50 ಲಕ್ಷ ರೂ.ಸ್ಕಾಲರ್‌ಶಿಪ್ ಗೆಲ್ಲುವ ಅವಕಾಶ: ಫೆ.22 ರಂದು ಬಿಎಎಸ್ ಟ್ಯಾಲೆಂಟ್ ಅವಾರ್ಡ್ ಪರೀಕ್ಷೆ

50 ಲಕ್ಷ ರೂ.ಸ್ಕಾಲರ್‌ಶಿಪ್ ಗೆಲ್ಲುವ ಅವಕಾಶ: ಫೆ.22 ರಂದು ಬಿಎಎಸ್ ಟ್ಯಾಲೆಂಟ್ ಅವಾರ್ಡ್ ಪರೀಕ್ಷೆ

ಮುದ್ದೇಬಿಹಾಳ : ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿಎಎಸ್ ಇಂಟರ್‌ನ್ಯಾಶನಲ್ ಶಾಲೆಯಲ್ಲಿ ಫೆ.22 ರಂದು ಬಿಎಎಸ್ ಟ್ಯಾಲೆಂಟ್ ಅವಾರ್ಡ್ -2026-27 ಪರೀಕ್ಷೆ ಹಮ್ಮಿಕೊಳ್ಳಲಾಗಿದೆ ಎಂದು ಬಿಎಎಸ್ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಪ್ರಭುಗೌಡ ಬಿರಾದಾರ ಮಾಹಿತಿ ನೀಡಿದರು.

ಪಟ್ಟಣದಲ್ಲಿ ಈಚೇಗೆ ಸುದ್ದಿಗೋಷ್ಠಿ ನಡೆಸಿ ಅವರು ಪರೀಕ್ಷೆಯ ಕುರಿತು ಮಾಹಿತಿ ನೀಡಿದರು. ಈ ಪರೀಕ್ಷೆ 4 ಮತ್ತು 9ನೇ ತರಗತಿ ಮಕ್ಕಳಿಗಾಗಿ ಈ ಪರೀಕ್ಷೆ ನಡೆಸಲಾಗುತ್ತಿದೆ. 50ಲಕ್ಷ ರೂ.ಮೌಲ್ಯದ
ಸ್ಕಾಲರಶಿಪ್ ಗೆಲ್ಲುವ ವಿಶೇಷ ಪರೀಕ್ಷೆ ಆಯೋಜಿಸಿದ್ದೇವೆ ಎಂದು ತಿಳಿಸಿದರು.

ರ‍್ಯಾಂಕ್‌ವಾರು ಮಕ್ಕಳಿಗೆ ಪ್ರತಿಶತ ರಿಯಾಯಿತಿಯಲ್ಲಿ ಶಿಷ್ಯವೇತನ ನೀಡುತ್ತಿದ್ದು,ಹೀಗಾಗಿ ಕಳೆದ ವರ್ಷ
20ಲಕ್ಷ ರೂಪಾಯಿ ಶಿಷ್ಯವೇತನ ನೀಡಲಾಗಿತ್ತು.ಫೆ. 21 ರಂದು ಟ್ಯಾಲೆಂಟ್ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ ಎಂದು ಹೇಳಿದರು. ಪ್ರಾಚಾರ್ಯ ಸಲ್ಮಾನ್‌ಖಾನ್ ಎಚ್.,ಮಾತನಾಡಿ ನಮ್ಮ ಶಾಲೆಯಲ್ಲಿ 10 ಸಾವಿರ ಪುಸ್ತಕದ ಗ್ರಂಥಾಲಯ ಸಾಮರ್ಥ್ಯವಿದೆ.ಸಿಬಿಎಸ್‌ಸಿ
ಕಲ್ಚರ್ ಇದೆ,ಗಂಡು ಮತ್ತು ಹೆಣ್ಣು ಮಕ್ಕಳಿಗೆ ಪ್ರತ್ಯೇಕವಾದ ವಸತಿ ಸೌಲಭ್ಯವಿದೆ. ವಾಹನ ಸೌಕರ್ಯವೂ ಇದ್ದು ಗ್ರಾಮೀಣ ಭಾಗದಲ್ಲಿ ಇದೊಂದು ಅಂತರಾಷ್ಟ್ರೀಯ ಮಟ್ಟದ ಪ್ರಥಮ ಸ್ಕೂಲ್ ಆಗಿದೆ ಎಂದು ಹೇಳಿದರು.
ಸಂಸ್ಥೆಯ ಅಧ್ಯಕ್ಷ ಮಾಂತಗೌಡ ಬಿರಾದಾರ ಮಾತನಾಡಿ, 1-10ನೇ ಸ್ಥಾನ ಪಡೆಯುವ ಮಕ್ಕಳಿಗೆ ಶುಲ್ಕದಲ್ಲಿ ಶೇ.20 ರಷ್ಟು ರಿಯಾಯಿತಿ, 11-20ರವರೆಗೆ ಶೇ.15, 21-30 ರವರೆಗೆ ಶೇ.10 ರಷ್ಟು, 31-40 ರವರೆಗೆ ಶೇ.5ರಷ್ಟು ರಿಯಾಯಿತಿ ನೀಡಲಾಗುವುದು ಎಂದು ತಿಳಿಸಿದರು. ಪ್ರಾಚಾರ್ಯೆ ರಿಷೀಕಾ ನಾಯಕ ಮಾತನಾಡಿದರು.

ಸಂಸ್ಥೆಯ ಪ್ರಮುಖರಾದ ವಿವೇಕಾನಂದ ಬಿರಾದಾರ, ಗೀತಾ ಬಿರಾದಾರ, ಶಿವನಗೌಡ ಬಿರಾದಾರ, ಸುಮಂಗಲಾ ಬಿರಾದಾರ,ಬಸಮ್ಮ ಬಿರಾದಾರ ಸೇರಿದಂತೆ ಇದ್ದರು.ಪರೀಕ್ಷೆಯಲ್ಲಿ ಹೆಸರು ನೋಂದಾಯಿಸಲು ಮೊಬೈಲ್ ಸಂಖ್ಯೆ:9035054453, 9035054451, 9035054452 ಸಂಪರ್ಕಿಸಬಹುದಾಗಿದೆ.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ