ಮುದ್ದೇಬಿಹಾಳ : ಪಟ್ಟಣದಾದ್ಯಂತ ಶಿವರಾತ್ರಿ ಅಂಗವಾಗಿ ಭಕ್ತರು ಭಾನುವಾರ ಸಂಜೆ ಶಿವನ ದೇವಾಲಯಗಳಲ್ಲಿ ಸರದಿಯಲ್ಲಿ ನಿಂತುಕೊoಡು ಈಶ್ವರ ಲಿಂಗದ ದರ್ಶನ ಪಡೆದುಕೊಂಡು ಪುನೀತರಾದರು.
ದಿನವೀಡಿ ಉಪವಾಸ ವ್ರತ ಆಚರಿಸಿದ ಶಿವನ ಆರಾಧಕರು ಸಂಜೆ ವೇಳೆ ವಿವಿಧ ವಿಶೇಷ ಖಾದ್ಯಗಳನ್ನು ತಯಾರಿಸಿ ಶಿವಲಿಂಗಕ್ಕೆ ನೈವೇದ್ಯ ಅರ್ಪಿಸಿ ಉಪವಾಸ ವ್ರತ ಅಂತ್ಯಗೊಳಿಸಿದರು.
ಪಟ್ಟಣದ ಕಿಲ್ಲಾದ ಹಳೇ ಈಶ್ವರಲಿಂಗ ದೇವಸ್ಥಾನ, ವಿಜಯ ವಿಠ್ಠಲ ಮಂದಿರ,ಕಾಶೀ ವಿಶ್ವನಾಥ ದೇವಸ್ಥಾನ,ಮರುಳಸಿದ್ದಪ್ಪನ ಗುಡಿ, ಹಳೇ ಕೋರ್ಟ್ ಆವರಣದಲ್ಲಿರುವ ಈಶ್ವರ ದೇವಸ್ಥಾನ, ಹೆಸ್ಕಾಂ ಕಚೇರಿ ಆವರಣದಲ್ಲಿರುವ ಶಿವದೇವಾಲಯದಲ್ಲಿ ಭಕ್ತರು ಸರದಿ ಸಾಲಿನಲ್ಲಿ ನಿಂತುಕೊAಡು ದರ್ಶನ ಪಡೆದುಕೊಂಡರು.
ಆಯಾ ದೇವಸ್ಥಾನಗಳಲ್ಲಿ ಉಪವಾಸ ಅಂತ್ಯಗೊಳಿಸಿದ ಭಕ್ತರಿಗೆ ಶರಬತ್,ಪಾನಕ,ಅಲ್ಪೋಪಹಾರದ ವ್ಯವಸ್ಥೆ ಕಲ್ಪಿಸಲಾಗಿತ್ತು. ಹಳೇ ಕೋರ್ಟ್ ಆವರಣದಲ್ಲಿ ಪವಾಡಶೆಟ್ಟಿ ಕುಟುಂಬದವರು ಭಕ್ತರಿಗೆ ಪ್ರಸಾದದ ವ್ಯವಸ್ಥೆ ಕೈಗೊಂಡಿದ್ದರು.
ಓoಶಾoತಿ ಭವನದಲ್ಲಿ ಡಿಜಿಟಲ್ ಮಾದರಿ ಈಶ್ವರ ಶಿವಲಿಂಗವನ್ನು ಪ್ರತಿಷ್ಠಾನೆ ಮಾಡಲಾಗಿತ್ತು.ಪ್ರೊಜೆಕ್ಟರ್ ಮೂಲಕ ಬೆಳಕು ಹಾಯಿಸಿ ದೇಶದ ವಿವಿಧ ಶಿವಲಿಂಗಗಳಿಗೆ ನಡೆಯುವ ಅಭಿಷೇಕವನ್ನು ತೋರಿಸುವಂತೆ ವಿಶೇಷ ದೃಶ್ಯವಾಳಿ ರೂಪಿಸಲಾಗಿತ್ತು.
ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶಿವನ ದರ್ಶನ ಪಡೆದುಕೊಂಡರು.ಇದಲ್ಲದೇ ಇನ್ನುಳಿದ ದೇವಸ್ಥಾನಗಳಲ್ಲೂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶಿವನ ಹೆಸರಿನಲ್ಲಿ ಆರ್ಚನೆ,ಪೂಜೆ ನಡೆಸಿದರು.ಬಹುತೇಕ ಎಲ್ಲ ದೇವಾಲಯಗಳಲ್ಲೂ ಶಿವನಾಮ ಜಪಿಸುತ್ತಿರುವುದು ಕಂಡು ಬಂದಿತು.







