‘ಸರ್ಕಾರಿ ಕಚೇರಿಗಳಲ್ಲಿ ರಾಜಕಾರಣಿಗಳ ಅಪ್ಪಂದಿರ,ಅಜ್ಜoದಿರ ಫೋಟೋ ಬೇಡ’

‘ಸರ್ಕಾರಿ ಕಚೇರಿಗಳಲ್ಲಿ ರಾಜಕಾರಣಿಗಳ ಅಪ್ಪಂದಿರ,ಅಜ್ಜoದಿರ ಫೋಟೋ ಬೇಡ’

ಮುದ್ದೇಬಿಹಾಳ : ಸೈನ್ಯಕ್ಕೆ ಸೇರುವವರು ಬಡವರ ಮಕ್ಕಳು ಎಂದು ಕೆಲವು ರಾಜಕಾರಣಿಗಳು ಕೆಲವೆಡೆ ಹೇಳಿಕೆ ಕೊಟ್ಟಿದ್ದರು.ಆದರೆ ನಿಜವಾಗಿಯೂ ಈ ದೇಶವನ್ನು ಕಾಯುವವರು ರೈತರ ಮಕ್ಕಳೇ ಹೊರತು ಸಿರಿವಂತರ ಮಕ್ಕಳಲ್ಲ.ದೇಶದಲ್ಲಿ ಬದಲಾವಣೆ ಆಗಿರುವುದು ಬಡವರ ಮಕ್ಕಳಿಂದ ಆಗಿದೆಯೇ ಹೊರತು ಸಿರಿವಂತರು,ದೊಡ್ಡವರ ಮಕ್ಕಳಿಂದಲ್ಲ ಎಂದು ಸಮಾಜ ಸೇವಕ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು.

ಪಟ್ಟಣದ ಸೈನಿಕ ಮೈದಾನದಲ್ಲಿ ಗುರುವಾರ ಸಂಜೆ ನೌಕಾಸೇನೆಯ ನಿವೃತ್ತ ಯೋಧ ಸತೀಶ ನಾಯಕ ಅವರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ದೇಶದಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವವರು ಸೈನಿಕರು ಮಾತ್ರ.ಅವರು ತೊಟ್ಟಿರುವ ಸಮವಸ್ತç ಶೌರ್ಯ,ತ್ಯಾಗದ ಗುರುತು ಆಗಿದೆ. ಸರ್ಕಾರಿ ಕಚೇರಿಗಳಲ್ಲಿ ರಾಜಕಾರಣಿಗಳ ಅಪ್ಪಂದಿರ,ಅಜ್ಜoದಿರ ಫೋಟೋಗಳನ್ನು ಹಾಕುವ ಬದಲಾಗಿ ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದ ವೀರಸೈನಿಕರ ಫೋಟೋಗಳನ್ನು ಶಾಲೆಗಳಲ್ಲಿ,ಕಚೇರಿಗಳಲ್ಲಿ ಹಾಕುವ ಪದ್ದತಿ ರೂಢಿಯಲ್ಲಿ ಬರಬೇಕು.ಸರ್ಕಾರ ಅಂತಹ ನಿಯಮ ಜಾರಿಗೆ ತರಬೇಕು.ಮುದ್ದೇಬಿಹಾಳದ ಅಂಬೇಡ್ಕರ್ ವೃತ್ತದಲ್ಲಿ 200 ಅಡಿ ಎತ್ತರದ ರಾಷ್ಟçಧ್ವಜದ ಸ್ತಂಭವನ್ನು ಸ್ಥಾಪಿಸಲು ಉದ್ಧೇಶವಿದ್ದು ಅಲ್ಲಿ ರಾಷ್ಟçಧ್ವಜ ನಿತ್ಯವೂ ಹಾರಾಡುವಂತೆ ನಾವೆಲ್ಲ ಕೈಜೋಡಿಸಬೇಕು.ಇದಕ್ಕೆ ಜನಪ್ರತಿನಿಧಿಗಳ ಸಹಕಾರವೂ ಅವಶ್ಯವಿದೆ ಎಂದು ಹೇಳಿದರು.

ಎಸ್.ಎಸ್.ಶಿವಾಚಾರ್ಯ ಸಂಸ್ಥೆಯ ಅಧ್ಯಕ್ಷ ರವಿ ನಾಯಕ ಮಾತನಾಡಿ, ದೇಶದಲ್ಲಿ ನೆಮ್ಮದಿಯಿಂದ ನಿದ್ದೆ ಮಾಡಲು ಕಾರಣ ಈ ದೇಶದ ಯೋಧರು ಜೀವ ಒತ್ತೆ ಇಟ್ಟು ಕಾಯುತ್ತಿರುವ ಕಾರಣ ದೇಶದಲ್ಲಿ ಸುರಕ್ಷತೆಯಿಂದ ಇದ್ದೇವೆ.ಸೈನ್ಯದಲ್ಲಿ ಜಾತಿ,ಸಮುದಾಯ ಎಂಬುದಿಲ್ಲ. ನಿವೃತ್ತಿಗೊಂಡು ತವರಿಗೆ ಮರಳುವ ಸೈನಿಕರನ್ನು ಸಮಾಜದಲ್ಲಿ ಎಲ್ಲರೂ ಒಗ್ಗೂಡಿ ಸಾರ್ವತ್ರಿಕವಾಗಿ ಗೌರವಿಸುವ ಕಾರ್ಯ ಆಗಬೇಕು ಎಂದರು.

ನೌಕಾಸೇನಾ ನಿವೃತ್ತ ಯೋಧ ಸತೀಶ ನಾಯಕ ಮಾತನಾಡಿ, ಸೈನಿಕ ದೇಶ ಸೇವೆ ಒಬ್ಬನೇ ಮಾಡುವುದಿಲ್ಲ.ಆತನ ಹಿಂದೆ ಊರು,ಕುಟುಂಬ, ಸಮಾಜವಿರುತ್ತದೆ.ನಿಮ್ಮ ಬೆಂಬಲ ಇಲ್ಲದೇ ಸೇನೆಯಲ್ಲಿ ಸೇವೆ ಸಲ್ಲಿಸಲು ಆಗುತ್ತಿರಲಿಲ್ಲ.ನೌಕಾಸೇನೆಯಲ್ಲಿ ಸೇವೆ ಸಲ್ಲಿಸುವವರು ಎಂದರೆ ಕೇವಲ ಯೂನಿಫಾರಂ ಧರಿಸುವುದಲ್ಲ.ಪ್ರಮಾಣಿಕ,ಶಿಸ್ತು,ದಕ್ಷತೆಯಿಂದ ಸೇವೆ ಸಲ್ಲಿಸಬೇಕು.ದೇಶಕ್ಕೆ ಸೇವೆ ಸಲ್ಲಿಸುವುದು ಜೀವನವನ್ನು ರೂಪಿಸುವ ಪವಿತ್ರ ಮಾರ್ಗವಾಗಿದೆ.ದೇಶಕ್ಕೆ ಸೇವೆ ಸಲ್ಲಿಸುವ ಅವಕಾಶ ಬಂದರೆ ಅದನ್ನು ಖುಷಿಯಿಂದ ಸ್ವೀಕರಿಸಿ ಎಂದು ಹೇಳಿದರು.

ತಹಶೀಲ್ದಾರ್ ಕೀರ್ತಿ ಚಾಲಕ್, ಜಿಪಂ ಮಾಜಿ ಸದಸ್ಯ ಗಂಗಾಧರರಾವ ನಾಡಗೌಡ,ಬಿಎಸ್‌ಎಫ್‌ಗೆ ಆಯ್ಕೆಯಾದ ಹುಲ್ಲೂರಿನ ಕಾಶೀಬಾಯಿ ಚಲವಾದಿ ಮಾತನಾಡಿದರು.

ಮುದ್ದೇಬಿಹಾಳ-ಹುನಗುಂದ ಹೊಸಮಠ-ಗಚ್ಚಿನಮಠದ ಅಮರೇಶ್ವರ ದೇವರು ಸಾನಿಧ್ಯ ವಹಿಸಿದ್ದರು.ಸರಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಪರಶುರಾಮ ವಡ್ಡರ ಅಧ್ಯಕ್ಷತೆ ವಹಿಸಿದ್ದರು.ಕಾರ್ಗಿಲ್ ವೀರಯೋಧರ ಸ್ಮಾರಕ ನಿರ್ಮಾಣ ಸಮಿತಿ ಅಧ್ಯಕ್ಷ ಶ್ರೀಕಾಂತ ಹಿರೇಮಠ, ಮಾಜಿ ಸೈನಿಕರ ಸಂಘದ ಅಧ್ಯಕ್ಷ ನಾನಪ್ಪ ನಾಯಕ,ಮಾಜಿ ಸೈನಿಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಆರ್.ಆಯ್.ಹಿರೇಮಠ,,ಪಿಎಸ್‌ಐ ಸಂಜಯ ತಿಪರೆಡ್ಡಿ,ಇಲಕಲ್‌ನ ಮಾಜಿ ಸೈನಿಕರ ಸಂಘದ ಅಧ್ಯಕ್ಷ ವಿಜಯ ದಳವಾಯಿ, ಈರಪ್ಪ ನರಗುಂದ, ಬಿಜೆಪಿ ನಿಕಟಪೂರ್ವ ಜಿಲ್ಲಾ ಕಾರ್ಯದರ್ಶಿ ಕಾಶೀಬಾಯಿ ರಾಂಪೂರ,ಮುಖoಡ ಸೋಮನಗೌಡ ಪಾಟೀಲ ನಡಹಳ್ಳಿ, ಮಾಜಿ ಸೈನಿಕ ರೇವಣೆಪ್ಪ ಹರಿಜನ,ಪುರಸಭೆ ಮಾಜಿ ಸದಸ್ಯೆ ಸಂಗಮ್ಮ ದೇವರಳ್ಳಿ, ಬಿಜೆಪಿ ನಾಯಕಿ ಗೌರಮ್ಮ ಹುನಗುಂದ ಮೊದಲಾದವರು ಇದ್ದರು.ಟಿ.ಡಿ.ಲಮಾಣಿ ಹಾಗೂ ಜಿ.ಎಚ್.ಚವ್ಹಾಣ ಕಾರ್ಯಕ್ರಮ ನಿರೂಪಿಸಿದರು.ತಾಲ್ಲೂಕು ಆಡಳಿತದಿಂದ ತಹಶೀಲ್ದಾರ್ ಕೀರ್ತಿ ಚಾಲಕ , ಗ್ರಾಮ ಆಡಳಿತ ಅಧಿಕಾರಿ ಮನೋಜ ರಾಠೋಡ ನಿವೃತ್ತ ಯೋಧ ಸತೀಶ ನಾಯಕ ಅವರಿಗೆ ಸನ್ಮಾನಿಸಿದರು.ಬಿಎಸ್‌ಎಫ್‌ಗೆ ಆಯ್ಕೆಗೊಂಡ ತಾಲ್ಲೂಕಿನ ಸಿದ್ದಾಪೂರ ಪಿ.ಟಿ ಗ್ರಾಮದ ಆಯೇಷಾ ವಾಲೀಕಾರ ಹಾಗೂ ಹುಲ್ಲೂರಿನ ಕಾಶೀಬಾಯಿ ಚಲವಾದಿ ಅವರನ್ನು ಸನ್ಮಾನಿಸಲಾಯಿತು.

Latest News

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ "ಪರಿಸರ ರಕ್ಷಕ" ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು,

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಮೇ.24 ರಂದು ಜರುಗಲಿದೆ ಎಂದು ಆಯೋಜಕರ ಬಳಗ ತಿಳಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫೈನಲ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಸಂಘಟಕರಲ್ಲೊಬ್ಬರಾದ ಕಾಮರಾಜ ಬಿರಾದಾರ, ಈಗಾಗಲೇ ನಿಡಗುಂದಿ ತಂಡವನ್ನು ಸೋಲಿಸಿ ಆಲಮಟ್ಟಿ ತಂಡ ಫೈನಲ್ ತಲುಪಿದ್ದು ಮೇ.24 ರಂದು ಜರುಗಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುದ್ದೇಬಿಹಾಳ ಹಾಗೂ