ಸರದಿಯಲ್ಲಿ ನಿಂತು ಶಿವಲಿಂಗದ ದರ್ಶನ; ಎಲ್ಲೆಲ್ಲೂ ಅನುರಣಿಸಿದ ಶಿವನಾಮ

ಸರದಿಯಲ್ಲಿ ನಿಂತು ಶಿವಲಿಂಗದ ದರ್ಶನ; ಎಲ್ಲೆಲ್ಲೂ ಅನುರಣಿಸಿದ ಶಿವನಾಮ

ಮುದ್ದೇಬಿಹಾಳ : ಪಟ್ಟಣದಾದ್ಯಂತ ಶಿವರಾತ್ರಿ ಅಂಗವಾಗಿ ಭಕ್ತರು ಭಾನುವಾರ ಸಂಜೆ ಶಿವನ ದೇವಾಲಯಗಳಲ್ಲಿ ಸರದಿಯಲ್ಲಿ ನಿಂತುಕೊoಡು ಈಶ್ವರ ಲಿಂಗದ ದರ್ಶನ ಪಡೆದುಕೊಂಡು ಪುನೀತರಾದರು.

ದಿನವೀಡಿ ಉಪವಾಸ ವ್ರತ ಆಚರಿಸಿದ ಶಿವನ ಆರಾಧಕರು ಸಂಜೆ ವೇಳೆ ವಿವಿಧ ವಿಶೇಷ ಖಾದ್ಯಗಳನ್ನು ತಯಾರಿಸಿ ಶಿವಲಿಂಗಕ್ಕೆ ನೈವೇದ್ಯ ಅರ್ಪಿಸಿ ಉಪವಾಸ ವ್ರತ ಅಂತ್ಯಗೊಳಿಸಿದರು.

ಪಟ್ಟಣದ ಕಿಲ್ಲಾದ ಹಳೇ ಈಶ್ವರಲಿಂಗ ದೇವಸ್ಥಾನ, ವಿಜಯ ವಿಠ್ಠಲ ಮಂದಿರ,ಕಾಶೀ ವಿಶ್ವನಾಥ ದೇವಸ್ಥಾನ,ಮರುಳಸಿದ್ದಪ್ಪನ ಗುಡಿ, ಹಳೇ ಕೋರ್ಟ್ ಆವರಣದಲ್ಲಿರುವ ಈಶ್ವರ ದೇವಸ್ಥಾನ, ಹೆಸ್ಕಾಂ ಕಚೇರಿ ಆವರಣದಲ್ಲಿರುವ ಶಿವದೇವಾಲಯದಲ್ಲಿ ಭಕ್ತರು ಸರದಿ ಸಾಲಿನಲ್ಲಿ ನಿಂತುಕೊAಡು ದರ್ಶನ ಪಡೆದುಕೊಂಡರು.

ಆಯಾ ದೇವಸ್ಥಾನಗಳಲ್ಲಿ ಉಪವಾಸ ಅಂತ್ಯಗೊಳಿಸಿದ ಭಕ್ತರಿಗೆ ಶರಬತ್,ಪಾನಕ,ಅಲ್ಪೋಪಹಾರದ ವ್ಯವಸ್ಥೆ ಕಲ್ಪಿಸಲಾಗಿತ್ತು. ಹಳೇ ಕೋರ್ಟ್ ಆವರಣದಲ್ಲಿ ಪವಾಡಶೆಟ್ಟಿ ಕುಟುಂಬದವರು ಭಕ್ತರಿಗೆ ಪ್ರಸಾದದ ವ್ಯವಸ್ಥೆ ಕೈಗೊಂಡಿದ್ದರು.

ಓoಶಾoತಿ ಭವನದಲ್ಲಿ ಡಿಜಿಟಲ್ ಮಾದರಿ ಈಶ್ವರ ಶಿವಲಿಂಗವನ್ನು ಪ್ರತಿಷ್ಠಾನೆ ಮಾಡಲಾಗಿತ್ತು.ಪ್ರೊಜೆಕ್ಟರ್ ಮೂಲಕ ಬೆಳಕು ಹಾಯಿಸಿ ದೇಶದ ವಿವಿಧ ಶಿವಲಿಂಗಗಳಿಗೆ ನಡೆಯುವ ಅಭಿಷೇಕವನ್ನು ತೋರಿಸುವಂತೆ ವಿಶೇಷ ದೃಶ್ಯವಾಳಿ ರೂಪಿಸಲಾಗಿತ್ತು.

ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶಿವನ ದರ್ಶನ ಪಡೆದುಕೊಂಡರು.ಇದಲ್ಲದೇ ಇನ್ನುಳಿದ ದೇವಸ್ಥಾನಗಳಲ್ಲೂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶಿವನ ಹೆಸರಿನಲ್ಲಿ ಆರ್ಚನೆ,ಪೂಜೆ ನಡೆಸಿದರು.ಬಹುತೇಕ ಎಲ್ಲ ದೇವಾಲಯಗಳಲ್ಲೂ ಶಿವನಾಮ ಜಪಿಸುತ್ತಿರುವುದು ಕಂಡು ಬಂದಿತು.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ