ದೇಶದ ಪ್ರಗತಿಗೆ ಸಂಸ್ಕಾರಭರಿತ ಶಿಕ್ಷಣ ಅವಶ್ಯ-ಆರ್.ಎಸ್.ಬಂಗಿ

ದೇಶದ ಪ್ರಗತಿಗೆ ಸಂಸ್ಕಾರಭರಿತ ಶಿಕ್ಷಣ ಅವಶ್ಯ-ಆರ್.ಎಸ್.ಬಂಗಿ

ಮುದ್ದೇಬಿಹಾಳ : ದೇಶದ ಪ್ರಗತಿ ಪಥದ ಚಾಲನೆಗೆ ಸಂಸ್ಕಾರ ಭರಿತ ಶಿಕ್ಷಣ ಅವಶ್ಯಕ ಎಂದು ಕ್ರೈಂ ಪಿ.ಎಸ್.ಆಯ್ ಆರ್.ಎಸ್.ಬಂಗಿ ಹೇಳಿದರು.

ಪಟ್ಟಣದ ವಿವೇಕಾನಂದ ವಿದ್ಯಾ ಪ್ರಸಾರ ಸಮಿತಿ ಅಡಿಯಲ್ಲಿ ನಡೆಯುವ ಜ್ಞಾನ ಭಾರತಿ ವಿದ್ಯಾ ಮಂದಿರ ಸಮೂಹ ವಿದ್ಯಾ ಸಂಸ್ಥೆಯ 40ನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು.

ದೇಶದ ಅಭಿವೃದ್ಧಿಯಲ್ಲಿ ಯುವ ಜನತೆಯ ಪಾತ್ರ ಹಿರಿದಾಗಿದೆ. ವ್ಯಸನಕ್ಕೆ ಒಳಗಾಗಬಾರದು. ವ್ಯಸನಮುಕ್ತ ಸದ್ಗುಣ ಯುಕ್ತ ವ್ಯಕ್ತಿಯನ್ನು ನಿರ್ಮಾಣ ಮಾಡುವಲ್ಲಿ ಮನೆ, ಶಾಲೆ, ಸಮಾಜದ ಪಾತ್ರ ಹಿರಿದಾಗಿದೆ. ಮಕ್ಕಳು ವಿದ್ಯಾರ್ಥಿಯ ದೆಸೆಯಿಂದಲೇ ತಮ್ಮ ಬದುಕನ್ನು ಕಟ್ಟಿಕೊಳ್ಳುವ ಮಹತ್ವಾಕಾಂಕ್ಷೆಯನ್ನು ಹೊಂದಿರಬೇಕು ಎಂದರು.

ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ ಮಾತನಾಡಿ, ಆಧುನಿಕ ಕಾಲಘಟ್ಟದಲ್ಲಿ ಪರಿವರ್ತನೆಗೆ ಬದಲಾದ ಪದ್ಧತಿ ಶಿಕ್ಷಣದಲ್ಲಿ ಮೂಡಿಬರಬೇಕಾಗಿದೆ. ವಿದ್ಯಾರ್ಥಿ ಜೀವನದ ಗುರಿ ಜ್ಞಾನಾರ್ಜನೆಯಾಗಿರಬೇಕು ಎಂದರು.

ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಂ.ಎA.ಬೆಳಗಲ್, ನಿವೃತ್ತ ಪ್ರಾಧ್ಯಾಪಕ ಬಿ.ಎಮ್. ಹಿರೇಮಠ, ಕರ್ನಾಟಕ ಅರ್ಬನ್ ಬ್ಯಾಂಕಿನ ವ್ಯವಸ್ಥಾಪಕಿ ಸುಮಾ ನಾಡಗೌಡ, ಅಧ್ಯಕ್ಷ ಬಿ.ಪಿ.ಕುಲಕರ್ಣಿ ಸೇರಿದಂತೆ ಗಣ್ಯರು ಮಾತನಾಡಿದರು.

ಬಿ.ಎಸ್.ಎಫ್ ಸೇನೆಗೆ ಸೇರಿದ ಕಾಲೇಜಿನ ಹಿರಿಯ ವಿದ್ಯಾರ್ಥಿ ಲಾಳೆಮುಶ್ಯಾಕ್ ನಾಯ್ಕೋಡಿ ಹಾಗೂ ಕಳೆದ ವರ್ಷ ಪಿ.ಯು.ಸಿ ದ್ವಿತೀಯ ವರ್ಷದಲ್ಲಿ ಮತ್ತು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶಾಲೆಗೆ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸಂಸ್ಥೆಯ ವತಿಯಿಂದ ಗೌರವಿಸಲಾಯಿತು.

ಸಂಸ್ಥೆಯ ಉಪಾಧ್ಯಕ್ಷರಾದ ಡಾ. ಎಸ್.ಬಿ.ವಡವಡಗಿ, ಕಾರ್ಯದರ್ಶಿ ಪ್ರಭು ಕಡಿ, ಕೋಶಾಧ್ಯಕ್ಷ ಎಮ್.ಪಿ.ದಂಡಾವತಿ, ನಿರ್ದೇಶಕರುಗಳಾದ ಬಿ.ಆರ್.ಓಸ್ವಾಲ್, ಜಿ.ಎಸ್.ಓಸ್ವಾಲ್, ಲೀಲಾ ಭಟ್ಟ, ಜಿ.ಜೆ.ಪಾದಗಟ್ಟಿ, ಶಂಕರ ಬೇವಿನಗಿಡದ, ಬಸವರಾಜ ನಾಲತವಾಡ, ಶಾಂತಾ ಭಟ್ಟ, ಸುಬಾಷ್ ಬಿದಿರಕುಂದಿ, ಮೀನಾಕ್ಷೀ ಕುಲಕರ್ಣಿ, ಉದ್ಯಮಿ ಗೋಪಾಲ ನಾವಡ, ಸಾಹಿತಿ ಅಶೋಕ ಮಣಿ, ಸೇರಿದಂತೆ ಇತರರು ಉಪಸ್ಥಿತರಿದ್ದರು.

ಉಪನ್ಯಾಸಕಿ ರಚನಾ ಕುಲಕರ್ಣಿ ಪ್ರಾರ್ಥಿಸಿದರು.ಮುಖ್ಯಗುರುಗಳಾದ ರಾಮಚಂದ್ರ ಹೆಗಡೆ ಮತ್ತು ಶಿಕ್ಷಕಿ ರಂಜಿತಾ ಭಟ್ಟ ಸ್ವಾಗತಿಸಿದರು. ಪ್ರಾಚಾರ್ಯ ಅರುಣ ಹುನಗುಂದ ವಾರ್ಷಿಕ ವರದಿ ವಾಚಿಸಿದರು. ಉಪನ್ಯಾಸಕರಾದ ವಿ.ವಿ.ಪಾಟೀಲ್ ಮತ್ತು ಶೋಭಾ ನಾಗೂರ ಕಾರ್ಯಕ್ರಮ ನಿರ್ವಹಿಸಿದರು.ಮುಖ್ಯಶಿಕ್ಷಕಿ ಸರಸ್ವತಿ ಮಡಿವಾಳರ ವಂದಿಸಿದರು. ಶಿಕ್ಷಕರುಗಳಾದ ಬಿ.ಆರ್.ಬೆಳ್ಳಿಕಟ್ಟಿ, ಮಂಜುನಾಥ ಪಡದಾಳಿ ಸೇರಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ