಿಳಿಸಿದರು.

ಅನಾದಿ ಕಾಲದಿಂದಲೂ ನಮ್ಮ ಸಮಾಜದವರ ಹಿರಿಯರ ಗೋರಿಗಳು ಅಲ್ಲಿಯೇ ಇದ್ದು ಶುಕ್ರವಾರ ಹಾಗೂ ಹಬ್ಬದ ದಿನಗಳಲ್ಲಿ ಹಿರಿಯರನ್ನು ಸ್ಮರಿಸುವ ಕಾರ್ಯ ಮಾಡುವ ಮೂಲಕ ಭಾವನಾತ್ಮಕ ಸಂಬAಧ ಉಳಿಸಿಕೊಂಡಿದ್ದೇವೆ.ಅದನ್ನು ಉಳಿಸಿಕೊಡಬೇಕು ಎಂದು ತಹಶೀಲ್ದಾರ್‌ಗೆ ವಿನಂತಿಸಿದರು.

ಗ್ರಾಮದಲ್ಲಿರುವ ಸರ್ಕಾರಿ ಸ್ವಾಮ್ಯದ ಜಮೀನು ರಿ.ಸ.ನಂ 110/1 ರಲ್ಲಿ 1-18 ಎಕರೆ ಇದ್ದು ಅಲ್ಲಿ ಹೊಸ ಸ್ಮಶಾನಕ್ಕೆ ಜಾಗೆ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದೇವೆ ಎಂದು ತಿಳಿಸಿದರು. ಕಮೀಟಿಯ ಕಾರ್ಯದರ್ಶಿ ಬಷೀರಹ್ಮದ ತಮದಡ್ಡಿ, ಶೌಕತ್‌ಅಲಿ ತಾರನಾಳ,ಮುಖಂಡ ಎಚ್.ಆರ್.ಬಾಗವಾನ, ಅಬ್ದುಲರಜಾಕ ನದಾಫ, ಚಾಂದಸಾ ನದಾಫ,ಮಹ್ಮದರಫೀಕ ಮುದ್ನಾಳ,ಮುರ್ತುಜಖಾದರ ತಮದಡ್ಡಿ,ಯಾಸೀನ ಮುದ್ನಾಳ ಇದ್ದರು.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ