ಸಿದ್ದು ಸರ್ಕಾರ ಅಸ್ಥಿರಕ್ಕೆ ವಿಪಕ್ಷಗಳ ಕುತಂತ್ರ ಖಂಡಿಸಿ ನಾಳೆ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ: ಎಂ.ಎನ್.ಮದರಿ

ಸಿದ್ದು ಸರ್ಕಾರ ಅಸ್ಥಿರಕ್ಕೆ ವಿಪಕ್ಷಗಳ ಕುತಂತ್ರ ಖಂಡಿಸಿ ನಾಳೆ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ: ಎಂ.ಎನ್.ಮದರಿ


ಮುದ್ದೇಬಿಹಾಳ : ಮುಡಾ ಹಗರಣ ಹಿನ್ನೆಲೆ ಸಿಎಂ ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಹೊರಡಿಸಿರುವ ಶೋಕಾಸ್ ನೋಟಿಸ್‌ನ್ನು ಖಂಡಿಸಿ ನೋಟಿಸ್‌ನ್ನು ಹಿಂಪಡೆಯುವಂತೆ ಆಗ್ರಹಿಸಿ ಅಹಿಂದ ಒಕ್ಕೂಟದ ನೇತೃತ್ವದಲ್ಲಿ ಆ.6ರಂದು ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಅಹಿಂದ ಒಕ್ಕೂಟದ ಮುಖಂಡ, ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಎಂ.ಎನ್.ಮದರಿ ಹೇಳಿದರು.

ಪಟ್ಟಣದ ಹುಡ್ಕೋದಲ್ಲಿರುವ ಪಲ್ಲವಿ ಹೊಟೇಲ್‌ನಲ್ಲಿ ಸೋಮವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಮುಡಾ ಹಗರಣದಲ್ಲಿ ವಿನಾಕಾರಣ ಸಿದ್ಧರಾಮಯ್ಯನವರ ಹೆಸರು ಎಳೆದು ತಂದು ಅವರಿಗೆ ಕಪ್ಪು ಮಸಿ ಬಳಿಯಲು ಯತ್ನಿಸುತ್ತಿರುವ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಬಿಜೆಪಿಯ ಏಜೆಂಟ ಆಗಿ ಅಬ್ರಾಹಂ ವರ್ತಿಸುತ್ತಿದ್ದಾರೆ. ಸಿದ್ಧರಾಮಯ್ಯ ವರ್ಚಸ್ಸು ತಾಳದೇ ಬಿಜೆಪಿಗರು ಕುತಂತ್ರ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಏನಾದರೂ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಲ್ಲಿ ಮತ್ತಷ್ಟು ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಹೇಳಿದರು.

ಬಿಜೆಪಿ-ಜೆಡಿಎಸ್ ಪಕ್ಷದ ನಾಯಕರು ಪಾದಯಾತ್ರೆ ನಡೆಸುತ್ತಿರುವುದು ಅಹಿಂದ ವರ್ಗದ ನಾಯಕರಾಗಿರುವ ಸಿಎಂ ಸಿದ್ದರಾಮಯ್ಯನವರನ್ನು ಅಧಿಕಾರದಿಂದ ಕೆಳಗಿಳಿಸಲು ಹುನ್ನಾರ ನಡೆಸಿದ್ದಾರೆ. ರಾಜ್ಯಪಾಲರ ಸಂವಿಧಾನ ಬಾಹಿರ ನಡೆಯನ್ನು ಖಂಡಿಸಿ ಆ.6 ರಂದು ವಿಜಯಪುರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟçಪತಿಗೆ ಮನವಿ ಪತ್ರ ಸಲ್ಲಿಸಲಾಗುತ್ತದೆ ಎಂದು ದೂರಿದರು.

ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಬಿರಾದಾರ ಮಾತನಾಡಿ, ಚುನಾವಣೆಯಲ್ಲಿ ಬಹುಮತದಿಂದ ಸರ್ಕಾರವನ್ನು ಇಳಿಸಬೇಕೇ ಹೊರತು ರಾಜ್ಯಪಾಲರ ನೋಟಿಸ್‌ನಿಂದಲ್ಲ. ಆದರೆ ಬಹುಮತವಿರುವ ಸಿದ್ದರಾಮಯ್ಯನವರ ಸರ್ಕಾರವನ್ನು ಅಸ್ಥಿರಗೊಳಿಸಲು ಸಿಎಂಗೆ ನೋಟಿಸ ಕೊಡುವುದರ ಹಿಂದೆ ಬಿಜೆಪಿ, ಜೆಡಿಎಸ್ ಪಕ್ಷದ ಪಿತೂರಿ ಕೆಲಸ ಮಾಡುತ್ತಿದೆ. ಸಿದ್ಧರಾಮಯ್ಯನವರ ರಾಜಕೀಯ ಜೀವನದಲ್ಲಿ ಶಾಸಕರಾಗಿ, ಸಚಿವರಾಗಿ, ಉಪ ಮುಖ್ಯಮಂತ್ರಿಯಾಗಿ, ಸಿಎಂ ಆಗಿರುವ ಕಾಲದಲ್ಲಿ ಅಧಿಕಾರ ದುರುಪಯೋಗ, ಹಗರಣಗಳು ನಡೆದಿರುವ ನಿದರ್ಶನಗಳಿಲ್ಲ. ಅವರು ತಮ್ಮ ರಾಜಕೀಯ ಜೀವನದುದ್ದಕ್ಕೂ ನಿಷ್ಕಳಂಕ ರಾಜಕಾರಣಿಯಾಗಿದ್ದಾರೆ ಎಂದರು.

ಅಹಿಂದ ಮುಖಂಡ ವಾಯ್.ಎಚ್.ವಿಜಯಕರ್ ಮಾತನಾಡಿ, ಹಿಂದೆ ಎಸ್.ಆರ್.ಬೊಮ್ಮಾಯಿ ಇದೇ ರೀತಿ ರಾಜಭವನದ ಕಿರುಕುಳ ನಡೆದು ರಾಜೀನಾಮೆ ಕೊಡಬೇಕಾಯಿತು. ಸರ್ವೋಚ್ಚ ನ್ಯಾಯಾಲಯ ರಾಜಭವನಕ್ಕಿಂತ ಶಾಸನಸಭೆ ಸರ್ವೋಚ್ಛ ಎಂದು ತೀರ್ಪು ನೀಡಿತ್ತು. ಪ್ರಜಾಪ್ರಭುತ್ವದಲ್ಲಿ ಶಾಸನಸಭೆ ಸಂವಿಧಾನ ಬದ್ಧವಾಗಿ ಸರ್ವೋಚ್ಚ. ಶಾಸನ ಸಭೆಯಲ್ಲಿ ವಿಶೇಷ ಅಧಿವೇಶನವನ್ನು ನಡೆಸಿ ಮುಖ್ಯಮಂತ್ರಿಗಳ ಪಾತ್ರದ ಬಗ್ಗೆ ಸಮಗ್ರವಾಗಿ ಚರ್ಚೆ ಮಾಡಬಹುದಾಗಿತ್ತು. ಆದರೆ ವಿಧಾನಸೌಧದಲ್ಲಿ ನಡೆದ ಅಧಿವೇಶನದ ಸಮಯದಲ್ಲಿ ಕಾಲಹರಣ ಮಾಡಿ ಹಗಲು-ರಾತ್ರಿ ಧರಣಿ ಮಾಡಿ ತಾಳ, ತಂಬೂರಿಯನ್ನು ಹಿಡಿದು ನರ್ತನ ಮಾಡಿ ಸದನದ ಗೌರವವನ್ನು ಹಾಳು ಮಾಡಿ ಚರ್ಚೆ ಇಲ್ಲದೆ ಒಂದು ದಿನ ಮುಂಚಿತವಾಗಿಯೇ ಸದನವನ್ನು ಮುಂದೂಡಬೇಕಾಯಿತು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಅಹಿಂದ ಮುಖಂಡರಾದ ಜಿಪಂ ಮಾಜಿ ಸದಸ್ಯ ಬಿ.ಎಸ್.ಶಿರೋಳ, ದಾದಾ ಎತ್ತಿನಮನಿ, ಬಾಬಾ ಯಕೀನ್, ಪುರಸಭೆ ನಾಮನಿರ್ದೇಶಿತ ಸದಸ್ಯ ಸಂತೋಷ ನಾಯ್ಕೋಡಿ, ಸಂಗಣ್ಣ ಮೇಲಿನಮನಿ, ಗ್ರಾಪಂ ಮಾಜಿ ಉಪಾಧ್ಯಕ್ಷ ಹಣಮಂತ ಮೇಟಿ, ಮಹಾದೇವ ಪೂಜಾರಿ, ಮುನ್ನಾ ಸಗರ, ಗ್ರಾಪಂ ಮಾಜಿ ಅಧ್ಯಕ್ಷ ಎಸ್.ಕೆ.ಹಳೇಮನಿ ಇದ್ದರು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ