ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ.
ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು ದುರಸ್ತಿ ಮಾಡಬೇಕಿದ್ದರೆ ದೊಡ್ಡ ಬಂಡೆಗಲ್ಲು ಅಡ್ಡಿಯಾಗಿತ್ತು.ಅದನ್ನು ನಿರಂತರವಾಗಿ ತೆರವುಗೊಳಿಸಲು ಕಾರ್ಮಿಕರನ್ನು ತೊಡಗಿಸಲಾಗಿದೆ.
ಸೋಮವಾರ ಪೈಪಲೈನ್ ವೆಲ್ಡಿಂಗ್ ಮಾಡಿದ್ದು ದುರಸ್ತಿಯಾಗಿದೆ.ನೀರು ಪೂರೈಕೆ ಸೋಮವಾರದಿಂದ ಆರಂಭಗೊಳ್ಳಲಿದೆ ಎಂದು ತಿಳಿಸಿದರು.ದುರಸ್ತಿ ಕಾರ್ಯದಲ್ಲಿ ನೀರು ಪೂರೈಕೆ ವಿಭಾಗದ ಶಿವಣ್ಣ ಬೋಳಿ ಸೇರಿದಂತೆ ಪುರಸಭೆ ಪೌರಕಾರ್ಮಿಕರು ಪಾಲ್ಗೊಂಡಿದ್ದರು.







