ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ರಕ್ಷಣೆ ಕೋರಿ ಭಾರತಕ್ಕೆ ಬಂದ್ರು! (ವಿಡಿಯೋ ನೋಡಿ)

ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ರಕ್ಷಣೆ ಕೋರಿ ಭಾರತಕ್ಕೆ ಬಂದ್ರು! (ವಿಡಿಯೋ ನೋಡಿ)

ನವದೆಹಲಿ: ಸರ್ಕಾರಿ ಉದ್ಯೋಗ ಮೀಸಲಾತಿ ಯೋಜನೆಗೆ ಸಂಬಂಧಿಸಿದಂತೆ ಕಳೆದ ಹಲವು ದಿನಗಳಿಂದ ಬಾಂಗ್ಲಾ ದೇಶದಾದ್ಯಂತ ಭಾರೀ ಹಿಂಸಾಚಾರ ನಡೆಯುತ್ತಿದೆ. ಈ ನಡುವೆ ಇಂದು ಪ್ರಧಾನಿ ಶೇಖ್ ಹಸೀನಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ರಕ್ಷಣೆಕೋರಿ ಭಾರತಕ್ಕೆ ಬಂದಿದ್ದಾರೆಂದು ವರದಿಯಾಗಿದ್ದು, ಅತ್ತ ಬಾಂಗ್ಲಾದೇಶದ ಅಧಿಕಾರ ಸೇನೆಯ ತೆಕ್ಕೆಗೆ ಸೇರಿದೆ.

ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ಬೆನ್ನಲ್ಲೇ ಅಲ್ಲಿನ ಸೇನಾ ಮುಖ್ಯಸ್ಥ ವಾಕರ್-ಉಜ್-ಝಮಾನ್ ಸುದ್ದಿಗೋಷ್ಠಿ ನಡೆಸಿ ವಿಚಾರವನ್ನು ಘೋಷಣೆ ಮಾಡಿದ್ದಾರೆ.

ಶೇಖ್ ಹಸೀನಾ ರಾಜೀನಾಮೆ ನೀಡಿರುವ ಹಿನ್ನೆಲೆ ಸೇನೆಯ ನೇತೃತ್ವದಲ್ಲಿ ಹಂಗಾಮಿ ಸರ್ಕಾರ ರಚನೆಯಾಗಲಿದೆ. ಬಾಂಗ್ಲಾದ ಅರಾಜಕತೆ ಅಂತ್ಯಗೊಳಿಸುತ್ತೇವೆ ಎಂದು ತಿಳಿಸಿದ್ದಾರೆ.

ಭಾರೀ ಪ್ರತಿಭಟನೆಯ ಹಿನ್ನೆಲೆಯಲ್ಲಿ ಪ್ರಧಾನಿ ರಾಜಧಾನಿಯಿಂದ ಪಲಾಯನ ಮಾಡಿದ್ದಾರೆ. ಇದೀಗ ದೇಶದ ಸಂಪೂರ್ಣ ಜವಾಬ್ದಾರಿಯನ್ನು ನಾವು ತೆಗೆದುಕೊಂಡು ಮಧ್ಯಂತರ ಸರ್ಕಾರವನ್ನು ರಚಿಸುತ್ತೇವೆ. ದೇಶಕ್ಕೆ ಶಾಂತಿಯನ್ನು ಹಿಂದಿರುಗಿಸುತ್ತೇವೆ, ಹಿಂಸಾಚಾರವನ್ನು ನಿಲ್ಲಿಸುವಂತೆ ನಾವು ನಾಗರಿಕರನ್ನು ಕೇಳುತ್ತೇವೆ.

ಕಳೆದ ಕೆಲವು ವಾರಗಳಲ್ಲಿ ನಡೆದ ಎಲ್ಲಾ ಹತ್ಯೆಗಳ ಬಗ್ಗೆ ನಾವು ತನಿಖೆ ನಡೆಸುತ್ತೇವೆ ಎಂದು ಅವರು ಹೇಳಿದ್ದಾರೆ.

ಮಧ್ಯಂತರ ಸರ್ಕಾರವನ್ನು ರಚಿಸಲು ಅಧ್ಯಕ್ಷರೊಂದಿಗೆ ಚರ್ಚಿಸಲಾಗಿದೆ. ದೇಶದಲ್ಲಿ ಕರ್ಫ್ಯೂ ಅಥವಾ ಯಾವುದೇ ತುರ್ತು ಪರಿಸ್ಥಿತಿಯ ಅಗತ್ಯವಿಲ್ಲ. ಇಂದು ರಾತ್ರಿಯೊಳಗೆ ಬಿಕ್ಕಟ್ಟಿಗೆ ಪರಿಹಾರವನ್ನು ಕಂಡುಕೊಳ್ಳುತ್ತೇವೆ ಎಂದು ಅವರು ಭರವಸೆ ನೀಡಿದರು.

ದೇಶ ತೊರೆದಿರುವ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ತಮ್ಮ ಸುರಕ್ಷತೆಗಾಗಿ ಇದೀಗ ಭಾರತಕ್ಕೆ ಬಂದಿಳಿದಿದ್ದಾರೆ ಎಂದು ವರದಿಯಾಗಿದೆ.

ಮಾಹಿತಿ ಪ್ರಕಾರ, ಅವರು ತಮ್ಮ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೂಡಲೇ ಬಾಂಗ್ಲಾ ವಾಯುಸೇನೆಯ ಹೆಲಿಕಾಪ್ಟರ್ ಮೂಲಕ ಶೇಖ್ ಹಸೀನಾ ಅವರು ಭಾರತದ ತ್ರಿಪುರಾದ ರಾಜಧಾನಿ ಅಗರ್ತಲಾಗೆ ಬಂದಿಳಿದ್ದಾರೆ.

ಭಾರತದ ಅಗರ್ತಲಾವು ಬಾಂಗ್ಲಾ ರಾಜಧಾನಿ ಢಾಕಾಗೆ ತೀರ ಹತ್ತಿರವಾದ ನಗರ. ಇಲ್ಲಿಗೆ ಶೇಖ್ ಹಸೀನಾ ತಮ್ಮ ಸಹೋದರಿಯೊಂದಿಗೆ ಬಾಂಗ್ಲಾದೇಶದ ವಾಯುಪಡೆಯ ಹೆಲಿಕಾಪ್ಟರ್‌ನಲ್ಲಿ ಬಂದಿಳಿದಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ