‘ಸರ್ಕಾರಿ ಕಚೇರಿಗಳಲ್ಲಿ ರಾಜಕಾರಣಿಗಳ ಅಪ್ಪಂದಿರ,ಅಜ್ಜoದಿರ ಫೋಟೋ ಬೇಡ’

‘ಸರ್ಕಾರಿ ಕಚೇರಿಗಳಲ್ಲಿ ರಾಜಕಾರಣಿಗಳ ಅಪ್ಪಂದಿರ,ಅಜ್ಜoದಿರ ಫೋಟೋ ಬೇಡ’

ಮುದ್ದೇಬಿಹಾಳ : ಸೈನ್ಯಕ್ಕೆ ಸೇರುವವರು ಬಡವರ ಮಕ್ಕಳು ಎಂದು ಕೆಲವು ರಾಜಕಾರಣಿಗಳು ಕೆಲವೆಡೆ ಹೇಳಿಕೆ ಕೊಟ್ಟಿದ್ದರು.ಆದರೆ ನಿಜವಾಗಿಯೂ ಈ ದೇಶವನ್ನು ಕಾಯುವವರು ರೈತರ ಮಕ್ಕಳೇ ಹೊರತು ಸಿರಿವಂತರ ಮಕ್ಕಳಲ್ಲ.ದೇಶದಲ್ಲಿ ಬದಲಾವಣೆ ಆಗಿರುವುದು ಬಡವರ ಮಕ್ಕಳಿಂದ ಆಗಿದೆಯೇ ಹೊರತು ಸಿರಿವಂತರು,ದೊಡ್ಡವರ ಮಕ್ಕಳಿಂದಲ್ಲ ಎಂದು ಸಮಾಜ ಸೇವಕ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು.

ಪಟ್ಟಣದ ಸೈನಿಕ ಮೈದಾನದಲ್ಲಿ ಗುರುವಾರ ಸಂಜೆ ನೌಕಾಸೇನೆಯ ನಿವೃತ್ತ ಯೋಧ ಸತೀಶ ನಾಯಕ ಅವರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ದೇಶದಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವವರು ಸೈನಿಕರು ಮಾತ್ರ.ಅವರು ತೊಟ್ಟಿರುವ ಸಮವಸ್ತç ಶೌರ್ಯ,ತ್ಯಾಗದ ಗುರುತು ಆಗಿದೆ. ಸರ್ಕಾರಿ ಕಚೇರಿಗಳಲ್ಲಿ ರಾಜಕಾರಣಿಗಳ ಅಪ್ಪಂದಿರ,ಅಜ್ಜoದಿರ ಫೋಟೋಗಳನ್ನು ಹಾಕುವ ಬದಲಾಗಿ ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದ ವೀರಸೈನಿಕರ ಫೋಟೋಗಳನ್ನು ಶಾಲೆಗಳಲ್ಲಿ,ಕಚೇರಿಗಳಲ್ಲಿ ಹಾಕುವ ಪದ್ದತಿ ರೂಢಿಯಲ್ಲಿ ಬರಬೇಕು.ಸರ್ಕಾರ ಅಂತಹ ನಿಯಮ ಜಾರಿಗೆ ತರಬೇಕು.ಮುದ್ದೇಬಿಹಾಳದ ಅಂಬೇಡ್ಕರ್ ವೃತ್ತದಲ್ಲಿ 200 ಅಡಿ ಎತ್ತರದ ರಾಷ್ಟçಧ್ವಜದ ಸ್ತಂಭವನ್ನು ಸ್ಥಾಪಿಸಲು ಉದ್ಧೇಶವಿದ್ದು ಅಲ್ಲಿ ರಾಷ್ಟçಧ್ವಜ ನಿತ್ಯವೂ ಹಾರಾಡುವಂತೆ ನಾವೆಲ್ಲ ಕೈಜೋಡಿಸಬೇಕು.ಇದಕ್ಕೆ ಜನಪ್ರತಿನಿಧಿಗಳ ಸಹಕಾರವೂ ಅವಶ್ಯವಿದೆ ಎಂದು ಹೇಳಿದರು.

ಎಸ್.ಎಸ್.ಶಿವಾಚಾರ್ಯ ಸಂಸ್ಥೆಯ ಅಧ್ಯಕ್ಷ ರವಿ ನಾಯಕ ಮಾತನಾಡಿ, ದೇಶದಲ್ಲಿ ನೆಮ್ಮದಿಯಿಂದ ನಿದ್ದೆ ಮಾಡಲು ಕಾರಣ ಈ ದೇಶದ ಯೋಧರು ಜೀವ ಒತ್ತೆ ಇಟ್ಟು ಕಾಯುತ್ತಿರುವ ಕಾರಣ ದೇಶದಲ್ಲಿ ಸುರಕ್ಷತೆಯಿಂದ ಇದ್ದೇವೆ.ಸೈನ್ಯದಲ್ಲಿ ಜಾತಿ,ಸಮುದಾಯ ಎಂಬುದಿಲ್ಲ. ನಿವೃತ್ತಿಗೊಂಡು ತವರಿಗೆ ಮರಳುವ ಸೈನಿಕರನ್ನು ಸಮಾಜದಲ್ಲಿ ಎಲ್ಲರೂ ಒಗ್ಗೂಡಿ ಸಾರ್ವತ್ರಿಕವಾಗಿ ಗೌರವಿಸುವ ಕಾರ್ಯ ಆಗಬೇಕು ಎಂದರು.

ನೌಕಾಸೇನಾ ನಿವೃತ್ತ ಯೋಧ ಸತೀಶ ನಾಯಕ ಮಾತನಾಡಿ, ಸೈನಿಕ ದೇಶ ಸೇವೆ ಒಬ್ಬನೇ ಮಾಡುವುದಿಲ್ಲ.ಆತನ ಹಿಂದೆ ಊರು,ಕುಟುಂಬ, ಸಮಾಜವಿರುತ್ತದೆ.ನಿಮ್ಮ ಬೆಂಬಲ ಇಲ್ಲದೇ ಸೇನೆಯಲ್ಲಿ ಸೇವೆ ಸಲ್ಲಿಸಲು ಆಗುತ್ತಿರಲಿಲ್ಲ.ನೌಕಾಸೇನೆಯಲ್ಲಿ ಸೇವೆ ಸಲ್ಲಿಸುವವರು ಎಂದರೆ ಕೇವಲ ಯೂನಿಫಾರಂ ಧರಿಸುವುದಲ್ಲ.ಪ್ರಮಾಣಿಕ,ಶಿಸ್ತು,ದಕ್ಷತೆಯಿಂದ ಸೇವೆ ಸಲ್ಲಿಸಬೇಕು.ದೇಶಕ್ಕೆ ಸೇವೆ ಸಲ್ಲಿಸುವುದು ಜೀವನವನ್ನು ರೂಪಿಸುವ ಪವಿತ್ರ ಮಾರ್ಗವಾಗಿದೆ.ದೇಶಕ್ಕೆ ಸೇವೆ ಸಲ್ಲಿಸುವ ಅವಕಾಶ ಬಂದರೆ ಅದನ್ನು ಖುಷಿಯಿಂದ ಸ್ವೀಕರಿಸಿ ಎಂದು ಹೇಳಿದರು.

ತಹಶೀಲ್ದಾರ್ ಕೀರ್ತಿ ಚಾಲಕ್, ಜಿಪಂ ಮಾಜಿ ಸದಸ್ಯ ಗಂಗಾಧರರಾವ ನಾಡಗೌಡ,ಬಿಎಸ್‌ಎಫ್‌ಗೆ ಆಯ್ಕೆಯಾದ ಹುಲ್ಲೂರಿನ ಕಾಶೀಬಾಯಿ ಚಲವಾದಿ ಮಾತನಾಡಿದರು.

ಮುದ್ದೇಬಿಹಾಳ-ಹುನಗುಂದ ಹೊಸಮಠ-ಗಚ್ಚಿನಮಠದ ಅಮರೇಶ್ವರ ದೇವರು ಸಾನಿಧ್ಯ ವಹಿಸಿದ್ದರು.ಸರಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಪರಶುರಾಮ ವಡ್ಡರ ಅಧ್ಯಕ್ಷತೆ ವಹಿಸಿದ್ದರು.ಕಾರ್ಗಿಲ್ ವೀರಯೋಧರ ಸ್ಮಾರಕ ನಿರ್ಮಾಣ ಸಮಿತಿ ಅಧ್ಯಕ್ಷ ಶ್ರೀಕಾಂತ ಹಿರೇಮಠ, ಮಾಜಿ ಸೈನಿಕರ ಸಂಘದ ಅಧ್ಯಕ್ಷ ನಾನಪ್ಪ ನಾಯಕ,ಮಾಜಿ ಸೈನಿಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಆರ್.ಆಯ್.ಹಿರೇಮಠ,,ಪಿಎಸ್‌ಐ ಸಂಜಯ ತಿಪರೆಡ್ಡಿ,ಇಲಕಲ್‌ನ ಮಾಜಿ ಸೈನಿಕರ ಸಂಘದ ಅಧ್ಯಕ್ಷ ವಿಜಯ ದಳವಾಯಿ, ಈರಪ್ಪ ನರಗುಂದ, ಬಿಜೆಪಿ ನಿಕಟಪೂರ್ವ ಜಿಲ್ಲಾ ಕಾರ್ಯದರ್ಶಿ ಕಾಶೀಬಾಯಿ ರಾಂಪೂರ,ಮುಖoಡ ಸೋಮನಗೌಡ ಪಾಟೀಲ ನಡಹಳ್ಳಿ, ಮಾಜಿ ಸೈನಿಕ ರೇವಣೆಪ್ಪ ಹರಿಜನ,ಪುರಸಭೆ ಮಾಜಿ ಸದಸ್ಯೆ ಸಂಗಮ್ಮ ದೇವರಳ್ಳಿ, ಬಿಜೆಪಿ ನಾಯಕಿ ಗೌರಮ್ಮ ಹುನಗುಂದ ಮೊದಲಾದವರು ಇದ್ದರು.ಟಿ.ಡಿ.ಲಮಾಣಿ ಹಾಗೂ ಜಿ.ಎಚ್.ಚವ್ಹಾಣ ಕಾರ್ಯಕ್ರಮ ನಿರೂಪಿಸಿದರು.ತಾಲ್ಲೂಕು ಆಡಳಿತದಿಂದ ತಹಶೀಲ್ದಾರ್ ಕೀರ್ತಿ ಚಾಲಕ , ಗ್ರಾಮ ಆಡಳಿತ ಅಧಿಕಾರಿ ಮನೋಜ ರಾಠೋಡ ನಿವೃತ್ತ ಯೋಧ ಸತೀಶ ನಾಯಕ ಅವರಿಗೆ ಸನ್ಮಾನಿಸಿದರು.ಬಿಎಸ್‌ಎಫ್‌ಗೆ ಆಯ್ಕೆಗೊಂಡ ತಾಲ್ಲೂಕಿನ ಸಿದ್ದಾಪೂರ ಪಿ.ಟಿ ಗ್ರಾಮದ ಆಯೇಷಾ ವಾಲೀಕಾರ ಹಾಗೂ ಹುಲ್ಲೂರಿನ ಕಾಶೀಬಾಯಿ ಚಲವಾದಿ ಅವರನ್ನು ಸನ್ಮಾನಿಸಲಾಯಿತು.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ