ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್ ಉದ್ಘಾಟನೆ: ಕಾಲು ಹಿಡಿದು ಜಗ್ಗುವವರೇ ಬಹಳಷ್ಟು ಜನ-ಸಿ.ಎಸ್.ನಾಡಗೌಡ

ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್ ಉದ್ಘಾಟನೆ: ಕಾಲು ಹಿಡಿದು ಜಗ್ಗುವವರೇ ಬಹಳಷ್ಟು ಜನ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಸಮಾಜದಲ್ಲಿ ಒಂದು ಸಂಸ್ಥೆ, ಕಾರ್ಖಾನೆ , ಒಬ್ಬ ವ್ಯಕ್ತಿ ಬೆಳೆಯುತ್ತಿದ್ದಾನೆ ಎಂದರೆ ಕಾಲು ಹಿಡಿದು ಜಗ್ಗುವವರು ಬಹಳ ಜನ ಇದ್ದಾರೆ.ಆದರೆ ಶಿಕ್ಷಣಕ್ಕಾಗಿ ಪ್ರಭುಗೌಡ ದೇಸಾಯಿ ಅವರಂತಹವರು ಜಮೀನು ಕೊಟ್ಟು ಮತ್ತೊಬ್ಬರನ್ನು ಬೆಳೆಸುವಂತವರು ವಿರಳ ಜನ ಇದ್ದಾರೆ.ಅವರು ನಿಜವಾದ ದೈವಿಯ ಗುಣ ಹೊಂದಿದವರು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.

ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿ ಶನಿವಾರ ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್‌ನ ನೂತನ ಕಟ್ಟಡವನ್ನು ಶಾಸಕ ಸಿ.ಎಸ್.ನಾಡಗೌಡ ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮ ಭಾಗದಲ್ಲಿ ಶೇ.88ರಷ್ಟು ಪ್ರೌಢಶಿಕ್ಷಣದ ಫಲಿತಾಂಶ ಹೆಚ್ಚಿದೆ.ಆದರೆ ಪಿಯುಸಿ ನಂತರದ ಶಿಕ್ಷಣಕ್ಕೆ ನಮ್ಮ ಭಾಗದಲ್ಲಿ ಆದ್ಯತೆ ನೀಡಲಾಗುತ್ತಿದೆ.ಉನ್ನತ ಶಿಕ್ಷಣಕ್ಕೆ ಹೋಗುವವರ ಸಂಖ್ಯೆ ಹೆಚ್ಚಬೇಕು.ಬಿಎಎಸ್ ಸಂಸ್ಥೆಯ ಸ್ಥಾಪನೆಯಲ್ಲಿ ಹಗಲಿರುಳು ಶ್ರಮಿಸಿರುವ ಮಹಾಂತಗೌಡ ಬಿರಾದಾರ,ಶಿವನಗೌಡ ಬಿರಾದಾರ ಸಹೋದರರು,ಅವರ ಕುಟುಂಬದವರಿಗೆ ಇವರಿಗೆ ಜಮೀನು ಕೊಟ್ಟು ಸಹಕಾರ ನೀಡಿರುವ ಪ್ರಭುಗೌಡ ದೇಸಾಯಿ ಅವರಿಗೆ ವಿಶೇಷ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು.

ವಿದ್ಯೆ ಎಂದರೆ ಕೇವಲ ಅಕ್ಷರ ಕಲಿಸುವುದಲ್ಲ.ಅಲ್ಲಿ ಜೀವನದ ಮೌಲ್ಯಗಳನ್ನು ಕಲಿಸುವಂತದ್ದು ಮುಖ್ಯವಾಗಿದೆ.ಮೌಲ್ಯದ ಜೊತೆಗೆ ಸದೃಢವಾದ ದೇಹವನ್ನು ಕೊಡುವಂತಹದ್ದು, ನೀತಿವಂತನಾಗಿ ತಂದೆ ತಾಯಿ ದೇವರೆಂದು ಕಾಣುವಂತಹದ್ದು,ಭೂಮಿಗೆ ಬಂದಿದ್ದೇನೆ ಏನಾದರೂ ಕೊಡಬೇಕು ಎಂಬ ಭಾವನೆಯನ್ನು ಹೊಂದುವAತೆ ಮಗುವನ್ನು ಬೆಳೆಸುವ ಸಂಸ್ಥೆ ಅತ್ಯುತ್ತಮ ಸಂಸ್ಥೆ ಆಗುತ್ತದೆ.ಅದು ಬಿಎಎಸ್ ಸಂಸ್ಥೆ ಮುಂಬರುವ ದಿನಗಳಲ್ಲಿ ಆಗಲಿದೆ ಎಂಬ ಆಶಾಭಾವನೆಯನ್ನು ಹೊಂದಿರುವುದಾಗಿ ಹೇಳಿದರು.

ಆದಾಯ ತೆರಿಗೆ ಇಲಾಖೆಯ ಆಯುಕ್ತ ಶಿವಾನಂದ ಕಲಕೇರಿ ಮಾತನಾಡಿ, ಉತ್ತರ ಕರ್ನಾಟಕದ ಜನ ಈಗಲೂ ಉದ್ಯೋಗಕ್ಕಾಗಿ ಬೇರೆ ಜಿಲ್ಲೆ, ರಾಜ್ಯಗಳಿಗೆ ಗುಳೇ ಹೋಗುತ್ತಾರೆ.ಅದೇ ರೀತಿ ಶಿಕ್ಷಣಕ್ಕೂ ಬೇರೆ ಬೇರೆ ಉಡುಪಿ,ಮಂಗಳೂರು ಭಾಗಕ್ಕೆ ಗುಳೇ ಹೋಗುವ ಸ್ಥಿತಿ ಇದೆ.ಇಂತಹ ಸಮಯದಲ್ಲಿ ಈ ಭಾಗದಲ್ಲಿ ಅಂತರಾಷ್ಟಿçÃಯ ಮಟ್ಟದ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಿರುವ ಮಹಾಂತಗೌಡರು ಹಾಗೂ ಶಿವನಗೌಡರು ನಿಜವಾದ ಶಿಕ್ಷಣದ ಪ್ರೇಮಿಗಳು ಎಂದು ಹೇಳಿದರು.

ಮಕ್ಕಳು ಕಂಪ್ಯೂಟರ್,ಲ್ಯಾಪಟಾಪ್‌ನoತಹ ಸಾಫ್ಟ್ ಡಿಜಿಟಲ್ ಡಿವೈಸಿಸ್,ಗೇಮುಗಳ ದಾಸರಾಗಿದ್ದಾರೆ.ಆದರೆ ಮೈದಾನದಲ್ಲಿ ದೈಹಿಕ ಚಟುವಟಿಕೆಗೆ ಆದ್ಯತೆ ನೀಡಿದರೆ ಅಭ್ಯಾಸ ಮಾಡಿ ಒಳ್ಳೆಯದಾಗಿ ನಿದ್ದೆ ಮಾಡಿ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವಿದೆ.ಅದನ್ನು ಈ ಸಂಸ್ಥೆ ಮಾಡಬೇಕು. ಇಂದಿನ ಕೆಲವು ನಗರಗಳಲ್ಲಿ ಶಾಲಾ ಮೈದಾನವೇ ಇರುವುದಿಲ್ಲ.ಅಲ್ಲಿ ಬರೀ ಓದುವುದನ್ನು ಬಿಟ್ಟು ಬೇರೆ ಏನನ್ನೂ ಹೇಳಿಕೊಡುವುದಿಲ್ಲ.ಆದರೆ ಬಿಎಎಸ್ ಸಂಸ್ಥೆ ಹೆಮ್ಮರವಾಗಿ ಬೆಳೆಯಲಿ ಎಂದು ಹೇಳಿದರು.

ದಿವ್ಯ ಸಾನಿಧ್ಯ ವಹಿಸಿದ್ದ ಕುಂಟೋಜಿ ಭಾವೈಕ್ಯತೆ ಹಿರೇಮಠದ ಚನ್ನವೀರ ಶಿವಾಚಾರ್ಯರು ಮಾತನಾಡಿ, ಇಂದಿನ ಸಮಾಜ ಪಾಶ್ಚಾತ್ಯ ಶಿಕ್ಷಣದ ಸಂಸ್ಕೃತಿಗೆ ವಾಲುತ್ತಿರುವುದರಿಂದ ದೇಶದ ಸಂಸ್ಕೃತಿಗೆ ಬಹುದೊಡ್ಡ ಹೊಡೆತ ಬೀಳುತ್ತಿದೆ.ನಮ್ಮ ಈಗಿನ ಮಕ್ಕಳ ಐಕ್ಯೂ ಲೆವಲ್ ಚೆನ್ನಾಗಿದೆ.ಅವರಿಗೆ ಇಕ್ಯೂ ಲೆವಲ್ ಡೌನ್ ಮಾಡಿಕೊಂಡು ಕೂತಿದ್ದಾರೆ.ಎಮೋಷನ್ ಕೋಷಂಟ್ ಖಿನ್ನತೆಯನ್ನು,ಮಾನಸಿಕ ತೊಳಲಾಟದಿಂದ ಹೇಗೆ ಹೊರಬರಬೇಕು ಎಂಬುದು ಅರಿತುಕೊಳ್ಳುತ್ತಿಲ್ಲ.ಇದನ್ನು ಶಾಲೆಗಳಲ್ಲಿ ಕಲಿಸಬೇಕು.ಅಪ್ಪ ಅಮ್ಮ ಶಾಲೆಗೆ ಹಚ್ಚಿದರೆ ಅದರಂತೆ ಓದುವುದೇ ಆಗದೇ ಮಕ್ಕಳಲ್ಲಿ ಅಡಗಿರುವ ನಿಜವಾದ ಕಲೆಯೂ ಹೊರಗೆ ಬರಬೇಕು ಎಂದರು.

ಬಿದರಕುoದಿ-ಕಪ್ಪತಗುಡ್ಡ ಶಿವಯೋಗಾಶ್ರಮದ ಶಿವಕುಮಾರ ಸ್ವಾಮೀಜಿ ಮಾತನಾಡಿ, ಒಂದು ಶಾಲೆ ಆರಂಭಗೊoಡರೆ ಹತ್ತು ಜೈಲುಗಳು ಕಡಿಮೆ ಆಗುತ್ತವೆ.ವಿದ್ಯೆ ಎಂದರೆ ಬೆಳಕು.ಆಧ್ಯಾತ್ಮದ ಬೆಳಕನ್ನು ನೀಡುವಂತಹದ್ದು ವಿದ್ಯೆ.ಅಕ್ಷರಗಳನ್ನು ಕಲಿಯುವುದಕ್ಕೆ ಶಾಲೆಗೆ ಬರಬೇಕು.ಉತ್ತಮವಾದ ಶಿಕ್ಷಕರ ಮೇಲೆ ಶಾಲೆ ನಿಂತಿದೆ.ಸಿoಪಿ ಲಿಂಗಣ್ಣ,ಶoಗು ಬಿರಾದರ,ಈಶ್ವರಚಂದ್ರ ಚಿಂತಾಮಣೆ, ಕಂಚ್ಯಾಣಿ ಶರಣಪ್ಪ, ಎ.ಎಸ್.ಹಿಪ್ಪರಗಿ,ಎಚ್.ಆರ್.ಕಲಕೇರಿ ಶಿಕ್ಷಕರ ಪರಂಪರೆ ಇದೆ.ಊರಿನ ಸಾಂಸ್ಕೃತಿಕ ಪರಂಪರೆಯನ್ನು ತೆಗೆದುಕೊಂಡು ಹೋಗಿದ್ದಾರೆ.ಗಂಗಮ್ಮ ಚಿನಿವಾರ,ಬಂಥನಾಳ ಶಿವಯೋಗಿಗಳು, ಮಲ್ಲಿಕಾರ್ಜುನ ಸ್ವಾಮೀಜಿಯವರು ಶಿಕ್ಷಣಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟವರು.ಪರಿಸರದ ವಾತಾವರಣದಲ್ಲಿ ಶಿಕ್ಷಣ ನೀಡಿ ಎಂದರು.

ದಿವ್ಯ ಸಾನಿಧ್ಯವನ್ನು ಆಳಂದ,ಜಾಲವಾದ,ನoದವಾಡಗಿ ಹಿರೇಮಠದ ಮಹಾಂತಲಿAಗ ಶಿವಾಚಾರ್ಯರು, ನಂದವಾಡಗಿ ಹಿರೇಮಠದ ಚನ್ನಬಸಯ ಶಿವಾಚಾರ್ಯರು ವಹಿಸುವರು, ಬಳವಾಟ ಪರ್ವತಾಶ್ರಮದ ಸೋಮಶೇಖರ ದೇವರು,ಕೊಡಗಾನೂರ ಕೆಳಗಿನಮಠದ ಕುಮಾರದೇವರು,ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಮಾಂತಗೌಡ ಬಿರಾದಾರ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಬಾಲಾಜಿ ಶುಗರ್ಸ್ನ ಅಧ್ಯಕ್ಷ ಹಣಮಂತಗೌಡ ಪಾಟೀಲ, ಗಣ್ಯ ವ್ಯಾಪಾರಸ್ಥರಾದ ಬಿ.ಸಿ.ಮೋಟಗಿ, ಬ.ಬಾಗೇವಾಡಿ ಡಿವೈಎಸ್ಪಿ ಬಲ್ಲಪ್ಪ ನಂದಗಾವಿ, ನಿವೃತ್ತ ಡಿವೈಎಸ್‌ಪಿ ಎಸ್.ಎಸ್.ಹುಲ್ಲೂರ,ನಿವೃತ್ತ ಕರ್ನಲ್ ಶಿವಾನಂದ ಬಿರಾದಾರ,ಬಿಇಒ ಬಿ.ಎಸ್.ಸಾವಳಗಿ,ಆಡಳಿತಾಧಿಕಾರಿ ಪ್ರಭುಗೌಡ ಬಿರಾದಾರ,ಗಣ್ಯ ವ್ಯಾಪಾರಸ್ಥರಾದ ಬಾಬುಲಾಲ ಓಸ್ವಾಲ್, ಪ್ರವಾಸೋದ್ಯಮ ಇಲಾಖೆ ಅಧಿಕಾರಿ ಅರವಿಂದ ಹೂಗಾರ, ವಸಂತ ಇಲ್ಲೂರ, ಗ್ಯಾರಂಟಿ ಸಮಿತಿ ಅಧ್ಯಕ್ಷ ಶಂಕರಗೌಡ ಹಿರೇಗೌಡರ,ಲೋಕಾಯುಕ್ತ ಪೊಲೀಸ್ ಅಧಿಕಾರಿ ಗೋವಿಂದಗೌಡ ಪಾಟೀಲ,ಉದ್ಯಮಿ ಶರಣು ಸಜ್ಜನ, ಪ್ರಥಮ ದರ್ಜೆ ಗುತ್ತಿಗೆದಾರ ರಾಯನಗೌಡ ತಾತರೆಡ್ಡಿ, ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಅಸ್ಕಿ ಫೌಂಡೇಶನ ಅಧ್ಯಕ್ಷ ಸಿ.ಬಿ.ಅಸ್ಕಿ, ಉದ್ಯಮಿ ಶಾಂತಗೌಡ ಪಾಟೀಲ ನಡಹಳ್ಳಿ, ಪಿಎಸೈ ಸಂಜಯ ತಿಪರೆಡ್ಡಿ, ಸಂಸ್ಥೆಯ ಮಾರ್ಗದರ್ಶಕ ಶಿವನಗೌಡ ಬಿರಾದಾರ , ಕಸಾಪ ಮಾಜಿ ಅಧ್ಯಕ್ಷ ಎಂ.ಬಿ.ನಾವದಗಿ,ಹಿರಿಯ ನ್ಯಾಯವಾದಿ ವಿ.ಎಂ.ನಾಗಠಾಣ,ಬಿ.ಎಸ್.ಪಾಟೀಲ ಯಾಳಗಿ ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು ಇದ್ದರು. ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು.
ಮಕ್ಕಳಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.ಬೆಂಗಳೂರಿನಿoದ ಆಗಮಿಸಿದ್ದ ನೃತ್ಯದ ಮಾರ್ಗದರ್ಶಕರು ಮಕ್ಕಳಿಗೆ ತರಬೇತಿ ನೀಡಿ ಪಾಲಕರ ಮನ ರಂಜಿಸಿದರು.

Latest News

ಫೆ.14 ರಂದು ನೂತನ ಸ್ಕೂಲ್‌ ಕಟ್ಟಡದ ಉದ್ಘಾಟನೆ:                    ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್‌ಗೆ ಪ್ರಥಮ ವಾರ್ಷಿಕೋತ್ಸವದ ಸಂಭ್ರಮ

ಫೆ.14 ರಂದು ನೂತನ ಸ್ಕೂಲ್‌ ಕಟ್ಟಡದ ಉದ್ಘಾಟನೆ: ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್‌ಗೆ ಪ್ರಥಮ ವಾರ್ಷಿಕೋತ್ಸವದ ಸಂಭ್ರಮ

ಮುದ್ದೇಬಿಹಾಳ : ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿಎಎಸ್ ಇಂಟರ್‌ನ್ಯಾಶನಲ್ ಶಾಲೆಯ ಪ್ರಥಮ ವಾರ್ಷಿಕೋತ್ಸವ ಹಾಗೂ

ಮುದ್ದೇಬಿಹಾಳ : ಬೈಕ್‌ಗೆ ಕಾರು ಡಿಕ್ಕಿ ; ಹಿಂಬದಿ ಸವಾರ ಸಾವು

ಮುದ್ದೇಬಿಹಾಳ : ಬೈಕ್‌ಗೆ ಕಾರು ಡಿಕ್ಕಿ ; ಹಿಂಬದಿ ಸವಾರ ಸಾವು

ಮುದ್ದೇಬಿಹಾಳ : ಬೈಕ್‌ವೊಂದಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಹಿಂಬದಿ ಸವಾರ ಸಾವನ್ನಪ್ಪಿರುವ

ಗ್ಯಾರಂಟಿ ಯೋಜನೆ:                                                     ಮನೆಗಳ ಎದುರಿಗೆ ರಂಗೋಲಿ ಬಿಡಿಸಿ ಜಾಗೃತಿ

ಗ್ಯಾರಂಟಿ ಯೋಜನೆ: ಮನೆಗಳ ಎದುರಿಗೆ ರಂಗೋಲಿ ಬಿಡಿಸಿ ಜಾಗೃತಿ

ಮುದ್ದೇಬಿಹಾಳ : ಪಟ್ಟಣದ ಮಹಾಂತೇಶ ನಗರ ಹಾಗೂ ಹೊರಪೇಟಿಯಲ್ಲಿ ಮನೆ ಮನೆಗೆ ತೆರಳಿದ ಪಂಚ

ದೇಶದ ಸೇವೆ ಆಯ್ಕೆ ಮಾಡಿಕೊಂಡವರು ಅದೃಷ್ಟವಂತರು-ಎಂ.ಎಸ್.ಕೊಪ್ಪ

ದೇಶದ ಸೇವೆ ಆಯ್ಕೆ ಮಾಡಿಕೊಂಡವರು ಅದೃಷ್ಟವಂತರು-ಎಂ.ಎಸ್.ಕೊಪ್ಪ

ಮುದ್ದೇಬಿಹಾಳ : ದೇಶದ ಗಡಿ ಕಾಯುವ ಸೇವೆಯನ್ನು ಆಯ್ಕೆ ಮಾಡಿಕೊಂಡ ಆಯೇಷಾ ವಾಲೀಕಾರ, ಕಾಶೀಬಾಯಿ

ನಿಮ್ಮ ಪಂಚಾಯಿತಿಗೆ ಆಡಳಿತಾಧಿಕಾರಿ ಯಾರು?: ಮುದ್ದೇಬಿಹಾಳ : ಗ್ರಾ.ಪಂಗಳಲ್ಲಿನ್ನು ಆಡಳಿತಾಧಿಕಾರಿಗಳ ದರ್ಬಾರ್

ನಿಮ್ಮ ಪಂಚಾಯಿತಿಗೆ ಆಡಳಿತಾಧಿಕಾರಿ ಯಾರು?: ಮುದ್ದೇಬಿಹಾಳ : ಗ್ರಾ.ಪಂಗಳಲ್ಲಿನ್ನು ಆಡಳಿತಾಧಿಕಾರಿಗಳ ದರ್ಬಾರ್

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮ ಪಂಚಾಯಿತಿಗಳ ಅಧ್ಯಕ್ಷ,ಉಪಾಧ್ಯಕ್ಷರ ಅವಧಿ ಮುಕ್ತಾಯಗೊಂಡಿದ್ದು ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳ ಗ್ರಾಮ ಪಂಚಾಯತಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಿ ಜಿಲ್ಲಾಧಿಕಾರಿಗಳಾದ ಡಾ.ಕೆ.ಆನಂದ್ ಆದೇಶ ಹೊರಡಿಸಿದ್ದಾರೆ. ಸನ್ 2026-2031ರ ಅವಧಿಗಾಗಿ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆದು ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ನಡೆಯುವ ದಿನಾಂಕದವರೆಗೆ ಸದರಿ ಪಂಚಾಯಿತಿಗಳಿಗೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 8(iii) ಅನ್ವಯ ಆಡಳಿತಾಧಿಕಾರಿಗಳನ್ನು ನೇಮಿಸಲಾಗಿದೆ

ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಆಯೋಜನೆ:              ನಾಳೆ ಬಾಗಲಕೋಟೆಯಲ್ಲಿ ಟ್ಯಾಲೆಂಟ್ ಸರ್ಚ್ ಎಕ್ಸಾಂ

ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಆಯೋಜನೆ: ನಾಳೆ ಬಾಗಲಕೋಟೆಯಲ್ಲಿ ಟ್ಯಾಲೆಂಟ್ ಸರ್ಚ್ ಎಕ್ಸಾಂ

ಮುದ್ದೇಬಿಹಾಳ : ಇಲ್ಲಿಗೆ ಸಮೀಪದ ನಾಗರಬೆಟ್ಟದ ಗುಡ್ಡದ ಹತ್ತಿರ ಇರುವ ಆಕ್ಸ್ಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯ ಆಕ್ಸ್ಫರ್ಡ್ ಪಾಟೀಲ್ಸ್ ಸೈನ್ಸ್ ಪಿಯು ಕಾಲೇಜು ವತಿಯಿಂದ ಫೆ.8ರಂದು ಮಧ್ಯಾಹ್ನ 12ಕ್ಕೆ ಬಾಗಲಕೋಟೆ ನವನಗರದ ಕಾಳಿದಾಸ ವೃತ್ತದ ಹತ್ತಿರ ಇರುವ ಕಾಳಿದಾಸ ಇಂಟರ್‌ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಮೊದಲ ಬಾರಿಗೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗಾಗಿ ‘ಆಕ್ಸ್ಫರ್ಡ್ ಪಾಟೀಲ್ಸ್ ಟ್ಯಾಲೆಂಟ್ ಸರ್ಚ್ ಎಕ್ಸಾಮ್-2026’ ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜಿನ ಆಡಳಿತಾಧಿಕಾರಿ ಅಮಿತಗೌಡ ಎಂ.ಪಾಟೀಲ ತಿಳಿಸಿದ್ದಾರೆ. ಪತ್ರಿಕಾ ಹೇಳಿಕೆ