ಛತ್ರಪತಿ ಶಿವಾಜಿ ಜಯಂತಿ: ಶಿವಾಜಿ ಮಹಾರಾಜರ ಆದರ್ಶ ಮಕ್ಕಳಲ್ಲಿ ಬೆಳೆಸಿ

ಛತ್ರಪತಿ ಶಿವಾಜಿ ಜಯಂತಿ: ಶಿವಾಜಿ ಮಹಾರಾಜರ ಆದರ್ಶ ಮಕ್ಕಳಲ್ಲಿ ಬೆಳೆಸಿ

ಮುದ್ದೇಬಿಹಾಳ : ಪ್ರಜೆಗಳ ಹಿತರಕ್ಷಣೆಗಾಗಿ ಪ್ರಾಣ ಕೊಡಲು ಲೆಕ್ಕಿಸದ ಧೀರ ಹೋರಾಟಗಾರ ಛತ್ರಪತಿ ಶಿವಾಜಿ ಅವರಾಗಿದ್ದು ಅವರ ಶೌರ್ಯ,ಸಾಹಸದ ಕಥೆಗಳನ್ನು ಮಕ್ಕಳಿಗೆ ತಾಯಂದಿರು ಹೇಳಬೇಕು ಎಂದು ತಹಶೀಲ್ದಾರ್ ಕೀರ್ತಿ ಚಾಲಕ್ ಹೇಳಿದರು.

ಪಟ್ಟಣದಲ್ಲಿ ತಾಲ್ಲೂಕು ಆಡಳಿತದಿಂದ ಗುರುವಾರ ತಾಲೂಕಾಡಳಿತದಿಂದ ಏರ್ಪಡಿಸಿದ್ದ ಛತ್ರಪತಿ ಶಿವಾಜಿ ಮಹಾರಾಜರ 396ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತಾಯಿಯ ಭಕ್ತಿಯ ಮಾತನ್ನು ಪಾಲಿಸುತ್ತಿದ್ದ ಶಿವಾಜಿ ಅವರಿಗೂ ಶ್ರೀದೇವಿಯ ಒಲುಮೆಯಾಗಿತ್ತು. ದೇಶದ ಇತಿಹಾಸ ಕಾಪಾಡಬೇಕೆಂಬ ಮಹಾದಾಸೆಯನ್ನು ಹೊಂದಿದ್ದ ಅವರ ಇತಿಹಾಸವನ್ನು ಓದಿದರೆ ಅವರ ವ್ಯಕ್ತಿತ್ವ ಸಾಹಸಗಳ ಕುರಿತು ಓದಿದರೆ ಮೈ ರೋಮಾಂಚನಗೊಳ್ಳುತ್ತದೆ.ತಾಯOದಿರು ಇಂತಹ ದಾರ್ಶನಿಕರ ಇತಿಹಾಸವನ್ನು ಮಕ್ಕಳಿಗೆ ಹೇಳಿಕೊಡುವ ಮೂಲಕ ಧೈರ್ಯಶಾಲಿಗಳನ್ನಾಗಿ ರೂಪಿಸಬೇಕು ಎಂದರು.

ತಾಲೂಕಾ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಂ.ಎA.ಬೆಳಗಲ್ಲ ಮಾತನಾಡಿ, ಭಾರತದ ಇತಿಹಾಸದಲ್ಲಿ ಛತ್ರಪತಿ ಶಿವಾಜಿ ಮಹಾರಾಜರು ಮಹಾರಾಣಾಪ್ರತಾಪಸಿಂಹರOತಹ ಶೂರ ಧೀರರು ತಮ್ಮ ತಮ್ಮ ವೈಯಕ್ತಿಕ ಆದಾಯಕ್ಕಾಗಿ ಹೋರಾಟ ಮಾಡಿಲ್ಲ.ದೇಶದ ಹಿತರಕ್ಷಣೆಗಾಗಿ ಹೋರಾಡಿದರು ಎಂದರು.

ಉಪನ್ಯಾಸಕರಾಗಿ ಆಗಮಿಸಿದ ರಾಜನಾರಾಯಣ ನಲವಡೆ, ಸಮಾಜ ಸೇವಕ ಉದಯ ರಾಯಚೂರ ಮಾತನಾಡಿ, ಕೆಲವು ಅಂಕಣಕಾರರು ತಮ್ಮ ಹೆಸರನ್ನು ಬಹಿರಂಗಪಡಿಸಿಕೊಳ್ಳಲು ಶಿವಾಜಿ ಮಹಾರಾಜರ ಇತಿಹಾಸ ತಿರುಚಿಬರೆಯುವ ಕೆಟ್ಟ ಚಾಳಿ ರೂಢಿಸಿಕೊಂಡಿದ್ದಾರೆ.ಸತ್ಯಾಸತ್ಯತೆಯ ಇತಿಹಾಸ ಹೊರ ಹಾಕಿದರೆ ಎಲ್ಲ ಸಮುದಾಯಕ್ಕೆ ಒಳಿತಾಗುತ್ತದೆ.ಶಿವಾಜಿಯವರಲ್ಲಿದ್ದ ದೇಶ ಪ್ರೇಮ, ಮಾತೃಪ್ರೇಮ, ಮಹಿಳೆಯರ ಮೇಲೆ ಆಗುವ ದೌರ್ಜನ್ಯ ಕಂಡು ಬಂದರೆ ಅಂದಿನ ಕಾಲದಲ್ಲಿ ತಕ್ಕ ಶಿಕ್ಷೆ ನೀಡುವ ಪದ್ಧತಿಗಳು ಆದರ್ಶವಾಗಿದ್ದವು ಎಂದರು.

ಮೆರಣಿಗೆಯು ಶಿವಾಜಿ ಮಹಾರಾಜರ ವೃತ್ತಕ್ಕೆ ಆಗಮಿಸುತ್ತಿದ್ದಂತೆ ಮರಾಠಾ ಸಮಾಜ ಬಾಂಧವರ ನೇತೃತ್ವದಲ್ಲಿ ಆಯೋಜಿಸಲಾದ ದ್ವಜಾರೋಹಣ ಕಾರ್ಯಕ್ರಮವನ್ನು ತಹಶೀಲ್ದಾರ ಕೀರ್ತಿ ಚಾಲಕ ನೇರವೇರಿಸಿದರು.

ಜಯಂತಿ ಕಾರ್ಯಕ್ರಮದಲ್ಲಿ ಮರಾಠಾ ಸಮಾಜದ ಗೌರವಾಧ್ಯಕ್ಷ ರಾಜೇಂದ್ರ ಭೋಸಲೆ, ಉಪಾಧ್ಯಕ್ಷ ಅಣ್ಣಾಜಿ ಪವಾರ, ರಾಘವೇಂದ್ರ ಘಾಟಗೆ, ಖಜಾಂಚಿ ರಮೇಶ ಥೋರಾತ, ರವಿ ಭೋಸಲೆ, ಪ್ರ.ಕಾರ್ಯದರ್ಶಿ ಕೃಷ್ಣಾಜಿ ಪವಾರ. ಹಣಮಂತ ನಲವಡೆ, ಭರತ ಭೋಸಲೆ, ಮಾರುತಿ ನಲವಡೆ, ರಾಘವೇಂದ್ರ ನಲವಡೆ, ಸಚೀನ ಸಾಳುಂಕೆ, ಕಿರಣ ಪವಾರ, ಅನೀಲ ಜಾಧವ, ಅನೀಲ ಪವಾರ, ಸಂತೋಷ ಚವ್ಹಾಣ, ವಿನಾಯಕ ಘಾಟಗೆ, ವಿನೋದ ಜಾಧವ, ಲೋಹಿತ್ ಘಾಟಗೆ, ಗಣೇಶ ಘಾಟಗೆ, ಕೃಷ್ಣಾ ಭೋಸಲೆ, ಗಜಾನನ ನಲವಡೆ, ಬಸವರಾಜ ಸೂರ್ಯವಂಶಿ, ಸಂತೋಷ ಸಾಳುಂಕೆ, ಈಶ್ವರಪ್ಪ ಪವಾರ, ವಿರೇಶ ಹಾದಿಮನಿ,ಶಿವಾಜಿ ಬಿಜಾಪುರ, ಬಿಜೆಪಿ ನಿಕಟಪೂರ್ವ ಜಿಲ್ಲಾ ಕಾರ್ಯದರ್ಶಿ ಕಾಶೀಬಾಯಿ ರಾಂಪೂರ, ಪ್ರಭು ಕಡಿ, ಭೀಮಾಜಿ ಘಾಟಗೆ, ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ, ಮಾಣಿಕಚಂದ ದಂಡಾವತಿ, ಸುರೇಶಗೌಡ ಪಾಟೀಲ, ವಿಜಯಕುಮಾರ ಬಡಿಗೇರ, ನಾಗೇಶ ಲಾತೂರಕರ, ಗೌರಿಶಂಕರ ಹಿರೇಮಠ,ಪುರಸಭೆ ಮಾಜಿ ಉಪಾಧ್ಯಕ್ಷೆ ಪ್ರೀತಿ ದೇಗಿನಾಳ, ತಾಲೂಕಾ ದೈಹಿಕ ಪರಿವೀಕ್ಷಕ ಎ.ಜೆ.ದಖನಿ ಇದ್ದರು.ಟಿ.ಡಿ.ಲಮಾಣಿ ಸ್ವಾಗತಿಸಿ, ನಿರೂಪಿಸಿದರು.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ